ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ಆಗಾಗ ತಮ್ಮ ಮಕ್ಕಳ ಫೋಟೋಗಳನ್ನು ಸೋಶಿಯಲ್ ಮಿಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಐರಾ ಮತ್ತು ಜೂ.ಯಶ್ ಫೋಟೋಗಳನ್ನ ಶೇರ್ ಮಾಡಿದ ಕ್ಷಣಾರ್ಧದಲ್ಲಿ ವೈರಲ್ ಆಗುತ್ತೆ. ಇದೀಗ ನಟ ಯಶ್ ಪುತ್ರ ಗಣಪನ ಅವತಾರದಲ್ಲಿ ಮಿಂಚಿದ್ದಾನೆ. ಇತ್ತೀಚಿಗೆ ಕೃಷ್ಣ ಜನ್ಮಾಷ್ಟಮಿ ದಿನ ಐರಾ ಮತ್ತು ಜೂನಿಯರ್ ಯಶ್ಗೆ ರಾಧೆ ಹಾಗೂ ಕೃಷ್ಣನ ಉಡುಪು ಧರಿಸಿ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. …
Read More »ಇಬ್ಬರು ಶಾಸಕರಿಗೆ ಕೊರೋನಾ ಪಾಸಿಟಿವ್
ಬೆಂಗಳೂರು : ಹಿರಿಯೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಮತ್ತು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಕೊರೋನಾ ಪಾಸಿಟಿವ್ ಹಿರಿಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ತಮ್ಮ ಫೇಸ್ ಬುಕ್ ಪುಟದಲ್ಲಿ ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನ ಪಾಸಿಟಿವ್ ಬಂದಿದೆ. ಆದಷ್ಟೂ ಬೇಗ ಗುಣಮುಖನಾಗಿ ಸಂಕಷ್ಟ ಸಮಯದಲ್ಲಿ ಇನ್ನಷ್ಟು ಜನಸೇವೆ ಮಾಡಲು ಶಕ್ತಿ ಕೊಡುವಂತೆ …
Read More »10 ತರಗತಿ ಪೂರಕ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಬೆಂಗಳೂರು: ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅನುತ್ತೀರ್ಣಗೊಂಡ ಹಾಗೂ ಕೊರೊನಾ ಕಾರಣಕ್ಕೆ ಪರೀಕ್ಷೆ ಬರೆಯದಿರುವ ಅಭ್ಯರ್ಥಿಗಳಿಗಾಗಿ ಪೂರಕ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಕೊರೊನಾ ಕಾರಣಕ್ಕೆ ಪರೀಕ್ಷೆ ಬರೆಯದಿರುವ ಅಭ್ಯರ್ಥಿಗಳಿಗೆ ಇದು ಪ್ರಥಮ ಪ್ರಯತ್ನ ಎಂದು ಪರಿಗಣಿಸಲಾಗುತ್ತಿದ್ದು, ಅಂಥವರು ಹೊಸದಾಗಿ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಅನುತ್ತೀರ್ಣಗೊಂಡ ಅಭ್ಯರ್ಥಿಗಳು ಪರೀಕ್ಷೆಗೆ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಬೇಕಾಗುತ್ತದೆ. ಪರೀಕ್ಷೆಗಳು ಬೆಳಗ್ಗೆ 10.30 ರಿಂದ ಆರಂಭವಾಗಲಿದ್ದು, ವೇಳಾಪಟ್ಟಿ ಈ ಕೆಳಗಿನಂತಿದೆ. ಸೆಪ್ಟಂಬರ್ 21 …
Read More »ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಆಗಸ್ಟ್ 27ರವರೆಗೂ ಭಾರಿ ಮಳೆ.
ಬೆಂಗಳೂರು: ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಆಗಸ್ಟ್ 27ರವರೆಗೂ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಈ ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, …
Read More »ಮೈಸೂರಿನಲ್ಲಿ ನಡೆಯುತ್ತಿರುವ ವೈದ್ಯರ ಪ್ರತಿಭಟನೆ ವಿರುದ್ಧ ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಆಕ್ರೋಶ ಹೊರಹಾಕಿದ್ದಾರೆ
ಬೆಂಗಳೂರು: ಮೈಸೂರಿನಲ್ಲಿ ನಡೆಯುತ್ತಿರುವ ವೈದ್ಯರ ಪ್ರತಿಭಟನೆ ವಿರುದ್ಧ ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಆಕ್ರೋಶ ಹೊರಹಾಕಿ, ಪ್ರತಿಭಟನೆ ಮಾಡುವವರು ಇಷ್ಟವಿದ್ದರೆ ಕೆಲಸ ಮಾಡಲಿ, ಇಲ್ಲದಿದ್ದರೆ ಅವರ ದಾರಿ ನೋಡಿಕೊಳ್ಳಲಿ ಎಂದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾರ್ಯದ ಒತ್ತಡ ಸ್ವೀಕಾರ ಮಾಡಿ ಕೆಲಸ ಮಾಡುವವರು ಸರ್ಕಾರದಲ್ಲಿರಬೇಕು. ಇಲ್ಲದಿದ್ದರೆ ಖಾಸಗಿ ಆಸ್ಪತ್ರೆಯಲ್ಲಿ ಕೆಲಸಮಾಡಲಿ ಎಂದರು ಗರಂ ಆದರು ಪ್ರತಿಭಟನೆ ಕರೆ ಕೊಟ್ಟವರಿಗೆ ಗಣೇಶ ಹಬ್ಬದ ದಿನ ಆ ದೇವರು ಸದ್ಬುದ್ಧಿ ಕೊಡಲೆಂದು …
Read More »ಸಿಲಿಕಾನ್ ಸಿಟಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಇದೀಗ ಮತ್ತೊಬ್ಬ ಮುಸ್ಲಿಂ ಮುಖಂಡ ಮೃತಪಟ್ಟವರ ಬೆನ್ನಿಗೆ ನಿಂತಿದ್ದಾರೆ.
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಇದೀಗ ಮತ್ತೊಬ್ಬ ಮುಸ್ಲಿಂ ಮುಖಂಡ ಮೃತಪಟ್ಟವರ ಬೆನ್ನಿಗೆ ನಿಂತಿದ್ದಾರೆ. ಹೌದು. ಪಾದರಾಯನಪುರ ಪಾಲಿಕೆ ಸದಸ್ಯ ಇಮ್ರಾನ್ ಪಾಷಾ ಗೋಲಿಬಾರ್ ನಲ್ಲಿ ಸತ್ತವರಿಗೆ ಎರಡು ಲಕ್ಷ ಘೋಷಣೆ ಮಾಡಿದ್ದಾರೆ. ಈ ಕುರಿತು ಫೇಸ್ ಬುಕ್ನಲ್ಲಿ ಬರೆದುಕೊಂಡಿರುವ ಇಮ್ರಾನ್ ಪಾಷಾ, ಮೃತರಿಗೆ 2 ಲಕ್ಷ ಸಹಾಯ ಮಾಡುವುದಾಗಿ ಹೇಳಿದ್ದಾರೆ. ಈ ಹಿಂದೆ ಶಾಸಕ ಜಮೀರ್ ಗೋಲಿಬಾರ್ ನಲ್ಲಿ ಸತ್ತವರಿಗೆ 5 ಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ …
Read More »ಕೊರೊನಾ ಬುಲೆಟಿನ್ : ‘ಗಣೇಶ ಚತುರ್ಥಿ’ ದಿನದಂದೇ ರಾಜ್ಯದಲ್ಲಿ 7330 ಮಂದಿಗೆ ಸೋಂಕು ಧೃಡ, 93 ಬಲಿ
ಬೆಂಗಳೂರು : ಗೌರಿ ಗಣೇಶ ಹಬ್ಬದ ದಿನ ಕೂಡ ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮೆರೆದಿದೆ.ರಾಜ್ಯದಲ್ಲಿ ಇಂದು 7330 ಜನರಿಗೆ ಕೊರೊನಾ ಸೋಂಕು ತಗುಲಿದೆ. ಹೌದು, ರಾಜ್ಯದಲ್ಲಿ ಇಂದು 7330 ಜನರಿಗೆ ಕೋವಿಡ್ ಸೋಂಕು ತಗುಲಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2,71,876 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 93 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು. ಒಟ್ಟಾರೆ ಸಾವಿನ ಸಂಖ್ಯೆ 4615 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಕಳೆದ 24 …
Read More »ಕೊರೊನಾ ಹಾವಳಿಯಿಂದ ಕುಂದಿದ ಹಬ್ಬದ ಖರೀದಿ: ಸುಮಾರು 400 ಕೋಟಿ ರೂ. ವಹಿವಾಟು ಖೋತಾ?
ಬೆಂಗಳೂರು:ಕೊರೊನಾ ಮಹಾಮಾರಿ ದೇಶದ ಆರ್ಥಿಕ ಪರಿಸ್ಥಿತಿಯನ್ನು ಬುಡಮೇಲು ಮಾಡಿದೆ. ಈಗ ಅದರ ಹೊಡೆತ ಗಣೇಶೋತ್ಸವಕ್ಕೂ ತಗಲಿದ್ದು, ರಾಜ್ಯಾದ್ಯಂತ ಸುಮಾರು 400 ಕೋಟಿ ರೂಪಾಯಿಯಷ್ಟು ವಹಿವಾಟು ಖೋತಾ ಹೊಡೆದಿದೆ. ರಾಜ್ಯದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿರುವುದರಿಂದ ಸಾರ್ವಜನಿಕರು ಅಧಿಕ ಸಂಖ್ಯೆಯಲ್ಲಿ ಸೇರುವ ಆಚರಣೆಗಳಿಗೆ ಬ್ರೇಕ್ ಹಾಕಲಾಗಿದೆ.ಇದರ ಹಿನ್ನೆಲೆಯಲ್ಲಿ ಸಾರ್ವಜನಿಕವಾಗಿ ಬೃಹತ್ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲು ರಾಜ್ಯ ಸರ್ಕಾರ ಅವಕಾಶ ನೀಡಿಲ್ಲ. ಹೀಗಾಗಿ, ಬೃಹತ್ ಗಣೇಶ ಮೂರ್ತಿಗಳು ವ್ಯಾಪಾರವಾಗದೆ, ಮೂರ್ತಿ ತಯಾರಕರಿಗೆ ಭಾರಿ …
Read More »ಮಂಗಳವಾರ ಉತ್ತರ ಕರ್ನಾಟಕ ಭಾಗದಲ್ಲಿ ಸಿಎಂ ವೈಮಾನಿಕ ಸಮೀಕ್ಷೆ
ಬೆಂಗಳೂರು : ಭಾರೀ ಮಳೆಯಿಂದಾಗಿ ರಾಜ್ಯದ ಉತ್ತರ ಕರ್ನಾಟಕ, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರೀ ಹಾನಿ ಸಂಭವಿಸಿದ್ದು, ಈ ಕುರಿತು ಪರಿಸ್ಥಿತಿ ವೀಕ್ಷಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ವೈಮಾನಿಕ ಸಮೀಕ್ಷೆ ಕೈಗೊಂಡಿದ್ದಾರೆ. ಮಂಗಳವಾರ ಬೆಳಗ್ಗೆ 9 ಗಂಟೆಗೆ ಹೆಚ್ಎಎಲ್ನಿಂದ ಬೆಳಗಾವಿಗೆ ಸಿಎಂ ಪ್ರಯಾಣ ಬೆಳೆಸಲಿದ್ದು, ಬೆಳಗ್ಗೆ 10.30ಕ್ಕೆ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬೆಳಗಾವಿ, ಧಾರವಾಡ ಜಿಲ್ಲೆಗಳ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳ ಜೊತೆ ಮಳೆ ಹಾನಿ ಸಂಬಂಧ ಸಭೆ ನಡೆಸಲಿದ್ದಾರೆ. ಬಳಿಕ 11.15ಕ್ಕೆ …
Read More »ಏಳು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ
ಏಳು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಬೆಂಗಳೂರು: ಮುಂಗಾರು ಚುರುಕುಗೊಂಡಿರುವುದರಿಂದ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಆ.22ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇರುವುದರಿಂದ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಕೊಡಗಿನಲ್ಲಿ ಉತ್ತಮ ಮಳೆ ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿ, ನಾಪೋಕ್ಲು ಹಾಗೂ ಭಾಗಮಂಡಲದಲ್ಲಿ ಶುಕ್ರವಾರ ಮುಂಜಾನೆ …
Read More »