Breaking News

ಬೆಂಗಳೂರು

ಸಿಎಂ ಇತಿಹಾಸದ ಸತ್ಯ ಎತ್ತಿ ಹಿಡಿಯಲಿ: ಡಿಕೆ ಶಿವಕುಮಾರ್‌

ಬೆಂಗಳೂರು: ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಸರ್ಕಾರ ಪ್ರತಿಕೆಗಳಿಗೆ ನೀಡಿರುವ ಜಾಹೀರಾತಿನಲ್ಲಿ ದೇಶದ ಪ್ರಥಮ ಪ್ರಧಾನಿ ನೆಹರೂ ಅವರನ್ನು ಕಡೆಗಣಿಸಿದ್ದು, ಆಗಿರುವ ಪ್ರಮಾದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕ್ಷಮೆಯಾಚಿಸಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ.   ಈ ಬಗ್ಗೆ ಭಾನುವಾರ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು, ದೇಶ ಸ್ವಾತಂತ್ರ್ಯ ಹೋರಾಟ ಮತ್ತು ನವಭಾರತ ನಿರ್ಮಾಣದಲ್ಲಿ ನೆಹರು ಅವರ ಪಾತ್ರ ಬಹಳ ಹಿರಿದು. ಇದು ನಿಮಗೂ ಗೊತ್ತಿದೆ. ಈ ಇತಿಹಾಸ ಓದಿಯೇ …

Read More »

ನಾವು ಸರ್ಕಾರ ನಡೆಸುತ್ತಿಲ್ಲ, ಮ್ಯಾನೇಜ್ಮೆಂಟ್ ಮಾಡುತ್ತಿದ್ದೇವೆ? ಮಾಧುಸ್ವಾಮಿ

ಬೆಂಗಳೂರು: ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಚನ್ನಪಟ್ಡಣದ ಸಮಾಜ ಸೇವಕರೊಬ್ಬರ ಜೊತೆಗೆ ಮಾತನಾಡಿದ್ದಾರೆ ಎನ್ನಲಾದ ದೂರವಾಣಿ ಸಂಭಾಷಣೆ ಇದೀಗ ಚರ್ಚೆಗೆ ಗ್ರಾಸವಾಗಿದೆ. ದೂರವಾಣಿ ಸಂಭಾಷಣೆಯಲ್ಲಿ ತಮ್ಮದೇ ಸರ್ಕಾರದ ವಿರುದ್ಧ ಸಚಿವರು ಅಸಮಾಧಾನ ಹೊರಹಾಕಿದ್ದಾರೆ ಎನ್ನುವ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದೆ. ಸಚಿವ ಮಾಧುಸ್ವಾಮಿಯವರದ್ದು ಎನ್ನಲಾದ ಈ ದೂರವಾಣಿ ಸಂಭಾಷಣೆಯನ್ನು ಟ್ವೀಟ್ ಮಾಡಿರುವ ಕಾಂಗ್ರೆಸ್​, ಬಿಜೆಪಿ ಸರ್ಕಾರದ ನಿಷ್ಕ್ರೀಯತೆ, ಸಚಿವರುಗಳ ಅಸಾಮರ್ಥ್ಯ, ರೈತರಿಗೆ ಎಸಗುತ್ತಿರುವ ಅನ್ಯಾಯಗಳು ಸಚಿವ ಮಾಧುಸ್ವಾಮಿಯವರಿಂದ ಬಯಲಾಗಿದೆ. ಬಿಜೆಪಿ ಸರ್ಕಾರದಲ್ಲಿ …

Read More »

ನಿಮ್ಮ ನಾಯಕರ ರಂಗಬಿರಂಗಿ ರಾತ್ರಿ ಬದುಕಿನ ಸಿಡಿ ಸಾಕಷ್ಟಿದೆ:ಪ್ರಿಯಾಂಕ್ ಗೆ ಬಿಜೆಪಿ ತಿರುಗೇಟು

ಬೆಂಗಳೂರು: ಇದು ಲಂಚ – ಮಂಚದ ಸರಕಾರ ಎಂದು ಆರೋಪಿಸಿದ್ದ ಮಾಜಿ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಬಿಜೆಪಿ ತಿರುಗೇಟು ನೀಡಿದ್ದು, ಕಾಂಗ್ರೆಸ್ ನಾಯಕರ ರಂಗಬಿರಂಗಿ ಬಗ್ಗೆ ಸಾಕಷ್ಟು ದಂತಕತೆ ಮಾತ್ರವಲ್ಲ, ಸಿಡಿಗಳೂ ಇವೆ ಎಂದು ಎಚ್ಚರಿಸಿದೆ.   ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಬಿಜೆಪಿ ಪ್ರಿಯಾಂಕ್ ಖರ್ಗೆ ಅವರೇ, ಸಹಾಯ ಮಾಡುವುದಾಗಿ ನಂಬಿಸಿ ಅಸಹಾಯಕ ಹೆಣ್ಣೊಬ್ಬಳ‌ ಮೇಲೆ ಮೇಟಿ ಲೈಂಗಿಕ ದೌರ್ಜನ್ಯ ಎಸಗಿದ್ದು ನಿಮ್ಮ ಕಾಲದಲ್ಲೇ ಅಲ್ಲವೇ? …

Read More »

ಅಂಗಾಂಗ ದಾನಕ್ಕೆ ನಾನು ಹೆಸರು ನೋಂದಾಯಿಸಿದ್ದೇನೆ, ನೀವು ಕೂಡ ನೋಂದಾಯಿಸಿ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ವಿಶ್ವ ಅಂಗಾಂಗ ದಾನ ದಿನಾಚರಣೆ ಪ್ರಯುಕ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಅಂಗಾಂಗ ದಾನಕ್ಕೆ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ವಿಶ್ವ ಅಂಗಾಂಗ ದಾನ ದಿನಾಚರಣೆ ಹಿನ್ನೆಲೆ ಆರೋಗ್ಯ ಇಲಾಖೆಯಿಂದ ಆಯೋಜಿಸಲಾದ ವಿಶೇಷ ಜಾಗೃತಿ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಅಂಗಾಂಗ ದಾನಕ್ಕೆ ಹೆಸರು ನೋಂದಾಯಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅಂಗಾಂಗ ದಾನ ಮಾಡಿದ ಕುಟುಂಬಸ್ಥರನ್ನು ಮುಖ್ಯಮಂತ್ರಿಯವರು ಸನ್ಮಾನ ಮಾಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಸತ್ತ ಮೇಲೆ ನಮ್ಮ ದೇಹದಾನದಿಂದ …

Read More »

ನಳಿನ್‌ ಕುಮಾರ್‌ ಕಟೀಲ್‌ ನಿರ್ಗಮನ, ಕರ್ನಾಟಕ ಬಿಜೆಪಿಗೆ ಸಾರಥಿ ಯಾರು?

ಬೆಂಗಳೂರು, ಆಗಸ್ಟ್‌ 11: ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖುರ್ಚಿ ಅಲುಗಾಡುತ್ತಿರುವ ಬಗ್ಗೆ ಮಾತುಗಳು ಕೇಳಿಬರುತ್ತಿದೆ. ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷ ಸ್ಥಾನದಿಂದ ನಿರ್ಗಮಿಸುತ್ತಿರುವ ಬಗ್ಗೆ ಊಹಾಪೋಹಗಳು ಎದ್ದಿವೆ ಎಂದು ಮೂಲಗಳು ತಿಳಿಸಿವೆ.   ಬುಧವಾರ ಕರ್ನಾಟಕದ ಬಿಜೆಪಿ ನಾಯಕರು ನಳಿನ್ ಕುಮಾರ್ ಕಟೀಲ್ ಅವಧಿ ಮುಗಿದಾಗ ಆಗಸ್ಟ್ ಅಂತ್ಯದ ವೇಳೆಗೆ ಅಧಿಕಾರ ತ್ಯಜಿಸುತ್ತಾರೆ ಎಂದು ಸುಳಿವು ನೀಡಿದರು. ಆದಾಗ್ಯೂ ಕಟೀಲ್ ಮತ್ತು ಕೆಲವು …

Read More »

ಯಶವಂತಪುರದಿಂದ ಬೆಳಗಾವಿಗೆ ಪ್ರತಿದಿನ ವಿಶೇಷ ರೈಲು

ಬೆಂಗಳೂರು,ಆಗಸ್ಟ್‌ 10: ಪ್ರತಿದಿನ ಒಂದು ಬಾರಿ ಬೆಂಗಳೂರಿನಿಂದ ಬೆಳಗಾವಿ ಮಧ್ಯೆ ಸೂಪರ್‌ ಫಾಸ್ಟ್‌ ವಿಶೇಷ ರೈಲನ್ನು ಓಡಿಸಲು ನೈರುತ್ಯ ರೈಲ್ವೆ ಇಲಾಖೆ ನಿರ್ಧರಿಸಿದೆ. ಕೃಷ್ಣಾ ಜನ್ಮಾಷ್ಟಾಮಿ, ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣೇಶ ಚತುರ್ಥಿ ಅಂಗವಾಗಿ ಈ ಸೂಪರ್‌ ಫಾಸ್ಟ್‌ ವಿಶೇಷ ರೈಲುಗಳ ಸೇವೆ ಓದಗಿಸಲು ನೈರುತ್ಯ ರೈಲ್ವೆ ಮುಂದಾಗಿದೆ. ಆಗಸ್ಟ್‌ 12ರಂದು ರಾತ್ರಿ 9.30ಕ್ಕೆ ಯಶವಂತಪುರದಿಂದ ಹೊರಡಲಿರುವ ಈ ರೈಲು ಮಾರನೇ ದಿನ ಬೆಳಗಾವಿಗೆ 8.25ಕ್ಕೆ ತಲುಪಲಿದೆ. ಯಶವಂತಪುರ- ಬೆಳಗಾವಿ …

Read More »

ರಾಜ್ಯದಲ್ಲಿ ಹೆಚ್ಚುತ್ತಿದೆ ಹನಿಟ್ರ್ಯಾಪ್‌ ಹಾವಳಿ

ಬೆಂಗಳೂರು: ದಿಲ್ಲಿ, ಮುಂಬಯಿ, ಸೂರತ್‌ನಂತಹ ಬೃಹತ್‌ ನಗರಗಳಲ್ಲಿ ನಡೆಯುತ್ತಿದ್ದ ಹನಿಟ್ರ್ಯಾಪ್‌ ದಂಧೆ ಈಗ ರಾಜ್ಯಾದ್ಯಂತ ವಿಸ್ತರಿಸಿದೆ. ಶ್ರೀಮಂತರು, ರಾಜಕಾರಣಿಗಳು, ಉದ್ಯಮಿಗಳು, ಉನ್ನತ ಹುದ್ದೆಯಲ್ಲಿರುವ ಸರಕಾರಿ ಅಧಿಕಾರಿಗಳು, ಟೆಕ್ಕಿಗಳೇ ಈ ಗ್ಯಾಂಗ್‌ನ ಟಾರ್ಗೆಟ್‌!   ರಾಜ್ಯದಲ್ಲಿ ಹನಿಟ್ರ್ಯಾಪ್‌ ದಂಧೆ ಎಗ್ಗಿಲ್ಲದೇ ನಡೆಯುತ್ತಿದ್ದು, ಸುಂದರ ಮಾನಿನಿಯರನ್ನು ಛೂ ಬಿಟ್ಟು ಶ್ರೀಮಂತ ಕುಳಗಳಿಗೆ ಗಾಳ ಹಾಕುವ ಹತ್ತಾರು ಗ್ಯಾಂಗ್‌ಗಳು ಸಕ್ರಿಯವಾಗಿದೆ. ಹನಿಟ್ರ್ಯಾಪ್‌ ಉರುಳಿಗೆ ಸಿಲುಕಿ ಲಕ್ಷಾಂತರ ರೂ. ಕಳೆದುಕೊಂಡ ಬಹಳಷ್ಟು ಮಂದಿ ಮಾನಕ್ಕೆ ಅಂಜಿ ಠಾಣೆ …

Read More »

ರಮೇಶ್ ಕುಮಾರ್ ನಾಲಿಗೆ -ಮಿದುಳಿನ ಸಂಪರ್ಕ ಕಳೆದುಕೊಂಡಿದ್ದಾರೆ: ಕುಮಾರಸ್ವಾಮಿ ಗರಂ

ಬೆಂಗಳೂರು: ವಿಧಾನಸಭೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಬಂಗಾರಪೇಟೆ ತಾಲ್ಲೂಕಿನ ಯರಗೋಳ್‌ ಜಲಾಶಯ ಉದ್ಘಾಟನೆ ವಿಳಂಬ ಕುರಿತು ಮಾತನಾಡಿದ್ದ ಕೆ.ಆರ್‌. ರಮೇಶ್‌ ಕುಮಾರ್‌, ‘ನರಗಳ ದೌರ್ಬಲ್ಯ ಇದ್ದಾಗ ಮಕ್ಕಳು ಆಗುವುದು ವಿಳಂಬವಾಗುತ್ತದೆ’ ಎಂದು ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದರು. ರಮೇಶ್‌ ಕುಮಾರ್‌ ಹೇಳಿಕೆಗೆ ಟ್ವಿಟರ್‌ನಲ್ಲಿ ಆಕ್ಷೇಪ ವ್ಯಕ್ತಪಡಿಸಿರುವ ಕುಮಾರಸ್ವಾಮಿ, ‘ವಿಕೃತ, ಕೊಳಕು ಮನಃಸ್ಥಿತಿಯ ಮಾಜಿ ಸ್ಪೀಕರ್ ರಮೇಶ್ ಕುಮಾರ್, ನಾಲಿಗೆ ಮತ್ತು ಮಿದುಳಿನ …

Read More »

ಸಾಹುಕಾರ ರಮೇಶ್‌ ಜಾರಕಿಹೊಳಿ ರಾಜಕೀಯ ನಡೆ ನಿಗೂಢ:

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಸಚಿವ ಸಂಪುಟ ವಿಸ್ತರಣೆಯ ನಿರೀಕ್ಷೆ ಇನ್ನೂ ಜೀವಂತವಾಗಿದ್ದು, ಪಕ್ಷದ ತೀರ್ಮಾವನ್ನು ನೋಡಿಕೊಂಡು ಕೆಲವು ನಾಯಕರು ತಮ್ಮ ರಾಜಕೀಯ ಭವಿಷ್ಯದ ನಿರ್ಧರಿಸುವ ಸಾಧ್ಯತೆ ಇದೆ. ರಾಜ್ಯದಲ್ಲಿ ಮೈತ್ರಿ ಸರಕಾರ ಪತನವಾಗಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಗೋಕಾಕ್‌ ಶಾಸಕ ಹಾಗೂ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರ ರಾಜಕೀಯ ನಡೆ ನಿಗೂಢವಾಗಿದ್ದು, ಸಂಪುಟ ವಿಸ್ತರಣೆ ಬಗ್ಗೆ ಪಕ್ಷದ ವರಿಷ್ಠರು ತೆಗೆದುಕೊಳ್ಳುವ ತೀರ್ಮಾನಕ್ಕಾಗಿ …

Read More »

2023ರ ವಿಧಾನಸಭೆ ಚುನಾವಣೆಗೆ ತಾಲೀಮು

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ರಾಜ್ಯ ರಾಜಕಾರಣದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಜೆಡಿಎಸ್‍ ಜನತಾ ಜಲಧಾರೆ ಸಮಾವೇಶದ ಮೂಲಕ ಈಗಾಗಲೇ ಚುನಾವಣಾ ರಣಕಹಳೆ ಮೊಳಗಿಸಿದೆ. ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ಆಚರಿಸುವ ಮೂಲಕ ಕಾಂಗ್ರೆಸ್ ಶಕ್ತಿ ಪ್ರದರ್ಶನ ನಡೆಸಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕರ್ನಾಟಕ ಭೇಟಿ ಚುನಾವಣಾ ಸಿದ್ಧತೆಗೆ ಮುನ್ನುಡಿ ಎಂದೇ ಅರ್ಥೈಸಬಹುದು. ಬಿಜೆಪಿ ಸರ್ಕಾರಕ್ಕೆ ಮೂರು ವರ್ಷ ಹಾಗೂ ಸಿಎಂ …

Read More »