ಬೆಂಗಳೂರು: 5 ವರ್ಷದ ಬಾಲಕಿಯನ್ನು ಅಪಹರಿಸಿದ್ದ ಇಬ್ಬರು ಆರೋಪಿಗಳನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಸಮ್ಮ ಹಾಗೂ ಸುಲೋಚನಾ ಎಂಬಿಬ್ಬರನ್ನು 24 ಗಂಟೆಗಳೊಳಗೆ ಬಂಧಿಸಿದ ಪೊಲೀಸರು, ಬಾಲಕಿಯನ್ನು ರಕ್ಷಿಸಿ ಆಕೆಯ ಪೋಷಕರಿಗೊಪ್ಪಿಸಿದ್ದಾರೆ. ಜೂನ್ 21ರಂದು ವಿಶ್ವೇರಯ್ಯ ಲೇಔಟ್ನಲ್ಲಿ ಮನೆಯ ಬಳಿ ಆಟವಾಡುತ್ತಿದ್ದ ಬಾಲಕಿಯನ್ನು ಅಪಹರಿಸಿ, ಸಿಂಧನೂರಿಗೆ ಕರೆದೊಯ್ದಿದ್ದರು. ಸಿಂಧನೂರು ಮೂಲದವರೇ ಆದ ಬಾಲಕಿಯ ಪೋಷಕರು ಹಾಗೂ ಆರೋಪಿಗಳು ಪರಸ್ಪರ ಪರಿಚಿತರಾಗಿದ್ದು, 2 ವರ್ಷಗಳಿಂದಲೂ ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಆದರೆ ಜೂನ್ …
Read More »ಸಾಂಬಾರ್ ಮಾಡುವ ವಿಚಾರಕ್ಕೆ ಸ್ನೇಹಿತರ (Friends) ನಡುವೆ ಗಲಾಟೆಯಾಗಿ, ಕೊಲೆಯಲ್ಲಿ ಅಂತ್ಯವಾಗಿದೆ.
ಬೆಂಗಳೂರು, ಜೂನ್ 23: ಸಾಂಬಾರ್ ಮಾಡುವ ವಿಚಾರಕ್ಕೆ ಸ್ನೇಹಿತರ (Friends) ನಡುವೆ ಗಲಾಟೆಯಾಗಿ, ಕೊಲೆಯಲ್ಲಿ ಅಂತ್ಯವಾಗಿದೆ. ಬೆಂಗಳೂರಿನ (Bengaluru) ತಲಘಟ್ಟಪುರದಲ್ಲಿ ರವಿವಾರ ತಡರಾತ್ರಿ ಘಟನೆ ನಡೆದಿದೆ. ನೇಪಾಳ ಮೂಲದ ಬಹದ್ದೂರ್ ಕೊಲೆಯಾದ ವ್ಯಕ್ತಿ. ಮಹೇಂದ್ರ ಕೊಲೆ ಮಾಡಿದ ಆರೋಪಿ. ಬಹದ್ದೂರ್ ಮತ್ತು ಮಹೇಂದ್ರ ನಡುವೆ ರವಿವಾರ (ಜೂ.22) ರಾತ್ರಿ ಸಾಂಬಾರ್ ಮಾಡುವ ವಿಚಾರಕ್ಕೆ ರೂಂನಲ್ಲಿ ಗಲಾಟೆ ಶುರುವಾಗಿದೆ. ಗಲಾಟೆ ತಾರಕಕ್ಕೆ ಏರಿದ್ದು ಬಹದ್ದೂರ್ ಮೇಲೆ ಮಹೇಂದ್ರ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ. …
Read More »ಇರಾನ್ನಲ್ಲಿ ಸಿಲುಕಿದ್ದ ಕನ್ನಡಿಗರು ತಾಯ್ನಾಡಿಗೆ: ಒಂದೇ ಗ್ರಾಮದ 16 ಜನ ವಾಪಸ್
ಬೆಂಗಳೂರು, ಜೂನ್ 21: ಇರಾನ್ ಮತ್ತು ಇಸ್ರೇಲ್ (Iran and Israel) ನಡುವಿನ ಯುದ್ಧ ಮುಂದುವರೆಯುತ್ತಿದ್ದು ದಿನದಿಂದ ದಿನಕ್ಕೆ ಪರಿಸ್ಥಿತಿ ಉದ್ವಿಗ್ನವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇರಾನ್ನಲ್ಲಿ ಸಿಲುಕಿದ್ದ 18 ಜನ ಕನ್ನಡಿಗರು (Kannadigas) ಶನಿವಾರ (ಜೂ.21) ಕರ್ನಾಟಕಕ್ಕೆ (Karnataka) ವಾಪಸ್ ಆಗಿದ್ದಾರೆ. ಇರಾನ್ನಿಂದ ಬೆಂಗಳೂರಿಗೆ ಆಗಮಿಸಿದ ಕನ್ನಡಿಗರಿಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಥಳಿಯ ಶಾಸಕ ಹಾಗೂ ಕುಟುಂಬಸ್ಥರು ಅದ್ದೂರಿಯಾಗಿ ಸ್ವಾಗತಕೋರಿದರು. ತಾಯ್ನಾಡಿಗೆ ಮರಳಿದ ಕನ್ನಡಿಗರು ಮತ್ತು ಇವರ ಪೋಷಕರಿಗೆ ಶಾಸಕ …
Read More »ಸುಳ್ಳು ಸುದ್ದಿ, ದ್ವೇಷ ಭಾಷಣ ಮಾಡುವವರಿಗೆ ಜೈಲು, ದಂಡ:ರಾಜ್ಯ ಸರ್ಕಾರ
ಬೆಂಗಳೂರು, (ಜೂನ್ 22): ಕರ್ನಾಟಕದಲ್ಲಿ ಸುಳ್ಳು ಸುದ್ದಿ ((Fake News) , ದ್ವೇಷ ಭಾಷಣ ಹಾಗೂ ದ್ವೇಷದ ಅಪರಾಧ ತಡೆಗೆ ಪ್ರತ್ಯೇಕ ಕಾಯ್ದೆ ಜಾರಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಮೊನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ‘ದ್ವೇಷ ಅಪರಾಧಗಳು ಮತ್ತು ದ್ವೇಷ (ಹೋರಾಟ, ತಡೆಯುವಿಕೆ) ವಿಧೇಯಕ- 2025’ ಕರಡು ಬಗ್ಗೆ ಚರ್ಚಿಸಲಾಗಿದೆ. ಈ ಬಗ್ಗೆ ಸಂಪುಟ ಸಭೆಯಲ್ಲಿ ಪ್ರಾಥಮಿಕವಾಗಿ ಪ್ರಸ್ತಾಪಿಸಲಾಗಿದ್ದು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗುವುದು ಎಂದು …
Read More »ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ನಡೆಸಿದ್ದ ಪ್ರತಿಭಟನೆ ಸಂಬಂಧ ಬಿಜೆಪಿ ನಾಯಕರ ವಿರುದ್ಧ ದಾಖಲಾದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ.
ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಪಡಿಸಿದ್ದಲ್ಲದೇ, ಸೂಸೈಡ್ ಮತ್ತು ಸುಪಾರಿ ಭಾಗ್ಯ ನೀಡಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಎಂದು ಬರೆದಿರುವ ಪೋಸ್ಟರ್ಗಳನ್ನು ಸಾರ್ವಜನಿಕ ಶೌಚಾಲಯದ ಗೋಡೆಗೆ ಅಂಟಿಸಿ ನಗರದ ಸೌಂದರ್ಯಕ್ಕೆ ಧಕ್ಕೆ ತಂದ ಆರೋಪದಡಿ ಬಿಜೆಪಿ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಸಿ.ಟಿ.ರವಿ ಮತ್ತಿತರರ ವಿರುದ್ಧದ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಪ್ರಕರಣ ಸಂಬಂಧ ತಮ್ಮ ವಿರುದ್ಧ ಹೈಗ್ರೌಂಡ್ಸ್ ಠಾಣಾ ಪೊಲೀಸರು …
Read More »ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಅಲ್ಪಸಂಖ್ಯಾತರಿಗೆ ವಸತಿ ಮೀಸಲಾತಿ ಹೆಚ್ಚಳ: ಸಿಎಂ ಸಮರ್ಥನೆ
ಬೆಂಗಳೂರು: “ವಸತಿ ಮೀಸಲಾತಿ ಹೆಚ್ಚಳ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿರುವ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಆಧಾರದ ಮೇಲೆ ತೆಗೆದುಕೊಂಡ ತೀರ್ಮಾನವಾಗಿದೆ” ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, “ರಾಜ್ಯ ಸರ್ಕಾರದ ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ರಿಶ್ಚಿಯನ್, ಮುಸ್ಲಿಂ, ಜೈನರು ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಗಳ ಫಲಾನುಭವಿಗಳ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಸಚಿವ ಸಂಪುಟವು ಒಂದು ನಿರ್ಣಯವನ್ನು ಕೈಗೊಂಡಿದೆ. ಇದು …
Read More »ಬಿಎಸ್ವೈ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿಗೆ ವಿಳಂಬ: ರಾಜ್ಯಪಾಲರ ಕಚೇರಿಗೆ ಹೈಕೋರ್ಟ್ ನೋಟಿಸ್
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಕೈಗಾರಿಕಾ ಪ್ರದೇಶದಲ್ಲಿ 187 ಕೋಟಿ ರೂ. ಬೆಲೆಬಾಳುವ 116.17 ಎಕರೆ ಜಮೀನನ್ನು ಕೇವಲ 50 ಕೋಟಿ ರೂ.ಗೆ ಸೆಂಟರ್ ಫಾರ್ ಎಜುಕೇಷನ್ ಆ್ಯಂಡ್ ಸೋಷಿಯಲ್ ಸ್ಟಡೀಸ್ (ಸಿಇಎಸ್ಎಸ್) ಸಂಸ್ಥೆಗೆ ಮಂಜೂರು ಮಾಡಿರುವ ಆರೋಪ ಪ್ರಕರಣದಲ್ಲಿ ಲೋಕಾಯುಕ್ತ ವಿಶೇಷ ನ್ಯಾಯಾಲಯದ ವಿಚಾರಣೆಗೆ (ಪ್ರಾಸಿಕ್ಯೂಷನ್) ಪೂರ್ವಾನುಮತಿ ಕೋರಿ ಸಲ್ಲಿಸಿರುವ ಅರ್ಜಿ ಇತ್ಯರ್ಥಪಡಿಸಲು ವಿಳಂಬ ಮಾಡುತ್ತಿರುವ ಸಂಬಂಧ ರಾಜ್ಯಪಾಲರ ಕಚೇರಿ ಮತ್ತು ಲೋಕಾಯುಕ್ತ ಸಂಸ್ಥೆಗೆ ಹೈಕೋರ್ಟ್ ನೋಟಿಸ್ ಜಾರಿ …
Read More »ಬ್ರೇಕ್ ಫೆಲ್ಯೂರ್ ಆಗಿ ಬೈಕ್ – ಕಾರಿಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್
ಬೆಂಗಳೂರು : ಬ್ರೇಕ್ ಫೆಲ್ಯೂರ್ ಆಗಿ ಶಾಲಾ ಬಸ್ವೊಂದು ನಿಯಂತ್ರಣ ತಪ್ಪಿ ಕಾರು ಹಾಗೂ ಬೈಕ್ಗೆ ಡಿಕ್ಕಿ ಹೊಡೆದಿರುವ ಘಟನೆ ಬುಧವಾರ ಬೆಳಗ್ಗೆ ಮಹದೇವಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಕನ್ನಮಂಗಲ ಗೇಟ್ನಿಂದ ವೈಟ್ ಫೀಲ್ಡ್ ಕಡೆ ಹೋಗುವಾಗ ಈ ದುರ್ಘಟನೆ ನಡೆದಿದೆ. ಜೈನ್ ಹೆರಿಟೇಜ್ ಶಾಲೆಯ ಬಸ್ ಇದಾಗಿದೆ. ಮಕ್ಕಳನ್ನ ಶಾಲೆಗೆ ಬಿಟ್ಟು ಇಂಧನ ತುಂಬಿಸಿಕೊಳ್ಳಲು ಬಸ್ ಚಾಲಕ ಪೆಟ್ರೋಲ್ ಬಂಕ್ಗೆ ಹೋಗುವಾಗ ಬ್ರೇಕ್ …
Read More »ಇಸ್ರೇಲ್ ನಿಂದ ತವರಿಗೆ ಬಂದ ಕನ್ನಡಿಗರು
ಬೆಂಗಳೂರು : ಪೌರಾಡಳಿತ ಅಧ್ಯಯನಕ್ಕೆಂದು ಇಸ್ರೇಲ್ ಪ್ರವಾಸಕ್ಕೆ ರಾಜ್ಯದಿಂದ ತೆರಳಿದ್ದ 18 ಜನರ ತಂಡ ರಾಜ್ಯಕ್ಕೆ ಗುರುವಾರ ಹಿಂದಿರುಗಿದೆ. ಇಸ್ರೇಲ್ ದೇಶದಲ್ಲಿ ಪೌರಾಡಳಿತ ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂಬುದನ್ನು ಅಧ್ಯಯನ ಮಾಡುವುದಕ್ಕಾಗಿ ರಾಜ್ಯದಿಂದ ಬಿ ಪ್ಯಾಕ್ ತಂಡದಲ್ಲಿ 18 ಜನರು ತೆರಳಿದ್ದರು. ಇರಾನ್ -ಇಸ್ರೇಲ್ ದೇಶಗಳ ನಡುವೆ ಕಳೆದ ಕೆಲ ದಿನಗಳಿಂದ ಭೀಕರ ಯುದ್ಧ ನಡೆಯುತ್ತಿದೆ. ಈ ಮಧ್ಯೆ ಇಸ್ರೇಲ್ನಲ್ಲಿ ಸಿಲುಕಿದ್ದವರನ್ನು ಸುರಕ್ಷಿತವಾಗಿ ಕರೆತರಲಾಗಿದೆ. ಇಸ್ರೇಲ್ ನಿಂದ ಕುವೈತ್, ಕುವೈತ್ನಿಂದ ಮುಂಬೈ …
Read More »ಮಳೆಹಾನಿ ಸಂತ್ರಸ್ತರಿಗೆ ಪರಿಹಾರ ಬಿಡುಗಡೆ ಮಾಡಿದ ಸರ್ಕಾರ, ಯಾರಿಗೆ ಎಷ್ಟು ಹಣ ಸಿಗುತ್ತೆ?
ಬೆಂಗಳೂರು, (ಜೂನ್ 18): 2025-26ನೇ ಸಾಲಿನಲ್ಲಿ ಕರ್ನಾಟಕದ (Karnataka)ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ನಿಗದಿತ ಸಮಯಕ್ಕಿಂತ ಮೊದಲೇ ಮುಂಗಾರು ಮಳೆ (Monsoon Rains) ಪ್ರಾರಂಭವಾಗಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ಥವಾಗಿದೆ. ಹೀಗಾಗಿ ರಾಜ್ಯ ಸರ್ಕಾರ, ಅತಿವೃಷ್ಟಿ / ಪ್ರವಾಹದಿಂದ ಹಾನಿಯಾದ ಮನೆಗಳ ಹಾಗೂ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ಥರಿಗೆ ಪರಿಹಾರ ಬಿಡುಗಡೆ ಮಾಡಿದೆ. ನಿಯಾಮಾನುಸಾರ ಅರ್ಹತೆಯಂತೆ ಜಿಲ್ಲಾಧಿಕಾರಿಗಳ ಹಂತದಲ್ಲಿಯೇ ಅವರ ಪಿ.ಡಿ. ಖಾತೆಯಲ್ಲಿ ಲಭ್ಯವಿರುವ ಅನುದಾನದಿಂದ ಪರಿಹಾರ ಪಾವತಿಸಲು ಆದೇಶ ಹೊರಡಿಸಿದೆ. 1-4-2025ರಿಂದ …
Read More »