ಬೆಂಗಳೂರು: ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಕಾನ್ಫರೇನ್ಸ್ ಮೂಲಕ ಮಾಹಿತಿ ಪಡೆದುಕೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾತನಾಡಿದ ಅವರು, ಈಗಾಗಲೇ ಅಗತ್ಯ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗಿದೆ. ಹಣ ಕೂಡ ಬಿಡುಗಡೆ ಮಾಡಲಾಗಿದೆ. ಪ್ರವಾಹ ಪರಿಸ್ಥಿತಿ ಸ್ಥಳಗಳಿಗೆ ಭೇಟಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳಿಗೂ ಸೂಚನೆ ನೀಡಿದ್ದೇನೆ. ಅದರಂತೆ ಸಚಿವರು ಪ್ರದೇಶಗಳಿಗೆ ಭೇಟಿ ನೀಡಿ ವರದಿ ಸಲ್ಲಿಸಲಿದ್ದಾರೆ ಎಂದರು.
Read More »ರಾಗಿಣಿಗೆ ಬೆನ್ನು ನೋವು- ಜೈಲಿನ ಆಸ್ಪತ್ರೆಯಲ್ಲಿ ರಾತ್ರಿ ಪೂರ್ತಿ ಚಿಕಿತ್ಸೆ
ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟಿ ರಾಗಿಣಿಗೆ ತೀವ್ರ ಬೆನ್ನು ನೋವು ಕಾಣಿಸಿಕೊಂಡಿದೆಯಂತೆ. ಹೀಗಾಗಿ ರಾತ್ರಿ ಪೂರ್ತಿ ಗೋಳಾಡಿದ್ದು, ಜೈಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪರಪ್ಪನ ಅಗ್ರಹಾರದಲ್ಲಿರುವ ರಾಗಿಣಿ, ರಾತ್ರಿಯಿಂದ ಹೆಚ್ಚು ಬೆನ್ನು ನೋವು ಎಂದು ಜೈಲಧಿಕಾರಿಗಳ ಬಳಿ ಮನವಿ ಮಾಡಿದ್ದಾರೆ. ಅಲ್ಲದೆ ತುರ್ತಾಗಿ ನನ್ನನ್ನು ಆಸ್ಪತ್ರೆಗೆ ಸೇರಿಸಿ, ಆಗುತ್ತಿಲ್ಲ ಎಂದು ಗೋಳಾಡಿದ್ದಾರೆ. ನಂತರ ಜೈಲಿನ ಆಸ್ಪತ್ರೆಗೆ ಸೇರಿಸಲಾಗಿದ್ದು, ರಾತ್ರಿ ಪೂರ್ತಿ ಚಿಕಿತ್ಸೆ ಪಡೆದಿದ್ದಾರೆ. ಈ …
Read More »ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಹರಿಹಾಯ್ದಿದ್ದಾರೆ.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಹರಿಹಾಯ್ದಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್ಡಿಕೆ, ಆರ್ ಆರ್ ನಗರ ಚುನಾವಣೆ ಮೂಲಕ ಜೆಡಿಎಸ್ ಪಕ್ಷದ ಸಮಾಧಿ ಅಂತ ನಮ್ಮ ಪಕ್ಷದ ಮುಖಂಡರ ಮನೆಯಲ್ಲಿ ಡಿಕೆಶಿ ಹೇಳಿದ್ದಾರೆ. ಇಷ್ಟು ದಿನ ಸಿದ್ದರಾಮಯ್ಯ ಜೆಡಿಎಸ್ ಪಕ್ಷವನ್ನು ಸಮಾಧಿ ಮಾಡಿದ್ದಾಗಿದೆ. ಈಗ ಡಿಕೆಶಿ ಯವರು ಅವರಿಗೆ ಕೈ ಜೋಡಿಸ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಆರ್ ಆರ್ ನಗರದಲ್ಲಿ ನನ್ನ …
Read More »ಬೇಲ್ ಪಡೆಯಲ್ಲ, ಸ್ಟೇಷನ್ಗೆ ಹೋಗಲ್ಲ – ಕುಸುಮಾ ವಿರುದ್ಧದ ಎಫ್ಐಆರ್ಗೆ ಡಿಕೆಶಿ ಕಿಡಿ
ಬೆಂಗಳೂರು: ನಮ್ಮ ಅಭ್ಯರ್ಥಿ ಹೆಣ್ಣು ಮಗಳ ಮೇಲೆ ಹಾಗೂ ಸಿದ್ದರಾಮಯ್ಯ ಎಸ್ಕಾರ್ಟ್ ಡ್ರೈವರ್ ಮೇಲೆ ಎಫ್ಐಆರ್ ಆಗಿದೆ. ಈ ಎಫ್ಐಆರ್ಗೆ ನಾವು ಬೇಲ್ ಪಡೆಯಲ್ಲ, ಸ್ಟೇಷನ್ಗೂ ಹೋಗಲ್ಲ. ಇದಕ್ಕೆ ನಾವು ಹೆದರೋ ಪ್ರಶ್ನೆಯೇ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಕೆಶಿ, ಪ್ರಜಾಪ್ರಭುತ್ವದಲ್ಲಿ ಇಷ್ಟು ನೀಚವಾದ ರಾಜಕಾರಣ ನಾನು ಯಾವತ್ತೂ ನೋಡಿಲ್ಲ. ಕಾಂಗ್ರೆಸ್ ಪಕ್ಷದ ವಿದ್ಯಾವಂತ ಹೆಣ್ಣುಮಗಳು ಕಾನೂನು ಅರಿವಿರುವ …
Read More »ಮಹಾಮಳೆಗೆ ಉತ್ತರ ಕರ್ನಾಟಕ ನಲುಗಿದ್ದು, ಜನರು ಜೀವ ಉಳಿಸಿಕೊಳ್ಳಲು ಹರಸಾಹಸಪಡುತ್ತಿದ್ದಾರೆ.
ಬೆಂಗಳೂರು: ಮಹಾಮಳೆಗೆ ಉತ್ತರ ಕರ್ನಾಟಕ ನಲುಗಿದ್ದು, ಜನರು ಜೀವ ಉಳಿಸಿಕೊಳ್ಳಲು ಹರಸಾಹಸಪಡುತ್ತಿದ್ದಾರೆ. ಜಲಾಸುರನ ದಾಳಿಗೆ ಕಲಬುರಗಿ, ಯಾದಗಿರಿ, ವಿಜಯಪುರ, ಬೀದರ್, ರಾಯಚೂರು ಜಿಲ್ಲೆಗಳು ತತ್ತರಿಸಿದ್ದು, ಗಾಯದ ಮೇಲೆ ಬರೆ ಎಳೆದಂತೆ ಕೊಯ್ನಾ ಜಲಾಶಯದಿಂದ ನೀರು ಹೊರ ಬಿಡಲಾಗುತ್ತಿದೆ. ಕೊಯ್ನಾದಿಂದ ಅತಿ ಹೆಚ್ಚು ನೀರು ಹೊರ ಬಂದಲ್ಲಿ ಬೆಳಗಾವಿ, ಚಿಕ್ಕೋಡಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಲಿದೆ. ಕಲಬುರಗಿ ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. …
Read More »ವಿದ್ಯಾರ್ಥಿನಿ ಕಣ್ಣೀರಿಗೆ ಮಿಡಿದ ಸಚಿವ- ಸರ್ಕಾರವೇ ಭರಿಸಲಿದೆ ಶಿಕ್ಷಕಿಯ ಚಿಕಿತ್ಸಾ ವೆಚ್ಚ
ಬೆಂಗಳೂರು: ಮೂಡಬಿದಿರೆ ತಾಲೂಕಿನ ಶಿರ್ತಾಡಿಯ ಶಿಕ್ಷಕಿ ಎನ್. ಪದ್ಮಾಕ್ಷಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ಹಾಗೂ ಅದರ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಶಿಕ್ಷಕ ದಂಪತಿಗೆ ಕೊರೊನಾ ಸೋಂಕು ತಗುಲಿದೆ ಎಂಬ ವರದಿಗಳನ್ನು ಗಮನಿಸಿದ ತಕ್ಷಣವೇ ಸಚಿವರು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರೊಂದಿಗೆ ದೂರವಾಣಿಯಲ್ಲಿ ಚರ್ಚಿಸಿದ್ದಾರೆ. ಅಲ್ಲದೆ ಶಿಕ್ಷಕಿಗೆ ಉತ್ತಮ ಚಿಕಿತ್ಸೆ ನೀಡಲು …
Read More »ಕೊರೊನಾ ನಡುವೆ ದೀಪಾವಳಿ ಹಬ್ಬ ಆಚರಿಸಲು ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.
ಬೆಂಗಳೂರು: ಕೊರೊನಾ ನಡುವೆ ದೀಪಾವಳಿ ಹಬ್ಬ ಆಚರಿಸಲು ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಈ ವರ್ಷದ ದೀಪಾವಳಿ ಹಬ್ಬಕ್ಕೆ ಕೊರೊನಾ ಕಾರ್ಮೋಡ ಕವಿದಿದೆ. ರಾಜ್ಯದಲ್ಲಿ ಕೊರೊನಾ ಅಬ್ಬರದ ನಡುವೆ ಸರಳವಾಗಿ ಹಬ್ಬ ಮಾಡಲು ರಾಜ್ಯ ಸರ್ಕಾರ 10 ನಿಯಮಗಳಿರುವ ಒಂದು ಮಾರ್ಗಸೂಚಿಯನ್ನು ಹೊರಡಿಸಿದೆ. 10 ನಿಯಮಗಳು 1. ಸಂಬಂಧಪಟ್ಟ ಇಲಾಖೆ, ಪ್ರಾಧಿಕಾರಗಳಿಂದ ಅಧಿಕೃತ ಪರವಾನಗಿಯನ್ನು ಪಡೆದ ಮಾರಾಟಗಾರರು ಮಾತ್ರ ಪಟಾಕಿಯನ್ನು ಮಾರಾಟ ಮಾಡತಕ್ಕದ್ದು. 2. ಪಟಾಕಿ ಮಾರಾಟದ ಮಳಿಗೆಗಳನ್ನು …
Read More »ಉತ್ತಮ ಕರ್ತವ್ಯ ನಿರ್ವಹಿಸಿದ ಪೊಲೀಸರಿಗೆ ಬಹುಮಾನ………..
ಬೆಂಗಳೂರು, ಅ.14- ಉತ್ತಮ ಕರ್ತವ್ಯ ನಿರ್ವಹಿಸಿ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸ್ ಅಕಾರಿ ಮತ್ತು ಸಿಬ್ಬಂದಿಗಳನ್ನು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಅವರು ನಗದು ಬಹುಮಾನ ಹಾಗೂ ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿದ್ದಾರೆ. ನಕಲಿ ಛಾಪಾ ಕಾಗದ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಬಂಸುವಲ್ಲಿ ಯಶಸ್ವಿಯಾದ ಎಸ್ಜೆ ಪಾರ್ಕ್ ಪೊಲೀಸರ ತಂಡಕ್ಕೆ 50 ಸಾವಿರ ನಗದು ನೀಡಿದರೆ, ಅತ್ಯಾಚಾರಿಯನ್ನು ಬಂಸಿದ ಶ್ರೀರಾಮಪುರ ಪೆÇಲೀಸರ ತಂಡಕ್ಕೆ 1 ಲಕ್ಷ ರೂ. ನಗದು …
Read More »ಬಿಜೆಪಿ,ಕಾಂಗ್ರೆಸ್ ವೈಫಲ್ಯಗಳೇ ನಮ್ಮ ಚುನಾವಣೆ ಅಸ್ತ್ರ : HDK
ಬೆಂಗಳೂರು, ಅ.14- ನಮ್ಮ ಪಕ್ಷ ಅಕಾರದಲ್ಲಿದ್ದಾಗ ಮಾಡಿರುವ ಸಾಧನೆಗಳು, ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ವೈಫಲ್ಯಗಳನ್ನು ಜನರ ಮುಂದಿಟ್ಟು ಚುನಾವಣೆ ಎದುರಿಸುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ವಿ.ಕೃಷ್ಣಮೂರ್ತಿ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕ್ಷೇತ್ರದಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್ ನೀಡಿದ್ದೇವೆ ಎಂದರು. ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದ್ದರೂ ಜನರು ಮಳೆಯಿಂದ ಮನೆ-ಮಠ ಕಳೆದುಕೊಂಡಿದ್ದಾರೆ. ಅಲ್ಲದೆ …
Read More »ಡಿಜೆಹಳ್ಳಿ ಗಲಭೆ ಪ್ರಕರಣ : ಸಂಪತ್ರಾಜ್-ಜಾಕೀರ್ ವಿಚಾರಣೆಗೆ ಮುಂದಾದ ಎನ್ಐಎ
ಬೆಂಗಳೂರು,ಅ.14-ಡಿಜೆಹಳ್ಳಿ ಮತ್ತು ಕೆಜಿಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ನಡೆದ ಗಲಭೆಗೆ ಸಂಬಂಸಿದಂತೆ ತನಿಖೆ ನಡೆಸುತ್ತಿರುವ ಎನ್ಐಎ ಮಾಜಿ ಮೇಯರ್ ಸಂಪತ್ರಾಜ್ ಮತ್ತು ಅವರ ಆಪ್ತ, ಬಿಬಿಎಂಪಿ ಮಾಜಿ ಸದಸ್ಯ ಜಾಕೀರ್ನ್ನು ವಿಚಾರಣೆಗೊಳಪಡಿಸಲು ತೀರ್ಮಾನಿಸಿದೆ. ಪ್ರಕರಣದ ಹಿನ್ನೆಲೆಯಲ್ಲಿ ಈ ಇಬ್ಬರಿಗೂ ವಿಚಾರಣೆಗೆ ಹಾಜರಾಗು ವಂತೆ ಸದ್ಯದಲ್ಲೇ ಎನ್ಐಎ ನೋಟಿಸ್ ನೀಡಲಿದೆ ಎಂದು ತಿಳಿದುಬಂದಿದೆ. ಈಗಾಗಲೇ ಶಾಸಕರಾದ ಜಮೀರ್ ಅಹಮ್ಮದ್ ಖಾನ್ ಮತ್ತು ರಿಜ್ವಾನ್ ಅವರನ್ನು ಎನ್ಐಎ ವಿಚಾರಣೆಗೊಳಪಡಿಸಿ ಗಲಭೆಗೆ ಸಂಬಂಸಿದಂತೆ ಹಲವು …
Read More »