ಬೆಂಗಳೂರು,ಜೂ.4-ರಾಜ್ಯ ವಿಧಾನಸಬೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಈವರೆಗೂ ಯಾವುದೇ ನಾಮಪತ್ರಗಳು ಸಲ್ಲಿಕೆಯಾಗಿಲ್ಲ. ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಈಗಾಗಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದೆ. 10 ಜನ ಶಾಸಕರ ಸಹಿಯೊಂದಿಗೆ ಮೀಸಲಾತಿ ವ್ಯಾಪ್ತಿಯಡಿ ಬರುವ ಅಭ್ಯರ್ಥಿಗಳು 5 ಸಾವಿರ, ಸಾಮಾನ್ಯ ವರ್ಗದ ಅಭ್ಯರ್ಥಿಗಳು 10 ಸಾವಿರ ರೂ. ಠೇವಣಿಯೊಂದಿಗೆ ನಾಮಪತ್ರ ಸಲ್ಲಿಸಬಹುದು. ಆದರೆ ಈವರೆಗೂ ಯಾವ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿಲ್ಲ. ಪ್ರತಿಯೊಬ್ಬ ಅಭ್ಯರ್ಥಿಯೂ ನಾಲ್ಕು 4 ನಾಮಪತ್ರಗಳನ್ನು …
Read More »ಕನಿಷ್ಠ ಇನ್ನೆರಡು ತಿಂಗಳು ಶಾಲೆಗಳನ್ನು ಪ್ರಾರಂಭಿಸುವುದು ಸೂಕ್ತವಲ್ಲಸಿದ್ದರಾಮಯ್ಯ
ಬೆಂಗಳೂರು,ಜೂ.4- ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣ ಮೀರಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕನಿಷ್ಠ ಇನ್ನೆರಡು ತಿಂಗಳು ಶಾಲೆಗಳನ್ನು ಪ್ರಾರಂಭಿಸುವುದು ಸೂಕ್ತವಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ ಅವರು, ಶಾಲೆಗಳನ್ನು ಜುಲೈ ತಿಂಗಳಿನಲ್ಲಿ ಪುನರಾರಂಭಿಸುವ ಪ್ರಸ್ತಾಪವನ್ನು ಮುಂದಿಟ್ಟಿದೆ. ಇದರಿಂದ ಪೋಷಕರು ಆತಂಕಕ್ಕೀಡಾಗಿ ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಸರ್ಕಾರ ಗಮನಿಸಬೇಕು ಎಂದು ಹೇಳಿದ್ದಾರೆಬ್ರಿಟನ್, ಫ್ರಾನ್ಸ್, ಇಟಲಿ ಸೇರಿದಂತೆ ಬೇರೆ ಬೇರೆ ದೇಶಗಳಲ್ಲಿ ಶಾಲೆಗಳನ್ನು ಪುನರಾರಂಭಿಸಿದ ನಂತರ …
Read More »ಸದ್ಯಕ್ಕೆ ಶಾಲೆ ಆರಂಭಿಸುವುದಿಲ್ಲ, ಯಾರೂ ಆತಂಕ ಪಡುವ ಅಗತ್ಯವಿಲ್ಲ : ಸುರೇಶ್ ಕುಮಾರ್
ಬೆಂಗಳೂರು: ಸದ್ಯಕ್ಕೆ ನಾವು ಶಾಲೆ ಆರಂಭಿಸುವುದಿಲ್ಲ. ಪೋಷಕರು ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಫೇಸ್ಬುಕ್ನಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮೇ 30 ರಂದು ಶಾಲೆಗಳನ್ನು ಆರಂಭಿಸುವ ಬಗ್ಗೆ ಪೋಷಕರ ಅಭಿಪ್ರಾಯವನ್ನು ಕೇಳಿ ಎಂದು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿತ್ತು. ಈ ನಿಟ್ಟಿನಲ್ಲಿ ನಾವು ರಾಜ್ಯದಲ್ಲಿರುವ ಶಾಲೆಗಳಿಗೆ ಸುತ್ತೋಲೆ ಕಳುಹಿಸಿ ಪೋಷಕರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದೇವೆ ಎಂದು ತಿಳಿಸಿದರು ಇದೇ ಜೂನ್ …
Read More »ರೈತರ ಹಣ ಏರ್ಟೆಲ್ ಅಕೌಂಟ್ಗೆ..! ಸರ್ಕಾರದ ಮಹಾ ಎಡವಟ್ಟು
ಬೆಂಗಳೂರು,ಜೂ.4- ಕೃಷಿ ಇಲಾಖೆಯ ಎಡವಟ್ಟಿನಿಂದಾಗಿ ರೈತರ ಖಾತೆಗೆ ಹೋಗಬೇಕಾಗಿದ್ದ ಹಣ ಏರ್ಟೆಲ್ ಪೇಮೆಂಟ್ ಬ್ಯಾಂಕ್ಗೆ ವರ್ಗಾವಣೆಯಾಗಿರುವ ಪ್ರಸಂಗ ನಡೆದಿದೆ. ಪತ್ರಿಕಾಗೋಷ್ಠಿಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರೇ ಖುದ್ದು ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಜೊತೆಗೆ ಏರ್ಟೆಲ್ ಕಂಪನಿ ವಿರುದ್ಧ ಕಾನೂನು ಕ್ರಮ ಜರುಗಿಸುವ ಎಚ್ಚರಿಕೆಯನ್ನು ನೀಡಿದ್ದಾರೆ. ಆಧುನಿಕ ತಂತ್ರಜ್ಞನದಲ್ಲಿ ಸ್ವಲ್ಪ ಯಾಮಾರಿದರೂ ಏನೆಲ್ಲ ಎಡವಟ್ಟುಗಳಾಗುತ್ತವೆ ಎಂಬುದಕ್ಕೆ ಈ ಪ್ರಕರಣ ಸಾಕ್ಷಿಯಾಗಿದೆ. ಏರ್ಟೆಲ್ ಕಂಪನಿ ಸಿಮ್ ಮಾರಾಟ ಮಾಡಬೇಕಾದರೆ ಆಧಾರ್ ಸಂಖ್ಯೆ ಪಡೆದುಕೊಳ್ಳುತ್ತದೆ. …
Read More »ರಾಜ್ಯಸಭೆ, ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ನಾಳೆ ಜೆಡಿಎಸ್ ಶಾಸಕಾಂಗ ಸಭೆ
ಬೆಂಗಳೂರು, ಜೂ.4-ರಾಜ್ಯಸಭೆ, ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ನಾಳೆ ಮಹತ್ವದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಸಂಸದರು, ವಿಧಾನ ಸಭೆ ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ಆಹ್ವಾನ ನೀಡಲಾಗಿದೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ನಾಳೆ ಮಧ್ಯಾಹ್ನ ಸಭೆ ನಡೆಯಲಿದೆ. ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಸ್ಪರ್ಧಿಸುವುದು, ಅಭ್ಯರ್ಥಿ ಆಯ್ಕೆ ಬಗ್ಗೆಯೂ ಚರ್ಚೆ …
Read More »ದೇಶದಲ್ಲಿ ಒಂದೇ ದಿನ ಗರಿಷ್ಠ 9,304 ಮಂದಿಗೆ ಕೊರೊನಾ- 260 ಜನ ಸಾವು
ನವದೆಹಲಿ: ದೇಶದಲ್ಲಿ ಡೆಡ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಸಿಗುವಂತೆ ಕಾಣುತ್ತಿಲ್ಲ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ಗರಿಷ್ಠ 9,304 ಮಂದಿಗೆ ಸೋಂಕು ದೃಢಪಟ್ಟಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದ 9,304 ಮಂದಿಗೆ ಸೋಂಕು ಪತ್ತೆಯಾದರೆ, 260 ಜನ ಸಾವನ್ನಪ್ಪಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 2,16,919ಕ್ಕೆ ಏರಿಕೆಯಾದರೆ, ಕೊರೊನಾಗೆ 6,075 ಮಂದಿ ಬಲಿಯಾಗಿದ್ದಾರೆ. …
Read More »ದ್ವಿತೀಯ ಪಿಯುಸಿ ವಿಜ್ಞಾನ ಉತ್ತರ ಪತ್ರಿಕೆ ಮೌಲ್ಯಮಾಪನ ಮಾಡದಿರಲು ಉಪನ್ಯಾಸಕರು ನಿರ್ಧಾರ
ಬೆಂಗಳೂರು: ಪಿಯುಸಿ ಮೌಲ್ಯಮಾಪನಕ್ಕೂ ಕೊರೊನಾ ಭೀತಿ ತಟ್ಟಿದ್ದು, ದ್ವಿತೀಯ ಪಿಯುಸಿ ವಿಜ್ಞಾನ ಉತ್ತರ ಪತ್ರಿಕೆ ಮೌಲ್ಯಮಾಪನ ಮಾಡದಿರಲು ಉಪನ್ಯಾಸಕರು ನಿರ್ಧಾರ ಮಾಡಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಮೌಲ್ಯಮಾಪನ ಕೇಂದ್ರಗಳನ್ನು ಆಯಾ ಜಿಲ್ಲೆಗಳಲ್ಲಿ ವಿಕೇಂದ್ರಿಕರಣಗೊಳಿಸುವಂತೆ ಉಪನ್ಯಾಸಕರ ಸಂಘ ಮನವಿ ಮಾಡಿತ್ತು. ಕೊರೊನಾ ಸಮುದಾಯಕ್ಕೆ ಹರಡುತ್ತಿದೆ ಎಂದು ಈ ಮನವಿ ಮಾಡಲಾಗಿತ್ತು. ಆದರೆ ಸರ್ಕಾರ ಉಪನ್ಯಾಸಕರ ಬೇಡಿಕೆಗೆ ಈಡೇರಿಸದ ಕಾರಣ ನಾಳೆಯಿಂದ ಪ್ರಾರಂಭವಾಗಬೇಕಿದ್ದ ವಿಜ್ಞಾನ ವಿಷಯದ ಮೌಲ್ಯಮಾಪನ ಮಾಡದೇ ಇರಲು ಉಪನ್ಯಾಸಕರ ಸಂಘದಿಂದ ನಿರ್ಧಾರ …
Read More »ಕೊರೊನಾ ಮಧ್ಯೆ ಶಾಲೆ ಆರಂಭ, ಸರ್ಕಾರಕ್ಕೆ 10 ‘ಪಬ್ಲಿಕ್’ ಪ್ರಶ್ನೆ – ಎಷ್ಟು ಮಕ್ಕಳಿಗೆ ಸೋಂಕು ಬಂದಿದೆ?
ಬೆಂಗಳೂರು: ಕೊರೋನಾ ತಾಂಡವವಾಡ್ತಿದೆ. ಖುದ್ದು ಕೇಂದ್ರ ಸರ್ಕಾರವೇ, ಮನೆಯಿಂದ ಹೊರಬರಬೇಡಿ ಎಂದು ಮಕ್ಕಳಿಗೆ, ವೃದ್ಧರಿಗೆ ಲಾಕ್ಡೌನ್ ಮಾರ್ಗಸೂಚಿಯಲ್ಲಿ ಸ್ಪಷ್ಟವಾಗಿ ತಿಳಿಸಿದೆ. ಆದರೆ ಇದ್ಯಾವುದನ್ನು ಕಿವಿಗೆ ಹಾಕಿಕೊಳ್ಳದ ರಾಜ್ಯ ಸರ್ಕಾರ, ಜುಲೈ 1ರಿಂದ ಶಾಲೆಗಳನ್ನು ತೆರೆಯಲು ಸಕಲ ರೀತಿಯಲ್ಲಿ ಸಜ್ಜಾಗುತ್ತಿದೆ. 4ರಿಂದ ಏಳನೇ ತರಗತಿಯ ಮಕ್ಕಳಿಗೆ ಜುಲೈ 1ರಿಂದ, 1ನೇ ತರಗತಿಯಿಂದ 3ನೇ ತರಗತಿವರೆಗಿನ ಮಕ್ಕಳಿಗೆ, 8ರಿಂದ 10ನೇ ತರಗತಿವರೆಗಿನ ಮಕ್ಕಳಿಗೆ ಜುಲೈ 15ರಿಂದ ಶಾಲೆ ನಡೆಸಲು ಪ್ಲಾನ್ ಮಾಡ್ತಿದೆ. ಇನ್ನು …
Read More »ಲಾಕ್ಡೌನ್ ಕಾರಣದಿಂದಾಗಿ ರಾಜ್ಯ ಸಾರಿಗೆ ನಿಗಮಗಳಿಗೆ ಬರೋಬ್ಬರಿ 1,200 ಕೋಟಿಗೂ ಅಧಿಕ ನಷ್ಟ………
ಬೆಂಗಳೂರು; ಕೊರೋನಾ ಲಾಕ್ಡೌನ್ ಕಾರಣದಿಂದಾಗಿ ರಾಜ್ಯ ಸಾರಿಗೆ ನಿಗಮಗಳಿಗೆ ಬರೋಬ್ಬರಿ 1,200 ಕೋಟಿಗೂ ಅಧಿಕ ನಷ್ಟವಾಗಿದೆ ಎಂದು ಹೇಳಲಾಗುತ್ತಿದ್ದು, ಇದರ ಸುಧಾರಣೆ ಕುರಿತಂತೆ ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಚರ್ಚೆ ನಡೆಸಲಾಗಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಾರಿಗೆ ಸಚಿವ ಡಿಸಿಎಂ ಲಕ್ಷ್ಮಣ್ ಸವದಿ ಹಾಗೂ ಇಲಾಖೆಯ ಅಧಿಕಾರಿ ಗಳು ನಿಗಮದ ನಷ್ಟದ ಬಗ್ಗೆ ವಿವರಿಸಿದ್ದಾರೆ. ಸಾರಿಗೆ ನಿಗಮದಲ್ಲಿ 1 ಲಕ್ಷದ 17 …
Read More »ಜಮೀರ್ 420, ಗುಜರಿ ವ್ಯಾಪಾರ ಮಾಡಿ ರಾಜಕಾರಣದಲ್ಲಿ ನಾಟಕ ಮಾಡ್ತಿದ್ದಾನೆ; ರೇಣುಕಾಚಾರ್ಯ
ಬೆಂಗಳೂರು (ಜೂನ್ 03); ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಓರ್ವ 420, ಗುಜರಿ ವ್ಯಾಪಾರ ಮಾಡಿ ಇದೀಗ ರಾಜಕಾರಣದಲ್ಲಿ ನಾಟಕ ಮಾಡುತ್ತಿದ್ದಾನೆ ಎಂದು ಮಾಜಿ ಸಚಿವ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಏಕ ವಚನದಲ್ಲಿ ದಾಳಿ ನಡೆಸಿದ್ದಾರೆ. ಶಾಸಕ ಜಮೀರ್ ಅಹಮದ್ ಪಾದರಾಯನಪುರ ಗಲಾಟೆಯಲ್ಲಿ ಬಂಧಿಸಲ್ಪಟ್ಟ ಆರೋಪಿಗಳ ಜಾಮೀನಿಗೆ ಸಹಕರಿಸಿದ್ದಾರೆ. ಅಲ್ಲದೆ, ಬಿಡುಗಡೆಗೊಂಡವರನ್ನು ಇಂದು ಪಾದರಾಯನಪುರದಲ್ಲಿ ಅದ್ದೂರಿಯಾಗಿ ಸ್ವಾಗತ ಮಾಡಲಾಗಿದೆ. ಈ ಕುರಿತು ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿರುವ ರೇಣುಕಾಚಾರ್ಯ, ” ಪಾದರಾಯನಪುರ ಗೂಂಡಾಗಳಿಗೆ …
Read More »