Breaking News

ಬೆಂಗಳೂರು

ರಾಜ್ಯಕ್ಕೆ ತಬ್ಲಿಘಿ ಜೊತೆ ಅಜ್ಮೀರ್ ಕಂಟಕ- ಹೊರ ರಾಜ್ಯದಿಂದ ಬಂದವ್ರಲ್ಲಿಯೇ ಹೆಚ್ಚು ಪಾಸಿಟಿವ್

ಬೆಂಗಳೂರು: ರಾಜ್ಯಕ್ಕೆ ತಬ್ಲಿಘಿ ಜೊತೆ ಅಜ್ಮೀರ್ ಕಂಟಕ ಎದುರಾಗಿದೆ. ಹೊರ ರಾಜ್ಯದಿಂದ ಬರುವವರಲ್ಲಿ ಸೋಂಕು ಹೆಚ್ಚಾಗ್ತಾ ಇದೆ. ಅಜ್ಮೀರ್ ಯಾತ್ರೆಗೆ ಹೋಗಿದ್ದವರಲ್ಲಿ ಮತ್ತು ಅಹಮದಾಬಾದ್ ಪ್ರಯಾಣ ಮಾಡಿದ್ದವರು ರಾಜ್ಯಕ್ಕೆ ಕಂಟಕವಾಗ್ತಾ ಇದ್ದಾರೆ. ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿನಕ್ಕೆ ಹೆಚ್ಚುತ್ತಲೇ ಇದೆ. ಸಾವಿರ ಗಡಿಯತ್ತ ಸೋಂಕಿತರ ಸಂಖ್ಯೆ ಏರುತ್ತಿದ್ದು 925ಕ್ಕೆ ತಲುಪಿದೆ. ಅರ್ಧದಷ್ಟು ವಿದೇಶದಿಂದ ಬಂದವರಾದರೆ ಇನ್ನರ್ಧ ತಬ್ಲಿಘಿಗಳಿಂದಲೇ ಪ್ರಕರಣಗಳು ಹೆಚ್ಚಾಗಿದೆ. ಬೆಂಗಳೂರು, ಬೆಳಗಾವಿ, ಬಾಗಲಕೋಟೆ ಮತ್ತು ಕಲಬುರಗಿ ಸೇರಿದಂತೆ …

Read More »

ಪ್ರಧಾನಿ ಘೋಷಿಸಿದ 20 ಲಕ್ಷ ಕೋಟಿ ಪ್ಯಾಕೇಜ್ ಬಗ್ಗೆ ಸಿಎಂ ಬಿಎಸ್ವೈ ಪ್ರತಿಕ್ರಿಯೆ ಏನು ಗೊತ್ತೇ..!

ಬೆಂಗಳೂರು: ಕೊರೊನಾ ಲಾಕ್ ಡೌನ್ 4.0 ಆರಂಭಕ್ಕೆ ಮುನ್ನವೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಕಟಿಸಿರುವ 20 ಲಕ್ಷ ಕೋಟಿ ರೂಪಾಯಿಗಳ ವಿಶೇಷ ಪ್ಯಾಕೇಜ್ ರೈತರು, ಕಾರ್ಮಿಕರು ಮತ್ತು ಸಣ್ಣ ಉದ್ಯಮಿದಾರರಿಗೆ ಹೊಸ ಭರವಸೆ ಮತ್ತು ಚೈತನ್ಯವನ್ನು ತುಂಬಿಸಲಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ ಎನ್ ಅಶ್ವತ್ಥನಾರಾಯಣ ಪ್ರತಿಪಾದಿಸಿದ್ದಾರೆ. ಜತೆಗೆ, ಲೋಕಲ್ ಸೇ ಗ್ಲೋಬಲ್ ಎನ್ನುವ ಮೋದಿ ಅವರ ಘೋಷಣೆ ಐತಿಹಾಸಿಕ. ಲೋಕಲ್ ಉತ್ಪನ್ನಗಳಿಗೆ ವೋಕೋಲ್ (ಬಾಯಿ ಮಾತಿನ …

Read More »

”ಕಾರ್ಮಿಕ ಕಾಯ್ದೆ ತಿದ್ದುಪಡಿ ಮಾಡಿ ಸುಗ್ರೀವಾಜ್ಞೆ ತರುವುದನ್ನು ರಾಜ್ಯ ಸರ್ಕಾರ ಕೈಬಿಡಬೇಕು” : ಹೆಚ್ಡಿಕೆ

ಬೆಂಗಳೂರು, ಮೇ 12- ರೈತರಿಗೆ ಮಾರಕವಾಗುವ ಎಪಿಎಂಸಿ ಕಾಯ್ದೆ ಹಾಗೂ ಕಾರ್ಮಿಕರಿಗೂ ಮಾರಕವಾಗಿರುವ ಕಾರ್ಮಿಕ ಕಾಯ್ದೆ ತಿದ್ದುಪಡಿ ಮಾಡಿ ಸುಗ್ರೀವಾಜ್ಞೆ ತರುವುದನ್ನು ರಾಜ್ಯ ಸರ್ಕಾರ ಕೈ ಬಿಡಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ನಿರ್ದೇಶನದಂತೆ ಕೃಷಿ ಉತ್ಪನ್ನಗಳನ್ನು ಎಲ್ಲಿ ಬೇಕಾದರೂ ಖರೀದಿಸಲು ಅವಕಾಶ ನೀಡುವಂತೆ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಇದರಿಂದ ಎಪಿಎಂಸಿಗಳು ಮುಚ್ಚುವಂತಾಗುತ್ತದೆ ಎಂದು ಆರೋಪಿಸಿದರು. ರಾಜ್ಯ …

Read More »

2 ಗಂಟೆಗೆ ಮೊದಲು ಚೆಕ್ ಇನ್, ಕ್ಯಾಬಿನ್ ಲಗೇಜ್ ಇಲ್ಲ – ವಿಮಾನ ಪ್ರಯಾಣಕ್ಕೂ ಮುನ್ನ ಓದಿ

ನವದೆಹಲಿ: ಕೋವಿಡ್ 19 ಬಗ್ಗೆ ಸಂಬಂಧಿಸಿದ ಪ್ರಶ್ನಾವಳಿ, ಕ್ಯಾಬಿನ್ ಲಗೇಜ್ ತಗೆದುಕೊಂಡು ಹೋಗುವಂತಿಲ್ಲ, ಆರೋಗ್ಯ ಸೇತು ಅಪ್ಲಿಕೇಶನ್ ಬಳಕೆ ಜೊತೆಗೆ ವಿಮಾನ ಪ್ರಯಾಣಿಸುವ 2 ಗಂಟೆಯ ಮೊದಲು ಚೆಕ್ ಇನ್ – ಇದು ಲಾಕ್‍ಡೌನ್ ತೆರವಾದ ಬಳಿಕ ವಿಮಾನ ಪ್ರಯಾಣಿಕರು ಅನುಸರಿಸಬೇಕಾದ ಕ್ರಮಗಳು. ಕೋವಿಡ್ 19 ನಿಂದಾಗಿ ಮಾರ್ಚ್ 25ರಿಂದ ಪ್ರಯಾಣಿಕ ವಿಮಾನ ಹಾರಾಟ ಸ್ಥಗಿತಗೊಂಡಿದೆ. ಈ ನಡುವೆ ದೇಶೀಯ ವಿಮಾನಗಳ ಹಾರಾಟಕ್ಕೆ ವಿಮಾನಯಾನ ಸಚಿವಾಲಯ ಸಿದ್ಧತೆ ನಡೆಸುತ್ತಿದೆ. ಅಧಿಕೃತವಾಗಿ …

Read More »

ಸಮುದಾಯ ಪರೀಕ್ಷೆಯಲ್ಲಿ 7 ಮಂದಿಗೆ ಪಾಸಿಟಿವ್- ಸೋಂಕಿತರ ಮೊಬೈಲ್ ಸ್ವಿಚ್ಛ್ ಆಫ್

ಬೆಂಗಳೂರು: ಪಾದರಾಯನಪುರದಲ್ಲಿ ನಡೆಸಿದ ಸಮುದಾಯದ ಪರೀಕ್ಷೆಯಲ್ಲಿ ಬರೋಬ್ಬರಿ 7 ಮಂದಿಯಲ್ಲಿ ಸೋಂಕು ಇರೋದು ಪತ್ತೆಯಾಗಿದೆ. ಆದ್ರೆ ಏಳು ಮಂದಿ ಸದ್ಯ ಎಲ್ಲಿದ್ದಾರೆ ಎಂಬ ವಿಚಾರವೇ ನಿಗೂಢವಾಗಿದೆ. ಪರೀಕ್ಷೆ ವೇಳೆ ನೀಡಿದ ಇವರ ಮೊಬೈಲ್ ನಂಬರ್ ಗಳು ಸ್ವಿಚ್ಛ್ ಆಫ್ ಆಗಿವೆ. ಏಳು ಮಂದಿಗೆ ಸೋಂಕು ತಗುಲಿರೋದು ದೃಢವಾಗ್ತಿದ್ದಂತೆ ಪಾದರಾಯನಪುರದಲ್ಲಿ ಸಮುದಾಯಕ್ಕೆ ಸೋಂಕು ಹಬ್ಬಿದ್ಯಾ ಎಂಬ ಅನುಮಾನ ಮೂಡುತ್ತಿದೆ. ಕೋವಿಡ್-19 ಪರೀಕ್ಷೆ ವೇಳೆ 261 ಮಂದಿ ಪೈಕಿ 7 ಮಂದಿಯಲ್ಲಿ ಸೋಂಕು …

Read More »

ಹೆಚ್ಚು ಎಣ್ಣೆ ಕುಡಿದಿದ್ದಕ್ಕೆ ಗೆಳೆಯನ್ನ ಕೊಂದವರು ಅಂದರ್…………

ಬೆಂಗಳೂರು: ತಮಗಿಂತ ಹೆಚ್ಚು ಮದ್ಯ ಸೇವನೆ ಮಾಡಿದ್ದ ಗೆಳೆಯನನ್ನು ಕೊಂದ ಇಬ್ಬರನ್ನು ಬಂಧಿಸುವಲ್ಲಿ ಬೆಂಗಳೂರಿನ ಆರ್.ಟಿ.ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಮೇ 4ರಿಂದ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಮೇ 6ರಂದು ಮದ್ಯ ಖರೀದಿಸಿ ರಾಜೇಶ್, ಸುಜಿತ್ ಮತ್ತು ಕಿಶೋರ್ ಸೇರಿಕೊಂಡು ಪಾರ್ಟಿ ಮಾಡಿದ್ದರು. ಪಾರ್ಟಿ ಮಧ್ಯೆ ಹೆಚ್ಚು ಮದ್ಯ ತಮಗೆ ಬೇಕೆಂದು ಮೂವರು ಕಿತ್ತಾಡಿಕೊಂಡಿದ್ದಾರೆ. ಮದ್ಯ ಖರೀದಿಗೆ ಕಿಶೋರ್ ಹೆಚ್ಚು ನೀಡಿಲ್ಲ ಎಂದು ರಾಜೇಶ್ ಮತ್ತು ಸುಜಿತ್ ಕಿಡಿಕಾರಿದ್ದಾರೆ. …

Read More »

ಕರ್ನಾಟಕಕ್ಕೆ ಕಾದಿದೆ ದೊಡ್ಡ ಗಂಡಾತರ..? ಬೆಂಗಳೂರಿನ ಮೇಲೆ ಕೊರೋನಾ ಕಾರ್ಮೋಡ…!

ಬೆಂಗಳೂರು, ಮೇ 12- ರಾಜಧಾನಿ ಬೆಂಗಳೂರಿಗೆ ಹೊಸ ಕಂಟಕ ಎದುರಾಗಿದೆ. ಅಧಿಕಾರಿಗಳಿಗೆ ಹೊಸ ತಲೆನೋವು ಶುರುವಾಗಿದೆ. ಮಹಾಮಾರಿ ಕೊರೊನಾ ದಶದಿಕ್ಕುಗಳಿಂದಲೂ ಆವರಿಸುವ ಆತಂಕ ಪ್ರಾರಂಭವಾಗಿದೆ. ಹೊರರಾಜ್ಯಗಳಿಂದ ನಗರಕ್ಕೆ ಸುಮಾರು 30 ಸಾವಿರಕ್ಕೂ ಹೆಚ್ಚು ಕನ್ನಡಿಗರು ಬರುತ್ತಿದ್ದು, ಅವರನ್ನು ಕ್ವಾರಂಟೈನ್ ಮಾಡುವುದೇ ದೊಡ್ಡ ಸವಾಲಾಗಿ ಪರಿಣಮಿಸಿದೆ. ಬೆಂಗಳೂರಿಗೆ ವಿವಿಧೆಡೆಯಿಂದ ಬರುತ್ತಿರುವ 30 ಸಾವಿರ ಜನರನ್ನು ನಿಭಾಯಿಸುವುದು ಹೇಗೆ, ಕ್ವಾರಂಟೈನ್ ಮಾಡುವುದು ಹೇಗೆ ಎಂಬ ಟೆನ್ಷನ್ ಅಧಿಕಾರಿಗಳಿಗೆ ಪ್ರಾರಂಭವಾಗಿದೆ. ಇವರಲ್ಲಿ ಸೋಂಕು ತಗುಲಿದವರು …

Read More »

“ಕೊರೋನಾ ಹೆಚ್ಚಾಗಲು ತಬ್ಲಿಘೀಗಳು ಕಾರಣರಲ್ಲ, ಚಪ್ಪಾಳೆ ತಟ್ಟಿ, ದೀಪ ಹಚ್ಚಿದರೆ ಜನರ ಕಷ್ಟ ತೀರಲ್ಲ” : ಸಿದ್ದರಾಮಯ್ಯ

ಬೆಂಗಳೂರು, ಮೇ 12- ಕೊರೊನಾ ಸೋಂಕು ಹೆಚ್ಚಾಗಲು ತಬ್ಲಿಘೀಗಳು ಕಾರಣ ಎಂಬ ಆರೋಪದಲ್ಲಿ ಸತ್ಯವಿಲ್ಲ. ಕೋಮುವಾದಿಗಳು ಮತ್ತು ಆರ್‍ಎಸ್‍ಎಸ್‍ನವರು ರಾಜಕೀಯ ಕಾರಣಕ್ಕಾಗಿ ಸುಳ್ಳು ಪ್ರಚಾರ ಮಾಡಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು. ಕೆಪಿಸಿಸಿ ಕಚೇರಿಯಲ್ಲಿಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೊಂದಿಗೆ ಜಂಟಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೊರೊನಾ ಸಂದರ್ಭದಲ್ಲಿ ಜನಜೀವನವನ್ನು ಸುಧಾರಿಸಲು, ಸೋಂಕನ್ನು ನಿಯಂತ್ರಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ವಿಫಲವಾಗಿವೆ ಎಂದು ಆರೋಪಿಸಿದರು. ಈವರೆಗೆ ನಾವು ಸರ್ಕಾರಕ್ಕೆ …

Read More »

ನಿನ್ನೆ ಸಂಜೆ 5 ಗಂಟೆಯಿಂದ ಇಂದು ಸಂಜೆ 5 ಗಂಟೆ ಅವಧಿಯಲ್ಲಿ ರಾಜ್ಯದ 63 ಜನರಲ್ಲಿ ಕೊರೊನಾ ಸೋಂಕು

ಬೆಂಗಳೂರು : ನಿನ್ನೆ ಸಂಜೆ 5 ಗಂಟೆಯಿಂದ ಇಂದು ಸಂಜೆ 5 ಗಂಟೆ ಅವಧಿಯಲ್ಲಿ ರಾಜ್ಯದ 63 ಜನರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 925ಕ್ಕೆ ಏರಿಕೆಯಾಗಿದೆ.ಇದೇ ಮೊದಲ ಬಾರಿಗೆ ಹೆಚ್ಚು ರಾಜ್ಯದಲ್ಲಿ ಒಂದೇ ದಿನದಲ್ಲಿ ಸೋಂಕು ಕಾಣಿಸಿಕೊಂಡಿರುವುದು ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ಅಪಾಯಕಾರಿಯಾಗಿ ಹೆಚ್ಚುತ್ತಿದ್ದು, ಇಂದು ಒಂದೇ ದಿನ 63 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ …

Read More »

ಎಲ್ಲಾ ಸಿಬ್ಬಂದಿ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕು ಅಂತ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ತನ್ನ ಸಿಬ್ಬಂದಿಗೆ ಆದೇಶ

ಬೆಂಗಳೂರು: ರಾಜ್ಯದಲ್ಲಿ ಲಾಕ್‍ಡೌನ್ ಮತ್ತಷ್ಟು ಸಡಿಲವಾಗಿ ಸಿಲಿಕಾನ್ ಸಿಟಿಯಲ್ಲಿ ಶೀಘ್ರವೇ ಬಿಎಂಟಿಸಿ ಬಸ್ ಓಡಾಟ ಶುರುವಾಗುತ್ತಾ ಅನ್ನೋ ಸುಳಿವೊಂದು  ಸಿಕ್ಕಿದೆ. ಹೌದು. 48 ದಿನಗಳ ಲಾಕ್‍ಡೌನ್ ಬಳಿಕ ಇಂದಿನಿಂದ ಬಿಎಂಟಿಸಿಯ ಎಲ್ಲಾ ನೌಕರರು ಕೆಲಸಕ್ಕೆ ಹಾಜರಾಗುವಂತೆ ಬಿಎಂಟಿಸಿ ಸೂಚಿಸಿದೆ. ಸಾರಿಗೆ ಸಂಸ್ಥೆಯು ತುರ್ತು ಸೇವೆಗೆ ಒಳಪಡುವುದರಿಂದ ಎಲ್ಲಾ ಸಿಬ್ಬಂದಿ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕು ಅಂತ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ತನ್ನ ಸಿಬ್ಬಂದಿಗೆ ಆದೇಶ ನೀಡಿದೆ. ಪ್ರಮುಖ ಸೂಚನೆಯೆಂದರೆ ಕೆಲಸಕ್ಕೆ …

Read More »