Breaking News

ಬೆಂಗಳೂರು

ಹಾಫ್ ಹೆಲ್ಮೆಟ್ ಧರಿಸುವ ಪೊಲೀಸರಿಗೆ ದಂಡ: ಮುಂದಿನ ದಿನಗಳಲ್ಲಿ ವಾಹನ ಸವಾರರಿಗೂ ಬಿಸಿ

ಬೆಂಗಳೂರು: ಹಾಫ್ ಹೆಲ್ಮೆಟ್ ಧರಿಸದಂತೆ ನಗರದ ಗಲ್ಲಿ-ಗಲ್ಲಿಗಳಲ್ಲಿಯೂ ಸಂಚಾರಿ ಪೊಲೀಸರು ನಿರಂತರವಾಗಿ ಜಾಗೃತಿ ಮೂಡಿಸುತ್ತಿದ್ದಾರೆ. ಸಿಗ್ನಲ್, ಜಂಕ್ಷನ್, ಇನ್ನಿತರ ಆಯಕಟ್ಟಿನ ಸ್ಥಳಗಳಲ್ಲಿ ಐಎಸ್‌ಐ ಮಾರ್ಕ್ ಇರುವ ಹೆಲ್ಮೆಟ್ ಧರಿಸುವಂತೆ ಬೈಕ್ ಸವಾರರಿಗೆ ತಿಳಿ ಹೇಳುತ್ತಿದ್ದಾರೆ. ಆದರೆ ಸುರಕ್ಷತೆಗಾಗಿ ಹೆಲ್ಮೆಟ್ ಧರಿಸುವಂತೆ ಹೇಳುವ ಪೊಲೀಸರು ಅರ್ಧ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಿ ನಿಯಮ ಉಲ್ಲಂಘಿಸುತ್ತಿದ್ದಾರೆ.‌ ಇದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ವಿರೋಧ ಅಳಿಸಿ ಹಾಕಲು ಪೊಲೀಸ್ ಇಲಾಖೆ ಲಾ ಅಂಡ್ …

Read More »

ಕರ್ನಾಟಕ ಕೈಗಾರಿಕಾ ವಿವಾದ ಮಸೂದೆ 2020 ಹಿಂಪಡೆದ ಸರ್ಕಾರ

ಬೆಂಗಳೂರು: ಕರ್ನಾಟಕ ಕೈಗಾರಿಕಾ ವಿವಾದ ಮತ್ತು ಕೆಲವು ಇತರ ಕಾನೂನುಗಳ (ತಿದ್ದುಪಡಿ) ಮಸೂದೆ 2020ನ್ನು ಸರ್ಕಾರ ವಾಪಸ್​ ಪಡೆದಿದೆ. ನಿನ್ನೆ(ಸೋಮವಾರ) ವಿಧಾನಸಭೆಯಲ್ಲಿ ಈ ಮಸೂದೆಯನ್ನು ಹಿಂಪಡೆಯಲಾಯಿತು. ಕೈಗಾರಿಕಾ ವಿವಾದ ಮಸೂದೆ ವಿಧಾನ ಸಭೆಯಲ್ಲಿ ಅಂಗೀಕಾರಗೊಂಡಿತ್ತು.‌ ಆದರೆ ಮೇಲ್ಮನೆಯಲ್ಲಿ ಬಿಜೆಪಿಗೆ ಬಹುಮತ ಇಲ್ಲದ ಕಾರಣ ಬಿದ್ದು ಹೋಗಿತ್ತು. ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಈ‌ ಮಸೂದೆಯನ್ನು ಪರಿಷತ್​​ನಲ್ಲಿ ವಿರೋಧಿಸಿದ್ದರು. ರಾಜ್ಯದಲ್ಲಿ ವಹಿವಾಟನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಈ ವಿಧೇಯಕವನ್ನು ತಂದಿತ್ತು. ತಿದ್ದುಪಡಿ ವಿಧೇಯಕ …

Read More »

ಭ್ರಷ್ಟಾಚಾರ ಪ್ರಕರಣದಲ್ಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಬಿಎಸ್​ವೈ

ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಎಫ್​ಐಆರ್​ ದಾಖಲಿಸಿ ವಿಚಾರಣೆ ನಡೆಸುವಂತೆ ಹೈಕೋರ್ಟ್​ ನೀಡಿದ ಸೂಚನೆ ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದಾರೆ. ಸುಪ್ರೀಂ ಕೋರ್ಟ್​ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ ಮತ್ತು ನ್ಯಾ. ಹಿಮಾ ಕೊಹ್ಲಿ ಅವರ ಪೀಠ ಸೋಮವಾರ ಪ್ರಕರಣದ ವಿಚಾರಣೆ ನಡೆಸಿದೆ. ಪ್ರಕರಣದ ಹಿನ್ನೆಲೆ: ಯಡಿಯೂರಪ್ಪ ಸಿಎಂ ಆಗಿದ್ದ ವೇಳೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದ ಗುತ್ತಿಗೆ ನೀಡುವಾಗ ಭ್ರಷ್ಟಾಚಾರ ಆಗಿದೆ ಎಂದು ಸಾಮಾಜಿಕ ಕಾರ್ಯಕರ್ತ …

Read More »

ನಾನು, ಅಧ್ಯಕ್ಷರು ಬಹಳ ಪ್ರೀತಿ ವಿಶ್ವಾಸದಿಂದಿದ್ದೇವೆ: ದೇಶಪಾಂಡೆ

ಬೆಂಗಳೂರು : ನಾನು ಅಧ್ಯಕ್ಷರು ಬಹಳ, ಪ್ರೀತಿ ವಿಶ್ವಾಸದಿಂದಿದ್ದೇವೆ. ಎಲ್ಲರ ಸಹಕಾರದಿಂದ ಅವರು ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಆರ್ ವಿ ದೇಶಪಾಂಡೆ ತಿಳಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಅಸಮಾಧಾನ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಇಂತಹ ಯಾವುದೇ ಊಹಾಪೋಹಗಳಿಲ್ಲ. ಅವರ ಉದ್ದೇಶ ಭಾರತ್ ಜೋಡೋ ಕಾರ್ಯಕ್ರಮ ಯಶಸ್ವಿಯಾಗಬೇಕೆಂಬುದಾಗಿದೆ. ಎಲ್ಲ ಕಡೆಯಿಂದ ನಮ್ಮ ಮುಖಂಡರು, ಕಾರ್ಯಕರ್ತರು ಕಾರ್ಯಕ್ರಮಕ್ಕೆ ಬರಬೇಕು. ಇದನ್ನು ಯಶಸ್ವಿಗೊಳಿಸಬೇಕೆಂದು ಹೇಳಿದ್ದಾರೆ ಎಂದರು. ಕೆಪಿಸಿಸಿ ಅಧ್ಯಕ್ಷರ ಹೇಳಿಕೆಗಳಿಗೆ ಬೇರೆ ಅರ್ಥ …

Read More »

ಕೆಎಂಎಫ್ ಕೇಂದ್ರ ಕಛೇರಿಗೆ ಭೇಟಿ ನೀಡಿದ ಆಂಧ್ರಪ್ರದೇಶದ ಸಚಿವೆ ಉಷಾ ಶ್ರೀಚರಣ

  *ಬೆಂಗಳೂರು*: ಆಂಧ್ರ ಪ್ರದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಷಾ ಶ್ರೀಚರಣ ಅವರು ಶನಿವಾರದಂದು ಇಲ್ಲಿಯ ಕೆಎಮ್‍ಎಫ್ ಕೇಂದ್ರ ಕಚೇರಿಗೆ ಭೇಟಿ ನೀಡಿ ಚರ್ಚೆ ನಡೆಸಿದರು. ಕೆಎಮ್‍ಎಫ್‍ನ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ.ಸತೀಶ ಅವರು ಸಚಿವರನ್ನು ಸ್ವಾಗತಿಸಿದರು. ಆಂಧ್ರಪ್ರದೇಶ ಸರ್ಕಾರದ ಪ್ರತಿಷ್ಠಿತ ಯೋಜನೆಯಾದ ವಾಯ್‍ಎಸ್‍ಆರ್ ಸಂಪೂರ್ಣ ಪೋಷಣ ಯೋಜನೆಯು ನವೆಂಬರ್-2016 ರಲ್ಲಿ 13 ಲಕ್ಷ ಲೀಟರ್ ಹಾಲಿನೊಂದಿಗೆ ಆರಂಭಗೊಂಡು ಹಂತ-ಹಂತವಾಗಿ 13 ಜಿಲ್ಲೆಗಳನ್ನು ಒಳಗೊಂಡ 55,600 ಅಂಗನವಾಡಿ ಕೇಂದ್ರಗಳಿಂದ …

Read More »

ವಿಮ್ಸ್‌ ಅವಘಡ; ಸಾವಿನ ಹೊಣೆ ಸರ್ಕಾರವೇ ಹೊರಲಿ, ಕಾಂಗ್ರೆಸ್‌ ಆಗ್ರಹ

ಬೆಂಗಳೂರು: ಬಳ್ಳಾರಿಯ ವಿಜಯನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (ವಿಮ್ಸ್‌) ಚಿಕಿತ್ಸೆಗೆ ದಾಖಲಾಗಿದ್ದ ಮೂವರು ರೋಗಿಗಳು ವಿದ್ಯುತ್‌ ಪೂರೈಕೆಯಲ್ಲಿನ ವ್ಯತ್ಯಯದಿಂದ ವೆಂಟಿಲೇಟರ್‌ ಸ್ಥಗಿತಗೊಂಡು ಮೃತ ಪಟ್ಟಿರುವ ಪ್ರಕರಣ ವಿಧಾನಸಭೆಯಲ್ಲಿ ಗುರುವಾರ ಪ್ರತಿಧ್ವನಿಸಿತು. ರೋಗಿಗಳ ಸಾವಿನ ಹೊಣೆಯನ್ನು ಸರ್ಕಾರವೇ ಹೊತ್ತುಕೊಳ್ಳಬೇಕು ಎಂದು ಕಾಂಗ್ರೆಸ್‌ ಆಗ್ರಹಿಸಿತು. ವಿಧಾನಸಭೆಯಲ್ಲಿ ಗುರುವಾರ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ‘ವಿಮ್ಸ್‌ನಲ್ಲಿ ವಿದ್ಯುತ್‌ ಪೂರೈಕೆ ಸ್ಥಗಿತಗೊಂಡಿದ್ದ ಅವಧಿಯಲ್ಲಿ ಜನರೇಟರ್‌ ಕೂಡ ಕಾರ್ಯನಿರ್ವಹಿಸಿಲ್ಲ. ಈ ಅವಧಿಯಲ್ಲಿ ಮೌಲಾ ಹುಸೇನ್‌ …

Read More »

ಕುರಾನ್‌ ವಾಕ್ಯಗಳು ಸಂವಿಧಾನದ ಆಶಯಕ್ಕೆ ವಿರುದ್ಧವಲ್ಲ: ಸಚಿವೆ ಜೊಲ್ಲೆ

ಬೆಂಗಳೂರು: ‘ಮುಸ್ಲಿಮರ ಧರ್ಮ ಗ್ರಂಥವಾದ ಕುರಾನ್‌ನಲ್ಲಿರುವ ವಾಕ್ಯಗಳು ದೇಶದ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿಲ್ಲ’ ಎಂದು ಮುಜರಾಯಿ ಹಾಗೂ ಹಜ್‌ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ವಿಧಾನ ಪರಿಷತ್‌ ಬಿಜೆಪಿ ಸದಸ್ಯ ಎನ್‌. ರವಿಕುಮಾರ್‌ ಅವರು, ‘ಕುರಾನ್‌ನಲ್ಲಿರುವ ವಾಕ್ಯಗಳು ದೇಶದ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂಬುವುದರ ಕುರಿತು ಸರ್ಕಾರದ ನಿಲುವು ಏನು’ ಎಂಬ ಪ್ರಶ್ನೆಗೆ ಸಚಿವರು ಈ ಲಿಖಿತ ಉತ್ತರ ನೀಡಿದ್ದಾರೆ. ‘ಕುರಾನ್‌ನಲ್ಲಿರುವ ಸುರ ಆಯತ್‌ 3:85, ಸುರ ವರ್ಸೆ …

Read More »

2013-17ರಲ್ಲೂ ಪಿಎಸ್‌ಐ ನೇಮಕಾತಿ ಅಕ್ರಮ: ಬಿಜೆಪಿ

ಬೆಂಗಳೂರು: 2013ರಲ್ಲಿ ನಡೆದ ಪಿಎಸ್‌ಐ ಮತ್ತು ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು, ಇದರ ಬಗ್ಗೆ ಮಾಹಿತಿ ಕಲೆಹಾಕಿದ್ದು, ಅವುಗಳ ತನಿಖೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ವಕ್ತಾರ ಹಾಗೂ ಶಾಸಕ ಪಿ.ರಾಜೀವ್‌ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘2013 ರಲ್ಲಿ ಶಿಕ್ಷಕರ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ ಪರೀಕ್ಷೆಯನ್ನೇ ಬರೆಯದ ಹಲವರಿಗೆ ನೇಮಕಾತಿ ಆದೇಶ ನೀಡಲಾಗಿದೆ. ಅಂಥವರು ಕರ್ತವ್ಯಕ್ಕೂ ಹಾಜರಾಗಿದ್ದಾರೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಇದರ ಸುಳಿವು ಪಡೆದು ವರದಿ …

Read More »

ನನ್ನ ಮದುವೆಯನ್ನು ತಡೆಯಲು ಅವರ್ಯಾರು ? ಬಜರಂಗ ದಳದ ವಿರುದ್ದ ಯುವತಿ ಆಕ್ರೋಶ

ಅವರಿಬ್ಬರು ಕಳೆದ ಮೂರು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರಂತೆ. ಇನ್ನೇನು ತಾವಿಬ್ಬರು ಮದುವೆಯಾಗಬೇಕು ಎಂದುಕೊಂಡವರಿಗೆ ಅಡ್ಡಲಾಗಿದ್ದು ಬಜರಂಗದಳವರು. ಹೌದು, ಜಾಫರ್, ಚೈತ್ರಾ ಸೆ.14 ರಂದು ಚಿಕ್ಕಮಗಳೂರಿನ ರತ್ನಗಿರಿ ರಸ್ತೆಯಲ್ಲಿರುವ ಸಬ್ ರಿಜಿಸ್ಟ್ರಾರ್ ಕಚೇರಿಗೆ ವಿವಾಹವಾಗಲು ಹೋಗಿದ್ದರು. ಈ ವಿಚಾರ ತಿಳಿಯುತ್ತಿದ್ದಂತೆಯೇ ಹಿಂದೂ ಸಂಘಟನೆ ಕಾರ್ಯಕರ್ತರು ಸ್ಥಳಕ್ಕೆ ಬಂದಿದ್ದಾರೆ. ಬಂದವರೇ ಮದುವೆಯನ್ನು ತಡೆಹಿಡಿದಿದ್ದರು. ಅಷ್ಟೆ ಅಲ್ಲ ಮುಸ್ಲಿಂ ಯುವಕನ ವಿರುದ್ಧ ಲವ್ ಜಿಹಾದ್ ಆರೋಪ ಹೊರೆಸಿ, ಇಬ್ಬರನ್ನು ಪೊಲೀಸ್ ಠಾಣೆಗೆ ಕಳುಹಿಸಿದ್ದಾರೆ. ಬಳಿಕ …

Read More »

ಗಟ್ಟಿಗಿತ್ತಿ ಅಜ್ಜಿ ಕೈಗೆ ಸಿಕ್ಕಿಬಿದ್ದ ಸರಗಳ್ಳಿ; ರಾಜಮ್ಮನ ಎದೆಗಾರಿಕೆ-ಸಮಯಪ್ರಜ್ಞೆಗೆ ಪೊಲೀಸರ ಸೆಲ್ಯೂಟ್

ಬೆಂಗಳೂರು ಗ್ರಾಮಾಂತರ: ಬಸ್‌ಗಾಗಿ ಕಾಯುತ್ತ ನಿಂತಿದ್ದ ಅಜ್ಜಿಯೊಬ್ಬರ ಕೊರಳಿಗೆ ಕೈಹಾಕಿ ಮಾಂಗಲ್ಯ ಸರ ಕಿತ್ತುಕೊಳ್ಳಲು ಹೋದ ಸರಗಳ್ಳಿಯೊಬ್ಬಳು ಗಟ್ಟಿಗಿತ್ತಿ ಅಜ್ಜಿಯ ಬಿಗಿಪಟ್ಟಿಗೆ ಸಿಕ್ಕಿಬಿದ್ದು ಜೈಲುಪಾಲಾಗಿದ್ದಾಳೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಧುರೆ ಹೋಬಳಿ ಕನಸವಾಡಿಯಲ್ಲಿ ಗುರುವಾರ ಈ ಪ್ರಕರಣ ನಡೆದಿದ್ದು, ಸರಗಳ್ಳಿ ಈಗ ದೊಡ್ಡಬೆಳವಂಗಲ ಠಾಣೆ ಪೊಲೀಸರ ಅತಿಥಿಯಾಗಿದ್ದಾಳೆ. ಸರ ನಾಲ್ಕೈದು ತುಂಡಾದರೂ ಒಂದೂ ತುಂಡು ಕೂಡ ಕಳ್ಳಿಯ ಪಾಲಾಗದಂತೆ ನೋಡಿಕೊಂಡ ಅಜ್ಜಿ ಎದೆಗಾರಿಕೆಗೆ ಹಾಗೂ ಸಮಯಪ್ರಜ್ಞೆಗೆ ಪೊಲೀಸರು ಸೆಲ್ಯೂಟ್ ಹೊಡೆದಿದ್ದಾರೆ. ಏನಿದು …

Read More »