ಬೆಂಗಳೂರು: ನನ್ನ ಅಕ್ಕ ಪತ್ರಕರ್ತೆ ಗೌರಿ ಲಂಕೇಶ್ ಸಾವಿನ ಕುರಿತು ಹೇಳಿಕೆ ನೀಡಿರುವುದು ತುಂಬಾ ನೋವು ತಂದಿದೆ ಎಂದು ಇಂದ್ರಜಿತ್ ಲಂಕೇಶ್ ಕಣ್ಣೀರು ಹಾಕಿದ್ದಾರೆ. ಈ ಕುರಿತು ಅವರ ನಿವಾಸದಲ್ಲಿ ಮಾತನಾಡಿರುವ ಇಂದ್ರಜಿತ್, ಅಕ್ಕ ಗೌರಿ ಲಂಕೇಶ್ ಅವರ ಬಗ್ಗೆ ಹೇಳಿಕೆ ನೀಡಿರುವುದು ತುಂಬಾ ದುಃಖ ತಂದಿದೆ. ಅವರ ತತ್ವ-ಸಿದ್ಧಾಂತ ಬೇರೆ ಇತ್ತು. ಅವರದ್ದು ಸೈದ್ಧಾಂತಿಕ ಕೊಲೆ ಎಂದು ಹೇಳಿ ಕಣ್ಣೀರು ಹಾಕಿದ್ದಾರೆ. ಈ ಹಿಂದೆ ಒಬ್ಬ ನಟನ ಕುರಿತು …
Read More »ಸ್ಯಾಂಡಲ್ವುಡ್ನಲ್ಲಿ ಡ್ರಗ್ಸ್: ಬೆಂಗಳೂರು ಬಿಟ್ಟು ಹೊರ ಹೋದ 10-15 ನಟ ನಟಿಯರು!
ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲದ ನಂಟು ಆರೋಪ ಜೋರಾಗಿರುವ ಬೆನ್ನಲ್ಲೇ 10-15 ನಟ ನಟಿಯರು ಬೆಂಗಳೂರು ಬಿಟ್ಟು ಹೊರ ಹೋಗಿದ್ದಾರೆ! ಅದರಲ್ಲೂ ರಾಗಿಣಿ ದ್ವಿವೇದಿಗೆ ನಿನ್ನೆ ಸಿಸಿಬಿ ನೋಟಿಸ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಈ ನಟ ನಟಿಯರು ಆತಂಕಕ್ಕೀಡಾಗಿದ್ದಾರೆ. ರಾಗಿಣಿಗೆ ಸಿಸಿಬಿ ನೋಟಿಸ್ ವಿಚಾರ ಹಲವು ನಟ ನಟಿಯರಿಗೆ ನಡುಕ ರಾಗಿಣಿ ಬಳಿಕ ತಮ್ಮ ಹೆಸರೂ ಹೊರಬರುವ ಆತಂಕ ಇವರನ್ನು ಕಾಡತೊಡಗಿದೆ. ತಮಗೂ ನೋಟಿಸ್ ಬರಬಹುದೆಂಬ ಆತಂಕದಲ್ಲಿರುವ 10ಕ್ಕೂ ಹೆಚ್ಚು ಕಲಾವಿದರು ಈಗಾಗಲೇ …
Read More »ಕಾನೂನು ಶಾಲೆಯಲ್ಲಿ ಸ್ಥಳೀಯ ಪ್ರಾತಿನಿಧ್ಯ: ಆದೇಶ ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು: ರಾಷ್ಟ್ರೀಯ ಕಾನೂನು ಶಾಲೆಯಲ್ಲಿ ಸ್ಥಳೀಯ ವಿದ್ಯಾರ್ಥಿಗಳಿಗೆ ಶೇ 25ರಷ್ಟು ಪ್ರಾತಿನಿಧ್ಯ ವಿಷಯದ ಕುರಿತು ಹೈಕೋರ್ಟ್ ತನ್ನ ಆದೇಶ ಕಾಯ್ದಿರಿಸಿದೆ. ಶೇ 25ರಷ್ಟು ಮೀಸಲಾತಿ ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೂರು ಅರ್ಜಿಗಳನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ. ‘ಈ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಇತರ ರಾಜ್ಯದ ವಿದ್ಯಾರ್ಥಿಗಳಲ್ಲಿ ಬಹುತೇಕರು ಕರ್ನಾಟಕದಲ್ಲಿ ವೃತ್ತಿ ಮುಂದುವರಿಸುವುದಿಲ್ಲ. ಕಾನೂನು ವಿಶ್ವವಿದ್ಯಾಲಯ ಕಾಯ್ದೆಯನ್ನು ರಾಜ್ಯದ ಶಾಸಕಾಂಗ ಅಂಗೀಕರಿಸಿದೆ. ಭೂಮಿ ಒದಗಿಸುವ ಜತೆಗೆ ಆರ್ಥಿಕವಾಗಿಯೂ ಸಂಸ್ಥೆಗೆ ಸಹಾಯ ಮಾಡಲಾಗುತ್ತಿದೆ’ ಎಂದು …
Read More »ಯುಜಿಸಿಇಟಿ ದಾಖಲೆ ಅಪ್ಲೋಡ್ ಪ್ರಕ್ರಿಯೆ ಮುಂದೂಡಿಕೆ
ಬೆಂಗಳೂರು: ಈಗ ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ನಡೆಯುತ್ತಿರುವ ಹಿನ್ನೆಲೆಯಲ್ಲಿ ಪದವಿಪೂರ್ವ ಸಾಮಾನ್ಯ ಪ್ರವೇಶ ಪರೀಕ್ಷೆ (ಯುಜಿಸಿಇಟಿ) ದಾಖಲೆಗಳನ್ನು ಅಪ್ಲೋಡ್ ಮಾಡುವ ಪ್ರಕ್ರಿಯೆಯನ್ನು ಮುಂದೂಡಲಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಅವರು, ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿ ಇಟ್ಟುಕೊಂಡು ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಹೇಳಿದ್ದಾರೆ. ಪರಿಷ್ಕೃತ ವೇಳಾಪಟ್ಟಿಯನ್ನು ಇದೇ 5ರಂದು ಪ್ರಕಟಿಸಲಾಗುವುದು ಎಂದು ಅವರು ಸೂಚಿಸಿದ್ದಾರೆ. http://kea.kar.nic.in ಇಲ್ಲಿ ಮಾಹಿತಿ ನೀಡುವ ಮೂಲಕ ವಿದ್ಯಾರ್ಥಿಗಳ ಗಮನಕ್ಕೆ …
Read More »ಸಿಎಂ ಅಧ್ಯಕ್ಷತೆಯಲ್ಲಿಂದು ಸಂಪುಟ ಸಭೆ: ಮಹತ್ವದ ಎರಡು ತೀರ್ಮಾನಗಳ ಸಾಧ್ಯತೆ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಗುರುವಾರ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಕರ್ನಾಟಕ ಕೃಷಿ ಬೆಲೆ ಆಯೋಗವನ್ನು 2020-23ರವರೆಗೆ ಮುಂದುವರಿಕೆ ಹಾಗೂ ಖಾಸಗಿ ವೈದ್ಯಕೀಯ ಸಂಸ್ಥೆಗಳ ತಿದ್ದುಪಡಿ ವಿಧೇಯಕ-2020ಕ್ಕೆ ಅನುಮೋದನೆ ಪಡೆಯುವುದು ಸೇರಿದಂತೆ ಹಲವು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಗುರುವಾರ ಬೆಳಿಗ್ಗೆ 11.30ಕ್ಕೆ ನಡೆಯಲಿರುವ ಈ ಸಭೆಯಲ್ಲಿ ಖಾಸಗಿ ವೈದ್ಯಕಿಯ ಸಂಸ್ಥೆಗಳ ತಿದ್ದುಪಡಿ ವಿಧೇಯಕ ಮಂಡನೆಗೆ ನಿರ್ಧರಿಸಲಾಗಿದೆ. ಕೊರೋನಾ ಸಂದರ್ಭದಲ್ಲಿ …
Read More »ಜಿಎಸ್ಟಿ ನಷ್ಟ ಭರ್ತಿಗೆ 11324 ಕೋಟಿ ರೂ ಸಾಲ.: ಕೇಂದ್ರದ ಒಂದನೇ ಆಯ್ಕೆ ಒಪ್ಪಿದ ರಾಜ್ಯ!
ಬೆಂಗ: ಸರಕು ಮತ್ತು ಸೇವೆಗಳ ತೆರಿಗೆ (ಜಿಎಸ್ಟಿ) ಪರಿಹಾರದ ಕುರಿತು ಕೇಂದ್ರ ಸರ್ಕಾರ ನೀಡಿದ ಎರಡು ಆಯ್ಕೆಗಳ ಪೈಕಿ ರಾಜ್ಯಕ್ಕೆ ಹೆಚ್ಚು ಅನುಕೂಲವಾಗುವ ಮೊದಲನೇ ಆಯ್ಕೆಯನ್ನು ಆಯ್ಕೆ ಮಾಡಿಕೊಳ್ಳಲು ನಿರ್ಧರಿಸಿದೆ. ಈ ಪ್ರಕಾರ, 18,289 ಕೋಟಿ ಪರಿಹಾರ ಪಡೆಯಲು ತೀರ್ಮಾನಿಸಿದೆ. 18,289 ಕೋಟಿ ರು,ಅಥವಾ 25,508 ಕೋಟಿ ರು. ಪರಿಹಾರದ 2 ಆಯ್ಕೆಗಳನ್ನು ಕೇಂದ್ರ ಸರ್ಕಾರ ನೀಡಿತ್ತು. ಈ ಕುರಿತ ಮೌಲ್ಯಮಾಪನ ಮಾಡಿದ ಬಳಿಕ ರಾಜ್ಯದ ಹಣಕಾಸುಗಳಿಗೆ ಅನುಕೂಲವಾಗುವ ಒಟ್ಟು …
Read More »GST: ಸಾಲದ ‘ಆಯ್ಕೆ’: ಹೆಚ್ಚು ಸಾಲ ಪಡೆಯಲು ಆಯ್ಕೆ-1 ಆರಿಸಿದ ರಾಜ್ಯ ಸರಕಾರ
ಬೆಂಗಳೂರು: ಜಿಎಸ್ಟಿ ಪರಿಹಾರಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರಕಾರ ನೀಡಿದ್ದ ಎರಡು ಆಯ್ಕೆಗಳ ಪೈಕಿ, ರಾಜ್ಯ ಸರಕಾರ ಮೊದಲನೆಯದನ್ನು ಆರಿಸಿಕೊಂಡಿದೆ. ಅಂದರೆ ಜಿಎಸ್ಟಿ ಜಾರಿಯಿಂದಾದ ಕೊರತೆಗಷ್ಟೇ ಪರಿಹಾರ ಪಡೆಯಲು ನಿರ್ಧರಿಸುವ ಮೂಲಕ ಸದ್ಯದ ಪರಿಸ್ಥಿತಿಯಲ್ಲಿ ಅತಿ ಹೆಚ್ಚು ಸಾಲ ಪಡೆಯಲು ನೆರವಾಗುವ ಆಯ್ಕೆ-1ರ ಮೊರೆ ಹೋಗಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಐದು ತಿಂಗಳ ಜಿಎಸ್ಟಿ ಪರಿಹಾರವಾಗಿ 18,289 ಕೋಟಿ ರೂ. ಪಡೆಯಲು ರಾಜ್ಯ ಸರಕಾರ ಅರ್ಹವಾಗಿದೆ. ಇದರಲ್ಲಿ 6,965 ಕೋಟಿ ರೂ. ಉಪಕರದಿಂದ …
Read More »ಗ್ರೇಡ್ 2 ಶಿಕ್ಷಕರ ಬಡ್ತಿ, ವಿವಿಧ ಬೇಡಿಕೆಗೆ ಸಚಿವ ಸುರೇಶ್ ಕುಮಾರ್ ಭರವಸೆ; ಧರಣಿ ಕೈಬಿಟ್ಟ ಪರಿಷತ್ ಸದಸ್ಯರು
ಬೆಂಗಳೂರು : ಮೈಸೂರು ವಿಭಾಗದಲ್ಲಿ ಪ್ರೌಢ ಶಾಲಾ ಗ್ರೇಡ್-2 ಸಹ ಶಿಕ್ಷಕರಿಂದ ಮುಖ್ಯೋಪಾಧ್ಯಾಯ ಹುದ್ದೆಗೆ ಬಡ್ತಿ ನೀಡುವುದು ಸೇರಿದಂತೆ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಿಕ್ಷಣ ಸಚಿವರ ಕಚೇರಿ ಎದುರು ನಡೆಸಲು ಉದ್ದೇಶಿಸಿದ್ದ ಧರಣಿಯನ್ನು ವಿಧಾನಪರಿಷತ್ ಸದಸ್ಯರು ವಾಪಸು ಪಡೆದಿದ್ದಾರೆ. ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಹಲವಾರು ಬೇಡಿಕೆಗಳ ಕುರಿತಂತೆ ಬುಧವಾರ ವಿಧಾನಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಎಸ್. ಎಲ್. ಭೋಜೆಗೌಡ ಮತ್ತು ರಮೇಶ್ ಗೌಡ ಜೊತೆ ಸಭೆ …
Read More »ಕೃಷಿ ಮಾರಾಟ ಮಂಡಳಿ 50 ಕೋಟಿ ವಂಚನೆ ಕೇಸ್: ಕಿಂಗ್ಪಿನ್ ಬಂಧನ
ಬೆಂಗಳೂರು : 2019ರಲ್ಲಿ ನಡೆದಿದ್ದ ರಾಜ್ಯ ಕೃಷಿ ಮಾರಾಟ ಮಂಡಳಿಯ (ಕೆಎಸ್ಎಎಂಬಿ) 50 ಕೋಟಿ ಹಣ ದುರುಪಯೋಗ ಪ್ರಕರಣದ ಕಿಂಗ್ಪಿನ್ ವಿಜಯ್ ಆಕಾಶ್, ಆತನ ಪುತ್ರ ಹಾಗೂ ಅಳಿಯ ಕೊನೆಗೂ ಸಿಸಿಬಿ ಬಲೆಗೆ ಬಿದ್ದಿದ್ದಾರೆ. ಚೆನ್ನೈ ಮೂಲದ ವಿಜಯ್ ಆಕಾಶ್, ಆತನ ಪುತ್ರ ಪ್ರೇಮರಾಜ್ ಹಾಗೂ ದಿನೇಶ್ ಬಾಬು ಬಂಧಿತರಾಗಿದ್ದು, ಕೃತ್ಯ ಬೆಳಕಿಗೆ ಬಂದ ನಂತರ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಚೆನ್ನೈನಲ್ಲಿ ಬಂಧಿಸಿ ನಗರಕ್ಕೆ ಸಿಸಿಬಿ ತಂಡ ಕರೆ ತಂದಿದೆ. ಈಗಾಗಲೇ …
Read More »ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ಬಸ್ ಪಾಸ್ ದರ ಏರಿಕೆ ಇಲ್ಲ : ಡಿಸಿಎಂ ಲಕ್ಷ್ಮಣ್ ಸವದಿ
ಬೆಂಗಳೂರು : ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ನೀಡಲಾಗುತ್ತಿರುವ ಬಸ್ ಪಾಸ್ಗಳ ದರವನ್ನು ಹೆಚ್ಚಿಸುವುದಿಲ್ಲ ಮತ್ತು ಈ ಹಿಂದೆ ಇದ್ದ ಮಾನದಂಡಗಳನ್ನು ಬದಲಿಸುವ ಯಾವುದೇ ಉದ್ದೇಶವಿಲ್ಲ, ಆದ್ದರಿಂದ ಈ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಅನಗತ್ಯ ಆತಂಕಕ್ಕೆ ಒಳಗಾಗಬಾರದು ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ. ಈ ಮೂಲಕ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ವಿದ್ಯಾರ್ಥಿಗಳ …
Read More »