Breaking News

ಬೆಂಗಳೂರು

ನಟಿ ರಚಿತಾ ರಾಮ್ ನೋಡಲು ಆಟೋ ಚಾಲಕರೊಬ್ಬರು ಅವರ ಮನೆಯ ಬಳಿಯೇ ಕಾದು ಕುಳಿತ್ತಿದ್ದರು

ಬೆಂಗಳೂರು: ಅಭಿಮಾನಿಗಳು ತಮ್ಮ ನೆಚ್ಚಿನ ನಟ-ನಟಿಯರನ್ನು ನೋಡಲು, ಅವರನ್ನು ಭೇಟಿ ಮಾಡಲು ಕಾತುರದಿಂದ ಕಾಯುತ್ತಿರುತ್ತಾರೆ. ಅದೇ ರೀತಿ ನಟಿ ರಚಿತಾ ರಾಮ್ ನೋಡಲು ಆಟೋ ಚಾಲಕರೊಬ್ಬರು ಅವರ ಮನೆಯ ಬಳಿಯೇ ಕಾದು ಕುಳಿತ್ತಿದ್ದರು. ಅವರ ಅಭಿಮಾನಕ್ಕೆ ಡಿಂಪಲ್ ಕ್ವೀನ್ ರಚಿತಾ ಭಾವುಕರಾಗಿದ್ದಾರೆ. ನಟಿ ರಚಿತಾ ರಾಮ್ ಆಟೋ ಡ್ರೈವರ್ ಅಭಿಮಾನವನ್ನು ಕಂಡು ಭಾವುಕರಾದ ಕ್ಷಣವನ್ನು ಸೋಶಿಯಲ್ ಮೀಡಿಯಾದಲ್ಲಿ ಸುದೀರ್ಘ ಪೋಸ್ಟ್ ಮಾಡುವ ಮೂಲಕ ಹೇಳಿಕೊಂಡಿದ್ದಾರೆ. ಪೋಸ್ಟ್‌ನಲ್ಲಿ ಏನಿದೆ? “ಅಭಿಮಾನಿಗಳೇ ದೇವ್ರು” …

Read More »

ಕೊರೊನಾ ಬರುತ್ತೆ ಕೆಲಸಕ್ಕೆ ಹೋಗ್ಬೇಡ ಅಂದಿದ್ದಕ್ಕೆ ಆಶಾ ಕಾರ್ಯಕರ್ತೆ ಆತ್ಮಹತ್ಯೆ………..

ಬೆಂಗಳೂರು: ಕೊರೊನಾ ಬರುತ್ತೆ ಕೆಲಸಕ್ಕೆ ಹೋಗಬೇಡ ಎಂದು ಅಣ್ಣ ಬೈದಿದ್ದಕ್ಕೆ ಆಶಾ ಕಾರ್ಯಕರ್ತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸವಿತಾ(27) ನೇಣಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಪಾವಗಡ ಮೂಲದ ಸವಿತಾ ನಗರದಲ್ಲಿ ಆಶಾ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದರು. ಯಲಹಂಕದ ಮಾರುತಿ ನಗರದ ಅಣ್ಣನ ಮನೆಯಲ್ಲಿ ವಾಸವಾಗಿದ್ದರು. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗಂಡನಿಂದ ದೂರವಾಗಿ, ಅಣ್ಣನ ಮನೆಯಲ್ಲೇ ವಾಸಿಸುತ್ತಿದ್ದರು. ಅಣ್ಣನ ಮನೆಯಿಂದಲೇ ಕೆಲಸಕ್ಕೆ ಹೋಗುತ್ತಿದ್ದರು ಎನ್ನಲಾಗಿದೆ. ಕೊರೊನಾ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ …

Read More »

ಜುಲೈ ಮೂರನೇ ವಾರದಲ್ಲಿ ಪಿಯುಸಿ ಫಲಿತಾಂಶ ನಂತರ ಆಗಸ್ಟ್ ಮೊದಲ ವಾರದಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶವನ್ನು ಬಿಡುಗಡೆ

ಬೆಂಗಳೂರು: ಜುಲೈ ಮೂರನೇ ವಾರದಲ್ಲಿ ಪಿಯುಸಿ ಫಲಿತಾಂಶ ನಂತರ ಆಗಸ್ಟ್ ಮೊದಲ ವಾರದಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶವನ್ನು ಬಿಡುಗಡೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮಾಹಿತಿ ನೀಡಿದ್ದಾರೆ. ಇಂದು ಆನೇಕಲ್ ತಾಲೂಕಿನ ಅತ್ತಿಬೆಲೆ, ಚಂದಾಪುರ, ಸರ್ಜಾಪುರ, ದೊಮ್ಮಸಂದ್ರ ಸೇರಿ ಹಲವು ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿಕೊಟ್ಟ ಸಚಿವರು, ಪರೀಕ್ಷಾ ಕೇಂದ್ರದ ಮುನ್ನೆಚ್ಚರಿಕಾ ಕ್ರಮಗಳನ್ನು ಪರಿಶೀಲಿಸಿದರು. ಜೊತೆಗೆ ಕರ್ತವ್ಯದಲ್ಲಿ ಹಾಜರಿದ್ದ ಸ್ಕೌಟ್ಸ್ ವಿದ್ಯಾರ್ಥಿಗಳ ಜೊತೆ ಸಮಾಲೋಚನೆ ನಡೆಸಿದ್ದಾರೆ. ಇದೇ …

Read More »

ಬೆಂಗಳೂರಿನಲ್ಲಿ ಆಸ್ಪತ್ರೆಗಳ ನಿರ್ಲಕ್ಷ್ಯ : ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೇ ವ್ಯಕ್ತಿ ಸಾವು

ಕಾಮಾಕ್ಷಿಪಾಳ್ಯದ 50 ವರ್ಷದ ವ್ಯಕ್ತಿಯೊಬ್ಬರು ತಮ್ಮ ಮನೆಯ ಸಮೀಪದ ಪಾರ್ಕ್ ಗೆ ವಾಕಿಂಗ್ ಗೆ ತೆರಳಿದ್ದರು. ಈ ವೇೆಳೆ, ಏಕಾಏಕಿ ಹೃದಯಾಘಾತವಾಗಿದ್ದು, ಪಾರ್ಕ್ ನಲ್ಲೇ ಕುಸಿದುಬಿದ್ದಿದ್ದರು. ಕೂಡಲೇ ಸ್ಥಳೀಯರು ಅವರನ್ನು ಕಾಡಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಆಸ್ಪತ್ರೆಯಲ್ಲಿ ದಾಖಲಿಸಿಕೊಂಡಿರಲಿಲ್ಲ. ಮತ್ತೊಂದು ಆಸ್ಪತ್ರೆಗೆ ಕರೆದೊಯ್ದರೂ ಅಲ್ಲೂ ದಾಖಲಿಸಿಕೊಂಡಿರಲಿಲ್ಲ. ಹೃದಯಾಘಾತವಾಗಿದ್ದ ಈ ವ್ಯಕ್ತಿಗೆ ಸರಿಯಾಗಿ ಚಿಕಿತ್ಸೆ ಸಿಗದ ಕಾರಣ ಅವರು ಸಾವನ್ನಪ್ಪಿದರು. ಈಗ ಯಾವ ಆಸ್ಪತ್ರೆಯಲ್ಲೂ ಡೆತ್ ಸರ್ಟಿಫಿಕೇಟ್ ಕೂಡ ನೀಡುತ್ತಿಲ್ಲ. ಹೀಗಾಗಿ …

Read More »

ಮೆಟ್ರೋ ಸಂಚಾರ ಆರಂಭವಾಗೋದು ಡೌಟ್‌! ಕಾಮಗಾರಿ ವಿಳಂಬ:

ಬೆಂಗಳೂರು(ಜು.03): 2020-21ನೇ ಸಾಲಿನಲ್ಲಿ ಸುಮಾರು 445 ಕೋಟಿ ಆದಾಯ ಗುರಿ ಹೊಂದಿದ್ದ ನಮ್ಮ ಮೆಟ್ರೋ ನಿಗಮ ಕೊರೋನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಮಾ.22ರಿಂದ ಮೆಟ್ರೋ ರೈಲು ಸಂಚಾರ ರದ್ದುಪಡಿಸಿದ್ದರಿಂದ ಅಂದಾಜು 110 ಕೋಟಿಗಿಂತ ಅಧಿಕ ನಷ್ಟಕ್ಕೊಳಗಾಗಿದೆ. ಕಳೆದ ಆರ್ಥಿಕ ವರ್ಷದಲ್ಲಿ ಬಿಎಂಆರ್‌ಸಿಎಲ್‌ 430 ಕೋಟಿ ಆದಾಯ ಗಳಿಸಿತ್ತು. ಇದರಿಂದ ಸಹಜವಾಗಿಯೇ 2020-21ನೇ ಸಾಲಿನಲ್ಲಿ ಮೆಟ್ರೋ ನಿಗಮ ಸುಮಾರು 445 ಕೋಟಿ ಆದಾಯದ ಗುರಿಯನ್ನು ಹೊಂದಲಾಗಿತ್ತು.ಯಲಚೇನಹಳ್ಳಿ- ನಾಗಸಂದ್ರ(ಹಸಿರು ಮಾರ್ಗ) ಮತ್ತು ಬೈಯ್ಯಪ್ಪನಹಳ್ಳಿ- ಮೈಸೂರು …

Read More »

ನಗರದಲ್ಲಿ ದಿನೇ ದಿನೇ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ 10 ಸಾವಿರ ಹಾಸಿಗೆಗಳನ್ನು ಮೀಸಲಿಡಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಬೆಂಗಳೂರು(ಜು.03): ನಗರದಲ್ಲಿ ದಿನೇ ದಿನೇ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ 10 ಸಾವಿರ ಹಾಸಿಗೆಗಳನ್ನು ಮೀಸಲಿಡಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ನಗರದಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸೋಂಕು ಲಕ್ಷಣಗಳಿದಿದ್ದರೂ ಪಾಸಿಟಿವ್‌ ವರದಿಗಳು ಬರುತ್ತಿವೆ. ಬೆಂಗಳೂರಲ್ಲಿ ಪ್ರತಿನಿತ್ಯ ಸೋಂಕಿನ ಪ್ರಕರಣಗಳು ಅಧಿಕಗೊಳ್ಳುತ್ತಿವೆ. ಇದರಿಂದ ಹಾಸಿಗೆ ಲಭ್ಯವಾಗುತ್ತಿಲ್ಲ ಎಂದು ಜನರು ಭೀತಿಗೊಳಗಾಗಿದ್ದಾರೆ. ಆದರೆ, ಜನರು ಯಾವುದೇ ರೀತಿಯಲ್ಲಿಯೂ ಭಯಗೊಳ್ಳಬೇಕಾದ ಅಗತ್ಯ ಇಲ್ಲ. ಸರ್ಕಾರ ಎಲ್ಲಾ ರೀತಿಯ …

Read More »

ಸತೀಶ ಜಾರಕಿಹೊಳಿ ಅವರು ಕರ್ನಾಟಕದ ಶ್ರೇಷ್ಠ ನಾಯಕರಲ್ಲಿ ಒಬ್ಬರು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ ಹಾಡಿಹೊಗಳಿದ್ದಾರೆ.

ಬೆಂಗಳೂರು: ಸತೀಶ ಜಾರಕಿಹೊಳಿ ಅವರು ಕರ್ನಾಟಕದ ಶ್ರೇಷ್ಠ ನಾಯಕರಲ್ಲಿ ಒಬ್ಬರು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ ಹಾಡಿಹೊಗಳಿದ್ದಾರೆ. ಗುರುವಾರ ನಗರದಲ್ಲಿ ನಡೆದ ಕೆಪಿಸಿಸಿ ಪ್ರತಿಜ್ಞಾ ದಿನ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಅವರು, ವಿಶೇಷವಾಗಿ ಮುಂಬೈ ಕರ್ನಾಟಕದ ಪ್ರಭಾವಿ ನಾಯಕರಾಗಿರುವ ಸತೀಶ ಜಾರಕಿಹೊಳಿ ಅವರು ರಾಜ್ಯಾದ್ಯಂತ ಸಂಚರಿಸಬೇಕು ಎಂದು ವೇದಿಕೆ ಮೇಲಿಂದಲೇ ಮನವಿ ಮಾಡಿದ ಅವರು ರಾಜ್ಯದ ಮೂಲೆ ಮೂಲೆಯಲ್ಲೂ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಬೇಕು ಎಂದರು. ಉತ್ತಮ ಅವಕಾಶ ಸಿಕ್ಕಿದೆ. …

Read More »

ವ್ಯಕ್ತಿ ಪೂಜೆ ಬೇಡ . ಪಕ್ಷ ಪೂಜೆ ಮಾಡೋಣ:ಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌

ಬೆಂಗಳೂರು: ವ್ಯಕ್ತಿ ಪೂಜೆಯೂ ಬೇಡ . ಪಕ್ಷ ಪೂಜೆ ಮಾಡೋಣ. ಈ ಮೂಲಕ ಪಕ್ಷವನ್ನು ಕಟ್ಟೋಣ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಪ್ರತಿಜ್ಞಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನಗೆ ಹಿಂಬಾಲಕರು ಬೇಡ. ನನಗೆ ಯಾವುದೇ ಗುಂಪು ಜಾತಿ, ಧರ್ಮದಲ್ಲಿ ನಂಬಿಕೆ ಇಲ್ಲ. ನಮ್ಮದು ಕಾಂಗ್ರೆಸ್ ಗುಂಪು, ಕಾಂಗ್ರೆಸ್ ಧರ್ಮ, ಕಾಂಗ್ರೆಸ್ ಜಾತಿ ಎಂದು ತಿಳಿಸಿದರು. ಕೇರಳ ಮಾದರಿಯಲ್ಲಿ ಎಲ್ಲಾ ನಾಯಕರು ಮೊದಲು …

Read More »

ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳಿಗೆ ಯಾವ ದಿನ, ಏನು ಆಹಾರ?

ಬೆಂಗಳೂರು: ಕೊರೊನಾ ಸೋಂಕಿತ ರೋಗಿಗಳಿಗೆ ಯಾವ ದಿನ, ಯಾವ ಆಹಾರ ನೀಡಬೇಕು ಎಂಬುದರ ಕುರಿತು ಸರ್ಕಾರ ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಎಲ್ಲ ಜಿಲ್ಲೆಯ ಕೊರೊನಾ ಆಸ್ಪತ್ರೆಗಳಲ್ಲಿ ಮೆನು ಪ್ರಕಾರ ಆಹಾರ ನೀಡುವಂತೆ ಸೂಚಿಸಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಉತ್ತಮ ಗುಣಮಟ್ಟದ ಹಾಗೂ ಪೌಷ್ಠಿಕಾಂಶಯುಕ್ತ ಆಹಾರ ನೀಡಲಾಗುತ್ತಿಲ್ಲ. ಸೂಕ್ತ ಆಹಾರವಿಲ್ಲದೆ ಕೊರೊನಾ ರೋಗಿಗಳು ನರಳುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆ ಸರ್ಕಾರ ತಜ್ಞರ ಜೊತೆ ಚರ್ಚಿಸಿ ಪ್ರತಿ …

Read More »

ಮೂವರು ಆರೋಪಿಗಳಿಗೆ ಸೋಂಕು- ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ಸೀಲ್‍ಡೌನ್

ಬೆಂಗಳೂರು: ಮೂವರು ಕೊಲೆ ಆರೋಪಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ಸಿಲಿಕಾನ್ ಸಿಟಿಯ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ಸೀಲ್‍ಡೌನ್ ಮಾಡಲು ರೆಡಿಯಾಗಿದೆ. ಈ ಮೂಲಕ ಬೆಂಗಳೂರು ಪಶ್ಚಿಮ ವಿಭಾಗದಲ್ಲಿ ಮತ್ತೊಂದು ಸ್ಟೇಷನ್ ಸೀಲ್‍ಡೌನ್‍ಗೆ ಸಿದ್ಧತೆ ನಡೆದಿದೆ. ಪಶ್ಚಿಮ ವಿಭಾಗದ ಪೊಲೀಸರಿಗೆ ಕೊರೊನಾ ಕಂಟಕವಾಗಿದೆ. ಡಿಸಿಪಿ ಕಚೇರಿ, ಎಸಿಪಿ ಕಚೇರಿ, ಉಪ್ಪಾರಪೇಟೆ, ಮಾರ್ಕೆಟ್, ಕಲಾಸಿಪಾಳ್ಯ, ಚಾಮರಾಜಪೇಟೆ, ಜೆಜೆ ಆರ್ ನಗರ, ಕಾಮಾಕ್ಷಿಪಾಳ್ಯ, ಕೆಪಿ ಅಗ್ರಹಾರ, ಕೆಂಗೇರಿ ಪೊಲೀಸ್ ಠಾಣೆಗಳು ಸೀಲ್ …

Read More »