Breaking News

ಬೆಂಗಳೂರು

ಇಂದು ಬರಲಿದೆ ಪಾದರಾಯನಪುರ ಪುಂಡರ ಬಂಧಿಸಿದ್ದ ಪೊಲೀಸರ ಕೊರೊನಾ ಪರೀಕ್ಷಾ ವರದಿ ……..

ಬೆಂಗಳೂರು, ಏ. 27: ಪಾದರಾಯನಪುರ ಗಲಭೆ ಪ್ರಕರಣ ಆರೋಪಿಗಳ ಪತ್ತೆ ಕಾರ್ಯದಲ್ಲಿ ತೊಡಗಿದ್ದ ಪೊಲೀಸ್ ಸಿಬ್ಬಂದಿಯ ಕೋವಿಡ್ ಸೋಂಕಿನ ಪರೀಕ್ಷಾ ವರದಿ ಇವತ್ತು ಬರಲಿದೆ. ಪರೀಕ್ಷೆಗೆ ಒಳಪಟ್ಟಿರುವ ಸಿಬ್ಬಂದಿ ಕುರಿತು ಗೃಹ ಇಲಾಖೆ ಕೂಡ ಆತಂಕದಲ್ಲಿದೆ. ಕಳೆದ ಏಪ್ರಿಲ್ 19 ರಂದು ಕೊರೊನಾ ವೈರಸ್ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದ ಪಾದರಾಯನಪುರ ಪುಂಡರನನ್ನು ಕ್ವಾರಂಟೈನ್‌ಗೆ ಕರೆದೊಯ್ಯಲು ಬಂದಿದ್ದಾಗ ಹಲ್ಲೆ ನಡೆದಿತ್ತು. ಬಳಿಕ ಹೆಚ್ಚಿನ ಪೊಲೀಸ್ ಸಿಬ್ಬಂದಿ ಮೂಲಕ ಶಂಕಿತರನ್ನು ವಶಕ್ಕೆ ಪಡೆದು …

Read More »

ಹೆಮ್ಮಾರಿ ಕೊರೊನಾ ವೈರಸ್ ವಿರುದ್ಧ 90 ವರ್ಷದ ವೃದ್ಧ ಸವಾಲು……….

ಬೆಂಗಳೂರು: ಹೆಮ್ಮಾರಿ ಕೊರೊನಾ ವೈರಸ್ ವಿರುದ್ಧ 90 ವರ್ಷದ ವೃದ್ಧ ಸವಾಲು ಹಾಕಿದ್ದು, ಗುಣಮುಖನಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲು ಅಜ್ಜ ಎಲ್ಲ ರೀತಿಯ ಹೋರಾಟ ನಡೆಸುತ್ತಿದ್ದಾನೆ. ಬೆಂಗಳೂರಿನ ಹೊಂಗಸಂದ್ರದಲ್ಲಿ ವಾಸವಿದ್ದ ಬಿಹಾರ ಮೂಲದ ಕಾರ್ಮಿಕ ರೋಗಿ-419ರ ಸಂಪರ್ಕದಿಂದ ವೃದ್ಧನಿಗೆ ಸೋಂಕು ತಗುಲಿರುವುದು ಶನಿವಾರ ದೃಢಪಟ್ಟಿತ್ತು. ಹೀಗಾಗಿ ಸದ್ಯ ಆತನನ್ನು ಪ್ರತ್ಯೇಕವಾಗಿಸಿರಿ ಚಿಕಿತ್ಸೆ ಕೊಡಲಾಗುತ್ತಿದೆ. ವೃದ್ಧನಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವುದರಿಂದ ವೈದ್ಯರಿಗೆ ಎಲ್ಲವೂ ಕಷ್ಟ ಕಷ್ಟವಾಗಿದೆ. ಆದರೂ ಅಜ್ಜ …

Read More »

ನನ್ನನ್ನು ಕೆಣಕಿ ಮರ್ಯಾದೆ ಕಳೆದುಕೊಳ್ಳಬೇಡಿ’ : ಗೋಪಾಲಯ್ಯಗೆ ಡಿಕೆಶಿ ವಾರ್ನಿಂಗ್ …….

ಬೆಂಗಳೂರು, ಏ.26- ಆನೆಕಲ್ ನಲ್ಲಿ ಅಕ್ರಮವಾಗಿ ಅಕ್ಕಿ ದಾಸ್ತಾನು ಮಾಡಿದ ಕೃತ್ಯದ ಹಿಂದೆ ಏನೆಲ್ಲಾ ಮಾತುಕತೆಗಳಾಗಿವೆ ಎಂದು ನನಗೆ ಗೋತ್ತಿದೆ. ಈಗ ಎಲ್ಲವನ್ನು ಚರ್ಚೆ ಮಾಡುವ ಕಾಲವಲ್ಲ. ಸುಮ್ಮನೆ ನನ್ನ ಕೆಣಕಿ ಮರ್ಯಾದೆ ಕಳೆದುಕೊಳ್ಳುದು ಬೇಡ. ಮುಂದಾಗಬೇಕಿರುವ ಕೆಲಸದತ್ತ ಸಚಿವರು ಗಮನ ಕೊಡಲಿ ಎಂದುಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಗಜ್ಯೋತಿ ಬಸವೇಶ್ವರರ ಜನ್ಮದಿನಾಚರಣೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು ಅವರು, ಪಡಿತರ ವ್ಯವಸ್ಥೆಯಡಿ ಹಂಚಿಕೆ ಮಾಡಲು …

Read More »

ಇಂದು ರಾಜ್ಯದಲ್ಲಿ ಒಂದೇ ಒಂದು ಕೊರೋನಾ ಕೇಸ್ ಪತ್ತೆ, ಮಂಗಳೂರು ಮಹಿಳೆಗೆ ಸೋಂಕು

ಬೆಂಗಳೂರು, ಮಾ.26- ಕಳೆದ 32 ದಿನಗಳಲ್ಲಿ ಕೊರೊನಾ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದರೂ ಇಂದು ಮಾತ್ರ ಒಂದೇ ಒಂದು ಸೋಂಕಿನ ಪ್ರಕರಣ ಪತ್ತೆಯಾಗಿ ನಿಟ್ಟುಸಿರು ಬಿಡುವಂತಾಗಿದೆ. ಕಳೆದ 18 ಗಂಟೆಗಳಲ್ಲಿ ಒಬ್ಬ ಮಹಿಳೆಗೆ ಮಾತ್ರ ಕೊರೊನಾ ಸೋಂಕು ತಗುಲಿರುವುದರ ಬಗ್ಗೆ ವರದಿಯಾಗಿರುವುದನ್ನು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.ಕಳೆದ ಎರಡು- ಮೂರು ದಿನಗಳಿಂದ ಸೋಂಕಿತರ ಪ್ರಮಾಣ ರಾಜಧಾನಿ ಬೆಂಗಳೂರು, ಬೆಳಗಾವಿ, ಕಲಬುರಗಿ ಇನ್ನಿತರೆಡೆ ಹೆಚ್ಚುತ್ತಲೇ ಇದ್ದ ಪರಿಣಾಮ ಜನರಲ್ಲಿ …

Read More »

ಉಚಿತ ಆಹಾರ ಕಿಟ್ ಪಡೆಯಲು ನಾ ಮುಂದು ತಾ ಮುಂದು ಅಂತ ಮುಗಿಬಿದ್ದ ಜನ

ಬೆಂಗಳೂರು: ಉಚಿತ ಆಹಾರ ಕಿಟ್ ಪಡೆಯಲು ಜನರು ಮುಗಿಬಿದ್ದಿರುವ ಘಟನೆ ಬೆಂಗಳೂರಿನ ಓಕುಳಿಪುರಂನಲ್ಲಿ ನಡೆದಿದೆ. ಓಕುಳಿಪುರಂನಲ್ಲಿ ಜೆಡಿಎಸ್ ಮುಖಂಡ ಹಿರಿಗೌಡರು ಸ್ಥಳೀಯ ನಿವಾಸಿಗಳಿಗೆ ಆಹಾರದ ಕಿಟ್ ವಿತರಣೆ ಮಾಡುತ್ತಿದ್ದರು. ಅಕ್ಕಿ, ಬೇಳೆ ಸಿಗುವ ವಿಚಾರ ತಿಳಿದು ಜನರು ಸಾಮಾಜಿಕ ಅಂತರ ಸಹ ಕಾಯ್ದುಕೊಳ್ಳುವುದನ್ನು ಮರೆತು ಮುಗಿಬಿದ್ದಿದ್ದರು. ದಿನಸಿ ವಿತರಣೆ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಬಾಕ್ಸ್ ಹಾಕಲಾಗಿತ್ತು. ಆದ್ರೆ ಈ ಒಂದು ಬಾಕ್ಸ್ ನಲ್ಲಿ ಇಬ್ಬಿಬ್ರು ನಿಂತಿರುವ ದೃಶ್ಯಗಳು ಕಂಡು …

Read More »

ನೆಲಕ್ಕುರುಳಿದ ಬೃಹತ್ ಮರ, ಎರಡು ಕಾರುಗಳು ಜಖಂ- ತಪ್ಪಿದ ಭಾರೀ ಅನಾಹುತ……

ಬೆಂಗಳೂರು: ಕಾರ್ ಗಳ ಮೇಲೆ ಬೃಹತ್ ಮರ ಬಿದ್ದು ಒಂದು ಕಾರ್ ಸಂಪೂರ್ಣ ಜಖಂ ಆಗಿದ್ದು, ಇನ್ನೊಂದು ಭಾಗಶಃ ಜಖಂ ಆಗಿದೆ. ಸಿಲಿಕಾನ್ ಸಿಟಿಯ ಗಿರಿನಗರದಲ್ಲಿ ಘಟನೆ ನಡೆದಿದ್ದು, ಕಳೆದ ಮೂರ್ನಾಲ್ಕು ದಿನಗಳಿಂದ ಮಳೆಯಾಗುತ್ತಿರುವ ಹಿನ್ನೆಲೆ ನೆಲ ತೇವವಾಗಿದ್ದರಿಂದ ಬೃಹತ್ ಗಾತ್ರದ ಮರ ನೆಲಕ್ಕುರುಳಿದೆ. ಎರಡು ಕಾರ್ ಗಳ ಮೇಲೆ ಮರ ಬಿದ್ದಿದ್ದು, ರಸ್ತೆಯಲ್ಲಿ ಯಾರು ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದಂತಾಗಿದೆ. ಎರಡು ಕಾರ್‍ಗಳ ಪೈಕಿ ಒಂದು ಕಾರು …

Read More »

ದೇಶದ ಪ್ರತಿಯೊಬ್ಬ ನಾಗರಿಕನೂ ಕೊರೊನಾ ಯುದ್ಧದಲ್ಲಿ ಸೈನಿಕ: ಮೋದಿ….

ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿ ಅವರು 64ನೇ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ದೇಶದ ಪ್ರತಿಯೋರ್ವ ನಾಗರಿಕನೂ ಕೊರೊನಾ ವೈರಸ್ ತೊಲಗಿಸಲು ದೇಶ ಸಾರಿರುವ ಯುದ್ಧದಲ್ಲಿ ಸೈನಿಕ ಎಂದು ಹೇಳಿದ್ದಾರೆ. ಮೋದಿಯವರು ಇಂದು ಬೆಳಗ್ಗೆ 11 ಗಂಟೆಗೆ ದೇಶ ಮತ್ತು ವಿದೇಶಗಳಲ್ಲಿರುವ ಭಾರತೀಯರನ್ನು ಉದ್ದೇಶಿಸಿ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೊರೊನಾ ವೈರಸ್ ವಿರುದ್ಧ ದೇಶದ ಜನರು ಹೋರಾಡುತ್ತಿರುವುದಕ್ಕೆ ಮೋದಿ ಶ್ಲಾಘಿಸಿದರು. ಸರ್ಕಾರದ ಜೊತೆ ಕೈಜೋಡಿಸಿ ದೇಶದ …

Read More »

ರಾಜ್ಯದಲ್ಲಿ ಇಂದು ಕೊರೋನಾ ಸಂಬಂಧ ಹೊಸ ದಾಖಲೆ ಸೃಷ್ಟಿ…………

ಬೆಂಗಳೂರು – ರಾಜ್ಯದಲ್ಲಿ ಇಂದು ಕೊರೋನಾ ಸಂಬಂಧ ಹೊಸ ದಾಖಲೆ ಸೃಷ್ಟಿಯಾಗಿದೆ. ಕಳೆದ ಸುಮಾರು ಒಂದೂವರೆ ತಿಂಗಳಿನಿಂದ ರಾಜ್ಯವನ್ನು ಹಿಂಡಿ ಹಿಪ್ಪೆ ಮಾಡಿದ್ದ ಕೊರೋನಾ ಇಂದು ಕೇವಲ ಒಂದೇ ಒಂದು ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಇಂದು ಬಂದಿರುವ ವರದಿ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯ ಮಹಿಳೆಯೋರ್ವಳಲ್ಲಿ ಮಾತ್ರ ಕೊರೋನಾ ವೈರಸ್ ಪತ್ತೆಯಾಗಿದೆ. ಉಳಿದಂತೆ ಬೇರೆ ಯಾವುದೇ ಪ್ರದೇಶದಲ್ಲಿ ಕೊರೋನಾ ರೋಗ ಪತ್ತೆಯಾಗಿಲ್ಲ. ಇದರಿಂದಾಗಿ ರಾಜ್ಯದಲ್ಲಿ ರೋಗಿಗಳ ಸಂಖ್ಯೆ 501 ಆದಂತಾಗಿದೆ. …

Read More »

ಬಿಬಿಎಂಪಿ 7 ವಲಯಗಳಲ್ಲಿ 38 ವಾರ್ಡ್ ಗಳು ರೆಡ್‍ಝೋನ್………..

ಬೆಂಗಳೂರು: ಸಕ್ರಿಯ ಕೊರೊನಾ ಪ್ರಕರಣಗಳಲ್ಲಿ ಸಿಲಿಕಾನ್ ಸಿಟಿ ಮೊದಲ ಸ್ಥಾನದಲ್ಲಿದೆ. ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಹಾಟ್‍ಸ್ಪಾಟ್ ಪಟ್ಟಿಯಿಂದ ನಮ್ಮ ಏರಿಯಾ ಇಲ್ಲ ಅಂತ ನಿಟ್ಟುಸಿರು ಬಿಡುತ್ತಿರುವವರು ಆತಂಕ ಪಡುವಂತಾಗಿದೆ. ಬೆಂಗಳೂರಿನಲ್ಲಿ ವಲಯವಾರು ರೆಡ್ ಝೋನ್‍ಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಬಿಬಿಎಂಪಿ 8 ವಲಯಗಳಲ್ಲಿ 38 ವಾರ್ಡ್ ಗಳು ರೆಡ್ ಝೋನ್ ಪಟ್ಟಿಯಲ್ಲಿವೆ. ಬೆಂಗಳೂರಿನಲ್ಲಿ 80 ಕೊರೊನಾ ಪ್ರಕರಣಗಳು ಸಕ್ರಿಯವಾಗಿವೆ. ಬಿಬಿಎಂಪಿ 8 …

Read More »

17ನೇ ಮಹಡಿಯಿಂದ ಸಾಯಲು ಹೊರಟಿದ್ದ ಯುವತಿ ಬಚಾವ್…..

ಬೆಂಗಳೂರು: 17ನೇ ಮಹಡಿಯಿಂದ ಸಾಯಲು ಹೊರಟಿದ್ದ ಯುವತಿಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಸ್ನೇಹಾ (ಹೆಸರು ಬದಲಾಯಿಸಲಾಗಿದೆ) ಎಂಬಾಕೆಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಶುಕ್ರವಾರ ಮಧ್ಯರಾತ್ರಿ ಸುಮಾರು 1 ಗಂಟೆಗೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಎಲೆಕ್ಟ್ರಾನಿಕ್ ಸಿಟಿಯ ಅಗ್ನಿಶಾಮಕ ಸಿಬ್ಬಂದಿಯ ವರ್ಗ ಯುವತಿಯನ್ನು ರಕ್ಷಣೆ ಮಾಡಿದ್ದಾರೆ. ನಡೆದಿದ್ದೇನು? ಸ್ನೇಹಾ ದೆಹಲಿ ಮೂಲದ ಯುವತಿಯಾಗಿದ್ದು, ಎಲೆಕ್ಟ್ರಾನಿಕ್ ಸಿಟಿಯ ಪ್ರೆಸ್ಟೀಜ್ ಸನ್‍ರೈಸ್ …

Read More »