Breaking News

ಬೆಂಗಳೂರು

ನಾಳೆ ಸಿಎಂ ಯಡಿಯೂರಪ್ಪನವರ ಕಾವೇರಿ ನಿವಾಸಕ್ಕೆ ಮುತ್ತಿಗೆ ಹಾಕಲು ತೀರ್ಮಾನಿಸಿದ್ದಾರೆ.ಆಶಾ ಕಾರ್ಯಕರ್ತರು

ಬೆಂಗಳೂರು,ಜು.28-ಮಾಸಿಕ ಗೌರವ ಧನ ಹೆಚ್ಚಳ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಆಶಾ ಕಾರ್ಯಕರ್ತರು ನಾಳೆ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲಿದ್ದಾರೆ. ಕಳೆದ 19 ದಿನಗಳಿಂದ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ನಾಳೆ ಸಿಎಂ ಯಡಿಯೂರಪ್ಪನವರ ಕಾವೇರಿ ನಿವಾಸಕ್ಕೆ ಮುತ್ತಿಗೆ ಹಾಕಲು ತೀರ್ಮಾನಿಸಿದ್ದಾರೆ. ಮಾಸಿಕ ಗೌರವಧನವನ್ನು 12 ಸಾವಿರ ರೂ.ಗೆ ಹೆಚ್ಚಳ ಮಾಡುವುದು, ಕೋವಿಡ್ ವಿರುದ್ಧದ ಹೋರಾಟಕ್ಕೆ ಅಗತ್ಯವಿರುವಷ್ಟು ಸುರಕ್ಷತಾ ಸಾಮಾಗ್ರಿಗಳನ್ನು …

Read More »

ಸುರಕ್ಷಿತ ವಾತಾವರಣ ಇರೋ ಕಡೆ ತರಗತಿ ಪ್ರಾರಂಭಿಸಿದರೆ ತಪ್ಪೇನು ಇಲ್ಲʼ

ಬೆಂಗಳೂರು: ಸುರಕ್ಷಿತ ವಾತಾವರಣವೆಂದು ಕಂಡುಬಂದ ಕಡೆಗಳಲ್ಲಿ ಶಾಲಾ ತರಗತಿಗಳನ್ನೇ ಪ್ರಾರಂಭಿಸಿದರೆ ತಪ್ಪೇನು ಇಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಕೊರೊನಾ ಸಾಮಾಜಿಕ ಸಂದರ್ಭದಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣ ಮತ್ತು ಶಾಲಾ ಚಟುವಟಿಕೆಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಮಂಗಳವಾರ ಶೈಕ್ಷಣಿಕ ವಲಯದಲ್ಲಿ ತೊಡಗಿಸಿಕೊಂಡಿರುವ 36ಕ್ಕೂ ಹೆಚ್ಚು ಸರ್ಕಾರೇತರ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಚಿವ ಸುರೇಶ್‌ ಕುಮಾರ್‌ ಸಂವಾದ ನಡೆಸಿದರು ಅಜೀಂ ಪ್ರೇಮ್‍ಜಿ ಪ್ರತಿಷ್ಠಾನ, ಗ್ರಾಮ್ಸ್, ಅಕ್ಷರ ಫೌಂಡೇಷನ್, ಯೂನಿಸೆಫ್, ಶಿಕ್ಷಣ, ಸಿಇಇ (ವಾಷ್ ಪ್ರೋಗ್ರಾಂ), ಪೋರ್ತ್ ಫೌಂಡೇಷನ್, …

Read More »

ರಾಜ್ಯದಲ್ಲಿ ಇಂದು 5,536 ಮಂದಿಗೆ ಕೊರೊನಾ – ಬೆಂಗ್ಳೂರಿನಲ್ಲಿ 1,898 ಜನರಿಗೆ ಸೋಂಕು, 102 ಬಲಿ

ಬೆಂಗಳೂರು: ರಾಜ್ಯದಲ್ಲಿ ಕಳೆದ ಆರು ದಿನಗಳಿಂದ 5 ಸಾವಿರಕ್ಕೂ ಅಧಿಕ ಮಂದಿಗೆ ಕೊರೊನಾ ಸೋಂಕು ಬರುತ್ತಿದೆ. ಇಂದು ಕೂಡ ಒಟ್ಟು 5,536 ಮಂದಿಗೆ ಸೋಂಕು ತಗುಲಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಒಂದು ಲಕ್ಷ ಗಡಿ ದಾಟಿದೆ. ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ಅನ್ವಯ ಕೋವಿಡ್ ಸೋಂಕಿತರ ಸಂಖ್ಯೆ 1,07,001ಕ್ಕೆ ಏರಿದೆ. ಇಂದು 102 ಮಂದಿ ಮೃತಪಟ್ಟಿದ್ದಾರೆ. ಇಲ್ಲಿಯವರೆಗೆ 2,055 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಂದು …

Read More »

ಜೈಲಿನಲ್ಲೇ ಮರ್ಡರ್​ಗೆ ಸ್ಕೆಚ್; ₹1 ಕೋಟಿ ಸುಪಾರಿ ಪಡೆದಿದ್ದ ಆರೋಪಿಗಳು ಅರೆಸ್ಟ್​​

ಬೆಂಗಳೂರು: ಜೈಲಿನಲ್ಲೇ ಇದ್ದು ಮರ್ಡರ್ ಮಾಡೋಕೆ ಸ್ಕೆಚ್ ಹಾಕಿದ್ದ ಖತರ್ನಾಕ್ ಗ್ಯಾಂಗ್​ನ ಒಂಬತ್ತು ಜನ ಆರೋಪಿಗಳನ್ನು ಪೊಲೀಸರು ಹೆರೆಮುರಿ ಕಟ್ಟಿದ್ದಾರೆ. ಕಾಮಾಕ್ಷಿಪಾಳ್ಯ ನಿವಾಸಿ ವರಲಕ್ಷ್ಮೀ ಎಂಬುವವರ ಪತಿ ಗೋವಿಂದೇ ಗೌಡನ ಹತ್ಯೆಯ ಪ್ರತೀಕಾರವಾಗಿ ಕೊಲೆ ಮಾಡಿದ ಆರೋಪಿಗಳ ಹತ್ಯೆಗೆ ವರಲಕ್ಷ್ಮೀ ಸುಪಾರಿ ನೀಡಿದ್ದರು ಎನ್ನಲಾಗಿದೆ. ವರಲಕ್ಷ್ಮೀ ಹಾಗೂ ಗೋವಿಂದೇಗೌಡನಿಗೆ ಆತ್ಮೀಯನಾಗಿದ್ದ ಚಿಕ್ಕತಿಮ್ಮೇಗೌಡ, ತಾನು ಬೆಳೆಯುತ್ತಿದ್ದಂತೆ ಇಬ್ಬರನ್ನ ದೂರ ಮಾಡಿದ್ದ. ವರಲಕ್ಷ್ಮೀ ದಂಪತಿಗೆ ಮಕ್ಕಳಿಲ್ಲದ ಕಾರಣ ಚಿಕ್ಕತಿಮ್ಮೇಗೌಡನನ್ನು ಬೆಳೆಸಿ, ಆತನಿಗೆ ಒಳ್ಳೆಯ …

Read More »

ಹೋಟೆಲ್​​ನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಮೂವರು ಅರೆಸ್ಟ್​

ಬೆಂಗಳೂರು: ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಗೌರವ್, ಹೀನಾ ಹಾಗೂ ಅಣ್ಣಪ್ಪ ಬಂಧಿತರು. ಆರೋಪಿಗಳು ಲಾಡ್ಜ್ ನಡೆಸಲು ಪರವಾನಗಿ ಪಡೆದು ಅನಧಿಕೃತವಾಗಿ ವೇಶ್ಯಾವಾಟಿಕೆಗೆ ಇಳಿದಿದ್ದರು. ಕೆಲಸದ ಆಮಿಷವೊಡ್ಡಿ ಹೊರರಾಜ್ಯದಿಂದ ಹುಡುಗಿಯರನ್ನು ಕರೆಯಿಸಿ ಕಂಫರ್ಟ್ ಹೋಟೆಲ್​​​ನಲ್ಲಿ ದಂಧೆ ನಡೆಸುತ್ತಿದ್ದರು. ಆನ್​ಲೈನ್​​ನಲ್ಲಿ ಮೊಬೈಲ್ ನಂಬರ್ ಹಾಕಿಕೊಂಡು, ಟೆಲಿಕಾಲರ್ ಮೂಲಕ ಗಿರಾಕಿಗಳನ್ನ ಕರೆಸುತ್ತಿದ್ದರು. ಇದು ಯಾರಿಗೂ ಗೊತ್ತಾಗದಂತೆ ಒಂದೊಂದು ನಂಬರ್ ಯ್ಯೂಸ್ ಮಾಡುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಖಚಿತ …

Read More »

ತಿರುಗಿ ಬಿದ್ದ ಸಚಿವಾಕಾಂಕ್ಷಿಗಳು, ಬಿಜೆಪಿಗೆ ಶುರುವಾಯ್ತು ಹೊಸ ಟ್ರಬಲ್..!

ಬೆಂಗಳೂರು,ಜು.28- ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಉಂಟಾಗಬಹುದಾದ ಅಸಮಾಧಾನವನ್ನು ಶಮನಗೊಳಿಸಲು ನಿಗಮ ಮಂಡಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದ ಬೆನ್ನಲ್ಲೇ, ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಆಕಾಂಕ್ಷಿಗಳು ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದು, ಆಡಳಿತಾರೂಢ ಕಮಲ ಪಕ್ಷ ವಿಲವಿಲ ಎನ್ನುವಂತಾಗಿದೆ. ಮಂತ್ರಿಸ್ಥಾನದ ಆಕಾಂಕ್ಷಿಯಾಗಿದ್ದವರಿಗೆ ಏಕಾಏಕಿ ನಿಗಮ ಮಂಡಳಿಗಳಿಗೆ ನೇಮಕ ಮಾಡಿದ್ದರಿಂದ ಶಾಸಕರಲ್ಲಿ ಅಸಮಾಧಾನ ಸ್ಫೋಟವಾಗಿದ್ದು, ಕೋವಿಡ್ ಸಂಕಷ್ಟದಲ್ಲಿ ಬಿಳಿ ಆನೆ ಎಂದೆ ಕರೆಯಲ್ಪಡುವ ನಿಗಮ-ಮಂಡಳಿಗಳಿಗೆ ನೇಮಕ ಮಾಡುವ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು …

Read More »

ಟಿಪ್ಪು ಹೆಸರಿಲ್ಲದೆ ದೇಶದ ಇತಿಹಾಸ ಅಪೂರ್ಣ : ಡಿಕೆಶಿ

ಬೆಂಗಳೂರು: ದೇಶದ ಇತಿಹಾಸದಲ್ಲಿ ದಾಖಲಾದ ವಿಚಾರವನ್ನ ಬಿಎಸ್‍ವೈ ಸರ್ಕಾರ ಶಾಲಾ ಪಠ್ಯಗಳಿಂದ ಕೈಬಿಡಲು ಹೊರಟಿರುವುದು ಖಂಡನೀಯ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿರುವ ಡಿಕೆಶಿ, ಪಠ್ಯಪುಸ್ತಕದಿಂದ ಕೈ ಬಿಟ್ಟ ವಿಚಾರ ಸಂಬಂಧ ಸಂಶೋಧಕರು, ಶಿಕ್ಷಣ ತಜ್ಞರೊಂದಿಗೂ ಚರ್ಚಿಸಲಾಗುವುದು. ಇತಿಹಾಸ ತಿರುಚುವ ಮೂಲಕ ಜನರ ದಾರಿ ತಪ್ಪಿಸುತ್ತಿರುವುದನ್ನು ವಿರೋಧಿಸಬೇಕಿದೆ. ಯಾವುದೇ ಕಾರಣಕ್ಕೂ ಇತಿಹಾಸ ಮರೆಮಾಚಲು ಬಿಡುವುದಿಲ್ಲ ಎಂದು ಆಗ್ರಹಿಸಿದ್ದಾರೆ. ಟಿಪ್ಪು ಜಯಂತಿ ಆಚರಿಸುವುದು ಬಿಎಸ್‍ವೈ ಸರ್ಕಾರಕ್ಕೆ …

Read More »

ಕೊರೊನಾ ಕಾಲದಲ್ಲಿ ಶಾಲೆ ತೆರೆಯಲು ಅವಸರವಿಲ್ಲ: ಸುರೇಶ್ ಕುಮಾರ್

ಬೆಂಗಳೂರು: ಕೊರೊನಾ ಸಾಂಕ್ರಾಮಿಕ ಪ್ರಸರಣದ ಈ ಕಾಲಘಟ್ಟದಲ್ಲಿ ಶಾಲೆಗಳನ್ನು ತೆರೆಯುವ ಅವಸರ ಸರ್ಕಾರದ ಮುಂದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಕೊರೊನಾ ಸಾಮಾಜಿಕ ಸಂದರ್ಭದಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣ ಮತ್ತು ಶಾಲಾ ಚಟುವಟಿಕೆಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಮಂಗಳವಾರ ಶೈಕ್ಷಣಿಕ ವಲಯದಲ್ಲಿ ತೊಡಗಿಸಿಕೊಂಡಿರುವ ಸರ್ಕಾರೇತರ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ನಡೆಸಿದ ವೆಬಿನಾರ್ ಸಂವಾದದಲ್ಲಿ ಮಾತನಾಡಿದ ಅವರು, ಈ ಸಾಮಾಜಿಕ ಪರಿಸ್ಥಿತಿಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ಅವಸರದಲ್ಲಿ ಶಾಲೆ ತೆರೆಯುವುದಿಲ್ಲವಾದರೂ …

Read More »

ಈ ವರ್ಷ ರಸ್ತೆಯಲ್ಲಿ ಗಣಪತಿ ಕೂರಿಸುವಂತಿಲ್ಲ………..

ಬೆಂಗಳೂರು: ಈ ವರ್ಷ ಬೆಂಗಳೂರಿನ ರಸ್ತೆಯಲ್ಲಿ ಗಣಪತಿ ಕೂರಿಸುವಂತಿಲ್ಲ ಎಂದು ಬಿಬಿಎಂಪಿ ಕಮೀಷನರ್ ಮಂಜುನಾಥ್ ಪ್ರಸಾದ್ ಹೇಳಿದ್ದಾರೆ. ಕೊರೊನಾನಿಂದ ಸಾಮಾಜಿಕ ಅಂತರ ಕಾಯ್ದುಕೊಂಡು ಗಣೇಶ ಹಬ್ಬ ಮನೆಯಲ್ಲೇ ಮಾಡಿ. ಕೊರೊನಾ ವಿರುದ್ಧ ಹೋರಾಟ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಗಣಪತಿ ಕೂರಿಸಲು ಅವಕಾಶವೇ ಇಲ್ಲ. ಈ ಮೂಲಕ ಹಬ್ಬಗಳನ್ನ ಮನೆಯಲ್ಲಿ ಮಾಡಬೇಕು ಎಂದು ಪಬ್ಲಿಕ್ ಟಿವಿಗೆ ಬಿಬಿಎಂಪಿ ಕಮೀಷನರ್ ಮಂಜುನಾಥ್ ಪ್ರಸಾದ್ ಹೇಳಿದ್ದಾರೆ. ಹಬ್ಬದ ಶಾಪಿಂಗ್ ನೆಪದಲ್ಲಿ ನಿಯಮಗಳನ್ನು ಮೀರಿದರೆ ದಂಡ ವಿಧಿಸಲಾಗುತ್ತಿದೆ. …

Read More »

ಅಸಮಾಧಾನ ಸ್ಫೋಟ: ಇಲ್ಲದನ್ನ ಮೈಮೇಲೆ ಎಳೆದುಕೊಂಡ ಸಿಎಂ, ಕಟೀಲ್‌ ಫಜೀತಿ

ಬೆಂಗಳೂರು: ಸರ್ಕಾರಕ್ಕೆ ಒಂದು ವರ್ಷ ತುಂಬಿದ ಖುಷಿಯಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಪಕ್ಷದ ಶಾಸಕರುಗಳಿಗೆ ನಿಗಮ ಮಂಡಳಿ ಗಿಫ್ಟ್ ಕೊಟ್ಟಿದ್ದೇ ತಡ ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟವಾಗಿದೆ. ಹೌದು… ಸಿಎಂ ಯಡಿಯೂರಪ್ಪ ಭಿನ್ನಮತೀಯ ಶಾಸಕರನ್ನು ಓಲೈಸುವ ಸಂಬಂಧ 24 ಶಾಸಕರಿಗೆ ನಿಗಮ-ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದರು.ಈ ಮೂಲಕ ಭಿನ್ನಮತ ಶಮನದ ತಂತ್ರಗಾರಿಕೆ ಅನುಸರಿಸಿದ್ದರು. ಆದ್ರೆ, ನಿಗಮ ಮಂಡಳಿ ತಂತ್ರಗಾರಿಕೆ ವರ್ಕ್ ಔಟ್ ಆದಂತೆ ಕಾಣಿಸುತ್ತಿಲ್ಲ. ಆಕಾಂಕ್ಷಿಗಳಾಗಿದ್ದವರಿಗೆ ನಿಗಮ …

Read More »