Breaking News

ಬೆಂಗಳೂರು

ಮೇ 18ರ ನಂತರ ಬಸ್ ಸೇವೆ ಪ್ರಾರಂಭದ ಸುಳಿವು ಕೊಟ್ಟ ಬಿಎಂಟಿಸಿ…….

ಬೆಂಗಳೂರು: ಮೇ 17ಕ್ಕೆ ಲಾಕ್‍ಡೌನ್ ಅವಧಿ ಮುಗಿಯುತ್ತಿರುವ ಹಿನ್ನೆಲೆ ಸಿಬ್ಬಂದಿಗೆ ಬಿಎಂಟಿಸಿ ಆದೇಶ ಹೊರಡಿಸಿದ್ದು, ಲಾಕ್‍ಡೌನ್‍ನಿಂದ ಸ್ಥಗಿತಗೊಂಡಿದ್ದ ಬಸ್ ಸೇವೆ ಮತ್ತೆ ಆರಂಭವಾಗುವ ಸುಳಿವನ್ನು ನೀಡಿದೆ. ಮೇ 18ರಿಂದ ಎಲ್ಲಾ ಸಿಬ್ಬಂದಿ ಕೆಲಸಕ್ಕೆ ಹಾಜರಾಗುವಂತೆ ಬಿಎಂಟಿಸಿ ಆದೇಶ ಹೊರಡಿಸಿದೆ. ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಲಾಕ್‍ಡೌನ್ ಜಾರಿಗೊಳಿಸಿದ ಹಿನ್ನೆಲೆ ಬಿಎಂಟಿಸಿ ಸೇರಿದಂತೆ ಎಲ್ಲಾ ಬಸ್ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಎಲ್ಲಾ ಸೇವೆಗಳನ್ನು ಸ್ಥಗಿತಗೊಂಡಿದ್ದವು. ಕೆಲ ಬಿಎಂಟಿಸಿ ಬಸ್‍ಗಳು …

Read More »

ಮೃತರಾದ ಮಾಜಿ ಭೂಗತ ಲೋಕದ ದೊರೆ ಮುತ್ತಪ್ಪ ರೈ ಅವರು ಡಾನ್ ಅದರೂ ಸಿನಿಮಾರಂಗದ ಜೊತೆ ನಿಕಟ ಸಂಬಂಧ

ಬೆಂಗಳೂರು: ಮೃತರಾದ ಮಾಜಿ ಭೂಗತ ಲೋಕದ ದೊರೆ ಮುತ್ತಪ್ಪ ರೈ ಅವರು ಡಾನ್ ಅದರೂ ಸಿನಿಮಾರಂಗದ ಜೊತೆ ನಿಕಟ ಸಂಬಂಧವನ್ನು ಹೊಂದಿದ್ದರು. ಹಲವು ವರ್ಷಗಳಿಂದ ಕ್ಯಾನ್ಸರ್ ರೋಗದ ಸಮಸ್ಯೆಯಿಂದ ಬಳಲುತ್ತಿದ್ದ ಮುತ್ತಪ್ಪ ರೈ ಇಂದು ನಸುಕಿನ ಜಾವ 2.10ರ ಸುಮಾರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಒಂದು ಕಾಲದಲ್ಲಿ ಡಾನ್ ಆಗಿ ಮೆರೆದಿದ್ದ ರೈ ನಂತರ ಜಯಕರ್ನಾಟಕ ಸಂಘಟನೆ ಕಟ್ಟಿ ಸಮಾಜ ಸೇವೆಯ ಕಡೆ ಮುಖ ಮಾಡಿದ್ದರು. ಜೊತೆಗೆ ಸಿನಿಮಾದಲ್ಲೂ …

Read More »

28 ದಿನಗಳ ಬಳಿಕ ತನ್ನ ಹಸುಗೂಸನ್ನು ಅಪ್ಪಿಕೊಂಡು ಮುದ್ದಾಡಿರುವ ಭಾವುಕ ಘಟನೆ ಸಿಲಿಕಾನ್ ಸಿಟಿಯ ದೊಡ್ಡಬಸ್ತಿಯಲ್ಲಿ

ಬೆಂಗಳೂರು: ಕೊರೊನಾ ಗೆದ್ದ ಮಹಿಳೆ 28 ದಿನಗಳ ಬಳಿಕ ತನ್ನ ಹಸುಗೂಸನ್ನು ಅಪ್ಪಿಕೊಂಡು ಮುದ್ದಾಡಿರುವ ಭಾವುಕ ಘಟನೆ ಸಿಲಿಕಾನ್ ಸಿಟಿಯ ದೊಡ್ಡಬಸ್ತಿಯಲ್ಲಿ ನಡೆದಿದೆ. ದೊಡ್ಡಬಸ್ತಿಯಲ್ಲಿ ರೋಗಿ ನಂಬರ್ 259 ಮಹಿಳೆ ಕೊರೊನಾದಿಂದ ಗುಣಮುಖರಾಗಿ ತನ್ನ ಮನೆಗೆ ವಾಪಸ್ಸಾಗಿದ್ದಾರೆ. ಡೆಲಿವರಿಯಾದ ನಾಲ್ಕೇ ದಿನದಲ್ಲಿ ತನ್ನ ಹಸುಗೂಸಿನಿಂದ ದೂರವಾಗಿದ್ದರು. ಮಗುವಿಗೆ ಎದೆಹಾಲು ಉಣಿಸಲಾಗದಂತಹ ಅಸಹಾಯಕ ಸ್ಥಿತಿ ನಿರ್ಮಾಣವಾಗಿತ್ತು. ಇದೀಗ 28 ದಿನಗಳ ಬಳಿಕ, ಈ ಮಹಿಳೆ ಕೊರೊನಾ ಗೆದ್ದು ಮನೆಗೆ ಬಂದಿದ್ದು, ತನ್ನ …

Read More »

ಉಚಿತವಾಗಿ ಹಂಚುವ ರೇಷನ್ ಕಿಟ್‍ಗಳನ್ನು ಮಾರಾಟ ಮಾಡುತ್ತಿದ್ದ ನಾಲ್ವರ ಸೆರೆ

ಬೆಂಗಳೂರು, – ಕಾರ್ಮಿಕ ಇಲಾಖೆಯಿಂದ ಬಡವರಿಗೆ ಉಚಿತವಾಗಿ ಹಂಚುವ ರೇಷನ್ ಕಿಟ್‍ಗಳನ್ನು ಹಣಕ್ಕೆ ಮಾರಾಟ ಮಾಡುತ್ತಿದ್ದ ನಾಲ್ವರು ಆರ್‍ಟಿ ನಗರ ಪೊಲೀಸರ ಅತಿಥಿಗಳಾಗಿದ್ದಾರೆ. ಕಾರ್ಮಿಕ ಇಲಾಖೆಯ ರೇಷನ್‍ಕಿಟ್‍ಗಳನ್ನು ತಲಾ ಒಂದು ಕಿಟ್‍ಗೆ 150ರೂ. ಪಡೆದು ಕೆಲವರು ಮಾರಾಟ ಮಾಡುತ್ತಿದ್ದರು. ಆದರೆ, ಈ ಬಗ್ಗೆ ಸ್ಥಳೀಯ ಶಾಸಕರು ಹಾಗೂ ಪಾಲಿಕೆ ಸದಸ್ಯರಿಗೆ ಮಾಹಿತಿ ಇರಲಿಲ್ಲ. ಆರ್‍ಟಿ ನಗರದಲ್ಲಿ ಮೆಟೆಡೋರ್‍ನಲ್ಲಿ ಕಾರ್ಮಿಕ ಇಲಾಖೆಯ ಕಿಟ್‍ಗಳನ್ನು ಸಾರ್ವಜನಿಕರಿಗೆ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಬಗ್ಗೆ ಬಂದ …

Read More »

ಮದ್ಯೋದ್ಯಮಿ ಮಲ್ಯಗೆ ಭಾರತದಲ್ಲಿ ಜೈಲೂಟ ಫಿಕ್ಸ್..!

ಲಂಡನ್: ಮದ್ಯೋದ್ಯಮಿ ವಿಜಯ್ ಮಲ್ಯ ತಮ್ಮನ್ನು ಭಾರತಕ್ಕೆ ಹಸ್ತಾಂತರಿಸುವುದರ ವಿರುದ್ಧ ಇಂಗ್ಲೆಂಡ್​ (ಯುಕೆ) ಸುಪ್ರೀಂಕೋರ್ಟ್​ಗೆ ಮನವಿ ಸಲ್ಲಿಸಲು ಇಲ್ಲಿನ ಹೈಕೋರ್ಟ್​ ಅವಕಾಶ ಕಲ್ಪಿಸಲಿಲ್ಲ. ಭಾರತಕ್ಕೆ ತನ್ನನ್ನು ಹಸ್ತಾಂತರ ಮಾಡದಂತೆ ಕಳೆದ ತಿಂಗಳು ವಿಜಯ್ ಮಲ್ಯ ಸಲ್ಲಿಸಿದ್ದ ಮನವಿ ಅರ್ಜಿಯನ್ನು ಬ್ರಿಟನ್​ನ ಹೈಕೋರ್ಟ್ ತಿರಸ್ಕರಿಸಿತ್ತು. ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಅರ್ಜಿ ಸಲ್ಲಿಸಲು ಮಲ್ಯ ನಿರ್ಧರಿಸಿದ್ದರು. ಆದರೆ, ಮಲ್ಯ ಅವರಿಗೆ ಮೇಲ್ಮನವಿ ಅರ್ಜಿ ಸಲ್ಲಿಸಲು ಹೈಕೋರ್ಟ್​ ಇಂದು ಅವಕಾಶ ನೀಡಿಲ್ಲ. ಈ …

Read More »

ಡೆಡ್ಲಿ ಕೊರೊನಾ ಮಧ್ಯೆ ಇದೀಗ ರಾಜ್ಯದಲ್ಲಿ ಚಂಡಮಾರುತ ಅಪ್ಪಳಿಸುವ ಭೀತಿ ಎದುರಾಗಿದೆ.

ಬೆಂಗಳೂರು: ಡೆಡ್ಲಿ ಕೊರೊನಾ ಮಧ್ಯೆ ಇದೀಗ ರಾಜ್ಯದಲ್ಲಿ ಚಂಡಮಾರುತ ಅಪ್ಪಳಿಸುವ ಭೀತಿ ಎದುರಾಗಿದೆ. ಕೇರಳದ ಹಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಮೇ 17ರೊಳಗೆ ಆಮ್‍ಫಾನ್ ಚಂಡಮಾರುತದಿಂದ ಭಾರೀ ಮಳೆಯಾಗಲಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮೇ 15 ಮತ್ತು 16ರಂದು ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಮೇ 18ರಂದು ಈ ಆಮ್‍ಫಾನ್ ಚಂಡಮಾರುತದ ಅಬ್ಬರ ಹೆಚ್ಚಾಗಲಿದ್ದು, ಒಂದು ಗಂಟೆಗೆ 172 ಕಿ.ಮೀ. …

Read More »

ಕೊರೊನಾ ಹಾಟ್‍ಸ್ಪಾಟ್ ಆಗೋದನ್ನೇ ತಪ್ಪಿಸಿದ ಕಮಾಂಡರ್ ಡಾ. ಜಿ ಶಿವಣ್ಣ………

ಬೆಂಗಳೂರು: ದೊಡ್ಡಬಸ್ತಿಯಲ್ಲಿ ಒಂದೇ ಒಂದು ಪಾಸಿಟಿವ್ ಪ್ರಕರಣದಿಂದ ಬೆಂಗಳೂರು ಆತಂಕಗೊಂಡಿತ್ತು. ಇಡೀ ದೊಡ್ಡಬಸ್ತಿ ಕೊರೊನಾ ಹಾಟ್‍ಸ್ಪಾಟ್ ಆಗುತ್ತಾ ಅನ್ನೋ ಆತಂಕ ಜನರನ್ನು ಕಾಡಿತ್ತು. ಆದರೆ ಜನರ ಸಹಕಾರ ಹಾಗೂ ಕೋವಿಡ್ ಕಮಾಂಡರ್ ಜಿ.ಶಿವಣ್ಣ ಅವರ ಮಾಸ್ಟರ್ ಪ್ಲಾನ್‍ನಿಂದ ಕೊರೊನಾ ಹಾಟ್‍ಸ್ಪಾಟ್ ಆಗೋದನ್ನೇ ತಪ್ಪಿಸಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ಕೆಂಗೇರಿ ಹೋಬಳಿಯ ದೊಡ್ಡಬಸ್ತಿಯನ್ನ ನೋಡಿ ಪಾದರಾಯನಪುರದ ಜನ ಬುದ್ಧಿ ಕಲಿಯಬೇಕಿದೆ. ಏಪ್ರಿಲ್ 12ರಂದು ಈ ಏರಿಯಾದಲ್ಲಿ ಗರ್ಭಿಣಿ ಮಹಿಳೆಗೆ ಕೊರೊನಾ ಸೋಂಕು …

Read More »

ಹಣ್ಣು, ತರಕಾರಿ ಬೆಳೆಗಾರರಿಗೆ 15 ಸಾವಿರ ರೂ.- ಬಿಎಸ್‍ವೈಯಿಂದ ಮತ್ತೆ 162 ಕೋಟಿ ಪ್ಯಾಕೇಜ್ ಪ್ರಕಟ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಪ್ಯಾಕೇಜ್ ಘೋಷಣೆ ಮಾಡಿದ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದ ತರಕಾರಿ, ಹಣ್ಣು ಬೆಳೆಗಾರರು ಹಾಗೂ ಕೈಮಗ್ಗ ಕಾರ್ಮಿಕರಿಗಾಗಿ ಒಟ್ಟು 162 ಕೋಟಿ ರೂ. ಪ್ಯಾಕೇಜ್ ಪ್ರಕಟಿಸಿದ್ದಾರೆ. ತರಕಾರಿ, ಹಣ್ಣು ಬೆಳೆಗಾರರಿಗೆ ಪ್ರತಿ ಹೆಕ್ಟೇರ್‌ಗೆ 15 ಸಾವಿರ ರೂಪಾಯಿನಂತೆ ಒಟ್ಟು 137 ಕೋಟಿ ರೂ. ಪ್ಯಾಕೇಜ್ ಅನ್ನು ರಾಜ್ಯ ಸರ್ಕಾರದಿಂದ ಘೋಷಣೆ ಮಾಡಲಾಗಿದೆ. ಇದು 7 ಬಗೆಯ ಹಣ್ಣುಗಳು, 10 ತರಕಾರಿ ಬೆಳೆಗಳಿಗೆ ಸಿಮೀತವಾಗಿದೆ. …

Read More »

ಸದ್ಯದಲ್ಲೇ ಸಿಗಲಿದೆ ದೇವರ ದರ್ಶನ, ದೇವಸ್ಥಾನಗಳನ್ನು ತೆರೆಯಲು ಮುಂದಾದ ಸರ್ಕಾರ..!

ಬೆಂಗಳೂರು, ಮೇ 14- ಜಿಮ್, ಫಿಟ್‍ನೆಸ್ ಕೇಂದ್ರಗಳನ್ನು ಮುಂದಿನ ವಾರದಿಂದ ತೆರೆಯಲು ರಾಜ್ಯ ಸರ್ಕಾರ ಘೋಷಣೆ ಮಾಡಿದ ಬೆನ್ನಲ್ಲೇ , ಮುಚ್ಚಿದ್ದ ದೇವಾಲಯಗಳು ಕೂಡಾ ಆರಂಭವಾಗುವ ಲಕ್ಷಣಗಳು ಗೋಚರಿಸಿವೆ. ಒಂದು ವೇಳೆ ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಟ್ಟ ದೇವಾಸ್ಥನಗಳು ತೆರೆದರೆ, ಅಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಭಕ್ತರು ಪಾಲಿಸಬೇಕಾಗುತ್ತದೆ. ಅದೆನೆಂದರೆ ಯಾವುದೇ ದೇವಾಲಯಗಳು ಭಕ್ತರಿಗೆ ಪ್ರಸಾದ, ತೀರ್ಥ ಕೊಡುವುದು ನಿಷಿದ್ಧ. ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸರತಿ ಸಾಲಿನಲ್ಲಿ ಬರುವವರಿಗೆ ಕಟಕಟೆಗಳನ್ನು …

Read More »

ನಾವು ಏನಾದ್ರು ತಿಂದ್ರೆ ತಾನೆ ಮಗುವಿಗೆ ಹಾಲು ಕೊಡಲು ಸಾಧ್ಯ: ತಾಯಂದಿರ ಕಣ್ಣೀರು

ಬೆಂಗಳೂರು: ದೂರದ ಊರಿನಿಂದ ರಾಜ್ಯಕ್ಕೆ ವಾಪಸ್ ಬಂದ ಜನರಿಗೆ ಸರ್ಕಾರ ಸೂಕ್ತವಾದ ವ್ಯವಸ್ಥೆ ಕಲ್ಪಿಸದೇ ಜನಸಾಮಾನ್ಯರು ಬಿಎಂಟಿಸಿ ಬಸ್ಸಿನೊಳಗೆ ಕುಳಿತು ಪರದಾಡಿದ್ದಾರೆ. ಬೇರೆ ರಾಜ್ಯದಿಂದ ಪುಟ್ಟಪುಟ್ಟ ಮಕ್ಕಳನ್ನು ಕಟ್ಟಿಕೊಂಡು, ಮನೆಸೇರಿಕೊಳ್ಳಲು ಬಂದಿರುವ ಈ ತಾಯಂದಿರ ಕಣ್ಣೀರು ನೋಡಿದ್ರೆ ಕರಳು ಚುರುಕ್ ಅನ್ನುತ್ತೆ. ನಿನ್ನೆ ಇಂದು ರೈಲಿನಲ್ಲಿ ಪ್ರಯಾಣ ಮಾಡುತ್ತಿರುವ ಕಾರಣ ಸರಿಯಾಗಿ ಊಟ ತಿನ್ನದೇ ಮಗುವಿಗೆ ಹಾಲು ಉಣಿಸಲು ಎದೆಹಾಲು ಬರುತ್ತಿಲ್ಲ ಎಂದು ಬಿಸಿಲಿನಲ್ಲಿ ಬಸ್ಸಿನೊಳಗೆ ಕುಳಿತು ತಮ್ಮ ಕಷ್ಟವನ್ನು …

Read More »