Breaking News

ಬೆಂಗಳೂರು

ಕೊರೊನಾ ಊಹೆಗೆ ನಿಲುಕದ ವೈರಸ್- ಮತ್ತೆ ಲಾಕ್‍ಡೌನ್ ಸುಳಿವು ನೀಡಿದ ಸಿಟಿ ರವಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರಿಂದ ಲೋಕಲ್ ಲಾಕ್‍ಡೌನ್ ಮಾತು ಕೇಳಿ ಬಂದಿದೆ. ಇದರ ಬೆನ್ನಲ್ಲೇ ಸಚಿವ ಸಿಟಿ ರವಿ ಅವರು ಮತ್ತೆ ಲಾಕ್‍ಡೌನ್ ಮಾಡುವ ಕುರಿತ ಸುಳಿವನ್ನು ನೀಡಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಸಿಟಿ ರವಿ, ಕೊರೊನಾ ನಮ್ಮ ಊಹೆಗೂ ನಿಲುಕದ ವೈರಸ್ ಆಗಿದ್ದು, ಈ ಬಗ್ಗೆ ಯೋಚನೆ ಮಾಡಬೇಕಾದ ಸ್ಥಿತಿ ಬಂದಿದೆ ಎಂದು ತಿಳಿಸಿದರು ಸದ್ಯ ಆರೋಗ್ಯವಾಗಿದ್ದ ಕೇಂದ್ರ ಸಚಿವರು ವಿಧಿವಶರಾಗಿದ್ದು, ರಾಜ್ಯ, ದೇಶಕ್ಕೆ ದೊಡ್ಡ …

Read More »

ಸಿನಿ ಕಲಾವಿದರಾದ ರಾಕ್‍ಲೈನ್ ಸುಧಾಕರ್ ಅವರು ಇಂದು ಮೇಕಪ್ ಹಚ್ಚಿರುವಾಗಲೇ ಹೃದಯಘಾತದಿಂದ ನಮ್ಮನ್ನೆಲ್ಲಾ ಅಗಲಿದ್ದಾರೆ.

ಬೆಂಗಳೂರು: ಹೃದಯಾಘಾತವಾಗಿ ಸ್ಯಾಂಡಲ್‍ವುಡ್‍ನ ಹಿರಿಯ ನಟ ರಾಕ್‍ಲೈನ್ ಸುಧಾಕರ್ ವಿಧಿವಶರಾಗಿದ್ದಾರೆ ಇತ್ತೀಚೆಗಷ್ಟೆ ನಟ ರಾಕ್‍ಲೈನ್ ಸುಧಾಕರ್ ಕೊರೊನಾ ಟೆಸ್ಟ್ ಮಾಡಿಸಿದ್ದು, ಪಾಸಿಟಿವ್ ಬಂದಿತ್ತು. ಬಳಿಕ ಆಸ್ಪತ್ರೆಗೆ ದಾಖಲಾಗಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ನಂತರ ಸಿನಿಮಾ ಕೆಲಸಗಳಲ್ಲಿ ಸುಧಾಕರ್ ಸಕ್ರಿಯರಾಗಿದ್ದರು. ಇಂದು ಸಹ ಸುಧಾಕರ್ ಚಿತ್ರೀಕರಣಕ್ಕೆ ಹಾಜರಾಗಿದ್ದರು. ಆದರೆ ಸುಧಾಕರ್ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಸಿಂಪಲ್ ಸುನಿ ನಿರ್ದೇಶಿಸುತ್ತಿರುವ ಸಿನಿಮಾ ಶೂಟಿಂಗ್ ವೇಳೆ ಹೃದಯಾಘಾತವಾಗಿ …

Read More »

ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ : ಇಂದು ನಟಿ ರಾಗಿಣಿ, ಸಂಜನಾ ಜಾಮೀನು ಅರ್ಜಿ ವಿಚಾರಣೆ

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಜಾಲದ ನಂಟು ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿ ರಾಗಿಣಿ, ಸಂಜನಾಳ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಇಂದು ನಟಿ ರಾಗಿಣಿ, ಸಂಜನಾಳ ಜಾಮೀನು ಅರ್ಜಿ ವಿಚಾರಣೆ ಸಿಟಿ ಸಿವಿಲ್ ಆವರಣದ ಎನ್ ಡಿಪಿಎಸ್ ವಿಶೇಷ ನ್ಯಾಯಾಲಯದಲ್ಲಿ ನಡೆಯಲಿದ್ದು, ಇಂದು ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದಾರೆ. ಕಳೆದ ವಿಚಾರಣೆ ವೇಳೆ ರಾಗಿಣಿ ಅರ್ಜಿಗೆ ರಾಗಿಣಿ ಪರ ವಕೀಲರು ವಾದ ಮಂಡಿಸಿದ್ದರು. ಸಿಸಿಬಿ ಕೂಡ …

Read More »

ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗಾವಕಾಶ : ರಾಜ್ಯ ಸರ್ಕಾರದಿಂದ ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ರಾಜ್ಯ ಸರ್ಕಾರವು ಕನ್ನಡಿಗರಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶವನ್ನು ಹೆಚ್ಚಿಸಲು ಆಂಧ್ರಪ್ರದೇಶ ಮಾದರಿಯನ್ನು ರಾಜ್ಯದಲ್ಲಿ ಅಳವಡಿಸಲು ಚಿಂತಿಸಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಸಚಿವ ಮಾಧುಸ್ವಾಮಿ, ಸಿ ಮತ್ತು ಡಿ ದರ್ಜೆ ಹುದ್ದೆಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಆದ್ಯತೆ ನೀಡುವ ಬಗ್ಗೆ ಸರ್ಕಾರದಿಂದ ಶೀಘ್ರದಲ್ಲಿಯೇ ಆದೇಶ ಹೊರಡಿಸಲಾಗುವುದು ಎಂದರು. ಈ ಹಿಂದಿನ ಬಜೆಟ್ ನಲ್ಲಿ ಸರ್ಕಾರದಿಂದ ಸೌಲಭ್ಯ ಪಡೆಯುವ ಖಾಸಗಿ ಸಂಸ್ಥೆಗಳಲ್ಲಿನ ಸಿ ಮತ್ತು …

Read More »

ಅಸಂಸದೀಯ ಪದ ಬಳಕೆ: ರಮೇಶ್‌ ಕುಮಾರ್‌- ಸುಧಾಕರ್ ಜಟಾಪಟಿ

ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹಾಗೂ ಕಾಂಗ್ರೆಸ್‌ನ ಶಾಸಕ ಕೆ.ಆರ್‌.ರಮೇಶ್‌ ಕುಮಾರ್‌ ಮಧ್ಯದ ಜಟಾಪಟಿಗೆ ವಿಧಾನಸಭೆ ಬುಧವಾರ ಸಾಕ್ಷಿಯಾಯಿತು. ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಕಾಂಗ್ರೆಸ್‌ ಆರೋಪಕ್ಕೆ ಉತ್ತರ ನೀಡಿದ ಸುಧಾಕರ್‌, ‘ಸಚಿವರನ್ನು ಒಳಗೊಂಡ ಕಾರ್ಯಪಡೆ ಸಭೆಯಲ್ಲಿ ಚರ್ಚಿಸಿ ಪಿಪಿಇ ಕಿಟ್‌ಗಳ ಖರೀದಿ ಮಾಡಲಾಗುತ್ತಿದೆ’ ಎಂದರು. ಆಗ ಎದ್ದು ನಿಂತ ರಮೇಶ್‌ ಕುಮಾರ್‌, ‘ಪಿಪಿಇ ಕಿಟ್‌ಗಳ ಖರೀದಿ ದರದ ಏರಿಳಿತವನ್ನು ಸಚಿವರು ಸಮರ್ಥಿಸಿಕೊಳ್ಳುತ್ತಿದ್ದಾರೆ. ಮೊದಲು ಕಿಟ್‌ಗಳನ್ನು ₹300ಕ್ಕೆ …

Read More »

ಲಾಕ್‍ಡೌನ್ ಅವಧಿಯನ್ನು ಮುಗಿಸಿ ಮತ್ತೆ ಚಿತ್ರೀಕಣಕ್ಕೆ ಹೊರಡಲು ಸಿದ್ಧರಾಗಿದ್ದಾರೆ. ಧ್ರುವ

ಬೆಂಗಳೂರು: ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಲಾಕ್‍ಡೌನ್ ಅವಧಿಯನ್ನು ಮುಗಿಸಿ ಮತ್ತೆ ಚಿತ್ರೀಕಣಕ್ಕೆ ಹೊರಡಲು ಸಿದ್ಧರಾಗಿದ್ದಾರೆ. ಸದ್ಯಕ್ಕೆ ಧ್ರುವ ಬಹು ನಿರೀಕ್ಷೆಯ ‘ಪೊಗರು’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿದ್ದು, ಈಗ ಮತ್ತೊಂದು ಹಾಡಿನ ಚಿತ್ರೀಕರಣಕ್ಕೆ ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ. ಚಿತ್ರತಂಡ ‘ಪೊಗರು’ ಸಿನಿಮಾದ ಟೈಟಲ್ ಸಾಂಗ್ ಸೆರೆಹಿಡಿಯುತ್ತಿದೆ. ಈ ಹಾಡನ್ನು ಬೆಂಗಳೂರಿನಲ್ಲೇ ಚಿತ್ರೀಕರಣ ಮಾಡಲಾಗುತ್ತಿದೆ. ಅಲ್ಲದೇ ‘ಪೊಗರು’ ಚಿತ್ರದ ಟೈಟಲ್ ಹಾಡಿನ ಚಿತ್ರೀಕರಣಕ್ಕೆ ಬರೋಬ್ಬರಿ 1.50 ಕೋಟಿಯ …

Read More »

ಕೆಪಿಸಿಸಿ_ಕಾರ್ಯಾಧ್ಯಕ್ಷ_ಸತೀಶ_ಜಾರಕಿಹೊಳಿ_ನೇತೃತ್ವದಲ್ಲಿ_ಸಹಕಾರ_ಸಚಿವ_ಟಿ_ಸೋಮಶೇಖರಗೆ_ಮನವಿ…

ಬೆಂಗಳೂರು- ಬೆಂಗಳೂರಲ್ಲಿ ಹಂಗೇನಿಲ್ಲ,ಎಲ್ಲಾರೂ ಸೇರ್ಕೊಂಡು ಮನವಿ ಕೊಡ್ತಾರೆ ಅನ್ನೋದು,ಪೋಟೋ ನೋಡಿದ್ರೆ ನಿಮಗೆ ಗೊತ್ತಾಗುತ್ತದೆ. ಬೆಳಗಾವಿ ಎಪಿಎಂಸಿ ಮಾರುಕಟ್ಟೆಯ ಆಡಳಿತ ಮಂಡಳಿಯ ನಿಯೋಗ ಇಂದು,ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ್ ಜಾರಕಿಹೊಳಿ ನೇತ್ರತ್ವದಲ್ಲಿ ಸಹಕಾರ,ಮತ್ತು ಎಪಿಎಂಸಿ ಸಚಿವ ಟಿ‌.ಸೋಮಸೇಖರ್ ಅವರು ಭೇಟಿಯಾಗಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿತು. ಬೆಳಗಾವಿ ಎಪಿಎಂಸಿಯ ಬಾಕಿ ಉಳಿದಿರುವ ಆರ್ ಡಿ ಪಿ ಯೋಜನೆಯ 15 ಕೋಟಿ ರೂ ಅನುದಾನ ಬಿಡುಗಡೆ ಮಾಡಬೇಕು,ಬೆಳಗಾವಿ ಎಪಿಎಂಸಿ ಮಾರುಕಟ್ಟೆಯ ಅಭಿವೃದ್ಧಿಗಾಗಿ,ಹೆಚ್ಚುವರಿಯಾಗಿ 15 ಕೋಟಿ …

Read More »

ದಿಗಂತ್‍ಗೆ 2ನೇ ಬಾರಿ ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದರು.

ಬೆಂಗಳೂರು: ಡ್ರಗ್ಸ್ ಮಾಫಿಯಾ ನಂಟಿನ ಆರೋಪದ ಮೇರೆಗೆ ಸ್ಯಾಂಡಲ್‍ವುಡ್ ಸ್ಟಾರ್ ನಟ ದೂದ್‍ಪೇಡ ದಿಗಂತ್‍ರನ್ನು ಸಿಸಿಬಿ ಪೊಲೀಸರು 2ನೇ ಬಾರಿ ವಿಚಾರಣೆ ಆರಂಭಿಸಿದ್ದಾರೆ. ದಿಗಂತ್‍ಗೆ 2ನೇ ಬಾರಿ ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ಸಿಸಿಬಿ ಅಧಿಕಾರಿಗಳ ನೋಟಿಸ್ ಹಿನ್ನೆಲೆಯಲ್ಲಿ ಬೆಂಗಳೂರು ಹೊರವಲಯದಲ್ಲಿ ಶೂಟಿಂಗ್‍ನಲ್ಲಿ ಬ್ಯುಸಿಯಾಗಿದ್ದ ದಿಗಂತ್, ಚಿತ್ರೀಕರಣ ಅರ್ಧಕ್ಕೆ ಮೊಟಕುಗೊಳಿಸಿ ವಿಚಾರಣೆಗೆ ಹಾಜರಾಗಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಬೆಳಿಗ್ಗೆ 11.30ಕ್ಕೆ ಹಾಜರಾದ ದಿಗಂತ್‍ರನ್ನು ಸಿಸಿಬಿ ತನಿಖಾಧಿಕಾರಿ ಪುನೀತ್ ತೀವ್ರ …

Read More »

ಕ್ರಿಕೆಟ್​ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿಗಳು ಅರೆಸ್ಟ್

ಬೆಂಗಳೂರು: ನಗರದ ಬಾಣಸವಾಡಿ ಹಾಗೂ ಮಲ್ಲೇಶ್ವರಂನಲ್ಲಿ ಕ್ರಿಕೆಟ್​ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಐಪಿಎಲ್ ಪಂದ್ಯಾವಳಿಗಳ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು, ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಟ್ಟಿಂಗ್​​​ನಲ್ಲಿ ತೊಡಗಿಸಿದ್ದ ₹6 ಲಕ್ಷ ನಗದು ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಬಾಣಸವಾಡಿ ಹಾಗೂ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.

Read More »

ಶಾಸಕಾಂಗದ ಒಪ್ಪಿಗೆ ಪಡೆಯದೆ ನ್ಯಾಯಾಂಗ ಅಧಿಕಾರಿಗಳು ತಮ್ಮ ವೇತನ ತಾವೇ ಹೆಚ್ಚಿಸಿಕೊಂಡಿದ್ದಾರೆ

ಬೆಂಗಳೂರು : ‘ಶಾಸಕಾಂಗದ ಒಪ್ಪಿಗೆ ಪಡೆಯದೆ ನ್ಯಾಯಾಂಗ ಅಧಿಕಾರಿಗಳು ತಮ್ಮ ವೇತನ ತಾವೇ ಹೆಚ್ಚಿಸಿಕೊಂಡಿದ್ದಾರೆ. ನಂತರ ಸರ್ಕಾರ ಇದಕ್ಕೆ ಒಪ್ಪಿಗೆ ನೀಡಿದೆ. ಅಧಿಕಾರಿಗಳಿಗೆ ಅಂತಹ ಅಧಿಕಾರ ಕೊಟ್ಟವರಾರ‍ಯರು? ಸರ್ಕಾರ ಅಷ್ಟುಬಲಹೀನವಾಯಿತಾ?’ ಎಂದು ಜೆಡಿಎಸ್‌ ಸದಸ್ಯ ಎ.ಟಿ. ರಾಮಸ್ವಾಮಿ ಅವರು ಸರ್ಕಾರವನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡ ಘಟನೆ ವಿಧಾನಸಭೆಯಲ್ಲಿ ಮಂಗಳವಾರ ನಡೆಯಿತು. ಕೋವಿಡ್‌ ಹಿನ್ನೆಲೆಯಲ್ಲಿ ಜಾರಿಗೊಳಿಸಲಾಗಿರುವ ‘ಕರ್ನಾಟಕ ವಿಧಾನ ಮಂಡಲದ ಸಂಬಳಗಳು, ನಿವೃತ್ತಿವೇತನಗಳು ಮತ್ತು ಭತ್ಯೆಗಳು ಹಾಗೂ ಕೆಲವು ಇತರೆ ಕಾನೂನು (ತಿದ್ದುಪಡಿ) …

Read More »