Breaking News

ಬೆಂಗಳೂರು

ನಾಳೆಯಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ : ಇಲ್ಲಿದೆ ನೋಡಿ ಸಂಪೂರ್ಣ ವೇಳಾಪಟ್ಟಿ

ಬೆಂಗಳೂರು : ಪದವಿ ಪೂರ್ವಶಿಕ್ಷಣ ಇಲಾಖೆಯು 2019-20 ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯು ಸೆ. 7 ರಿಂದ 19 ರವರೆಗೆ ನಡೆಯಲಿದೆ. ಪರೀಕ್ಷೆಗಳು ಬೆಳಗ್ಗೆ 10.15 ರಿಂದ 1.30 ಹಾಗೂ 2.15 ರಿಂದ 5.30 ರ ಅವಧಿಯಲ್ಲಿ ನಡೆಯಲಿವೆ. ದ್ವಿತೀಯ ಪಿಯುಸಿ ಪೂರಕ ಪರೀಕ್ಷಾ ವೇಳಾ ಪಟ್ಟಿ ಸಮಯ ಬೆಳಗ್ಗೆ 10.15 ರಿಂದ 1.30ರವರೆಗೆ, ಮಧ್ಯಾಹ್ನ 2.15 ರಿಂದ ಸಾಯಂಕಾಲ 5.30ರವರೆಗೆ ಸೆ.7ರ ಬೆಳಗ್ಗೆ ಉರ್ದು, ಸಂಸ್ಕೃತ, …

Read More »

ಮೇಘನಾ ರಾಜ್ ಬಳಿ ಕ್ಷಮೆ ಕೋರಿದ ಇಂದ್ರಜಿತ್ ………..

ಬೆಂಗಳೂರು: ಪತಿ ಚಿರಂಜೀವಿ ಸರ್ಜಾ ಬಗ್ಗೆ ಹೇಳಿಕೆ ನೀಡಿರುವುದಕ್ಕೆ ನಟಿ ಮೇಘನಾ ರಾಜ್ ಅವರು ವಾಣಿಜ್ಯ ಮಂಡಳಿಗೆ ಬರೆದ ಪತ್ರದ ಬೆನ್ನಲ್ಲೇ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ಕ್ಷಮೆ ಕೋರಿದ್ದಾರೆ.ಮಾತನಾಡಿದ ಇಂದ್ರಜಿತ್, ಚಿರು ಕುಟುಂಬಕ್ಕೆ ನೋವಾಗಿದ್ದರೆ ಕ್ಷಮೆಯಾಚಿಸುವುದಾಗಿ ತಿಳಿಸಿದರು. ಈಗಾಗಲೇ ನಾನು ನೀಡಿದ್ದ ಹೇಳಿಕೆಯನ್ನು ವಾಪಸ್ ಪಡೆದಿದ್ದೇನೆ. ಚಿರು ನನಗೆ ಆತ್ಮೀಯ ಸ್ನೇಹಿತ. ನನ್ನ ಹೇಳಿಕೆಯಿಂದ ಅವರ ಕುಟುಂಬಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದರು. ಈ ಸಂಬಂಧ ನಾನು ಬಹಿರಂಗ …

Read More »

ನನ್ನ ಮಗಳ ಮೇಲೆ ಮಾಡಿರುವ ಆರೋಪಗಳೆಲ್ಲವೂ ಸುಳ್ಳು.:ರಾಗಿಣಿ ತಾಯಿ ರೋಹಿಣಿ

ಬೆಂಗಳೂರು: ನನ್ನ ಮಗಳ ಮೇಲೆ ಮಾಡಿರುವ ಆರೋಪಗಳೆಲ್ಲವೂ ಸುಳ್ಳು. ಅವಳನ್ನು ಸಿಕ್ಕಿಹಾಕಿಸಲು ನೋಡುತ್ತಿದ್ದಾರೆ ಎಂದು ನಟಿ, ಡ್ರಗ್ ಪ್ರಕರಣದಲ್ಲಿ ಆರೋಪಿಯಾಗಿರುವ ರಾಗಿಣಿ ತಾಯಿ ರೋಹಿಣಿ ದ್ವಿವೇದಿ ಹೇಳಿದ್ದಾರೆ. ಈ ಕುರಿತುಮಾತನಾಡಿದ ಅವರು, ನನ್ನ ಮಗಳ ಮೇಲಿನ ಎಲ್ಲ ಆರೋಪಗಳು ಸುಳ್ಳು. ಅವಳನ್ನು ಸಿಕ್ಕಿ ಹಾಕಿಸಲಾಗುತ್ತಿದೆ. ಇದೆಲ್ಲವೂ ಸುಳ್ಳು, ನನ್ನ ಮಗಳು ಪ್ರಕಣದಿಂದ ಮುಕ್ತಳಾಗಿ ಬರುತ್ತಾಳೆ. ನಾನು ಎಲ್ಲ ರೀತಿಯ ದಾಖಲೆಗಳನ್ನು ಸಲ್ಲಿಸುತ್ತೇನೆ. ಶೀಘ್ರವೇ ನನ್ನ ಮಗಳು ಆರೋಪದಿಂದ ಮುಕ್ತಳಾಗುತ್ತಾಳೆ ಎಂದು …

Read More »

ಮಾಜಿ ಸಚಿವ, ದಿ.ಜೀವರಾಜ್‌ ಪುತ್ರ ಆದಿತ್ಯ ಆಳ್ವಾ ಸೇರಿದಂತೆ 12 ಮಂದಿ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಸ್ಯಾಂಡಲ್‌ವುಡ್‌ ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಪೊಲೀಸರು ರಾಗಿಣಿ ಜೊತೆ ಮಾಜಿ ಸಚಿವ, ದಿ. ಜೀವರಾಜ್‌ ಪುತ್ರ ಆದಿತ್ಯ ಆಳ್ವಾ ಸೇರಿದಂತೆ 12 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ. ಸಿಸಿಬಿಯ ನಾರ್ಕೊಟಿಕ್ಸ್ ಎಸಿಪಿ ಗೌತಮ್ ನೀಡಿದ ಸ್ವಯಂಪ್ರೇರಿತ ದೂರಿನ ಆಧಾರದ ಮೇಲೆ ಕಾಟನ್‍ಪೇಟೆ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಎಫ್‌ಐಆರ್‌ ದಾಖಲಾಗಿತ್ತು. ಬಂಧಿತ ಆರೋಪಿಗಳೊಂದಿಗೆ ಸಂಪರ್ಕ ಹೊಂದಿದ್ದ ಬಗ್ಗೆ ಸಾಕ್ಷಿ ಹಾಗೂ ಪುರಾವೆಗಳು ಸಿಕ್ಕಿರುವ ಹಿನ್ನೆಯಲ್ಲಿ ಗೌತಮ್‌ …

Read More »

ಎನ್‍ಡಿಪಿಎಸ್ ಆಕ್ಟ್ ಸೆಕ್ಷನ್ 21, 21ಸಿ, 27ಬಿ, 27ಎ, 29, ಐಪಿಸಿ 120ಬಿ ಅಡಿ ಎಫ್‍ಐಆರ್ ದಾಖಲಾಗಿದೆ

ಬೆಂಗಳೂರು: ಎರಡು ಬಾರಿ ಎಂಡಿಎಂಎ (ಮೀಥೈಲ್ ಎನೆಡಿಯಾಕ್ಸಿ ಮೆಥಾಂಫೆಟಮೈನ್ ನನ್ನು ಎಕ್‍ಸಸ್ಟಿ ಮಾತ್ರೆ ಎಂದು ಕರೆಯಲಾಗುತ್ತದೆ) ಡ್ರಗ್ ತೆಗೆದುಕೊಂಡಿರೋದಾಗಿ ನಟಿ ರಾಗಿಣಿ ದ್ವಿವೇದಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ ಗೆಳೆಯ ರವಿಶಂಕರ್ ತಂದುಕೊಟ್ಟಿದ್ದ ಎಂಡಿಎಂಎ ಡ್ರಗ್ ಮನೆಯಲ್ಲಿಯೇ ಬಳಕೆ ಮಾಡಿದ್ದೇನೆ ಎಂದು ರಾಗಿಣಿ ಹೇಳಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಎರಡು ಬಾರಿಯೂ ರವಿಶಂಕರ್ ಡ್ರಗ್ಸ್ ತಂದಿದ್ದನು. ಇತ್ತ ರಾಗಿಣಿ, ರವಿಶಂಕರ್ ಮತ್ತು ರಾಹುಲ್ ಬಳಸುತ್ತಿದ್ದ ಮೊಬೈಲ್ ಮಾಹಿತಿಯನ್ನ ಪುನಃ ಕಲೆ ಹಾಕಲಾಗಿದೆ. …

Read More »

ಮತ್ತೊಂದು ಡ್ರಗ್ಸ್ ಜಾಲದ ಮೇಲೆ ಸಿಸಿಬಿ ದಾಳಿ – 20 ಲಕ್ಷ ಮೌಲ್ಯದ ಡ್ರಗ್ಸ್ ವಶ

ಬೆಂಗಳೂರು: ಸಿಸಿಬಿ ಪೊಲೀಸರು ಎರಡು ಕಾರ್ಯಾಚರಣೆ ನಡೆಸಿದ್ದು, ಮೊತ್ತೊಂದು ಡ್ರಗ್ಸ್ ದಂಧೆ ಜಾಲವನ್ನು ಪತ್ತೆ ಮಾಡಿದ್ದಾರೆ ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕಮಿಷನರ್ ಕಮಲ್ ಪಂತ್, ಸಿಸಿಬಿ ಪೊಲೀಸರು ಕೆ.ಆರ್.ಪುರಂ ವ್ಯಾಪ್ತಿಯಲ್ಲಿ ಮತ್ತೊಂದು ಡ್ರಗ್ಸ್ ಜಾಲದ ಮೇಲೆ ದಾಳಿ ಮಾಡಿದ್ದಾರೆ. ಕಾರ್ಯಾಚರಣೆ ವೇಳೆ 2 ಕೆಜಿ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಇದರ ಬೆಲೆ 20 ಲಕ್ಷಕ್ಕೂ ಅಧಿಕ ಬೆಲೆ ಇರಬಹುದು ಎಂದರು. ನಮಗೆ ಇರುವ …

Read More »

ರಾಗಿಣಿ ಸೇರಿ ಮೂರು ಮಂದಿ ಸಿಕ್ಕಿಬಿದ್ದಿದ್ದು ಹೇಗೆ? ಡ್ರಗ್ಸ್‌ ಮಾಫಿಯಾ ಬಹಿರಂಗವಾಗಿದ್ದು ಹೀಗೆ!

ಬೆಂಗಳೂರು : ಮಾದಕ ವಸ್ತು ಜಾಲದ ಪ್ರಕರಣದ ಸಿಸಿಬಿ ತನಿಖೆ ಮೇಲೆ ಯಾವುದೇ ರೀತಿಯ ಒತ್ತಡವಿಲ್ಲ. ಜಾಲ ಬಹು ವಿಸ್ತಾರವಾಗಿದ್ದು, ಈ ಜಾಲದಲ್ಲಿ ಸಿಲುಕಿರುವ ಪ್ರತಿಯೊಬ್ಬರನ್ನು ತನಿಖೆಗೊಳಪಡಿಸುತ್ತೇವೆ ಎಂದು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಗುಡುಗಿದರು. ನಗರದ ಆಯುಕ್ತರ ಕಚೇರಿಯಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡ್ರಗ್ಸ್‌ ಜಾಲದ ಸಮಗ್ರವಾಗಿ ನಡೆಯಲಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಪ್ರತಿಯೊಬ್ಬರ ತನಿಖೆಯೂ ಹಂತ ಹಂತ ಹಂತವಾಗ ನಡೆಯಲಿದೆ ಎಂದರು. ಜಾಲ ಬಯಲಾಗಿದ್ದು …

Read More »

ಬಿಬಿಎಂಪಿ ಚುನಾವಣೆ ಮುಂದೂಡಿದ್ರೆ ಹೈಕೋರ್ಟ್‌ಗೆ ಮೊರೆ’

ಬೆಂಗಳೂರು : ರಾಜ್ಯ ಸರ್ಕಾರ ಉದ್ದೇಶಪೂರ್ವಕವಾಗಿ ಬಿಬಿಎಂಪಿ ಚುನಾವಣೆ ಮುಂದೂಡಲು ಪ್ರಯತ್ನಿಸುತ್ತಿದ್ದು, ಈ ಸಂಬಂಧ ಹೈಕೋರ್ಟ್‌ನಲ್ಲಿ ಪ್ರಶ್ನೆ ಮಾಡಲಾಗುವುದು ಎಂದು ಬಿಬಿಎಂಪಿ ವಿರೋಧ ಪಕ್ಷದ ನಾಯಕ ಅಬ್ದುಲ್‌ ವಾಜೀದ್‌ ಹೇಳಿದ್ದಾರೆ.   ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಈಗಿನ ಪಾಲಿಕೆಯ 198 ವಾರ್ಡ್‌ಗಳನ್ನು 225ಕ್ಕೆ ಹೆಚ್ಚಳ ಮಾಡುವುದರ ಹಿಂದೆ ಪಾಲಿಕೆ ಚುನಾವಣೆ ಮುಂದೂಡುವ ಉದ್ದೇಶ ಅಡಗಿದೆ. 2007ರಲ್ಲಿಯೂ ಅಂದಿನ ಬಿಜೆಪಿ ಸರ್ಕಾರ ಬಿಬಿಎಂಪಿಗೆ 110 ಹಳ್ಳಿಗಳನ್ನು ಸೇರಿಸುವ ನೆಪದಲ್ಲಿ …

Read More »

ಸಾಲ ಮಂಜೂರು ಮಾಡಿಸಲಿಲ್ಲ ಎಂದು ಮ್ಯಾನೇಜರ್‌ ಮನೆಯಲ್ಲಿ ದರೋಡೆ!

ಬೆಂಗಳೂರು : ಸಾಲ ಮಂಜೂರಾತಿ ಮಾಡಿಸಲಿಲ್ಲ ಎಂಬ ಕಾರಣಕ್ಕೆ ಎಲ್‌ಐಸಿ ಹೌಸಿಂಗ್‌ ಕಂಪೆನಿಯ ಮ್ಯಾನೇಜರ್‌ವೊಬ್ಬರ ಪತ್ನಿಯ ಕೈ-ಕಾಲು ಕಟ್ಟಿ ಹಾಕಿ, ದರೋಡೆ ಮಾಡಿದ್ದ ತಮಿಳುನಾಡು ಮೂಲದ ಮೂವರು ಆರೋಪಿಗಳು ಇದೀಗ ಕೆ.ಆರ್‌.ಪುರಂ ಪೊಲೀಸರ ಅತಿಥಿಯಾಗಿದ್ದಾರೆ. ವಿ.ಬಿ.ಲೇಔಟ್‌ ನಿವಾಸಿ ಶಿವಕುಮಾರ್‌ (37), ಅತಿಥಿ ಬಡಾವಣೆ ನಿವಾಸಿಗಳಾದ ಸಿದ್ಧಾರ್ಥ (25) ಮತ್ತು ಡೇವಿಡ್‌ ಅಲಿಯಾಸ್‌ ಬುದ್ಧ ನೇಷನ್‌ (32) ಬಂಧಿತರು. ಆರೋಪಿಗಳಿಂದ ದ್ವಿಚಕ್ರ ವಾಹನ ಹಾಗೂ 6.50 ಲಕ್ಷ ಮೌಲ್ಯದ 170 ಗ್ರಾಂ …

Read More »

ಇನ್ನೂ ಕೆಲ ದಿನಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಲಿದ್ದೇನೆ: ಡಿ.ಕೆ .ಶಿ.

ಬೆಂಗಳೂರು: ಇನ್ನೂ ಕೆಲ ದಿನಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಲಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ಕಳೆದ ಅಗಸ್ಟ್ 25ರಂದು ಡಿಕೆ ಶಿವಕುಮಾರ್ ಅವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಹೀಗಾಗಿ ಅವರು ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ ವೈದ್ಯರ ಸಲಹೆ ಮೇರೆಗೆ ಇನ್ನೂ ಕೆಲ ದಿನಗಳು ನಾನು ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಲಿದ್ದೇನೆ ಎಂದು ಮಾಧ್ಯಮಗಳ ಮೂಲಕ ತಿಳಿಸಿದ್ದಾರೆ. ಮತ್ತೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೆಪಿಸಿಸಿ …

Read More »