Breaking News

ಬೆಂಗಳೂರು

ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಶಿಫಾರಸ್ಸಿನಂತೆ ವಾಲ್ಮೀಕಿ ಸಮುದಾಯಕ್ಕೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.7.5ರಷ್ಟು ಮೀಸಲಾತಿ ಹೆಚ್ಚಿಸಿ ಸರ್ಕಾರ ಅಸೂಚನೆ ಹೊರಡಿಸಲೇಬೇಕು. ಡಿಸೆಂಬರ್ 10ರೊಳಗೆ ನಮ್ಮ ಬೇಡಿಕೆ ಈಡೇರದಿದ್ದರೆ ವಾಲ್ಮೀಕಿ ಸಮುದಾಯದ ಸಚಿವರು ಮತ್ತು ಶಾಸಕರು ಹಾಲಿಯಿಂದ ಮಾಜಿಯಾಗಲು ಸಿದ್ದರಿದ್ದಾರೆ ಎಂದು ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದರು.

ಬೆಂಗಳೂರು,ಅ.23- ಸರ್ಕಾರಿ ಉದ್ಯೋಗ ಹಾಗೂ ಶಿಕ್ಷಣದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ಹೆಚ್ಚಿಸಿ ಡಿಸೆಂಬರ್ 10ರೊಳಗೆ ರಾಜ್ಯ ಸರ್ಕಾರ ಅಕೃತವಾಗಿ ಆದೇಶ ಹೊರಡಿಸದಿದ್ದರೆ ಸಮುದಾಯದ ಸಚಿವರು ಮತ್ತು ಶಾಸಕರು ರಾಜೀನಾಮೆ ನೀಡಲು ಹಿಂದೆಮುಂದೆ ನೋಡುವುದಿಲ್ಲ ಎಂದು ವಾಲ್ಮೀಕಿ ಸಮುದಾಯದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಸಿದ್ದಾರೆ .ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಶಿಫಾರಸ್ಸಿನಂತೆ ವಾಲ್ಮೀಕಿ ಸಮುದಾಯಕ್ಕೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.7.5ರಷ್ಟು ಮೀಸಲಾತಿ ಹೆಚ್ಚಿಸಿ ಸರ್ಕಾರ ಅಸೂಚನೆ …

Read More »

ಡಿಕೆಶಿಯವ್ರಿಗೆ ನಾನು ಸರಿಸಾಟಿ ಆಗಲು ಸಾಧ್ಯವಿಲ್ಲ. ಡಿಕೆಶಿ ಎಂಥ ದೊಡ್ಡವರು, ಅವರ ಮುಂದೆ ನಾನು ಸಣ್ಣವನು”:ಮುನಿರತ್ನ ತಿರುಗೇಟು

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸರಿಸಮನಾಗಲು ನನಗೆ ಸಾಧ್ಯವೇ ಇಲ್ಲ. ಇದೊಂದು ಜನ್ಮದಲ್ಲಿ ಮಾತ್ರ ಅಲ್ಲ, ಏಳೇಳು ಜನ್ಮದಲ್ಲೂ ಡಿಕೆಶಿಯವ್ರಿಗೆ ನಾನು ಸರಿಸಾಟಿ ಆಗಲು ಸಾಧ್ಯವಿಲ್ಲ ಎಂದು ಆರ್‍ಆರ್ ನಗರ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಮುನಿರತ್ನ ತಿರುಗೇಟು ನೀಡಿದ್ದಾರೆ. ಇಂದು ಜಾಲಹಳ್ಳಿ ವಾರ್ಡ್ ನಲ್ಲಿ ಸ್ಕೂಟರ್ ನಲ್ಲಿ ಓಡಾಡ್ಕೊಂಡೇ ಮನೆ ಮನೆ ಪ್ರಚಾರ ಮಾಡುತ್ತಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಯುದ್ಧದಲ್ಲಿ ಎದುರಾಳಿ ಸರಿಸಮ ಇದ್ರೆ ಹೊರಾಡಬಹುದೆಂದು ಮುನಿರತ್ನ …

Read More »

ಕೆಜಿಎಫ್-2, ಯಶ್ ಅಭಿಮಾನಿಗಳ ಬೇಡಿಕೆಯೊಂದು ಟ್ವಿಟ್ಟರ್ ನಲ್ಲಿ ಭಾರೀ ಟ್ರೆಂಡ್ ಆಗಿದೆ.

ಬೆಂಗಳೂರು: ಕೆಜಿಎಫ್-2, ಯಶ್ ಅಭಿಮಾನಿಗಳು ಮಾತ್ರವಲ್ಲದೆ ಪ್ರತಿಯೊಬ್ಬ ಸಿನಿಮಾ ಅಭಿಮಾನಿಯೂ ಬಹುನೀರಿಕ್ಷೆಯಿಂದ ಕಾಯುತ್ತಿರುವ ಸಿನಿಮಾವಾಗಿದೆ. ಸದ್ಯ ಅಭಿಮಾನಿಗಳ ಬೇಡಿಕೆಯೊಂದು ಟ್ವಿಟ್ಟರ್ ನಲ್ಲಿ ಭಾರೀ ಟ್ರೆಂಡ್ ಆಗಿದೆ. ಹೌದು. ಕೆಜಿಎಫ್-2 ಸಿನಿಮಾದ ಟೀಸರ್ ಬಿಡುಗಡೆ ಮಾಡುವಂತೆ ಟ್ವಿಟ್ಟರ್ ಮೂಲಕವಾಗಿ ಅಭಿಮಾನಿಗಳು ಸಿನಿಮಾ ತಂಡದ ಮುಂದೆ ಬೇಡಿಕೆ ಇಡುತ್ತಿದ್ದಾರೆ. ‘ವೀನೀಡ್ ಕೆಜಿಎಫ್2 ಟೀಸರ್’ ಹ್ಯಾಶ್‍ಟ್ಯಾಗ್‍ನೊಂದಿಗೆ ಟ್ವೀಟ್ ನ ಸುರಿಮಳೆ ಗೈದಿದ್ದಾರೆ. ಬೆಳಗ್ಗಿನಿಂದಲೇ ಈ ವಿಚಾರ ಟ್ವಿಟರ್‍ನಲ್ಲಿ ಟ್ರೆಂಡಿಂಗ್ ಆಗಿದೆ. ಚಾಪ್ಟರ್-2 ಅಕ್ಟೋಬರ್ 23 …

Read More »

ದಕ್ಷ ಪೊಲೀಸ್ ಅಧಿಕಾರಿ, ಕರ್ನಾಟಕ ಸಿಂಗಂ ಎಂದೇ ಖ್ಯಾತಿ ಪಡೆದಿದ್ದ ಅಣ್ಣಾಮಲೈ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದಾರೆ

ಬೆಂಗಳೂರು: ದಕ್ಷ ಪೊಲೀಸ್ ಅಧಿಕಾರಿ, ಕರ್ನಾಟಕ ಸಿಂಗಂ ಎಂದೇ ಖ್ಯಾತಿ ಪಡೆದಿದ್ದ ಅಣ್ಣಾಮಲೈ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದಾರೆ. ಇದು ನಿಮಗೆಲ್ಲ ತಿಳಿದಿರುವ ಸಂಗತಿ. ಆದರೆ ಈಗ ಅದೇ ಅಣ್ಣಾಮಲೈ ಶೂಟಿಂಗ್​ನಲ್ಲಿ ಬ್ಯೂಸಿಯಾಗಿದ್ದಾರೆ. ನೈಸ್ ರಸ್ತೆಯಲ್ಲಿ ನಡೆಯುತ್ತಿರುವ ಸಿನಿಮಾವೊಂದರ ಶೂಟಿಂಗ್​ನಲ್ಲಿ ಗೆಸ್ಟ್ ರೋಲ್​ನಲ್ಲಿ ನಟಿಸುತ್ತಿರುವ ಅಣ್ಣಾಮಲೈ. ಬೆಳ್ಳಂ ಬೆಳಗ್ಗೆ ಬುಲೆಟ್ ಗಾಡಿ ಓಡಿಸುತ್ತ ಸಿನಿಮಾ ಶೂಟಿಂಗ್​ನಲ್ಲಿ ಭಾಗಿಯಾಗಿದ್ದಾರೆ.   *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ …

Read More »

ಶಿರಾದಲ್ಲಿ ಈಗ ತಮ್ಮವರನ್ನು ಗೆಲ್ಲಿಸಲು ಮಕ್ಕಳ ಶತಪ್ರಯತ್ನ

  ಬೆಂಗಳೂರು : ಕುಟುಂಬ ರಾಜಕಾರಣವೇ ಮೇಳೈಸುತ್ತಿರುವ ದಿನಗಳಲ್ಲಿ ತಮ್ಮ ತಂದೆ-ತಾಯಿಯ ಗೆಲುವಿಗಾಗಿ ಮಕ್ಕಳು ಬೆವರು ಹರಿಸುತ್ತಿರುವುದು ಈ ಉಪಚುನಾವಣೆಯ ವಿಶೇಷವಾಗಿದೆ. ಅಪ್ಪನ ಹೆಸರು ಹೇಳಿಕೊಂಡು ರಾಜಕಾರಣ ಮಾಡುವ ಈ ದಿನಗಳಲ್ಲಿ ತಮ್ಮ ತಂದೆಯ ಕುರ್ಚಿ ಭದ್ರಪಡಿಸಲು, ಅಪ್ಪನ ಗೆಲುವಿಗಾಗಿ ಮಗ, ತಾಯಿಯ ಗೆಲುವಿಗೆ ಮತ್ತೊಬ್ಬ ಪುತ್ರ ಮತಬೇಟೆ ಮಾಡುತ್ತಿರುವುದು ಶಿರಾದಲ್ಲಿ ಕಂಡುಬರುತ್ತಿದೆ. ಉಪಚುನಾವಣೆಯಲ್ಲಿ ಸೋತರೆ, ತಮ್ಮ ತಂದೆಯ ಕುರ್ಚಿಗೆ ಕಂಟಕ ಎಂಬುದು ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ ವಿಜೇಯೇಂದ್ರಗೆ …

Read More »

ಕೊರೊನಾ ಕಂಟ್ರೋಲ್‍ಗೆ ದೊಣ್ಣೆ ಅಸ್ತ್ರ ಪ್ರಯೋಗ

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಇದೀಗ ಕೊರೊನಾ ಟೆಸ್ಟ್ ಮಾಡಿಸುವಂತೆ ‘ದೊಣ್ಣೆ ನಾಯಕರು’ ಎಂಟ್ರಿ ಕೊಟ್ಟಿದ್ದಾರೆ.ಹೌದು. ಬೆಂಗಳೂರಿನಲ್ಲಿ ಟಾರ್ಗೆಟ್ ಟಾರ್ಚರ್ ಗೆ ಫೀಲ್ಡ್ ವಾರಿಯರ್ಸ್ ನಯಾ ಐಡಿಯಾವೊಂದನ್ನು ಹುಡುಕಿಕೊಂಡಿದ್ದಾರೆ. ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲು ಬಾರದ ಜನರ ಮೇಲೆ ಬಿಬಿಎಂಪಿ ದೊಣ್ಣೆ ಅಸ್ತ್ರ ಪ್ರಯೋಗ ಮಾಡಲು ಮುಂದಾಗಿದೆ. ಬಸ್ ಸ್ಟ್ಯಾಂಡ್ ಗಳಲ್ಲಿ ಟೆಂಟ್ ಹಾಕಿಕೊಂಡು, ದೊಣ್ಣೆ ಇಟ್ಕೊಂಡೇ ಸಿಬ್ಬಂದಿ ಜನಸಾಮಾನ್ಯರನ್ನು ಗುಡ್ಡೆ ಹಾಕಿ ಟೆಸ್ಟಿಂಗ್ …

Read More »

ಡಿಕೆ ಶಿವಕುಮಾರ್ ಆರ್‍ಸಿಬಿ ಛತ್ರಿ ಹಿಡಿದ ಮೇಲೆ ಗೆಲುವಿನ ಲಕ್ಷ್ಮೀ ಆರ್‌ಸಿಬಿಗೆ ಒಲಿಯಿತು ಎಂದು ಬರೆದುಕೊಂಡಿದ್ದಾರೆ

ತುಮಕೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ತುಂತುರು ಮಳೆಯಿಂದ ರಕ್ಷಣೆ ಪಡೆಯಲು ಹಿಡಿದಿದ್ದ ಆರ್‌ಸಿಬಿ ಛತ್ರಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿದೆ. ಶಿರಾ ಉಪ ಚುನಾವಣೆಯ ಪ್ರಚಾರದಲ್ಲಿ ಡಿಕೆ ಶಿವಕುಮಾರ್ ಅವರು ಬ್ಯುಸಿಯಾಗಿದ್ದು, ಈ ವೇಳೆ ಶಿರಾದ ದೊಡ್ಡ ಆಲದ ಮರ ಬಳಿ ಪ್ರಚಾರ ಕಾರ್ಯದಲ್ಲಿದ್ದ ಸಂದರ್ಭದಲ್ಲಿ ದಿಢೀರ್ ಎಂದು ತುಂತುರು ಮಳೆ ಆರಂಭವಾಗಿತ್ತು. ಮಳೆ ಆರಂಭವಾಗುತ್ತಿದಂತೆ ಪ್ರಚಾರ ವಾಹನದಲ್ಲಿದ್ದ ಕಾರ್ಯಕರ್ತರು …

Read More »

ನಿಮ್ಮ ಪಕ್ಷದಲ್ಲಿ ನಿಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಿ ಸಿಟಿ ರವಿಯವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೆ ಟಾಂಗ್

ಬೆಂಗಳೂರು: ನಿಮ್ಮ ಪಕ್ಷದಲ್ಲಿ ನಿಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಿ ಎಂದು ಟ್ವೀಟ್ ಮಾಡುವ ಮೂಲಕ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿಯವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ. ಸದ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಸಿದ್ದರಾಮಯ್ಯ ಅವರ ನಡುವೆ ಟ್ವಿಟ್ಟರ್ ವಾರ್ ನಡೆಯುತ್ತಿದೆ. ಇಂದು ನಳಿನ್ ಅವರನ್ನು ಸಿದ್ದರಾಮಯ್ಯ ಕಾಡುಮನುಷ್ಯನಿಗೆ ಹೊಲಿಕೆ ಮಾಡಿದಕ್ಕೆ ಬಿಜೆಪಿ ನಾಯಕರು ಸಿದ್ದರಾಮಯ್ಯನ ಮೇಲೆ ಮುಗಿಬಿದ್ದಿದ್ದಾರೆ. ಈಗ ಸಿಟಿ ರವಿಯವರೂ …

Read More »

ಸಿಲಿಕಾನ್ ಸಿಟಿಯಲ್ಲಿ ರಾತ್ರಿ ಸುರಿದ ಭಾರೀ ಮಳೆಗೆ ಜನ ಕಂಗಾಲಾ

  ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಾತ್ರಿ ಸುರಿದ ಭಾರೀ ಮಳೆಗೆ ಜನ ಕಂಗಾಲಾಗಿದ್ದು, ಕೋರಮಂಗಲ ಸೇರಿದಂತೆ ಹಲವೆಡೆಗಳಲ್ಲಿ ರಸ್ತೆ ಜಲಾವೃತವಾಗಿದ್ದು, ಅಂಡರ್ ಪಾಸ್‍ಗಳು ತುಂಬಿ ತುಳುಕುತ್ತಿದ್ದವು. ರಾತ್ರಿ ಬಿಟ್ಟು ಬಿಡದೆ ಮಳೆ ಸುರಿದಿದ್ದು, ಮೆಜೆಸ್ಟಿಕ್, ಕೋರಮಂಗಲ, ಯಶವಂತಪುರ, ನಂದಿನಿ ಲೇಔಟ್, ಬಸವನಗುಡಿ, ಕೆ.ಆರ್. ಮಾರ್ಕೆಟ್ ಸೇರಿದಂತೆ ವಿವಿಧ ಭಾಗಗಳಲ್ಲಿ ವರುಣ ಅಬ್ಬರಿಸಿದ್ದಾನೆ. ರಾತ್ರಿ ಒಂದೇ ಸಮ ಸುರಿದ ಮಳೆಗೆ ಕೊರಮಂಗಲ ರಸ್ತೆ ಜಲಾವೃತವಾಗಿತ್ತು. ಗುರುವಾರ ಸಂಜೆಯಿಂದಲೇ ಆರಂಭವಾದ ತುಂತುರು ಮಳೆ …

Read More »

ಇಬ್ಬರು ಭ್ರಷ್ಟ ಅಧಿಕಾರಿಗಳು ಎಸಿಬಿ ಬಲೆಗೆ

ಬೆಂಗಳೂರು, ಅ.22- ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಇಬ್ಬರು ಭ್ರಷ್ಟ ಅಧಿಕಾರಿಗಳ ಮೇಲೆ ಎಸಿಬಿ ಪೊಲೀಸರು ದಾಳಿ ನಡೆಸಿ ಭಾರೀ ಪ್ರಮಾಣದ ಅಕ್ರಮ ಪತ್ತೆಹಚ್ಚಿದ್ದಾರೆ. ಬಾಗಲಕೋಟೆ ಜಿ.ಪಂ. ಕುಡಿಯುವ ನೀರು ಪೂರೈಕೆ ಹಾಗೂ ನೈರ್ಮಲ್ಯ ವಿಭಾಗದ ಸಹಾಯಕ ಎಂಜಿನಿಯರ್ ಅಶೋಕ್ ತೋಪಲಕಟ್ಟಿ ಅವರ ಮನೆ, ಕಚೇರಿ, ಗ್ಯಾಸ್ ಏಜೆನ್ಸಿ ಮೇಲೆ ಇಂದು ಮುಂಜಾನೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿ ಭಾರೀ ಪ್ರಮಾಣದ ಅಕ್ರಮ ಆಸ್ತಿ ಪತ್ತೆ …

Read More »