Breaking News

ಬೆಂಗಳೂರು

ಕರೊನಾ ಕೇಸ್​: ಸಕ್ರಾ ಸೇರಿ ಐದು ಆಸ್ಪತ್ರೆಗಳ ವಿರದ್ಧ ಎಫ್​ಐಆರ್

ಬೆಂಗಳೂರು: ಸರ್ಕಾಋದ ಆದೇಶದಂತೆ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಶೇಕಡ 50 ಹಾಸಿಗೆ ಒದಗಿಸದ ಐದು ಖಾಸಗಿ ಆಸ್ಪತ್ರೆಗಳ ವಿರುದ್ಧ ಎಫ್​ಐಆರ್ ದಾಖಲಾಗಿದೆ. ನೃಪತುಂಗಾ ರಸ್ತೆಯಲ್ಲಿರುವ ಸೇಂಟ್ ಮಾರ್ಥಾಸ್ ಆಸ್ಪತ್ರೆ, ಶಂಕರಪುರದ ರಂಗದೊರೆ ಮೆಮೋರಿಯಲ್ ಆಸ್ಪತ್ರೆ, ಕ್ವೀನ್ಸ್ ರಸ್ತೆಯ ಶಿಫಾ ಆಸ್ಪತ್ರೆ, ಕನ್ನಿಂಗ್​ಹ್ಯಾಂ ರಸ್ತೆಯ ಫೋರ್ಟಿಸ್ ಆಸ್ಪತ್ರೆ ಹಾಗೂ ದೇವರಬೀಸನಹಳ್ಳಿಯ ಸಕ್ರಾ ಆಸ್ಪತ್ರೆ ವಿರುದ್ಧ ದೂರು ದಾಖಲಾಗಿರುವಂಥದ್ದು.   ಕರೊನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಮೀಸಲಿರಿಸಿದ ಬೆಡ್​ಗಳ ಕುರಿತು ಐಎಎಸ್ ಅಧಿಕಾರಿಗಳಿಗೆ …

Read More »

ಕೊರೋನಾ ವಿರುದ್ಧ ಹೋರಾಡಲು ರಾಜ್ಯ ಸರ್ಕಾರ ಸಿದ್ಧತೆ ಸಾಲದು: ಹೆಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಲೇ ಇದ್ದು, ಇಷ್ಟು ದಿನ ಸರ್ಕಾರಕ್ಕೆ ಬೆಂಬಲ ನೀಡುತ್ತಿದ್ದೇವೆಂದು ಹೇಳುತ್ತಿದ್ದ ರಾಜಕೀಯ ಪಕ್ಷಗಳು ಇದೀಗ ಸರ್ಕಾರದ ವಿರುದ್ಧ ತಿರುಗಿಬಿದ್ದಿವೆ. ಈ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಕಿಡಿಕಾರಿದ್ದರು. ಇದೀಗ ಇವರೊಂದಿಗೆ ಹೆಚ್.ಡಿ.ದೇವೇಗೌಡ ಅವರೂ ಕೂಡ ದನಿಗೂಡಿಸಿದ್ದಾರೆ. ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ಸುಧಾರಿಸುತ್ತಿದ್ದಂತೆಯೇ ಪರಿಸ್ಥಿತಿ ಕುರಿತು ಅವಲೋಕನ …

Read More »

ಟಿಪ್ಪು ಸುಲ್ತಾನ್ ಕುರಿತ ಅಧ್ಯಾಯವನ್ನು ಪಠ್ಯಪುಸ್ತಕಗಳಿಂದ ಕೈಬಿಡುವ ನಿರ್ಧಾರ ಬದಲಿಸಿದ ಸರ್ಕಾರ

ಬೆಂಗಳೂರು: ಶೇಕಡಾ 30ರಷ್ಟು ಪಠ್ಯವನ್ನು ಕಡಿತಗೊಳಿಸುವ ನಿರ್ಧಾರವನ್ನು ಸರ್ಕಾರ ಬದಲಿಸಿದ್ದು ಟಿಪ್ಪು ಸುಲ್ತಾನ್ (Tippu Sultan) ಮತ್ತು ಸಂವಿಧಾನದ ಬಗ್ಗೆ ಪಠ್ಯ ಕಡಿತ ಮಾಡಿದ ವಿವಾದ ಹಿನ್ನೆಲೆಯಲ್ಲಿ ಪರಿಷ್ಕೃತ ಪಠ್ಯ ಹಿಂಪಡೆಯಲು ಸರ್ಕಾರ ಸೂಚನೆ ನೀಡಿದೆ ಎಂದು ಹೇಳಲಾಗಿದೆ.  ಮೈಸೂರು  ಹುಲಿ ಖ್ಯಾತಿಯ ಟಿಪ್ಪು ಸುಲ್ತಾನ್, ಹೈದರ್ ಅಲಿಗೆ ಸಂಬಂಧಿಸಿದ ಹಲವಾರು ಅಧ್ಯಾಯಗಳನ್ನು 7 ನೇ ತರಗತಿಯ ಪಠ್ಯಪುಸ್ತಕದಿಂದ ಕೈಬಿಟ್ಟಿದ್ದಕ್ಕಾಗಿ ತೀವ್ರ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಸದ್ಯಕ್ಕೆ ಪಠ್ಯ ಕಡಿತ …

Read More »

ನವೆಂಬರ್ ವರೆಗೂ ಅಕ್ಕಿ ವಿತರಣೆಗೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಪತ್ರ

ಬೆಂಗಳೂರು,ಜು.31-ಬಿಪಿಎಲ್ ಕಾರ್ಡ್ ಇಲ್ಲದವರು ಹಾಗೂ ಎಪಿಎಲ್ ಕಾರ್ಡ್ ಹೊಂದಿರುವವರಿಗೆ, ಮುಖ್ಯವಾಗಿ ವಲಸಿಗರಿಗೆ ನವೆಂಬರ್‍ವರೆಗೆ ಅಕ್ಕಿ ಮತ್ತು ಧಾನ್ಯಗಳನ್ನು ವಿತರಿಸಬೇಕೆಂದು ರಾಜ್ಯ ಬಿಜೆಪಿ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ರಾಜ್ಯ ಸರ್ಕಾರವು ತನ್ನ ಗೋದಾಮಿನಲ್ಲಿ 28 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ಹೊಂದಿದ್ದು, ಇದು ಎರಡು ತಿಂಗಳವರೆಗೆ ಮಾತ್ರ ಸಾಕಾಗಲಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ಈ ಸಂಬಂಧ ಕೇಂದ್ರದ ಸಂಬಂಧಪಟ್ಟ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಈ …

Read More »

ಸಿ.ಪಿ ಯೋಗೇಶ್ವರ್‌ಗೆ ಸಿಎಂ ಬಿಎಸ್‍ವೈ ಖಡಕ್ ವಾರ್ನಿಂಗ್…………

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ವಿರುದ್ಧ ಅಡ್ಜೆಸ್ಟ್ ಮೆಂಟ್ ಪಾಲಿಟಿಕ್ಸ್ ಆರೋಪ ಮಾಡಿರುವ ಸಿಪಿ ಯೋಗೇಶ್ವರ್‌ಗೆ ಸಿಎಂ ಯಡಿಯೂರಪ್ಪ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಪಕ್ಷ, ಸರ್ಕಾರಕ್ಕೆ ಮುಜುಗರ ಆಗುವಂಥ ಹೇಳಿಕೆ ಕೊಡಬೇಡಿ. ಕೊರೊನಾ ಸಮಯದಲ್ಲಿ ಅನಗತ್ಯ ಹೇಳಿಕೆ ಕೊಡಬೇಡಿ. ನಿಮ್ಮ ಕಿತ್ತಾಟ ಕ್ಷೇತ್ರದ ಮಟ್ಟಿಗೆ ಇಟ್ಕೊಳ್ಳಿ. ಸುಮ್ನೆ ನಿಮ್ ಜಂಜಾಟದಲ್ಲಿ ನಮ್ಮನ್ನ್ಯಾಕೆ ಎಳೀತೀರಾ ಅಂದಿದ್ದಾರೆ ಅಂತ ತಿಳಿದುಬಂದಿದೆ. ಸಚಿವ ಸಂಪುಟ ವಿಸ್ತರಣೆ ಚರ್ಚೆ ಬೆನ್ನಲ್ಲೇ …

Read More »

ಶಿಕ್ಷಕರ ವರ್ಗಾವಣೆಗೆ ಮುಹೂರ್ತ ಫಿಕ್ಸ್ :ಸಚಿವ ಸುರೇಶ್ ಕುಮಾರ್

ಬೆಂಗಳೂರು :  ಶಿಕ್ಷಕರ ವರ್ಗಾವಣೆ ಸಂಬಂಧ ಇತ್ತೀಚೆಗೆ ರಾಜ್ಯ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಕೂಡ ಹೊರಡಿಸಿತ್ತು. ಈಗ ಅಧಿಕಾರಿಗಳ ಸಭೆಯಲ್ಲಿ ಆಗಸ್ಟ್ ನಲ್ಲಿ ಶಿಕ್ಷಕರ ವರ್ಗಾವಣಾ ವೇಳಾಪಟ್ಟಿ ಸಿದ್ಧಗೊಳಿಸಿ, ಪ್ರಕಟಿಸುವಂತೆ ಅಧಿಕಾರಿಗಳಿಗೆ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೂಚಿಸಿದ್ದಾರೆ. ಶಿಕ್ಷಕರ ವರ್ಗಾವಣೆಯ ಸಂಬಂಧ ನಿಯಮಗಳನ್ನು ಶಿಕ್ಷಣ ಇಲಾಖೆ ಅಂತಿಮಗೊಳಿಸಿ. ಈ ಕಾಯ್ದೆಗೆ ಈಗಾಗಲೇ ಅಧಿವೇಶನದಲ್ಲೂ ಅನುಮೋದನೆ ದೊರೆತಿದೆ. ಹೀಗಾಗಿ ಕೂಡಲೇ ಶಿಕ್ಷಕರ ವರ್ಗಾವಣಾ ವೇಳಾಪಟ್ಟಿಯನ್ನು ಪ್ರಕಟಿಸಬೇಕು ಎಂಬುದಾಗಿ ಇಂದು …

Read More »

ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನಿರಾಕರಿಸಿದೆ.ಮನೆಗಳಲ್ಲಿ ಮಾತ್ರ ಗಣೇಶ ಪ್ರತಿಷ್ಠಾಪನೆ ಮಾಡಿ ಹಬ್ಬ ಆಚರಿಸಬಹುದು.

ಬೆಂಗಳೂರು : ನಗರದಲ್ಲಿ ಕೊರೊನಾ ಸೋಂಕಿತರು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನಿರಾಕರಿಸಿದೆ. ಒಂದು ವೇಳೆ ಆದೇಶ ಉಲ್ಲಂಘಿಸಿ ಸಾರ್ವಜನಿಕ ಪ್ರದೇಶದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡುವವರ ವಿರುದ್ಧವೂ ಡಿಸಾಸ್ಟರ್ ಮ್ಯಾನೇಜ್‍ಮೆಂಟ್ ಆ್ಯಕ್ಟ್ ಅಡಿ ಪ್ರಕರಣ ದಾಖಲಿಸಲಾಗುವುದು ಎಂದು ಮಂಜುನಾಥ್ ಪ್ರಸಾದ್ ಎಚ್ಚರಿಸಿದ್ದಾರೆ. ಸಾರ್ವಜನಿಕರು ಮನೆಗಳಲ್ಲಿ ಮಾತ್ರ ಗಣೇಶ ಪ್ರತಿಷ್ಠಾಪನೆ ಮಾಡಿ ಹಬ್ಬ ಆಚರಿಸಬಹುದು. ಪರಿಸರ ಸ್ನೇಹಿ ಗಣಪನಿಗೆ ಮಾತ್ರ ಅವಕಾಶ. ಬಿಬಿಎಂಪಿ ಕೆರೆಗಳು, ಕಲ್ಯಾಣಿಗಳಲ್ಲಿ ಗಣೇಶ …

Read More »

ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ವರ್ಗಾವಣೆ

ಬೆಂಗಳೂರು: ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರ ಒಂದು ವರ್ಷದ ಅವಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಸರ್ಕಾರ ಕಮಲ್ ಪಂಥ್ ಅವರನ್ನು ನೂತನ ಆಯುಕ್ತರನ್ನಾಗಿ ನೇಮಿಸಿ ಆದೇಶ ನೀಡಿದೆ. ಭಾಸ್ಕರ್ ರಾವ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಆಗಿ ವಗಾವಣೆ ಮಾಡಲಾಗಿದೆ. ಉಳಿದಂತೆ ಕಮಲ್ ಪಂಥ್ ಜಾಗಕ್ಕೆ ದಯಾನಂದ ಅವರನ್ನು ಗುಪ್ತಚರ ಇಲಾಖೆಯ ಎಡಿಜಿಪಿ ಆಗಿ ನೇಮಕ ಮಾಡಲಾಗಿದೆ. ಆ.1ಕ್ಕೆ ಭಾಸ್ಕರ್ ರಾವ್ ಅವರು ಆಯುಕ್ತರಾಗಿ ಒಂದು ವರ್ಷ …

Read More »

ಚಿಕಿತ್ಸೆ ಸಿಗದೆ ಆರು ದಿನದ ಬಾಣಂತಿ ಕೊರೊನಾಗೆ ಬಲಿ

ಬೆಂಗಳೂರು: ಆಸ್ಪತ್ರೆಯಲ್ಲಿ ಬೆಡ್ ಸಿಗದೆ 6 ದಿನದ ಬಾಣಂತಿ ಕೊರೊನಾಗೆ ಬಲಿಯಾಗಿರುವ ಅಮಾನವೀಯ ಘಟನೆ ರಾಜಾಜಿನಗರದಲ್ಲಿ ನಡೆದಿದೆ. ರಾಜಾಜಿನಗರ ಖಾಸಗಿ ಆಸ್ಪತ್ರೆಯಲ್ಲಿ 6 ದಿನಗಳ ಹಿಂದೆ ಗರ್ಭಿಣಿ ಮಗುವಿಗೆ ಜನ್ಮ ನೀಡಿದ್ದರು. ನಿನ್ನೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದರು. ಆದರೆ ಮನೆಗೆ ತೆರಳಿದ ಸಂದರ್ಭದಲ್ಲಿ ಮಹಿಳೆಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಕೂಡಲೇ ಬಾಣಂತಿಯನ್ನು ಕುಟುಂಬಸ್ಥರು ಖಾಸಗಿ ಆಸ್ಪತ್ರೆಗೆ ಕರೆತಂದಿದ್ದರು. ಈ ಸಂದರ್ಭದಲ್ಲಿ ಅವರಿಗೆ ಆ್ಯಂಟಿಜೆನ್‌ ಟೆಸ್ಟ್ ಮಾಡಿದ ವೇಳೆ …

Read More »

ಆಗಸ್ಟ್ 5ರಿಂದ ಯೋಗ, ಜಿಮ್ ಓಪನ್ ಸೇರಿದಂತೆ ಆಗಸ್ಟ್ 31ರವರೆಗೆ ಶಾಲೆ ಕಾಲೇಜ್ ನಿರ್ಬಂಧ

ಬೆಂಗಳೂರು: ಕೇಂದ್ರ ಸರ್ಕಾರ ಅನ್‍ಲಾಕ್ 3ಗೆ ಮಾರ್ಗಸೂಚಿ ಪ್ರಕಟಿಸಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಯಥಾವತ್ತಾಗಿ ಜಾರಿಗೆ ತರಲು ನಿರ್ಧರಿಸಿದೆ. ಇದರ ಜೊತೆಗೆ ಸಂಡೇ ಲಾಕ್‍ಡೌನ್, ಶನಿವಾರ ರಜೆ ದಿನವನ್ನೂ ರದ್ದುಗೊಳಿಸಿದೆ.ಕೇಂದ್ರದ ಮಾರ್ಗಸೂಚಿಯಂತೆ ಆಗಸ್ಟ್ 1ರಿಂದ ನೈಟ್ ಕರ್ಫ್ಯೂ ರದ್ದು, ಆಗಸ್ಟ್ 5ರಿಂದ ಯೋಗ, ಜಿಮ್ ಓಪನ್ ಸೇರಿದಂತೆ ಆಗಸ್ಟ್ 31ರವರೆಗೆ ಶಾಲೆ ಕಾಲೇಜ್ ನಿರ್ಬಂಧ ಮುಂದುವರಿಕೆಯನ್ನು ಪಾಲಿಸಿದೆ. ಜೊತೆಗೆ ಥಿಯೇಟರ್, ಬಾರ್, ರೆಸ್ಟೋರೆಂಟ್, ಮೆಟ್ರೋಗೆ ಅವಕಾಶ ಇಲ್ಲ ರಾಜಕೀಯ, ಧಾರ್ಮಿಕ …

Read More »