ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪರಪ್ಪನ ಅಗ್ರಹಾರ ಸೇರಿರುವ ನಟಿ ಸಂಜನಾ ಗಲ್ರಾನಿ ಇಸ್ಲಾಂ ಧರ್ಮಕ್ಕೆ ಮತಾಂತರ ಆಗಿದ್ದಾರಾ ಎಂಬ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ಮತಾಂತರ ಸುದ್ದಿಗೆ ಪುಷ್ಠಿ ಎಂಬಂತೆ ಸಂಜನಾ ಸಿನಿಮಾ ಶೂಟಿಂಗ್ ಗೆ ಬುರ್ಖಾ ಧರಿಸಿದ್ದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿ ಆ ಧರ್ಮವನ್ನು ಹೊಗಳಿರುವುದು ಬೆಳಕಿಗೆ ಬಂದಿದೆ. ಹೌದು, ಅಂದು ಬ್ಲಾಕ್ ಆಂಡ್ ವೈಟ್ ಫೋಟೋ ಪೋಸ್ಟ್ ಮಾಡಿದ್ದ ಸಂಜನಾ, …
Read More »ಬಿಎಸ್ವೈಗೆ ಸಿಕ್ಕಿಲ್ಲ ಹೈಕಮಾಂಡ್ ಗ್ರೀನ್ ಸಿಗ್ನಲ್ – ಅಧಿವೇಶನಕ್ಕೂ ಮುನ್ನ ಸಂಪುಟ ವಿಸ್ತರಣೆ ಡೌಟ್
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ಸಿಎಂ ದೆಹಲಿ ಭೇಟಿ ಅಂತ್ಯವಾಗಿದೆ. ಆದರೆ ಸಂಪುಟ ಪುನಾರಚನೆಯೋ ಅಥವಾ ಸಂಪುಟ ವಿಸ್ತರಣೆಯೋ ಅನ್ನೋ ವಿಚಾರಕ್ಕೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ. ಅಧಿವೇಶನಕ್ಕೆ ಮುನ್ನ ಸಂಪುಟ ವಿಸ್ತರಣೆಗೆ ಒಲವು ತೋರಿದ್ದ ಸಿಎಂಗೆ ಈ ಬೆಳವಣಿಗೆ ನಿರಾಸೆ ತಂದಿದೆ. ಭಾನುವಾರ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದು ಶುಕ್ರವಾರ ರಾತ್ರಿಯಿಂದ ಸುದ್ದಿ ಹಬ್ಬಿತ್ತು. ಆದರೆ ಹೈಕಮಾಂಡ್ ಸಚಿವ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ನೀಡಿಲ್ಲ. …
Read More »ಸ್ಯಾಂಡಲ್ವುಡ್ ನಟನ ಮಗನಿಗೂ, ನಟಿಗೆ ಸಿಸಿಬಿ ನೋಟಿಸ್ ಸಾಧ್ಯತೆ…..?
ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ವುಡ್ ಹಿರಿಯ ನಟರೊಬ್ಬರ ಮಗ ಮತ್ತು ಓರ್ವ ನಟಿಗೆ ಸಿಸಿಬಿ ನೋಟಿಸ್ ನೀಡುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ಇಂದು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕರಾದ ಅಕುಲ್ ಬಾಲಾಜಿ, ಸಂತೋಷ್ ಕುಮಾರ್ ಮತ್ತು ಮಾಜಿ ಶಾಸಕ ಆರ್.ವಿ.ದೇವರಾಜ್ ಪುತ್ರ ಆರ್.ವಿ.ಯುವರಾಜ್ ಇಂದು ವಿಚಾರಣೆಗೆ ಹಾಜರಾಗಿದ್ದಾರೆ. ಈ ಮೂವರ ವಿಚಾರಣೆ ಬಳಿಕ ನಟನ ಮಗನಿಗೆ ಸಿಸಿಬಿ ನೋಟಿಸ್ ನೀಡಲು ಸಿದ್ಧತೆ ಮಾಡಿಕೊಳ್ಳುತ್ತಿದೆ ಎನ್ನಲಾಗಿದೆ. ನಟನ ಮಗ …
Read More »ಡ್ರಗ್ಸ್ ಕೇಸ್ – ನಟ ಸಂತೋಷ್, ಐಂದ್ರಿತಾ ಕಾಲೆಳೆದ ಪ್ರಶಾಂತ್ ಸಂಬರಗಿ
ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿಯವರು ಫೇಸ್ಬುಕ್ ಪೋಸ್ಟ್ ಹಾಕುವ ಮೂಲಕ ಡ್ರಗ್ಸ್ ಜಾಲಕ್ಕೆ ಸಂಬಂಧಿಸದಂತೆ ಸಿಸಿಬಿ ವಿಚಾರಣೆ ಎದುರಿಸುತ್ತಿರುವ ನಟಿ ಐಂದ್ರಿತಾ ರೈ ಮತ್ತು ನಟ ಸಂತೋಷ್ ಕುಮಾರ್ ಅವರ ಕಾಲೆಳೆದಿದ್ದಾರೆ. ಸ್ಯಾಂಡಲ್ವುಡ್ ಡ್ರಗ್ಸ್ ಮಾಫಿಯಾ ವಿಚಾರದಲ್ಲಿ ಕನ್ನಡದ ಸ್ಟಾರ್ ನಟ-ನಟಿಯರು ಸಿಲುಕಿ ಹಾಕಿಕೊಂಡಿದ್ದಾರೆ. ಇಂದು ನಿರೂಪಕ ಅಕುಲ್ ಬಾಲಾಜಿ ಮತ್ತು ನಟ ಸಂತೋಷ್ ಕುಮಾರ್ ಅವರನ್ನು ಸಿಸಿಬಿ ವಿಚಾರಣೆ ಮಾಡಿದೆ. ಈಗಾಗಲೇ ಈ ಪ್ರಕರಣದಲ್ಲಿ ನಟಿ ರಾಗಿಣಿ …
Read More »ಬ್ರೇಕಿಂಗ್ : ದೆಹಲಿಯಿಂದ ಬೆಂಗಳೂರಿಗೆ ಸಿಎಂ ಯಡಿಯೂರಪ್ಪ ವಾಪಾಸ್ : ಸದ್ಯದಲ್ಲೇ ಸಂಪುಟ ವಿಸ್ತರಣೆ.?
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡ, ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು ಸೇರಿದಂತೆ ಕೇಂದ್ರದ ಬಿಜೆಪಿ ವರಿಷ್ಠರ ಭೇಟಿಯ ಬಳಿಕ, ದೆಹಲಿಯಿಂದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬೆಂಗಳೂರಿಗೆ ಹಿಂದಿರುಗಿದ್ದಾರೆ. ಹೀಗಾಗಿ ಸದ್ಯದಲ್ಲೇ ಸಚಿವ ಸಂಪುಟ ವಿಸ್ತರಣೆ ಆಗುತ್ತಾ ಎನ್ನುವ ಕುತೂಲಹ ಮೂಡಿಸಿದೆ. BIG BREAKING : ಮುಂದಿನವಾರ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆ ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಲು …
Read More »ʼಆಕೆ ಸಂಜನಾ ಗಿಲ್ರಾನಿ ಅಲ್ಲ ಮಾಹಿರಾʼ: ನಟಿಮಣಿಯ ಬುರ್ಕಾವತಾರ ಬಯಲು..!
ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರದಲ್ಲಿ ಮುದ್ದೆ ಮುರಿಯುತ್ತಿರುವ ನಟಿ ‘ಸಂಜನಾ ಗಲ್ರಾನಿʼ ಬಗ್ಗೆ ಮತ್ತೊಂದು ಹೊಸ ವಿಷ್ಯ ಬಹಿರಂಗವಾಗಿದ್ದು, ಸಮಾಜೀಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಆಕೆ ಸಂಜನಾ ಗಿಲ್ರಾನಿ ಅಲ್ಲ ಮಹಿರಾ ಎಂದು ಹೇಳಿದ್ದಾರೆ. ಹೌದು, ಪ್ರಶಾಂತ್ ಸಂಬರಗಿ ಈ ಕುರಿತು ಪೇಸ್ಬುಕ್ನಲ್ಲಿ ಪೋಸ್ಟ್ ಹಾಕಿದ್ದು, ‘ ಸಂಜನಾ ಮುಸ್ಲಿಂ ಧರ್ಮಕ್ಕೆ 2018ರಲ್ಲಿ ಮತಾಂತರಗೊಂಡಿದ್ದಾರೆ. ಈಗ ಅವರ ಹೊಸ ಹೆಸರು ಮಾಹಿರಾ. ನಮ್ಮ ಕರ್ನಾಟಕದಲ್ಲಿ ಲವ್ …
Read More »ತೆರಿಗೆ ಹೆಚ್ಚಿಸಿ ಬೆಂಗಳೂರಿಗರಿಗೆ B.B.M.P. ಶಾಕ್
ಬೆಂಗಳೂರು: ಕೊರೊನಾ ಮಧ್ಯೆ ಬೆಂಗಳೂರು ಜನರಿಗೆ ತೆರಿಗೆ ಶಾಕ್ ಕಾದಿದೆ. ಬಿಬಿಎಂಪಿ ಆದಾಯ ಹೆಚ್ಚಿಸಲು ಮುಂದಾಗಿರುವ ಪಾಲಿಕೆ ಜನಸಾಮಾನ್ಯರಿಗೆ ಹೊರೆಮಾಡಲಿದೆ. ಆಸ್ತಿ ತೆರಿಗೆ, ಪ್ಲಾನ್ ಅಪ್ರೂವಲ್, ಖಾತಾ ಹಂಚಿಕೆ ದರ ಏರಿಕೆ ಜೊತೆಗೆ ಭೂ ಸಾರಿಗೆ ಸೆಸ್ ಜಾರಿಗೆ ತರಲು ಬಿಬಿಎಂಪಿ ತೀರ್ಮಾನ ಮಾಡಿದೆ. ಆಸ್ತಿ ತೆರಿಗೆ ಶೇ.15 ರಿಂದ 25ರಷ್ಟು ಹೆಚ್ಚಳ, ಖಾತಾ ಚಾರ್ಜ್ ಶೇ.2 ರಿಂದ 5 ರಷ್ಟು ಏರಿಕೆ ಸಾಧ್ಯತೆ ಇದೆ. ಆಸ್ತಿ ನೋಂದಣಿ ಮಾಡುವಾಗ …
Read More »ಮಳೆ ನೀರಲ್ಲಿ ಕೊಚ್ಚಿ ಹೋದ ಯುವಕ……
ಬೆಂಗಳೂರು: ರಾಜ್ಯದ ಹಲವೆಡೆ ಇಂದು ವರುಣ ಅಬ್ಬರಿಸಿದ್ದು, ಬೀದರ್ ಕಲಬುರಗಿ, ರಾಯಚೂರು, ಯಾದಗಿರಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ ಮಳೆ ನೀರಿನ ರಭಸಕ್ಕೆ ಯುವಕ ಕೊಚ್ಚಿಹೋಗಿದ್ದು, ಮೃತಪಟ್ಟಿದ್ದಾನೆ.ಕಲಬುರಗಿ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದ್ದಿದ್ದು, ಅಫಜಲಪುರ್, ಆಳಂದ, ಚಿಂಚೋಳಿಯ ಹಲವು ಗ್ರಾಮಗಳು ಜಲಾವೃತವಾಗಿವೆ. ಅಲ್ಲದೆ ಜಿಲ್ಲೆ ಆಳಂದ ತಾಲೂಕಿನ ಬೊಮ್ಮನಹಳ್ಳಿ ಬಳಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದು, ಮೃತ ಯುವಕ ಸಿದ್ದರಾಜು ಅಫಜಲಪುರ ಜೆಸ್ಕಾಂನಲ್ಲಿ ಎಇಇ …
Read More »ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಹೈಕಮಾಂಡ್ ಸಿದ್ಧವಾದಂತೆ ಕಾಣುತ್ತಿದೆ.,,,,,,?
ಬೆಂಗಳೂರು/ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ವದಂತಿಗಳ ಮಧ್ಯೆಯೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೈಗೊಂಡ ದೆಹಲಿ ಪ್ರವಾಸದಲ್ಲಿ ಬಿಗ್ ಶಾಕ್ ಎದುರಾಗಿದೆ. ಇಂದು ಬೆಳಗ್ಗೆ ಸಂಸತ್ ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಂಜೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾರನ್ನು ಭೇಟಿಯಾದ ಯಡಿಯೂರಪ್ಪಗೆ ಸ್ಪಷ್ಟ ಸಂದೇಶವೊಂದು ರವಾನೆಯಾಗಿದೆ ಅಂತ ತಿಳಿದುಬಂದಿದೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಹೈಕಮಾಂಡ್ ಸಿದ್ಧವಾದಂತೆ ಕಾಣುತ್ತಿದೆ. 77 ವರ್ಷದ ಸಿಎಂ ಯಡಿಯೂರಪ್ಪ ಬದಲಿಗೆ ಉತ್ತರಾಧಿಕಾರಿ ಆಯ್ಕೆಗೆ ಆಲೋಚಿಸಿದೆ. ಮುಂಬರುವ …
Read More »ಅಧಿವೇಶನ ಆರಂಭಕ್ಕೆ 72 ಗಂಟೆಗಳ ಮುನ್ನ ಶಾಸಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯ
ಬೆಂಗಳೂರು,ಸೆ.18- 141ನೇ ವಿಧಾನಮಂಡಲ ಅಧಿವೇಶನವು ಸೆ.21ರಿಂದ 8 ದಿನಗಳ ಕಾಲ ನಡೆಯಲಿದ್ದು, ಸದಸ್ಯರಿಗೆ ಕೋವಿಡ್19 ಪರೀಕ್ಷೆ ಮಾಡಿಸಿಕೊಂಡಿರುವ ದೃಢೀಕರಣ ಒದಗಿಸುವುದು ಕಡ್ಡಾಯವಾಗಿದೆ. ಸುದ್ದಿಗೋಷ್ಟಿಯಲ್ಲಿ ಈ ವಿಷಯ ತಿಳಿಸಿದ ವಿಧಾನಪರಿಷತ್ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮಿ ಅವರು ರಾಜ್ಯದಲ್ಲಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಮಾರ್ಗಸೂಚಿಯಂತೆ ಸದನ ಆರಂಭವಾಗುವ 72 ಗಂಟೆಗಳ ಮುಂಚಿತವಾಗಿ ಸದಸ್ಯರು ಆರೋಗ್ಯ ತಪಾಸಣೆ ಒಳಗಾಗಿ ಕೋವಿಡ್ 19ರ ಆರ್ಟಿಪಿಸಿಆರ್ ಪರೀಕ್ಷೆ ಮಾಡಿಸಿಕೊಂಡು ದೃಢೀಕರಣವನ್ನು ತರಬೇಕೆಂದು ಕೋರಿದ್ದಾರೆ. …
Read More »