ಬೆಂಗಳೂರು(ಜುಲೈ 21): ನಗರದಲ್ಲಿ ನಿನ್ನೆ ಸಂಜೆಯ ನಂತರದಿಂದಲೂ ವಿವಿಧೆಡೆ ಭಾರೀ ಮಳೆಯಾಗಿದೆ. ತಗ್ಗಿದ ಪ್ರದೇಶಗಳು ಬಹಳ ಹೊತ್ತು ಜಲಾವೃತಗೊಂಡವು. ಯಲಹಂಕ, ದೊಡ್ಡಬೊಮ್ಮಸಂದ್ರ, ಟಿ. ದಾಸರಹಳ್ಳಿ ಪ್ರದೇಶಗಳಲ್ಲಿ ಮಳೆ ನೀರು ಹಲವು ಅಪಾರ್ಟ್ಮೆಂಟ್, ಮನೆಗಳಿಗೆ ನುಗ್ಗಿತ್ತು. ಇಲ್ಲಿಯ ರಸ್ತೆಗಳು ಕೆರೆಯಂತಾದವು. ಆರ್.ಟಿ. ನಗರದಲ್ಲಿ ಬಾಲಕಿಯೊಬ್ಬಳು ವಿದ್ಯುತ್ ಶಾಕ್ನಿಂದ ಮೃತಪಟ್ಟ ದುರಂತ ಘಟನೆಯೂ ನಿನ್ನೆ ರಾತ್ರಿ ಸಂಭವಿಸಿದೆ. ಕಾವಲ್ ಬೈರಸಂದ್ರದಲ್ಲಿ 8 ವರ್ಷದ ಫಾತಿಮಾ ಮೃತಪಟ್ಟ ಬಾಲಕಿ. ನಿನ್ನೆ ರಾತ್ರಿ 8ಗಂಟೆಯ ಸಮಯದಲ್ಲಿ …
Read More »ಸೋಂಕಿತರು ಬಳಸಿದ ಹಾಸಿಗೆ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ನೀಡಿದರೇ ಸರ್ಕಾರದ ವಿರುದ್ಧ ಹೋರಾಟ ಗ್ಯಾರಂಟಿ‘ – ಡಿ.ಕೆ ಶಿವಕುಮಾರ್
ಬೆಂಗಳೂರು): ಕೊರೋನಾ ಪರಿಸ್ಥಿತಿ ನಿರ್ವಹಣೆಯಲ್ಲಿ ಸರ್ಕಾರದ ವೈಫಲ್ಯ ಮತ್ತು ಕೋವಿಡ್-19 ಚಿಕಿತ್ಸಾ ಸಲಕರಣೆ ಖರೀದಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಸೇರಿದಂತೆ ರಾಜ್ಯಾದ್ಯಂತ ಸೋಂಕಿತರ ಪರದಾಟ ಮತ್ತಿತರ ವಿಚಾರಗಳ ಬಗ್ಗೆ ಚರ್ಚಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಭೆ ನಡೆಸಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ ಹಿರಿಯ ಮುಖಂಡರು, ಕಾಂಗ್ರೆಸ್ ಕೋವಿಡ್ ಕಾರ್ಯಪಡೆ ಹಾಗೂ ವೈದ್ಯ ಘಟಕದ ಪ್ರತಿನಿಧಿಗಳು ಭಾಗಿಯಾಗಿದ್ದರು. ಹಾಗೆಯೇ ಸಭೆಯಲ್ಲಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್, ವಿಧಾನಸಭೆ …
Read More »ಮಾಸ್ಕ್ ಏಕೆ ಧರಿಸಬೇಕು?………..
ಬೆಂಗಳೂರು: ಕೊರೊನಾ ಆತಂಕ ಮತ್ತು ತಡೆಗಾಗಿ ಸಾರ್ವಜನಿಕರು ಮಾಸ್ಕ್ ಧರಿಸುತ್ತಿದ್ದಾರೆ. ಆದ್ರೆ ಮಾಸ್ಕ್ ಧರಿಸೋದು ಹೇಗೆ ಎಂಬುದರ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ. ಮಾಸ್ಕ್ ಏಕೆ ಧರಿಸಬೇಕು?: ಕೋವಿಡ್-19 ವೈರಸ್ ವ್ಯಕ್ತಿಯಿಂದ ವ್ಯಕ್ತಿಯ ನಡುವೆ ಆಗುವ ಸಂಪರ್ಕದಿಂದ ಸುಲಭವಾಗಿ ಹರಡುತ್ತದೆ. ವೈರಸ್ ಗಳನ್ನು ಹೊತ್ತ ನೀರಿನ ಹನಿಗಳು ಬೇಗನೆ ಒಣಗಿ, ಬೀಜಕಣಗಳಾಗಿ ತೇಲಾಡಿ ನಂತರ ನೆಲ ಅಥವಾ ಇನ್ಯಾವುದೇ ಪದರುಗಳ ಮೇಲೆ ಚಿಮ್ಮುತ್ತವೆ. ಕೋವಿಡ್-19 ಸಂಭವಿಸಲು ಕಾರಣವಾದ ಸಾರ್ಸ್-ಸಿಓವಿ-2 ವೈರಸ್ …
Read More »ಬೆಂಗಳೂರಿನ ಎಎಸ್ಐ ಇವರಿಗೆ ಕೊರೊನಾ ತಗುಲಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಬೆಂಗಳೂರು: ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಅದರಲ್ಲೂ ಕೊರೊನಾ ತನ್ನ ಮರಣಕೇಕೆಯನ್ನು ಮುಂದುವರಿಸಿದ್ದು, ನಗರದಲ್ಲಿ ಮತ್ತೊಬ್ಬ ಕೊರೊನಾ ವಾರಿಯರ್ ಸಾವನ್ನಪ್ಪಿದ್ದಾರೆ. ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತಿದ್ದ ವಾರಿಯರ್ ಮಹಾಮಾರಿ ಕೊರೊನಾಗೆ ಮೃತಪಟ್ಟಿದ್ದಾರೆ. ಮೃತ ಎಎಸ್ಐ ಬೆಂಗಳೂರಿನ ಸಿಟಿ ಆರ್ಮ್ ರಿಸರ್ವ್ ಸೌತ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರಿಗೆ ಕೊರೊನಾ ತಗುಲಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಳೆದ 24 ಗಂಟೆಯಲ್ಲಿ ನಗರದಲ್ಲಿ 33 ಪೊಲೀಸರಿಗೆ ಸೋಂಕು ಕಾಣಿಸಿಕೊಂಡಿದೆ. …
Read More »ಕೊರೊನಾ ಆತಂಕ- ಮಗುವಿಗೆ ಹಾಲುಣಿಸುವ ಮುನ್ನ ತಾಯಂದಿರು ತೆಗೆದುಕೊಳ್ಳಬೇಕಾದ ಕ್ರಮಗಳು
ಬೆಂಗಳೂರು: ಕೊರೊನಾ ಆತಂಕ ಮಾತ್ರ ಕಡಿಮೆ ಆಗುತ್ತಲೇ ಇಲ್ಲ. ಪಕ್ಕದ ಬೀದಿಯಲ್ಲಿ ಬಂತು, ಮನೆಯ ಹಿಂದೆಯ ನಿವಾಸಿಗೆ ಸೋಂಕು ತಗುಲಿತು ಎಂಬ ವಿಷಯಗಳನ್ನು ನೀವು ಕೇಳಿರುತ್ತೀರಿ. ಕೊರೊನಾ ಭಯ ಬೇಡ ಮುಂಜಾಗ್ರತೆ ಇರಲಿ ಎಂದು ತಜ್ಞರು ಸೇರಿದಂತೆ ಸರ್ಕಾರ ಸಲಹೆಗಳನ್ನು ನೀಡುತ್ತಾ ಬಂದಿದೆ. ಆರೋಗ್ಯ ಇಲಾಖೆ ಸಹ ಕೊರೊನಾಗೆ ಸಂಬಂಧಿಸಿದ ಮಾಹಿತಿಯನ್ನು ಸಾರ್ವಜನಿಕರು ನೀಡುವ ಪ್ರಯತ್ನವನ್ನು ಮಾಡುತ್ತಿದೆ. ಮನೆಯಲ್ಲಿ ಮಕ್ಕಳು ಮತ್ತು ಹಿರಿಯರು ಇದ್ರೆ ಹೆಚ್ಚು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು …
Read More »ಹಿಂದೂ ಸಂಪ್ರದಾಯದಂತೆ ಪತಿಗೆ ಪತ್ನಿ ಪಾದಪೂಜೆ………..
ಬೆಂಗಳೂರು: ಭೀಮನ ಅಮಸ್ಯೆ ದಂಪತಿಗೆ ಪವಿತ್ರ ದಿನವಾಗಿದ್ದು, ಹಿಂದೂ ಸಂಪ್ರದಾಯದಂತೆ ಪತಿಗೆ ಪತ್ನಿ ಪಾದಪೂಜೆ ಮಾಡುತ್ತಾರೆ. ಈ ಕ್ಷಣಗಳನ್ನು ನೆನಪಿರಲಿ ಪ್ರೇಮ್ ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ, ಪತ್ನಿಯ ಪಾದ ಪೂಜೆಯಿಂದ ಜಾಕ್ಪಾಟ್ ಹೊಡಿಯಲಿದೆ ಎಂದು ಬರೆದಿದ್ದಾರೆ. ಈ ಕುರಿತು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿ ಸುಂದರ ಕ್ಷಣಗಳನ್ನು ಪ್ರೇಮ್ ಹಂಚಿಕೊಂಡಿದ್ದಾರೆ. ಇದಕ್ಕೆ ಸಾಲುಗಳನ್ನು ಬರೆದಿರುವ ಅವರು, ನಿನ್ನ ಪ್ರೀತ್ಸಿದ್ಮೇಲೆ ಆಯಸ್ಸು ಜಾಸ್ತಿ ಆಯಿತು. ಮದುವೆ ಆದ್ಮೇಲೆ ಅದೃಷ್ಟ ಕುಲಾಯಿಸ್ತು. …
Read More »ಗೂಗ್ಲಿ ಸಿನಿಮಾ ತೆರೆಕಂಡ ನಿನ್ನೆಗೆ 7 ವರ್ಷವಾಗಿದೆ. ಈ ಸಮಯದಲ್ಲಿ ಚಿತ್ರತಂಡ ಸಿನಿಮಾದ ಯಶಸ್ಸನ್ನು ನೆನಪಿಸಿಕೊಂಡಿದೆ.
ಬೆಂಗಳೂರು: ಪವನ್ ಒಡೆಯರ್ ನಿರ್ದೇಶನ, ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬ್ಲಾಕ್ ಬಸ್ಟರ್ ಚಿತ್ರ ಗೂಗ್ಲಿ ಸಿನಿಮಾ ತೆರೆಕಂಡ ನಿನ್ನೆಗೆ 7 ವರ್ಷವಾಗಿದೆ. ಈ ಸಮಯದಲ್ಲಿ ಚಿತ್ರತಂಡ ಸಿನಿಮಾದ ಯಶಸ್ಸನ್ನು ನೆನಪಿಸಿಕೊಂಡಿದೆ. 2013ರ ಜುಲೈ 19ರಂದು ಗೂಗ್ಲಿ ಸಿನಿಮಾ ತೆರೆಕಂಡಿತ್ತು. ಯಶ್ ನಾಯಕನಾಗಿ, ಕೃತಿ ಕರಬಂಧ ನಾಯಕಿಯಾಗಿ ಮಿಂಚಿದ್ದರು. ಲವ್, ಕಾಲೇಜ್ ಲೈಫ್, ಸಕ್ಸಸ್ ಹೀಗೆ ಎಲ್ಲ ಅಂಶಗಳನ್ನು ಒಳಗೊಂಡಿದ್ದ ಸಿನಿಮಾ ಅಂದು ಕಾಲೇಜು ಯುವಕ-ಯುವತಿಯರಿಗೆ ಬಹಳ ಇಷ್ಟ ಆಗಿತ್ತು. …
Read More »ದ್ರೋಣ ಅಂತಾ ಕಾಗೆ ಹಾರಸಿರೋ ಪ್ರತಾಪ ನನ್ನ ಪೊಲೀಸರು ಬಂಧಿಸಿದ್ದಾರೆ..
ಬೆಂಗಳೂರು(ಜು.20): ಕ್ವಾರಂಟೈನ್ ನಿಯಮ ಉಲ್ಲಂಘಿಸಿ ತಲೆಮರೆಸಿಕೊಂಡಿದ್ದ ಡ್ರೋನ್ ಪ್ರತಾಪ್ ಈಗ ಬೆಂಗಳೂರು ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾನೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಿಕ್ಕಿಬಿದ್ದ ಡ್ರೋನ್ ಪ್ರತಾಪ್ನನ್ನು ವಶಕ್ಕೆ ಪಡೆದ ಪೊಲೀಸರು ಈಗ ಬೆಂಗಳೂರು ಕರೆ ತಂದಿದ್ದಾರೆ. ಡ್ರೋನ್ ಪ್ರತಾಪ್ ಜುಲೈ 15ರಂದು ಹೈದರಾಬಾದ್ನಿಂದ ಬೆಂಗಳೂರಿಗೆ ಬಂದಿದ್ದ. ತಲಘಟ್ಟಪುರದ ಅಪಾರ್ಟ್ಮೆಂಟ್ವೊಂದರಲ್ಲಿ ಈತ ಕ್ವಾರಂಟೈನ್ ಆಗಿದ್ದ. ಆತನ ಕೈಗೆ ಬಿಬಿಎಂಪಿಯಿಂದ ಕ್ವಾರಂಟೈನ್ ಸ್ಟಿಕರ್ ಕೂಡ ಅಂಟಿಸಲಾಗಿತ್ತು. ಆದರೆ, ಅದಾಗಿ ಎರಡೇ ದಿನಕ್ಕೆ ಈತ ಖಾಸಗಿ …
Read More »ಬುಧವಾರದಿಂದ ಬೆಂಗಳೂರಿನಲ್ಲಿ ಲಾಕ್ಡೌನ್ ಇರಲ್ಲ………..
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಲಾಕ್ಡೌನ್ ವಿಸ್ತರಿಸದೇ ಇರಲು ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಬೆಂಗಳೂರಿನ ಕೊರೊನಾ ನಿಯಂತ್ರಣ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಸ್ಪಷ್ಟವಾಗಿ ಈ ನಿರ್ಧಾರವನ್ನು ತಿಳಿಸಿದ್ದಾರೆ. ಲಾಕ್ ಡೌನ್ ವಿಸ್ತರಣೆ ಬಗ್ಗೆ ಮೊನ್ನೆಯೂ ಬೇಡ ಎಂದು ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಪದೇ ಪದೇ ಆ ಬಗ್ಗೆ ಚರ್ಚೆ ಮಾಡುವುದು ಬೇಡ ಎಂದು ಹೇಳಿದ್ದಾರೆ. ವಲಯಗಳಲ್ಲಿ ಸಮಸ್ಯೆಗಳನ್ನು ಬಗೆಹರಿಸುವತ್ತ ಗಮನಹರಿಸಿ. ಟ್ರೇಸಿಂಗ್, ಟೆಸ್ಟಿಂಗ್ ಬಗ್ಗೆ ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಸಚಿವರಿಗೆ ಸಿಎಂ …
Read More »ಮಗು ಕೊಂದ ಆಸ್ಪತ್ರೆಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಿ:ಸಿದ್ದರಾಮಯ್ಯ
ಬೆಂಗಳೂರು: ಆಸ್ಪತ್ರೆ ಮುಂದೆ ಆಟೋದಲ್ಲಿಯೇ ಹೆರಿಗೆಯಾಗಿ ನವಜಾತ ಶಿಶು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಗಡುಕ ಆಸ್ಪತ್ರೆಗಳ ಮೇಲೆ ಕ್ರಮ ಕೈಗೊಳ್ಳಿ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪಗೆ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ, ಹೆರಿಗೆಗಾಗಿ ಬೆಂಗಳೂರಿನ ಆಸ್ಪತ್ರೆಗಳೆಲ್ಲ ಸುತ್ತಾಡಿದ ಗರ್ಭಿಣಿಯೊಬ್ಬರು ಎಲ್ಲಿಯೂ ಸೇರಿಸಿಕೊಳ್ಳದೆ ಇದ್ದಾಗ ಕೊನೆಗೆ ಅಟೊರಿಕ್ಷಾದಲ್ಲಿಯೇ ಹಡೆದ ಪರಿಣಾಮ ಹಸುಕೂಸನ್ನು ಕಳೆದುಕೊಳ್ಳಬೇಕಾಯಿತು. ಹೀಗಾಗಿ ಮುಖ್ಯಮಂತ್ರಿಗಳೇ ಮೊದಲು ಈ ನತದೃಷ್ಟ ತಾಯಿಯ ಮಗುವಿನ …
Read More »