ಬೆಂಗಳೂರು: ಏಳು ದಿನ ಬೆಂಗಳೂರು ಲಾಕ್ಡೌನ್ ಹಿನ್ನೆಲೆಯಲ್ಲಿ ನಗರದ ಎಲ್ಲಾ ಪೊಲೀಸ್ ಠಾಣೆಗಳಿಗೆ ಕಮೀಷನರ್ ಭಾಸ್ಕರ್ ರಾವ್ ಸೂಚನೆ ನೀಡಿದ್ದಾರೆ. ಕಮೀಷನರ್ ಭಾಸ್ಕರ್ ರಾವ್ ಕಂಟ್ರೋಲ್ ರೂಂ ಮೂಲಕ ಪೊಲೀಸ್ ಠಾಣೆಗಳಿಗೆ ಸೂಚನೆ ಕೊಟ್ಟಿದ್ದಾರೆ. ಇಂದಿನಿಂದ ಜುಲೈ 22ರ ಬೆಳಗಿನ ಜಾವ 5 ಗಂಟೆಯವರೆಗೆ ಲಾಕ್ಡೌನ್ ಇರುತ್ತೆ. ಈ ವೇಳೆ ಕೆಲವು ವ್ಯಾಪಾರ ವಹಿವಾಟುಗಳು ನಡೆಯುತ್ತೆ ಅವರಿಗೆ ಅವಕಾಶ ಮಾಡಿ ಕೊಡಬೇಕು. ಅಲ್ಲದೇ ಲಾಕ್ಡೌನ್ ವೇಳೆ ಸಾರ್ವಜನಿಕರ ಜೊತೆ ಮೃದುವಾಗಿ …
Read More »ಪರೀಕ್ಷೆ ನಡೆಸಲು ಮುಂದಾಗಿದ್ದ ಕ್ರೈಸ್ಟ್ ಸೇರಿ ಡೀಮ್ಡ್ ವಿವಿಗಳಿಗೆ ಸರ್ಕಾರದಿಂದ ಚಾಟಿ
ಬೆಂಗಳೂರು: ಕೋವಿಡ್ 19 ಸಮಯದಲ್ಲೂ ವಿದ್ಯಾರ್ಥಿಗಳಿಗೆ ಪರೀಕ್ಷೆ ಮಾಡಲು ಮುಂದಾಗುತ್ತಿದ್ದ ಬೆಂಗಳೂರಿನ ಕ್ರೈಸ್ಟ್ ಸೇರಿ, ಡೀಮ್ಡ್ ವಿಶ್ವವಿದ್ಯಾಲಯಗಳಿಗೆ ರಾಜ್ಯ ಸರ್ಕಾರ ಚಾಟಿ ಬೀಸಿದೆ. ಅಂತಿಮ ವರ್ಷದ ಪರೀಕ್ಷೆ ಬಿಟ್ಟು ಇನ್ಯಾವುದೇ ತರಗತಿಗಳಿಗೆ ಪರೀಕ್ಷೆ ನಡೆಸದಂತೆ ಕ್ರೈಸ್ಟ್ ವಿಶ್ವವಿದ್ಯಾಲಯ ಸೇರಿ ಎಲ್ಲಾ ಡೀಮ್ಡ್ ವಿವಿಗಳಿಗೆ ಸರ್ಕಾರ ಸೂಚನೆ ನೀಡಿದೆ. ಇಂಟರ್ನಲ್ ಅಸಸ್ಮೆಟ್ ಶೇ.50 ಹಾಗೂ ಹಿಂದಿನ ಪರೀಕ್ಷೆಗಳಿಂದ ಶೇ.50 ಅಂಕದ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಪಾಸ್ ಮಾಡುವಂತೆ ಉನ್ನತ ಶಿಕ್ಷಣ ಇಲಾಖೆ …
Read More »ಲಾಕ್ಡೌನ್ನ ಮೊದಲ ದಿನ ನವಯುಗ ಟೋಲ್, ಮಲ್ಲೇಶ್ವರಂ, ಮೆಜೆಸ್ಟಿಕ್ ಸೇರಿದಂತೆ ಬಹುತೇಕ ರಸ್ತೆಗಳು ಸಂಪೂರ್ಣವಾಗಿ ಬಂದ್
ಬೆಂಗಳೂರು: ಲಾಕ್ಡೌನ್ನ ಮೊದಲ ದಿನ ನವಯುಗ ಟೋಲ್, ಮಲ್ಲೇಶ್ವರಂ, ಮೆಜೆಸ್ಟಿಕ್ ಸೇರಿದಂತೆ ಬಹುತೇಕ ರಸ್ತೆಗಳು ಸಂಪೂರ್ಣವಾಗಿ ಬಂದ್ ಆಗಿದೆ. ಲಾಕ್ಡೌನ್ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ನಲ್ಲಿ ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಎಂಟ್ರಿ ಮತ್ತು ಎಕ್ಸಿಟ್ಗಳನ್ನ ಬ್ಯಾರಿಕೇಡ್ಗಳನ್ನ ಹಾಕಿ ಮುಚ್ಚಲಾಗಿದೆ. ಯಾವುದೇ ಬಸ್ಗಳ ಓಡಾಟವಿಲ್ಲ. ಇಡೀ ಮೆಜೆಸ್ಟಿಕ್ ಸುತ್ತಮುತ್ತ ಪೊಲೀಸರು ರಸ್ತೆಯನ್ನು ಬಂದ್ ಮಾಡಿದ್ದಾರೆ. ಅಲ್ಲದೇ ಮೆಜೆಸ್ಟಿಕ್ ನಿಲ್ದಾಣದ ಅಂಗಡಿ ಮುಂಗಟ್ಟು ಸಹ ಸಂಪೂರ್ಣ ಬಂದ್ ಆಗಿವೆ. ಹೋಟೆಲ್, ಟೀ ಅಂಗಡಿಗಳು ಓಪನ್ ಇಲ್ಲ. …
Read More »ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನೂರಾರು ಜನ
ಬೆಂಗಳೂರು: ಇಂದಿನಿಂದ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆ ಲಾಕ್ಡೌನ್ ಆಗಿದೆ. ಹೀಗಾಗಿ ಬಹುತೇಕ ರಸ್ತೆಗಳು ಖಾಲಿ ಖಾಲಿಯಾಗಿವೆ. ಆದರೆ ರೈಲು ಸಂಚಾರ ಬಂದ್ ಮಾಡಿಲ್ಲ. ಹೀಗಾಗಿ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನೂರಾರು ಜನರಿದ್ದಾರೆ. ಈ ಬಾರಿಯ ಲಾಕ್ಡೌನ್ನಲ್ಲಿ ರೈಲು ಮತ್ತು ಏರ್ಪೋರ್ಟ್ ಬಂದ್ ಮಾಡಿಲ್ಲ. ಹೀಗಾಗಿ ಅನೇಕರು ರೈಲು ಮತ್ತು ವಿಮಾನಗಳ ಮೂಲಕ ಪ್ರಯಾಣ ಮಾಡುತ್ತಿದ್ದಾರೆ. ಸಂಗೊಳ್ಳಿ ರೈಲ್ವೆ ನಿಲ್ದಾಣದಲ್ಲಿ ಸುಮಾರು 500ಕ್ಕೂ ಹೆಚ್ಚು ಜನರು ಇದ್ದಾರೆ. …
Read More »ಲಾಕ್ಡೌನ್ ಎಫೆಕ್ಟ್ – 2 ದಿನದಲ್ಲಿ 410 ಕೋಟಿ ಮೌಲ್ಯದ ಎಣ್ಣೆ ಸೇಲ್………….
ಬೆಂಗಳೂರು: ನಾಳೆಯಿಂದ ಬೆಂಗಳೂರು ಸೇರಿದಂತೆ ಏಳು ಜಿಲ್ಲೆಗಳು ಲಾಕ್ಡೌನ್ ಆಗಲಿವೆ. ಲಾಕ್ಡೌನ್ ಅವಧಿ ಡ್ರೈ ಡೇ ಅಗೋದ ಬೇಡ ಅಂತ ಮದ್ಯಪ್ರಿಯರು ಎಣ್ಣೆ ಖರೀದಿಗೆ ಮುಗಿಬಿದ್ದಿದ್ದರು. ಎರಡು ದಿನಗಳಲ್ಲಿ ಅಬಕಾರಿ ಇಲಾಖೆ 410 ಕೋಟಿ ರೂ. ಮೌಲ್ಯದ ಮದ್ಯವನ್ನು ಮಾರಾಟ ಮಾಡಿ ಬೊಕ್ಕಸ ತುಂಬಿಕೊಂಡಿದೆ. ಸೋಮವಾರ ಒಂದೇ ದಿನ ಬರೋಬ್ಬರಿ 230 ಕೋಟಿ ಮೌಲ್ಯದ ಮದ್ಯವನ್ನು ಕೆಎಸ್ಬಿಎಲ್ (ಕರ್ನಾಟಕ ರಾಜ್ಯ ಪಾನೀಯ ನಿಗಮ ನಿಯಮಿತ) ಮಾರಿದೆ. ಸೋಮವಾರ 215 ಕೋಟಿ …
Read More »ಇಂದು ಸಂಜೆಯಿಂದ ಸ್ಥಬ್ದವಾಗಲಿದೆ ಬೆಂಗಳೂರು………
ಬೆಂಗಳೂರು,ಜು.14- ಬೆಂಗಳೂರು ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಇಂದು ರಾತ್ರಿಯಿಂದ ಒಂದು ವಾರ ಕಾಲ ಜÁರಿಗೆ ಬರಲಿರುವ ಲಾಕ್ಡೌನ್ ಸಂದರ್ಭದಲ್ಲಿ ಬಹುತೇಕ ಎಲ್ಲ ಸೇವೆಗಳು ಬಂದ್ ಆಗಲಿವೆ. ಕೊರೊನಾ ಸೋಂಕು ತಡೆಯುವ ಸಲುವಾಗಿ ಸರ್ಕಾರ ಇಂದು ರಾತ್ರಿ 8ರಿಂದ ಜುಲೈ 22ರ ಬೆಳಗಿನ ಜಾವ 5 ಗಂಟೆವರೆಗೂ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಲಾಕ್ಡೌನ್ ಮಾಡಲು ಸರ್ಕಾರ ಈಗಾಗಲೇ ಘೋಷಣೆ ಮಾಡಿದೆ. ಹೀಗಾಗಿ ಇಂದು ಮಧ್ಯಾಹ್ನ 12ರಿಂದಲೇ ದಿನಸಿ …
Read More »ಅರವಿಂದ ಶ್ರೀವಾಸ್ತವ್ ವಾಣಿಜ್ಯ ವಿಭಾಗದಲ್ಲಿ 598 ಅಂಕ ಪಡೆಯುವ ಮೂಲಕ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ.
ಬೆಂಗಳೂರು: ಮಲ್ಲೇಶ್ವರದ ವಿದ್ಯಾಮಂದಿರ ಪಿಯು ಕಾಲೇಜಿನ ಅರವಿಂದ ಶ್ರೀವಾಸ್ತವ್ ವಾಣಿಜ್ಯ ವಿಭಾಗದಲ್ಲಿ 598 ಅಂಕ ಪಡೆಯುವ ಮೂಲಕ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ. ಈ ವರ್ಷ ವಾಣಿಜ್ಯ ವಿಭಾಗದ ಪರೀಕ್ಷೆಯನ್ನು ಒಟ್ಟು 2,60,131 ಮಂದಿ ತೆಗೆದುಕೊಂಡಿದ್ದು, 1,70,426 ಮಂದಿ ತೇರ್ಗಡೆಯಾಗುವ ಮೂಲಕ ಶೇ.65.52 ಫಲಿತಾಂಶ ಬಂದಿದೆ. ಮೂರು ವಿಭಾಗದದಲ್ಲಿ ಹೊಸಬರು ಒಟ್ಟು 5,56,267 ಮಂದಿ ಪರೀಕ್ಷೆ ಬರೆದಿದ್ದು, 3,84,947 ಮಂದಿ ತೇರ್ಗಡೆಯಾಗಿದ್ದಾರೆ. ಶೇ.69.20 ಫಲಿತಾಂಶ ಬಂದಿದೆ. ಟಾಪರ್ ಪಟ್ಟಿ 1. …
Read More »ಉಡುಪಿಯ ಅಭಿಜ್ಞಾ ರಾವ್ ಮತ್ತು ಬೆಂಗಳೂರಿನ ಪ್ರೇರಣಾ 600ಕ್ಕೆ 596 ಅಂಕ ಪಡೆಯುವ ಮೂಲಕ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಟಾಪರ್
ಬೆಂಗಳೂರು: ಉಡುಪಿಯ ಅಭಿಜ್ಞಾ ರಾವ್ ಮತ್ತು ಬೆಂಗಳೂರಿನ ಪ್ರೇರಣಾ 600ಕ್ಕೆ 596 ಅಂಕ ಪಡೆಯುವ ಮೂಲಕ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ. ಈ ವರ್ಷ ವಿಜ್ಞಾನ ವಿಭಾಗದ ಪರೀಕ್ಷೆಗೆ 2,16,271 ಮಂದಿ ಹಾಜರಾಗಿದ್ದು, 1,64,794 ಮಂದಿ ಪಾಸ್ ಆಗುವ ಮೂಲಕ ಶೇ.76.2 ಫಲಿತಾಂಶ ದಾಖಲಾಗಿದೆ. ಮೂರು ವಿಭಾಗದದಲ್ಲಿ ಹೊಸಬರು ಒಟ್ಟು 5,56,267 ಮಂದಿ ಪರೀಕ್ಷೆ ಬರೆದಿದ್ದು, 3,84,947 ಮಂದಿ ತೇರ್ಗಡೆಯಾಗಿದ್ದಾರೆ. ಶೇ.69.20 ಫಲಿತಾಂಶ …
Read More »ಯುವತಿಯ ಜೊತೆ ವಾಟ್ಸಪ್ನಲ್ಲಿ ನಗ್ನ ವಿಡಿಯೋ ಕಾಲ್……………..
ಬೆಂಗಳೂರು: ಯುವತಿಯ ಜೊತೆ ವಾಟ್ಸಪ್ನಲ್ಲಿ ನಗ್ನ ವಿಡಿಯೋ ಕಾಲ್ ಮಾಡಿ ಯುವಕನೊಬ್ಬ ಪೇಚಿಗೆ ಸಿಕ್ಕಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ದೊಡ್ಡನೆಕ್ಕುಂದಿ ನಿವಾಸಿ 26 ವರ್ಷದ ಯುವಕ ಅಪರಿಚಿತ ಯುವತಿಯಿಂದ ಮೋಸ ಹೋಗಿದ್ದಾನೆ. ಯುವಕ 22 ಸಾವಿರ ಹಣ ಕಳೆದುಕೊಂಡಿದ್ದಲ್ಲದೇ ಆತನಿಗೆ ಎಟಿಎಂ ಕಾರ್ಡ್ ಫೋಟೋ ಕೂಡ ಕಳುಹಿಸಿದ್ದಾನೆ. ಇದೀಗ ಯುವಕ ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾನೆ. ಮೋಸ ಹೋದ ಯುವಕ ಸೋಶಿಯಲ್ ಮೀಡಿಯಾದ ಮೂಲಕ ಹುಡುಗಿಯನ್ನು ಪರಿಚಯ ಮಾಡಿಕೊಂಡಿದ್ದನು. …
Read More »ಪಿಯು ಫಲಿತಾಂಶ, ಎಂದಿನಂತೆ ಬಾಲಕಿಯರೇ ಮೇಲುಗೈ – ಉಡುಪಿ, ದಕ್ಷಿಣ ಕನ್ನಡ ಫಸ್ಟ್
ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಒಟ್ಟು ಶೇ.69.20 ಫಲಿತಾಂಶ ದಾಖಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಜಿಗಿತ ಕಂಡಿದೆ. ಕಳೆದ ವರ್ಷ ಶೇ.68.68 ಫಲಿತಾಂಶ ಬಂದಿತ್ತು. 5,56,267 ಹೊಸದಾಗಿ ಬರೆದ ವಿದ್ಯಾರ್ಥಿಗಳ ಪೈಕಿ 3,84,947 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಮೊದಲ ಸ್ಥಾನ ಸಿಕ್ಕಿದೆ. ಕೊಡಗು, ಉತ್ತರ ಕನ್ನಡ ಜಿಲ್ಲೆಗಳು ಕ್ರಮವಾಗಿ ಎರಡು, ಮೂರನೇ …
Read More »