Breaking News

ಬೆಂಗಳೂರು

ಕೊರೊನಾ ಸೋಂಕಿತರಿಗೆ ಇತರೆ ಕಾಯಿಲೆಗಳು ಕೂಡ ಇವೆ. ಕಿಡ್ನಿ ಸಮಸ್ಯೆ, ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆ, ಮಧುಮೇಹ.

ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕಿತರ ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ ಸಾಗಿದೆ. ಈ ಬಗ್ಗೆ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು ರಾಜ್ಯ ಆರೋಗ್ಯ ಇಲಾಖೆಗೆ ವರದಿಯನ್ನ ಸಲ್ಲಿಸಿದ್ದಾರೆ. ಖಾಸಗಿ ಆಸ್ಪತ್ರೆಗಳಿಂದ ಸೋಂಕಿತರು ಹೆಚ್ಚಾಗಿ ಬರುತ್ತಿದ್ದಾರೆ. ಕೊರೊನಾ ಸೋಂಕಿತರಿಗೆ ಇತರೆ ಕಾಯಿಲೆಗಳು ಕೂಡ ಇವೆ. ಕಿಡ್ನಿ ಸಮಸ್ಯೆ, ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆ, ಮಧುಮೇಹ ಸೇರಿದಂತೆ ಹಲವು ರೋಗಗಳಿಂದ ಬಳಲುತ್ತಿರುತ್ತಾರೆ. ಅವರು ಕೊನೇ ಕ್ಷಣದಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ಬರುತ್ತಿದ್ದಾರೆ. ಅವರಿಗೆ ವೆಂಟಿಲೇಟರ್‌ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. …

Read More »

20 ದಿನದಲ್ಲಿ 2ನೇ ಬಾರಿಗೆಮತ್ತೆ ಅತೃಪ್ತರ ಗುಂಪು ಕಟ್ಟಿದ ಯತ್ನಾಳ್…..

ಬೆಂಗಳೂರು: ಬಿಜೆಪಿಯಲ್ಲಿ 20 ದಿನದಲ್ಲಿ 2ನೇ ಬಾರಿಗೆ ಭಿನ್ನಮತ ಸ್ಫೋಟವಾಗಿದ್ದು, ಮತ್ತೆ ಬಸನಗೌಡ ಪಾಟೀಲ್ ಯತ್ನಾಳ್ ಅತೃಪ್ತರ ಗುಂಪು ಕಟ್ಟಿದ್ದಾರೆ. ಈ ಮೂಲಕ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ಭಿನ್ನಮತದ ಆತಂಕ ಶುರುವಾಗಿದೆ. ರಾಜ್ಯಸಭೆ ಚುನಾವಣೆ ಮೊದಲು ಕತ್ತಿ, ನಿರಾಣಿ ಜೊತೆಗೂಡಿ ಸಿಎಂ ಯಡಿಯೂರಪ್ಪ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಭಿನ್ನಮತದ ಕಹಳೆ ಊದಿದ್ದರು. ಈ ಬೆನ್ನಲ್ಲೇ ಫೀಲ್ಡಿಗೆ ಇಳಿದಿದ್ದ ಯಡಿಯೂರಪ್ಪ, ಕತ್ತಿ, ನಿರಾಣಿ ಕರೆಯಿಸಿ ಬಂಡಾಯ ತಣ್ಣಗೆ ಮಾಡಿದ್ದರು. …

Read More »

ಮಹಾಮಾರಿ ಕೊರೊನಾ ವೈರಸ್‍ಗೆ ಹೆಚ್ಚಾಗಿ ವೃದ್ಧರೇ ಬಲಿಯಾಗುತ್ತಿದ್ದು,…..

 ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್‍ಗೆ ಹೆಚ್ಚಾಗಿ ವೃದ್ಧರೇ ಬಲಿಯಾಗುತ್ತಿದ್ದು, ಇದರ ಹಿಂದಿನ ಅಸಲಿಯತ್ತು ಇದೀಗ ಬಯಲಾಗಿದೆ. ವಯಸ್ಸಾಗಿದೆ ಅಂತ ವೃದ್ಧರನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ. ಐಸೂಲೇಷನ್ ವಾರ್ಡಿನಲ್ಲಿ ವೃದ್ಧರಿಗೆ ಸರಿಯಾದ ಚಿಕಿತ್ಸೆ ನೀಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕೊರೊನಾಗೆ ಹೆಚ್ಚಾಗಿ ವೃದ್ಧರೇ ಬಲಿಯಾಗಿತ್ತಿದ್ದಾರೆ ಎಂಬ ಎಕ್ಸ್ ಕ್ಲೂಸೀವ್ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಸಾಯುವುದಕ್ಕೂ ಮುನ್ನ ಕುಟುಂಬಸ್ಥರ ಜೊತೆ ಚಿಕ್ಕಬಾಣಾವರದ ವೃದ್ಧೆಯೊಬ್ಬರು ತನ್ನ ಅಳಲು ತೋಡಿಕೊಂಡಿದ್ದಾರೆ. ಕುಟುಂಬದ ಮಗಳು, ಮೊಕ್ಕಳಿಗೆ …

Read More »

ಹೆಚ್. ವಿಶ್ವನಾಥ್ ಗೆ ಬುದ್ಧಿ ಇಲ್ಲ ಎಂದ ಸಿದ್ದರಾಮಯ್ಯ…………..

ಬೆಂಗಳೂರು (ಜೂ. 18): ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪಕ್ಷಗಳ ವಿಧಾನ ಪರಿಷತ್​ ಚುನಾವಣಾ ಅಭ್ಯರ್ಥಿಗಳ ಪಟ್ಟಿ ಈಗಾಗಲೇ ಅಂತಿಮವಾಗಿದೆ. ಬಿಜೆಪಿಯಿಂದ ಎಂಎಲ್​ಸಿ ಟಿಕೆಟ್ ಪಡೆಯುವಲ್ಲಿ ಹೆಚ್. ವಿಶ್ವನಾಥ್ ಸೋತಿದ್ದಾರೆ. ತಮಗೆ ವಿಧಾನ ಪರಿಷತ್ ಟಿಕೆಟ್ ತಪ್ಪಲು ಸಿದ್ದರಾಮಯ್ಯ ಕಾರಣ ಎಂದು ಅವರು ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ‘ವಿಶ್ವನಾಥ್ ಪ್ರಕಾರ ಬಿಜೆಪಿಗೂ ನಾನೇ ಹೈಕಮಾಂಡಾ?’ ಎಂದು ವ್ಯಂಗ್ಯವಾಡಿದ್ದಾರೆ. ಇಂದು ನಡೆದ ಶಾಸಕಾಂಗ ಪಕ್ಷದ ಸಭೆಯ ಬಳಿಕ ಮಾತನಾಡಿರುವ …

Read More »

ಪರಿಷತ್ ಚುನಾವಣೆ ನಾಮಪತ್ರ ಸಲ್ಲಿಸಿದ , ಅಭ್ಯರ್ಥಿಗಳು………

ಬೆಂಗಳೂರು: ವಿಧಾನ ಪರಿಷತ್​ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳಾದ ಪ್ರತಾಪಸಿಂಹ ನಾಯಕ್, ಸುನಿಲ್ ವಲ್ಯಾಪುರೆ, ಎಂಟಿಬಿ ನಾಗರಾಜ್ ಮತ್ತು ಆರ್. ಶಂಕರ್​​ ಹಾಗೂ ಕಾಂಗ್ರೆಸ್​​ ಅಭ್ಯರ್ಥಿಗಳಾದ ಬಿ.ಕೆ ಹರಿಪ್ರಸಾದ್​ ಮತ್ತು ನಸೀರ್ ಅಹ್ಮದ್ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ನಾಲ್ವರು ಅಭ್ಯರ್ಥಿಗಳಿಗೆ ಬಿ-ಫಾರಂ ವಿತರಿಸಿದರು. ಬಳಿಕ ವಿಧಾನಸೌಧದಲ್ಲಿ ಚುನಾವಣಾಧಿಕಾರಿ ಎಂ.ಕೆ ವಿಶಾಲಾಕ್ಷಿ ಅವರಿಗೆ ನಾಲ್ವರೂ ನಾಮಪತ್ರ …

Read More »

ಸಿ ಎಂ ಇಂದ ಮಾಸ್ಕ್ ದಿನ ಆಚರಣೆ…

; ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸಲು ರಾಜ್ಯ ಸರ್ಕಾರದ ವತಿಯಿಂದ ಇಂದು ಮಾಸ್ಕ್ ಡೇ ಆಚರಣೆ ಮಾಡಲಾಗುತ್ತಿದೆ. ಮಾಸ್ಕ್ ಡೇ ಜಾಗೃತಿ ಜಾಥಾದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ ಬಿಎಸ್​ ಯಡಿಯೂರಪ್ಪ, ಕೋವಿಡ್ ತಡೆಯಲು ಮಾಸ್ಕ್ ಡೇ ಆಚರಣೆ ಮಾಡಲಾಗುತ್ತಿದೆ. ಜನರಲ್ಲಿ ಜಾಗೃತಿ ಮೂಡಿಸಲು ಪಾದಯಾತ್ರೆ ಮಾಡಬೇಕು. ಇದನ್ನು ಪ್ರತಿ ಜಿಲ್ಲೆ, ತಾಲ್ಲೂಕಿನ ಕೇಂದ್ರಗಳಲ್ಲೂ ಆಚರಣೆ ಮಾಡುವ ಅಗತ್ಯವಿದೆ ಎಂದು ಹೇಳಿದರು. ಕೊರೋನಾ …

Read More »

Complete unlock – ರಾಜ್ಯದಲ್ಲಿ ಚಿತ್ರಮಂದಿರ, ಜಿಮ್, ಮೆಟ್ರೋ, ಈಜು ಇತ್ಯಾದಿ ಕ್ಷೇತ್ರಗಳಿಗೂ ಸಡಿಲಿಕೆ ಸಾಧ್ಯತೆ

ಬೆಂಗಳೂರು(ಜೂನ್ 17): ಸಿನಿಮಾ ಥಿಯೇಟರ್, ಪಬ್, ರೆಸ್ಟೋರೆಂಟ್, ಮೆಟ್ರೋ ಸಂಚಾರ, ವಿದೇಶಿ ರಫ್ತು, ಸ್ವಿಮ್ಮಿಂಗ್ ಫುಲ್ ಹಾಗೂ ಜಿಮ್…. ಹೀಗೆ  ಕೊರೋನಾ ಲಾಕ್ ಡೌನ್​ನಿಂದ ಅನ್ ಲಾಕ್​ಗೆ ಎದುರು ನೋಡ್ತಿರುವ ಈ ಕ್ಷೇತ್ರಗಳಿಗೆ ವಿನಾಯಿತಿ ಸಿಗಬಹುದು ಎಂಬ ನಿರೀಕ್ಷೆ ಈ ಬಾರಿ ಹುಸಿಯಾಗುವ ಸಾಧ್ಯತೆ ಇಲ್ಲ. ಈ ಕ್ಷೇತ್ರಗಳಿಗೆ ವಿನಾಯಿತಿ ಕೊಡಲು ಪ್ರಧಾನಿ ನರೇಂದ್ರ ಮೋದಿ ಸುಳಿವು ನೀಡಿದ್ದಾರೆ ಎನ್ನಲಾಗಿದೆ.. ಇಂದು ವಿವಿಧ ರಾಜ್ಯಗಳ ಸಿಎಂ ಗಳ ಜೊತೆ ನಡೆದ …

Read More »

ಖಾಲಿ ಕಪ್‍ನಿಂದ ಏನೂ ಆಗಲ್ಲ, ಮೊದ್ಲು ನೀವ್ ಚೆನ್ನಾಗಿರಿ- ನಿತ್ಯಾ ಮೆನನ್

ಬೆಂಗಳೂರು: ಬಹುಭಾಷಾ ನಟಿ ನಿತ್ಯಾ ಮೆನನ್ ಲಾಕ್‍ಡೌನ್ ದಿನಗಳನ್ನು ಫೋಟೋ ಶೂಟ್ ಮೂಲಕ ಕಳೆಯುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಭಿನ್ನ ಫೋಟೋ ಪೋಸ್ಟ್ ಮಾಡುವ ಮೂಲಕ ಅಭಿಮಾನಿಗಳಿಗೆ ಅಪ್‍ಡೇಟ್ ನೀಡುತ್ತಿದ್ದಾರೆ. ಇದೀಗ ಅವರ ಇನ್‍ಸ್ಟಾಗ್ರಾಮ್ ಪೋಸ್ಟ್ ವೈರಲ್ ಆಗಿದೆ. ಬಹುಭಾಷಾ ನಟಿ ನಿತ್ಯಾ ಮೆನನ್ ಸ್ಯಾಂಡಲ್‍ವುಡ್‍ನಲ್ಲಿ ನಟಿಸಿದ್ದು ಕೆಲವೇ ಚಿತ್ರಗಳಾದರೂ ಕನ್ನಡವನ್ನು ಲೀಲಾಜಾಲವಾಗಿ ಮಾತನಾಡುತ್ತಾರೆ. ಕೇರಳ ಮೂಲದವರಾದರೂ ಕನ್ನಡದ ನಟಿಯರನ್ನೇ ನಾಚಿಸುವಂತೆ ಮಾತನಾಡುತ್ತಾರೆ, ಹಾಡು ಹೇಳುತ್ತಾರೆ. ಬೆಂಗಳೂರಿನಲ್ಲೇ ಹುಟ್ಟಿ ಬೆಳೆದಿರುವ ನಿತ್ಯಾ …

Read More »

ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ ಸಕಲ ಸಿದ್ಧತೆ …………..

ಬೆಂಗಳೂರು, ಜೂ.18- ಕೊರೊನಾ ಸೋಂಕಿನ ಆತಂಕದ ನಡುವೆ ನಾಳೆ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ನಡೆಸಲು ಪಿಯು ಮಂಡಳಿ ಸಜ್ಜಾಗಿದೆ. ಮಾರ್ಚ್‍ನಲ್ಲಿ ನಡೆಯಬೇಕಿದ್ದ ಇಂಗ್ಲಿಷ್ ಪರೀಕ್ಷೆಯನ್ನು ಕೋವಿಡ್-19 ನಿಂದಾಗಿ ಮುಂದೂಡಲ್ಪಟ್ಟಿತ್ತು. ಪರೀಕ್ಷೆ ನಡೆಸುವ ಬಗ್ಗೆ ಬೇಕು-ಬೇಡಗಳ ಚರ್ಚೆ ನಡೆಯುತ್ತಲೇ ಇದೆ. ಸುಮಾರು 5.95 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಸುಮಾರು 1116ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು , ವಿದ್ಯಾರ್ಥಿಗಳ ಸುರಕ್ಷತೆಗಾಗಿ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ಮಾಸ್ಕ್‍ಕಡ್ಡಾಯವಾಗಿದ್ದು , ಪರೀಕ್ಷಾ …

Read More »

ವಿಧಾನಪರಿಷತ್‍ ಚುನಾವಣೆ ,ನಾಮಪತ್ರ ಸಲ್ಲಿಕೆ ಭರಾಟೆ ,,,,,,,,,,,,

ಬೆಂಗಳೂರು, ಜೂ.- ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್‍ನ ಏಳು ಸದಸ್ಯ ಸ್ಥಾನಗಳಿಗೆ ಇದೇ 29ರಂದು ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು  ನಾಮಪತ್ರ ಸಲ್ಲಿಸಲಿದ್ದಾರೆ. ವಿರೋಧ ಪಕ್ಷಗಳಾದ ಕಾಂಗ್ರೆಸ್‍ನ ಇಬ್ಬರು, ಜೆಡಿಎಸ್‍ನ ಒಬ್ಬ ಹಾಗೂ ಆಡಳಿತಾರೂಢ ಬಿಜೆಪಿಯ ನಾಲ್ವರು ಅಭ್ಯರ್ಥಿಗಳು  ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ಮೂರು ಪಕ್ಷಗಳಲ್ಲಿ ಸ್ಪರ್ಧಿಸುವ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಇದುವರೆಗೂ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿಲ್ಲ. ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ …

Read More »