ಬೆಂಗಳೂರು: ನಾನು 10 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿ ಇದ್ದೆ. ಆಗ ಡಿ.ಕೆ. ಸಹೋದರರಿಗೆ ಈ ಮುನಿರತ್ನ ಒಳ್ಳೆಯವನಾಗಿದ್ದ. ಈಗ ಮುನಿರತ್ನ ಇವರಿಗೆ ಅಷ್ಟೊಂದು ಕಹಿಯಾಗಿ ಬಿಟ್ನಾ? ಎಂದು ಡಿ.ಕೆ. ಸಹೋದರರಿಗೆ R.R.ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಟಾಂಗ್ ಕೊಟ್ಟಿದ್ದಾರೆ. ಡಿ.ಕೆ. ಶಿವಕುಮಾರ್ ಕೆಂಪೇಗೌಡ ಅಧ್ಯಯನ ಪೀಠದ ಉದ್ಘಾಟನೆ ದಿನ ನನ್ನನ್ನೂ ಹೊಗಳಿದ್ರು. ಎಲ್ಲರನ್ನೂ ಒಟ್ಟಿಗೆ ಇಟ್ಕೊಂಡು ಹೋಗಿ. ನಾಡಪ್ರಭು ಕೆಂಪೇಗೌಡರ ಇತಿಹಾಸ ಓದಿ. ಕೆಂಪೇಗೌಡರ ಇತಿಹಾಸ ಓದದೆ ನೀವು …
Read More »ಮುನಿರತ್ನ ಆದಷ್ಟು ಬೇಗ ಕೆಂಪೇಗೌಡರ ಇತಿಹಾಸದ ಬಗ್ಗೆ ಇರುವ ಪುಸ್ತಕವನ್ನು ನನಗೆ ಗಿಫ್ಟ್ ನೀಡಲಿ.
ಬೆಂಗಳೂರು: ಮುನಿರತ್ನ ಆದಷ್ಟು ಬೇಗ ಕೆಂಪೇಗೌಡರ ಇತಿಹಾಸದ ಬಗ್ಗೆ ಇರುವ ಪುಸ್ತಕವನ್ನು ನನಗೆ ಗಿಫ್ಟ್ ನೀಡಲಿ. ನಾನು ಅವರ ಸಲಹೆ ಸ್ವೀಕರಿಸುತ್ತೇನೆ. ನನಗೆ ರಾಜಕೀಯದಲ್ಲಿ ಈ ವಿದ್ಯೆನೂ ಇದೆ ಅಂತಾ ಗೊತ್ತಿರಲಿಲ್ಲ. ಮುನಿರತ್ನಗೆ ಒಳ್ಳೆದಾಗಲಿ ಎಂದು ಮುನಿರತ್ನ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ‘ನಾನು ಕೂಡ ಸಿದ್ದರಾಮಯ್ಯರ ಜೊತೆಯೇ ಇದ್ದೇನೆ’ ‘ಕೈ’ ಶಾಸಕರು ಸಿದ್ದರಾಮಯ್ಯ ಜೊತೆ ಇದ್ದಾರೆಂಬ ಮುನಿರತ್ನ ಹೇಳಿಕೆಗೆ ಶಿವಕುಮಾರ್ ಹೌದು ನಾನು ಕೂಡ ಸಿದ್ದರಾಮಯ್ಯರ ಜೊತೆಯೇ …
Read More »ಕೊರೋನಾ ಭೀತಿ ನಡುವೆಯೂ ನಗರದಾದ್ಯಂತ ನಾಡಹಬ್ಬ ದಸರಾ ಭಾಗವಾಗಿರುವ ಆಯುಧಪೂಜೆ ಹಾಗೂ ವಿಜಯದಶಮಿ ಆಚರಣೆಗೆ ಭರ್ಜರಿ ಸಿದ್ಧತೆ ನಡೆದಿದೆ.
ಬೆಂಗಳೂರು: ಕೊರೋನಾ ಭೀತಿ ನಡುವೆಯೂ ನಗರದಾದ್ಯಂತ ನಾಡಹಬ್ಬ ದಸರಾ ಭಾಗವಾಗಿರುವ ಆಯುಧಪೂಜೆ ಹಾಗೂ ವಿಜಯದಶಮಿ ಆಚರಣೆಗೆ ಭರ್ಜರಿ ಸಿದ್ಧತೆ ನಡೆದಿದೆ. ಹಬ್ಬದ ಮುನ್ನಾ ದಿನವಾದ ಶನಿವಾರ ಮಾರುಕಟ್ಟೆಗಳಲ್ಲಿ ವ್ಯಾಪಾರ-ವಹಿವಾಟು ಜೋರಾಗಿತ್ತು. ಜನರು ರೋಗವನ್ನು ಲೆಕ್ಕಿಸದೆ ಖರೀದಿಯಲ್ಲಿ ನಿರತರಾಗಿದ್ದರು. ಕೋವಿಡ್ನಿಂದಾಗಿ ಈ ಬಾರಿ ಕೆಲವರು ಸರಳ ಮತ್ತು ಸಾಂಪ್ರದಾಯಿಕವಾಗಿ ನಾಡಹಬ್ಬ ಆಚರಣೆಗೆ ಸಿದ್ಧತೆ ನಡೆಸಿದ್ದಾರೆ. ಭಾನುವಾರ ಆಯುಧಪೂಜೆ ಹಿನ್ನೆಲೆಯಲ್ಲಿ ವಾಹನ, ಮಳಿಗೆ, ಯಂತ್ರಗಳ ಪೂಜೆಗಾಗಿ ಸ್ವಚ್ಛಗೊಳಿಸಿ ತಯಾರಿ ನಡೆಸಿದರು. ಸೋಮವಾರ ವಿಜಯದಶಮಿ …
Read More »ಅಧಿಕಾರಿಗಳು ಮತ್ತು ರಾಜಕಾರಣಿಗಳ ನಿರ್ಲಕ್ಷ್ಯದಿಂದ ಸಿಲಿಕಾನ್ ಸಿಟಿಯಲ್ಲಿ ಕೃತಕ ನೆರೆ ನಿರ್ಮಾಣವಾಗುತ್ತೆ.
ಬೆಂಗಳೂರು: ಅಧಿಕಾರಿಗಳು ಮತ್ತು ರಾಜಕಾರಣಿಗಳ ನಿರ್ಲಕ್ಷ್ಯದಿಂದ ಸಿಲಿಕಾನ್ ಸಿಟಿಯಲ್ಲಿ ಕೃತಕ ನೆರೆ ನಿರ್ಮಾಣವಾಗುತ್ತೆ. ಜೋರು ಮಳೆ ಬಂದ್ರೆ ಸಿಲಿಕಾನ್ ಸಿಟಿಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗುತ್ತೆ. ಏಕೆಂದರೆ ರಾಜಕಾಲುವೆಯ ಬಹುತೇಕ ಬಫರ್ ಝೋನ್ ಒತ್ತುವರಿ ಮಾಡಿಕೊಂಡು ಕಟ್ಟಡಗಳ ನಿರ್ಮಾಣ ಮಾಡಲಾಗಿದೆ. ಹಾಗೂ ಒತ್ತುವರಿ ಮಾಡಿರುವ ಜಾಗ ಕುಸಿಯದಂತೆ ತಡೆಗೋಡೆ ನಿರ್ಮಾಣ ಮಾಡಲಾಗಿದೆ. ಒತ್ತುವರಿಯಿಂದ ಮಳೆ ನೀರು ಸರಾಗವಾಗಿ ಹರಿದು ಹೋಗದ ಪರಿಸ್ಥಿತಿ ಇದೆ. ಇದರಿಂದಾಗಿ ತಡೆಗೋಡೆ ಒಡೆದು ನುಗ್ಗುವ ನೀರಿನಿಂದ ಪ್ರವಾಹ …
Read More »ರಾಜ್ಯದಲ್ಲಿ ಕೊರೊನಾ ಕ್ರಿಮಿ ಹಾವು ಏಣಿ ಆಟ ಆಡುತ್ತಿದೆ.
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಕ್ರಿಮಿ ಹಾವು ಏಣಿ ಆಟ ಆಡುತ್ತಿದೆ. ಸೋಂಕಿತರ ಸಂಖ್ಯೆ ಕಡಿಮೆಯಾಗಿ ಇನ್ನೇನು ಕೊರೊನಾ ಹಾವಳಿ ಕಡಿಮೆಯಾಯಿತು ಅಂದುಕೊಳ್ಳುವಷ್ಟರಲ್ಲೇ ಮತ್ತೆ ಧುತ್ತನೆ ಕಾಣಿಸಿಬಿಡುತ್ತಿದೆ ಈ ಕ್ರಿಮಿ. ಇದು ಸರ್ಕಾರಕ್ಕೂ ತಲೆಬೇನೆಯಾಗಿದೆ. ಜನಾನೂ ಹೈರಾಣಗೊಂಡಿದ್ದಾರೆ. ಈ ಮಧ್ಯೆ ಕೊವಿಡ್ ಉಸ್ತುವಾರಿಯನ್ನು ಏಕಾಂಗಿಯಾಗಿ ಒಬ್ಬರ ಹೆಗಲಿಗೆ ಜವಾಬ್ದಾರಿ ವಹಿಸಲಾಗಿದ್ದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಕೊರೊನಾ ಕ್ರಿಮಿಯನ್ನು ಕಟ್ಟಿಹಾಕಲು ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ರಾಜ್ಯದ ಪ್ರತಿಯೊಬ್ಬ ನಾಗರಿಕನಿಗೂ ಆದಷ್ಟು …
Read More »ರಾಜ್ಯದಲ್ಲಿ ಅಕ್ಟೋಬರ್ 27 ರವರೆಗೆ ಭಾರೀ ಮಳೆ,ಬೆಂಗಳೂರಿನಲ್ಲಿ ಇನ್ನೆರಡು ದಿನ ಮಳೆ ಆರ್ಭಟ ಮುಂದುವರಿಯಲಿದೆ
ಬೆಂಗಳೂರು: ರಾಜ್ಯದಲ್ಲಿ ಅಕ್ಟೋಬರ್ 27ರವರೆಗೆ ಭಾರೀ ಮಳೆಯಾಗುತ್ತದೆ. ಬೆಂಗಳೂರಿನಲ್ಲಿ ಇನ್ನೆರಡು ದಿನ ಮಳೆ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕ ಆಯ್ತು, ಈಗ ಬೆಂಗಳೂರು ಸರದಿ. ಮುಂಬೈ, ಹೈದರಾಬಾದ್ ರೀತಿ ಬೆಂಗಳೂರು ಕೂಡ ಮುಳುಗುತ್ತಾ ಎಂಬ ಆತಂಕ ಸದ್ಯ ಎದುರಾಗಿದೆ. ಅಕ್ಟೋಬರ್ ತಿಂಗಳ ಈ ಮಳೆ ಕಂಟಕ ಇನ್ನೆಷ್ಟು ದಿನ ಅನ್ನೋ ಪ್ರಶ್ನೆ ಮೂಡಿದೆ. ಈ ಮಧ್ಯೆ ಮಳೆ ಭವಿಷ್ಯದ ಮಾಹಿತಿ …
Read More »ರ್ಯಾಶ್ ಡ್ರೈವಿಂಗ್ ಮಾಡುವವರಿಗೆ ಭಾರೀ ದಂಡದ ಜೊತೆ ಜೈಲು ಶಿಕ್ಷೆ
ಬೆಂಗಳೂರು: 4 ವರ್ಷ ಮೇಲ್ಪಟ್ಟ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ. ಇಲ್ಲದಿದ್ರೆ ದಂಡದ ಜೊತೆ ಡಿಎಲ್ ಸಸ್ಪೆಂಡ್ ಮಾಡುವ ಆದೇಶ ಹೊರಡಿಸಿದ್ದ ಸಾರಿಗೆ ಇಲಾಖೆ ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದೆ. ರ್ಯಾಶ್ ಡ್ರೈವಿಂಗ್ ಮಾಡುವವರಿಗೆ ಭಾರೀ ದಂಡದ ಜೊತೆ ಜೈಲು ಶಿಕ್ಷೆ ವಿಧಿಸುವ ಸಂಬಂಧ ಆದೇಶ ಹೊರಡಿಸಿದೆ. ವೀಲಿಂಗ್, ಸೈಲೆನ್ಸರ್ ಅಲ್ಟ್ರೇಷನ್, ಅಡ್ಡಾದಿಡ್ಡಿ ಚಾಲನೆ, ಅಪಾಯಕಾರಿ ಚಾಲನೆ ಮಾಡಿದರೆ ಅಪರಾಧ ದಂಡ ಸಂಹಿತೆ(ಸಿಆರ್ಪಿಸಿ) ಸೆಕ್ಷನ್ 107ರ ಆಡಿ ಕೇಸ್ …
Read More »ಉತ್ತರ ಕರ್ನಾಟಕದ ಬಳಿಕ ರಣ ಮಳೆ ಈಗ ಬೆಂಗಳೂರನ್ನು ಅಟಕಾಯಿಸಿಕೊಂಡಿದೆ.
ಬೆಂಗಳೂರು: ಉತ್ತರ ಕರ್ನಾಟಕದ ಬಳಿಕ ರಣ ಮಳೆ ಈಗ ಬೆಂಗಳೂರನ್ನು ಅಟಕಾಯಿಸಿಕೊಂಡಿದೆ. ಸಿಲಿಕಾನ್ ಸಿಟಿಯಲ್ಲಿ ಚಿತ್ತಾ ಮಳೆ ತನ್ನ ಕುರುಡಾಟ ಪ್ರದರ್ಶಿಸುತ್ತಿದೆ. ಯಾವಾಗಂದ್ರೆ ಆಗ ಮಳೆ ಸುರಿದು ನಾನಾ ಅವಾಂತರ ಸೃಷ್ಟಿ ಮಾಡುತ್ತಿದೆ. ಕುರುಡ ಚಿತ್ತನ ಆಟಕ್ಕೆ ಬೆಂಗಳೂರು ಮಂದಿ ತತ್ತರಿಸಿ ಹೋಗಿದ್ದಾರೆ. ಬೆಂಗಳೂರಲ್ಲಿ ಬೆಳಗ್ಗೆಯಿಂದ ಸೂರ್ಯ ದರ್ಶನ ಆಗಿರಲಿಲ್ಲ. ಮಧ್ಯಾಹ್ನದವರೆಗೂ ನಗರದಲ್ಲಿ ಮೋಡಗಳ ಆಟ ಜೋರಿತ್ತು. ಆದರೆ ಆ ಬಳಿಕ ನಗರದಲ್ಲಿ ವರುಣ ಅಬ್ಬರಿಸಿ ಬೊಬ್ಬಿರಿಯಿತು. ಅದ್ರಲ್ಲೂ ಸಂಜೆ …
Read More »ನಾನೇನು ಬಂಡೆ, ಕನಕಪುರ ಬಂಡೆ ಅಂತ ಹೆಸರು ಇಟ್ಕೊಂಡಿಲ್ಲ. ಬಂಡೆ ಎಂಬುದು ಪ್ರಕೃತಿ. ಅದನ್ನು ಕಡೆದರೆ ಆಕೃತಿ, ಪೂಜಿಸುವುದು ಸಂಸ್ಕೃತಿ ಎಂದು ಬಿಜೆಪಿ ನಾಯಕರಿಗೆ ತಿರುಗೇಟು
ಬೆಂಗಳೂರು: ಬಿಜೆಪಿ ಅಧ್ಯಕ್ಷರು ಯಾರೋ ಬಂಡೆಯನ್ನ ಡೈನಾಮಿಟ್ ಇಟ್ಟು ಪುಡಿ ಪುಡಿ ಮಾಡುತ್ತೇನೆ ಎಂದಿದ್ದಾರೆ. ನಾನೇನು ಬಂಡೆ, ಕನಕಪುರ ಬಂಡೆ ಅಂತ ಹೆಸರು ಇಟ್ಕೊಂಡಿಲ್ಲ. ಬಂಡೆ ಎಂಬುದು ಪ್ರಕೃತಿ. ಅದನ್ನು ಕಡೆದರೆ ಆಕೃತಿ, ಪೂಜಿಸುವುದು ಸಂಸ್ಕೃತಿ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಬಗ್ಗೆ ಮಾತನಾಡಿದರೆ, ಬಿಜೆಪಿ ನಾಕರುಗೆ ಪ್ರಮೋಷನ್ ಸಿಗುತ್ತದೆ ಎನ್ನಿಸುತ್ತದೆ. ಅದಕ್ಕಾಗಿ ಚುನಾವಣಾ ಸಮಯದಲ್ಲಿ ಅಶ್ವತ್ಥ ನಾರಾಯಣ್ ಸಾಹೇಬ್ರು, ಅಶೋಕಣ್ಣ ಮತ್ತು …
Read More »ವೋಟ್ ಹಾಕಿ ಗೆಲ್ಲಿಸಿದರೆ ಉಚಿತ ಲಸಿಕೆ ಕೊಡುತ್ತೀರಾ ಸರಿ. ಸೋಲಿಸಿಬಿಟ್ಟರೆ ಜನರನ್ನು ಸಾಯಿಸಿ ಬಿಡುತ್ತೀರಾ:ಪರಿಷತ್ ಸದಸ್ಯ ವಿಶ್ವನಾಥ್ ಅವರ ಪ್ರಶ್ನೆ
ಮೈಸೂರು: ವೋಟ್ ಹಾಕಿ ಗೆಲ್ಲಿಸಿದರೆ ಉಚಿತ ಲಸಿಕೆ ಕೊಡುತ್ತೀರಾ ಸರಿ. ಸೋಲಿಸಿಬಿಟ್ಟರೆ ಜನರನ್ನು ಸಾಯಿಸಿ ಬಿಡುತ್ತೀರಾ ಎಂದು ತಮ್ಮ ಪಕ್ಷದ ನಾಯಕರನ್ನೇ ಪರಿಷತ್ ಸದಸ್ಯ ವಿಶ್ವನಾಥ್ ಅವರು ಪ್ರಶ್ನೆ ಮಾಡಿದ್ದಾರೆ. ಸದ್ಯ ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಇದರಲ್ಲಿ ಬಿಜೆಪಿ ಬಿಹಾರದಲ್ಲಿ ಗೆದ್ದು ಅಧಿಕಾರಕ್ಕೆ ಬಂದರೆ ಉಚಿತ ಕೊರೊನಾ ಲಸಿಕೆ ನೀಡುವುದಾಗಿ ತಿಳಿಸಿದೆ. ಇದೇ ವಿಚಾರ ಈಗ ಸಖತ್ ಚರ್ಚೆಯಾಗುತ್ತಿದೆ. ಇಂದು ಇದೇ ವಿಚಾರವಾಗಿ ಸುದ್ದಿಗಾರರೊಂದಿಗೆ …
Read More »
Laxmi News 24×7