Breaking News

ಬೆಂಗಳೂರು

ಸರ್ಕಾರ ಬೆಂಗಳೂರು ಗಲಭೆಯ ಬೆಂಕಿಯಲ್ಲಿ ರಾಜಕೀಯ ರೊಟ್ಟಿ ಬಡಿಯುತ್ತಾ ಕೂತಿದೆ

ಬೆಂಗಳೂರು:  ಅತಿವೃಷ್ಟಿಯಿಂದಾಗಿ ಇಡೀ ರಾಜ್ಯದ ಜನತೆ ತತ್ತರಿಸಿ ಹೋಗಿದ್ದಾರೆ. ಆದ್ರೆ ಸರ್ಕಾರ ಬೆಂಗಳೂರು ಗಲಭೆಯ ಬೆಂಕಿಯಲ್ಲಿ ರಾಜಕೀಯ ರೊಟ್ಟಿ ಬಡಿಯುತ್ತಾ ಕೂತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾದ ವಿರುದ್ಧ ಕಿಡಿಕಾರಿದ್ದಾರೆ. ಕಳೆದ ವರ್ಷ ಅತಿವೃಷ್ಟಿ ಪರಿಹಾರದಲ್ಲಿ ಆದ ವೈಫಲ್ಯದಿಂದ ಈ ಬಾರಿ ಜನರ ಕಷ್ಟ ಕಾರ್ಪಣ್ಯಗಳನ್ನು ದುಪ್ಪಟ್ಟುಗೊಳಿಸಿದೆ. ಅತಿವೃಷ್ಟಿಯಿಂದ ಕಂಗೆಟ್ಟ ಜನರಿಗೆ ಪರಿಹಾರ ಕೊಡುವ ಕೆಲಸ ಮಾಡುವ ಬದಲು ಕಂದಾಯ ಸಚಿವರು ಬೆಂಗಳೂರಿನಲ್ಲಿ ಕುಳಿತು ಕಾವಲಭೈರಸಂದ್ರ ಗಲಭೆ ಬಗ್ಗೆ …

Read More »

8 ತಿಂಗಳಿನಿಂದ ಬಾರದ ಸಂಬಳ : ರಾಜ್ಯ ಸರ್ಕಾರಕ್ಕೆ ರಾತ್ರಿ ಹೊತ್ತು ಕಾವಲುಗಾರನಾಗಿ ಕೆಲಸ ಮಾಡಲು ಪತ್ರ ಬರೆದ ‘ಸರ್ಕಾರಿ ನೌಕರ’

ಬೆಂಗಳೂರು : ಮನೆಯಲ್ಲಿ ಗರ್ಭಿಣಿ ಪತ್ನಿಯಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಪೋಷಕರು ಇದ್ದಾರೆ. ಅವರನ್ನು ಉಳಿಸಿಕೊಳ್ಳಲು ಕಚೇರಿ ಕರ್ತವ್ಯಕ್ಕೆ ಧಕ್ಕೆಯಾಗದಂತೆ ರಾತ್ರಿ ಪಾಳಿಯಲ್ಲಿ ಅಲ್ಪಾವಧಿ ಕೆಲಸ ಮಾಡಲು ಅನುಮತಿ ನೀಡುವಂತೆ ನೊಂದಣಿ ಮತ್ತು ಮುದ್ರಣಾಂಕ ಶಾಖೆಯ ಆಡಿಟ್ ಶಾಖೆಯಲ್ಲಿ ಕೆಲಸ ಮಾಡುತ್ತಿರುವ ಪ್ರಥಮ ದರ್ಜೆ ಸಹಾಯಕರೊಬ್ಬರು ರಾಜ್ಯ ಸರ್ಕಾರಕ್ಕೆ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಈ ಮೂಲಕ ಪತ್ರದಿಂದಾಗಿ ರಾಜ್ಯ ಸರ್ಕಾರಿ ನೌಕರರ ಪರಿಸ್ಥಿತಿ ಮನ ಮಿಡಿಯುವಂತಾಗಿದೆ. ರಾಜ್ಯ …

Read More »

ರಾಜ್ಯದಲ್ಲಿ ಒಂದೇದಿನ ಕೊರೋನಾಕ್ಕೆ 139 ಬಲಿ: 7665 ಕೇಸ್!

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 7,665 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ದಾಖಲೆಯ 139 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸಾವಿನ ಸಂಖ್ಯೆ 4,201ಕ್ಕೆ ಏರಿಕೆಯಾಗಿದೆ. ಮಂಗಳವಾರ ರಾಜ್ಯದಲ್ಲಿ ಒಂದು ದಿನದ ಗರಿಷ್ಠ ಸಾವು ವರದಿಯಾಗಿದ್ದು, ಕಳೆದ ಭಾನುವಾರ ಒಂದೇ ದಿನ 124 ಮಂದಿ ಸಾವನ್ನಪ್ಪಿದ್ದು ಈವರೆಗಿನ ದಾಖಲೆಯಾಗಿತ್ತು. ಮಂಗಳವಾರ 7,665 ಸೋಂಕು ದೃಢಪಡುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2.41 ಲಕ್ಷಕ್ಕೆ ಏರಿಕೆಯಾಗಿದೆ. ಇನ್ನು ಮಂಗಳವಾರ …

Read More »

ಕ್ಲೇಮ್‌ ಕಮಿಷನರ್‌: ಸರ್ಕಾರದ ಪರ ಎಸಿಎಸ್‌ ಅರ್ಜಿ

ಬೆಂಗಳೂರು: ಗಲಭೆ ವೇಳೆ ಸಾರ್ವಜನಿಕ ಹಾಗೂ ಖಾಸಗಿ ಆಸ್ತಿಗಳಿಗೆ ಉಂಟಾಗಿರುವ ಹಾನಿಯನ್ನು ಗಲಭೆಕೋರರಿಂದ ವಸೂಲಿ ಮಾಡಲು ‘ಕ್ಲೇಮ್‌ ಕಮಿಷನರ್’ ನೇಮಿಸುವಂತೆ ರಾಜ್ಯ ಸರ್ಕಾರದ ಪರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವ ಜವಾಬ್ದಾರಿಯನ್ನು ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ (ಎಸಿಎಸ್‌) ನೀಡಲಾಗಿದೆ. ಈ ಸಂಬಂಧ ಮಂಗಳವಾರ ಸರ್ಕಾರ ಆದೇಶ ಹೊರಡಿಸಿದೆ. ಹೈಕೋರ್ಟ್ ನೇಮಿಸುವ ‘ಕ್ಲೇಮ್‌ ಕಮಿಷನರ್‌’ ಗಲಭೆ ವೇಳೆ ನಷ್ಟವಾದ ಆಸ್ತಿಯ ಮೌಲ್ಯ ಲೆಕ್ಕ ಹಾಕಿ, ಸಂತ್ರಸ್ತರಿಗೆ ಪರಿಹಾರ ಒದಗಿಸುವ ಬಗ್ಗೆ ನಿರ್ಧರಿಸಲಿದ್ದಾರೆ. …

Read More »

ಶಾಸಕ ಜಮೀರ ಅಹ್ಮದ ಅವರಿಗೆ ಕೊರೋನಾ ಸೋಂಕು ತಗುಲಿರುವುದು ಧೃಢ

ಬೆಂಗಳೂರು: ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಜಮೀರ ಅಹ್ಮದ ಖಾನ್ ಅವರಿಗೆ ಕೊರೋನಾ ಸೋಂಕು ತಗುಲಿರುವುದು ಧೃಢಪಟ್ಟಿದೆ. ಈ ಕುರಿತು ಟ್ವಿಟ್ಟರ್ ಮೂಲಕ ಸ್ವತಃ ಮಾಹಿತಿ ನೀಡಿರುವ ಶಾಸಕರು “ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಕೊರೊನಾ ಸೋಂಕು ಪರೀಕ್ಷೆಗೆ ಒಳಗಾಗಿದ್ದೆ, ವರದಿಯಲ್ಲಿ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕವಿದ್ದವರು ಸೋಂಕು ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡಿದ್ದು …

Read More »

ಸಿಇಟಿ ಪರೀಕ್ಷೆಯ ಫಲಿತಾಂಶ ಆ. 20ರಂದು ಪ್ರಕಟಆನ್​ಲೈನ್​ನಲ್ಲಿಯೇ ಕೌನ್ಸೆಲಿಂಗ್

ಬೆಂಗಳೂರು: ಕರ್ನಾಟಕದ ಸಿಇಟಿ ಪರೀಕ್ಷೆಯ ಫಲಿತಾಂಶ ಆ. 20ರಂದು ಪ್ರಕಟವಾಗಲಿದೆ. ಈ ಬಗ್ಗೆ ಡಿಸಿಎಂ ಡಾ. ಸಿ.ಎನ್. ಅಶ್ವಥ್ ನಾರಾಯಣ ಮಾಹಿತಿ ನೀಡಿದ್ದು, ಕಳೆದ ವರ್ಷ ಎಷ್ಟು ಶುಲ್ಕವನ್ನು ವಿಧಿಸಲಾಗುತ್ತಿತ್ತೋ ಈ ಬಾರಿಯೂ ಅಷ್ಟೇ ಶುಲ್ಕವಿರಲಿದೆ. ಹಾಗೇ, ಕಳೆದ ವರ್ಷದ ಅನುಪಾತದಲ್ಲೇ ಈ ವರ್ಷವೂ ಸೀಟು ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಜುಲೈ 30ರಿಂದ ಆಗಸ್ಟ್​ 1ರವರೆಗೆ ಸಿಇಟಿ ಪರೀಕ್ಷೆ ನಡೆಸಲಾಗಿತ್ತು. ಕರ್ನಾಟಕದ ಇತಿಹಾಸದಲ್ಲಿ ಮೊದಲ ಬಾರಿಗೆ ಪರೀಕ್ಷೆ ನಡೆದ …

Read More »

ರಾಜಕುಮಾರ’ ಸಿನಿಮಾ ಖ್ಯಾತಿಯ ನಿರ್ದೇಶಕ ಸಂತೋಷ್ ಆನಂದ್ ರಾಮ್ ತಂದೆಯಾದ ಸಂತಸದಲ್ಲಿದ್ದು, ಅವರ ಪತ್ನಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಬೆಂಗಳೂರು: ‘ರಾಜಕುಮಾರ’ ಸಿನಿಮಾ ಖ್ಯಾತಿಯ ನಿರ್ದೇಶಕ ಸಂತೋಷ್ ಆನಂದ್ ರಾಮ್ ತಂದೆಯಾದ ಸಂತಸದಲ್ಲಿದ್ದು, ಅವರ ಪತ್ನಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.ಸಂತೋಷ್ ಆನಂದ್ ರಾಮ್ ಪತ್ನಿ ಸುರಭಿ ಹತ್ವಾರ್ ಸೋಮವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ನಿರ್ದೇಶಕರ ಮನೆಗೆ ಹೊಸ ಅತಿಥಿಯ ಆಗಮನವಾಗಿದ್ದು, ಕುಟುಂಬದವರು ಸಂಭ್ರಮ ಪಡುತ್ತಿದ್ದಾರೆ. ಈ ಬಗ್ಗೆ ಸಂತೋಷ್ ಸೋಶಿಯಲ್ ಮೀಡಿಯಾದಲ್ಲಿ ತಾವು ತಂದೆಯಾಗಿರುವ ವಿಚಾರವನ್ನು ಹಂಚಿಕೊಂಡಿದ್ದಾರೆ. “ನಾನು ಗಂಡು ಮಗುವಿನ ತಂದೆಯಾಗಿದ್ದಾನೆ. ನಿಮ್ಮೆಲ್ಲರ …

Read More »

ಬೆಂಗಳೂರಿನಲ್ಲಿ ದೊಡ್ಡ ಕಚೇರಿ ತೆರೆಯಲಿದೆ ಆಪಲ್‌

ಬೆಂಗಳೂರು: ಕೋವಿಡ್‌ 19 ನಂತರ ವಿಶ್ವದ ಯಾವ ದೇಶದಲ್ಲಿ ವಿದೇಶಿ ಹೂಡಿಕೆ ಜಾಸ್ತಿಯಾಗಲಿದೆ ಎಂಬ ಪ್ರಶ್ನೆಗೆ ಹಲವು ತಜ್ಞರು ನೀಡುವ ಉತ್ತರ ಭಾರತ. ಈ ಉತ್ತರಕ್ಕೆ ಪೂರಕ ಎಂಬಂತೆ ಈಗಾಗಲೇ ಗೂಗಲ್‌, ಫೇಸ್‌ಬುಕ್‌ ಕಂಪನಿಗಳು ದೇಶದಲ್ಲಿ ಹೂಡಿಕೆ ಮಾಡಿವೆ. ಈಗ ಐಫೋನ್‌ ತಯಾರಿಸುತ್ತಿರುವ ಆಪಲ್‌ ಕಂಪನಿ ಸಹ ಹೂಡಿಕೆ ಮಾಡಲು ಮುಂದಾಗಿದೆ. ಅದರಲ್ಲೂ ವಿಶೇಷ ಏನೆಂದರೆ ಬೆಂಗಳೂರಿನಲ್ಲಿ ದೊಡ್ಡ ಕಚೇರಿ ತೆರೆಯಲು ಆಪಲ್‌ ಮುಂದಾಗಿದೆ.ಹೌದು. ಆಪಲ್‌ ಕಂಪನಿ 3.5 ಲಕ್ಷ …

Read More »

ಡಿಜೆ ಹಳ್ಳಿ ಗಲಭೆಯಲ್ಲಿ ಕೆಲ ಕಾಂಗ್ರೆಸ್ ನಾಯಕರ ಕೈವಾಡವೂ ಇದೆ: ರೋಷನ್ ಬೇಗ್

ಬೆಂಗಳೂರು: ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಗಲಭೆಯಲ್ಲಿ ಕೆಲ ಕಾಂಗ್ರೆಸ್ ನಾಯಕರ ಕೈವಾಡವೂ ಇದೆ ಎಂದು ಮಾಜಿ ಸಚಿವ ರೋಶನ್ ಬೇಗ್ ಆರೋಪಿಸಿದ್ದಾರೆ.ಡಿಜೆ ಹಳ್ಳಿ ಗಲಭೆ ಕುರಿತು ಪ್ರತಿಕ್ರಿಯಿಸಿರುವ ಅವರು, ಗೋರಿ ಪಾಳ್ಯದ ಮೌಲಾನ ಇಲ್ಲಿಗೆ ಯಾಕೆ ಬರಬೇಕಿತ್ತು, ಕಲಾಸಿಪಾಳ್ಯದಿಂದ, ಟಿಪ್ಪು ನಗರದಿಂದ ಇಲ್ಲಿಗೆ ಯಾಕೆ ಬರಬೇಕಿತ್ತು? ಹೊರಗಿನವರು ಯಾರ್ಯಾರೋ ಬಂದಿದ್ದರು. ದಿಡೀರ್ ಗಲಾಟೆ ಮಾಡಿದರು ಎಂದು ಸ್ಥಳಿಯರೇ ಹೇಳುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಪೊಲೀಸರು ಬಂಧಿಸಿದವರಲ್ಲಿ ಕೆಲವರು ಅಮಾಯಕರೂ …

Read More »

ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ

ಬೆಂಗಳೂರು: ಕೊರೊನಾ ವೈರಸ್‌ ಹಿನ್ನೆಲೆ ಈ ಬಾರಿ ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ನಿರ್ಬಂಧ ವಿಧಿಸಿದ್ದ ಸರಕಾರ ವ್ಯಾಪಕ ವಿರೋಧದ ನಂತರ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ. ಈಗ ಗಣೇಶೋತ್ಸವಕ್ಕೆ ಸಂಬಂಧಪಟ್ಟಂತೆ ಪರಿಷ್ಕೃತ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿದ್ದು, ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿಯನ್ನು ನೀಡಿದೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಕೊರೊನಾ ಪರಿಸ್ಥಿತಿ ಹಿನ್ನೆಲೆ ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ, ಸಾಂಪ್ರದಾಯಿಕ ಗಣೇಶೋತ್ಸವ ಆಚರಣೆಗೆ ಧಕ್ಕೆ ಬಾರದಂತೆ ಸರಕಾರ ಮಾರ್ಗಸೂಚಿಗಳನ್ನು …

Read More »