ಬೆಂಗಳೂರು: ವಾಹನ ಸವಾರರಿಗೆ ಮತ್ತೆ ಶಾಕಿಂಗ್ ನ್ಯೂಸ್ ಸಿಕ್ಕಿದ್ದು, ಇಂದು ಕೂಡ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯಲ್ಲಿ ಏರಿಕೆ ಕಂಡಿದೆ. ನೆನ್ನೆ ಪೆಟ್ರೋಲ್-ಡೀಸೆಲ್ ದರಗಳಲ್ಲಿ ಏರಿಕೆ ಕಂಡುಬಂದಿದ್ದು, ಪೆಟ್ರೋಲ್ ದರದಲ್ಲಿ 36 ಪೈಸೆ ಮತ್ತು ಡೀಸೆಲ್ ದರದಲ್ಲಿ 37 ಪೈಸೆ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 35 ಪೈಸೆ ಮತ್ತು ಲೀಟರ್ ಡೀಸೆಲ್ ದರದಲ್ಲಿ 36 ಪೈಸೆ ಹೆಚ್ಚಳವಾಗಿದೆ. ಇದರಂತೆ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ …
Read More »ಶಿವಣ್ಣ ಅಭಿಮಾನಿಗಳಿಗೆ ರಸದೌತಣ – ವಿಶ್ವದಾದ್ಯಂತ ಸಾವಿರಕ್ಕೂ ಹೆಚ್ಚು ಸ್ಕ್ರೀನ್ ಮೇಲೆ ಭಜರಂಗಿ -2
ಬೆಂಗಳೂರು: ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಅಭಿನಯದ ಬಹುನಿರೀಕ್ಷಿತ ಚಿತ್ರ ಭಜರಂಗಿ 2 ಇಂದು 375 ಚಿತ್ರಮಂದಿರಗಳಲ್ಲಿ ತೆರೆಕಂಡಿದೆ. ವಿಶ್ವದಾದ್ಯಂತ 1000ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಭಜರಂಗಿ ಹವಾ ಕ್ರಿಯೆಟ್ ಮಾಡಲಿದೆ. ಜೆ.ಪಿ.ನಗರದ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಬೆಳಗ್ಗೆ 5 ಗಂಟೆಗೆ ಅಭಿಮಾನಿಗಳಿಗಾಗಿ ವಿಶೇಷ ಶೋ ಆಯೋಜನೆ ಮಾಡಲಾಗಿತ್ತು. ಮೊದಲ ಶೋ ಗಾಗಿ ತುದಿಗಾಲಲ್ಲಿ ಅಭಿಮಾನಿಗಳು ನಿಂತಿದ್ದರು. ತೆರೆ ಮೇಲೆ ಶಿವಣ್ಣನನ್ನ ನೋಡುತಿದ್ದಂತೆ ಹುಚ್ಚೆದ್ದು ಕುಣಿದ ಅಭಿಮಾನಿಗಳು, ಸ್ಕ್ರೀನ್ ಮುಂದೆ ಹೂ ಎರಚಿ …
Read More »‘ಕಂಬಳಿ ಫೈಟ್’ಗೆ ಎಂಟಿಬಿ ಎಂಟ್ರಿ -ಸಿದ್ದರಾಮಯ್ಯರ ವಿರುದ್ಧ ಗುಡುಗಿದ ನಾಗರಾಜ್
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕಂಬಳಿ ಹಾಕಿಕೊಂಡು ಚುನಾವಣೆ ಪ್ರಚಾರ ಮಾಡಿರುವ ವಿಚಾರ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಚರ್ಚೆ ಆಗ್ತಿದೆ. ಮೊನ್ನೆಯಷ್ಟೇ ಕಿಡಿಕಾರಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ, ಕಂಬಳಿ ಹಾಕಿಕೊಂಡ ತಕ್ಷಣ ಆ ಗೌರವ ಬರುತ್ತಾ..? ಎಂದು ಕಿಡಿಕಾರಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ಸಿಎಂ ಬೊಮ್ಮಾಯಿ.. ಉಣ್ಣೆಯನ್ನು ನೇಯ್ದು ಕಂಬಳಿ ಮಾಡಲಾಗುತ್ತದೆ. ಇದರ ಹಿಂದೆ ಹಾಲುಮತದವರ ಗೌರವ ಮತ್ತು ಪರಿಶ್ರಮ ಅಡಗಿದೆ. ಕಂಬಳಿ ಹೊದ್ದುಕೊಳ್ಳಲು ಯೋಗ್ಯತೆ ಇರಬೇಕು ಎಂದು ತಿರುಗೇಟು …
Read More »ಜಮೀರ್ ಅವಾಚ್ಯ ಪದ ಬಳಕೆಯಿಂದ ಕಾಂಗ್ರೆಸ್ಗೆ ಆಪತ್ತು.. ಶಿಷ್ಯನಿಗೆ ಸಿದ್ದರಾಮಯ್ಯ ಕಿವಿ ಮಾತು
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಹಾನಗಲ್ ಹಾಗೂ ಸಿಂದಗಿ ಉಪಚುನಾವಣೆಯಲ್ಲಿ ಪ್ರಚಾರ ತಾರಕ್ಕಕೇರಿದ್ದು, ನಾಯಕರ ನಡುವಿನ ವಾಕ್ ಸಮರ ವೈಯುಕ್ತಿಕ ಹಂತದವರೆಗೂ ನಡೆದಿದೆ. ಈ ನಡುವೆ ಚಾಮರಾಜಪೇಟೆ ಶಾಸಕ, ಸಿದ್ದರಾಮಯ್ಯ ಅವರ ಆಪ್ತ ಜಮೀರ್ ಅಹ್ಮದ್ ಅವರು ದಳಪತಿಗಳ ವಿರುದ್ಧ ವೈಯುಕ್ತಿಕ ನಿಂದನೆಯನ್ನು ಮಾಡಿದ್ದಾರೆ. ಆದರೆ ಜಮೀರ್ ಅವರ ನಡೆ ಸ್ವಪಕ್ಷೀಯ ನಾಯಕರಿಗೂ ಕೂಡ ಮುಜುಗರ ಮೂಡಿಸಿದ್ದು, ಈ ಬಗ್ಗೆ ಹಲವು ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂಬ ಮಾತು ಕೇಳಿ ಬಂದಿದೆ. …
Read More »ಹಾನಗಲ್ನಲ್ಲಿ ಮತ್ತೆ 3 ದಿನ ಸಿಎಂ ಮೊಕ್ಕಾಂ
ಬೆಂಗಳೂರು: ಹಾನಗಲ್ ವಿಧಾನಸಭೆ ಉಪ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ಸೋಮವಾರದಿಂದ ಮೂರು ದಿನ ಹಾನಗಲ್ನಲ್ಲಿಯೇ ಮೊಕ್ಕಾಂ ಹೂಡಲಿದ್ದಾರೆ. ರವಿವಾರ ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಬೂಸನೂರು ಪರ ಪ್ರಚಾರ ನಡೆಸಿ, ಹುಬ್ಬಳ್ಳಿಗೆ ಆಗಮಿಸಿದ್ದ ಅವರು ಸೋಮವಾರದಿಂದ ಹಾನಗಲ್ನಲ್ಲಿ ನಿರಂತರ ಪ್ರಚಾರ ಕಾರ್ಯಗಳನ್ನು ಹಮ್ಮಿಕೊಂಡಿದ್ದಾರೆಂದು ತಿಳಿದು ಬಂದಿದೆ. ಬಿಜೆಪಿಯ ಗೆಲುವಿನ ಅಂತರವನ್ನು ಹೆಚ್ಚಿಸುವ ಮೂಲಕ ತಮ್ಮ ನಾಯಕತ್ವವನ್ನು ಸಾಬೀತುಪಡಿಸಲು ಸಿಎಂ ಈ ಕಾರ್ಯತಂತ್ರ ರೂಪಿಸಿದ್ದಾರೆ ಎನ್ನಲಾಗುತ್ತಿದೆ. ಬಿಎಸ್ವೈ …
Read More »ಸಿಎಎ ವಿರೋಧಿಸಿ ಮಂಗಳೂರು ಗಲಭೆ ಪ್ರಕರಣ: ‘ಪೊಲೀಸರು ತಪ್ಪಿತಸ್ಥರಲ್ಲ’ ಎಂದ ಸರ್ಕಾರ
ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ನಡೆದ ಗೋಲಿಬಾರ್ ಪ್ರಕರಣದಲ್ಲಿ ಪೊಲೀಸರು ತಪ್ಪಿತಸ್ಥರಲ್ಲ ಎಂದು ಸರ್ಕಾರ ಹೈಕೋರ್ಟ್ ಗೆ ತಿಳಿಸಿದೆ. ಗೋಲಿಬಾರ್ ಘಟನೆ ಸಂಬಂಧ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರ ಶುಕ್ರವಾರ ಈ ಮಾಹಿತಿ ನೀಡಿದೆ. ಗೋಲಿಬಾರ್ ಘಟನೆ ಸಂಬಂಧ ಮ್ಯಾಜಿಸ್ಟ್ರೇಟ್ ತನಿಖೆ ಮುಗಿದಿದೆ. ತನಿಖಾ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ …
Read More »ಕ್ಯಾಸಿನೊಗಳಲ್ಲಿ ಹಣ ಹೂಡಿಕೆ ಹೆಸರಲ್ಲಿ ವಂಚನೆ ಎಸಗಿದ್ದಾರೆ ಎಂದು ಆರೋಪಿಸಿ ಆಪ್ತ ಸ್ನೇಹಿತನ ವಿರುದ್ಧ ಸ್ಯಾಂಡಲ್ವುಡ್ ಸ್ಟಾರ್ ನಟಿ ಸಂಜಾನಿ ಗಲ್ರಾನಿ ಕೋರ್ಟ್ ಮೆಟ್ಟಿಲೇರಿದ್ದಾರೆ.
ಬೆಂಗಳೂರು: ಕ್ಯಾಸಿನೊಗಳಲ್ಲಿ ಹಣ ಹೂಡಿಕೆ ಹೆಸರಲ್ಲಿ ವಂಚನೆ ಎಸಗಿದ್ದಾರೆ ಎಂದು ಆರೋಪಿಸಿ ಆಪ್ತ ಸ್ನೇಹಿತನ ವಿರುದ್ಧ ಸ್ಯಾಂಡಲ್ವುಡ್ ಸ್ಟಾರ್ ನಟಿ ಸಂಜಾನಿ ಗಲ್ರಾನಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಕೋರ್ಟ್ ಸೂಚನೆ ಮೇರೆಗೆ ನಗರದ ಇಂದಿರಾನಗರ ಠಾಣೆಯಲ್ಲಿ ಸಂಜನಾ ಆಪ್ತ ಸ್ನೇಹಿತ ರಾಹುಲ್ ತೋನ್ಸೆ ವಿರುದ್ಧ ಎಫ್ಐಆರ್ ದಾಖಲಾಗಿದೆ. ದೂರಿನಲ್ಲಿ ಏನಿದೆ? ನನ್ನ ಸ್ನೇಹಿತನಾದ ರಾಹುಲ್, ಆತ ಹೇಳಿದ ಕಡೆಯಲ್ಲಿ ಹಣ ಹೂಡಿಕೆ ಮಾಡಿದರೆ ಅಧಿಕ ಲಾಭ ಗಳಿಸಬಹುದು ಎಂದು ನಂಬಿಸಿ, ರಾಮಕೃಷ್ಣ …
Read More »ಅವಿವೇಕಿ ಬಿಜೆಪಿ ರಾಜ್ಯಾಧ್ಯಕ್ಷ; ತಲೆಕೆಟ್ಟು ಮಾತನಾಡುತ್ತಿದ್ದಾರೆ; ನಳೀನ್ ಕುಮಾರ್ ಕಟೀಲ್ ವಿರುದ್ಧ ದಿನೇಶ್ ಗುಂಡೂರಾವ್ ವಾಗ್ದಾಳಿ
ಬೆಂಗಳೂರು: ರಾಹುಲ್ ಗಾಂಧಿ ಓರ್ವ ಡ್ರಗ್ ಅಡಿಕ್ಟ್, ಪೆಡ್ಲರ್ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆಗೆ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅವಿವೇಕಿಯನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಲಾಗಿದೆ. ಮೊದಲು ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದೆ. ನಳೀನ್ ಕುಮಾರ್ ಕಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್, ನಳೀನ್ ಕುಮಾರ್ ಕಟೀಲ್ ಒಬ್ಬ ಅವಿವೇಕಿ, ತಲೆ ಕೆಟ್ಟಿದೆ. ಅವರು ಮಾನಸಿಕ ಅಸ್ವಸ್ಥರಾಗಿದ್ದಾರೆ. ಅವರ ಮನಸ್ಸು …
Read More »ಮಂಡ್ಯ ಮೈಶುಗರ್ ಕಾರ್ಖಾನೆ ಪುನಶ್ಚೇತನ: ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ
ಬೆಂಗಳೂರು : ಮಂಡ್ಯದ ಮೈಶುಗರ್ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಮಹತ್ವದ ಸಭೆ ನಡೆಸಲಾಯಿತು. ವಿಧಾನಸೌಧದ ಕಾನ್ಫರೆನ್ಸ್ ಹಾಲ್ ನಲ್ಲಿ ನಡೆದ ಸಭೆಯಲ್ಲಿ ಮಂಡ್ಯ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ರೈತ ಮುಖಂಡರು ಭಾಗಿಯಾಗಿ ತಮ್ಮ ಅಭಿಪ್ರಾಯ ಮುಂದಿಟ್ಟರು. ಸಭೆಯಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ, ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ಸಕ್ಕರೆ ಸಚಿವ ಶಂಕರಪಾಟೀಲ್ ಮುನೇನಕೊಪ್ಪ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್,ಹಣಕಾಸು …
Read More »ಕೊನೆಗೂ ಬೆಂಗಳೂರು ಸಿಟಿ ರೌಂಡ್ಸ್ಗೆ ಬಂದ್ರು ಸಿಎಂ ಬೊಮ್ಮಾಯಿ..!
ಬೆಂಗಳೂರು: ಕಳೆದೊಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಗರದಲ್ಲಿ ಸಾಲು ಸಾಲು ಅವಘಡ ಸಂಭವಿಸುತ್ತಿವೆ. ವಾಸ್ತವ ಸ್ಥಿತಿ ಅರಿಯುವ ಉದ್ದೇಶದಿಂದ ಸಿಎಂ ಬಸವರಾಜ್ ಬೊಮ್ಮಾಯಿ, ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಸಿಟಿ ರೌಂಡ್ಸ್ ಆರಂಭಿಸಿದ್ದಾರೆ. ಬೆಳ್ಳಂಬೆಳಗ್ಗೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಕಸ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿದರು. ಬಳಿಕ ಮಳೆಯಿಂದ ಅವಘಡಕ್ಕೊಳಗಾದ ತಗ್ಗು ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ರಸ್ತೆ ಗುಂಡಿಗಳು, ಟ್ರಾಫಿಕ್ ಜಾಮ್ ಜಂಕ್ಷನ್ಸ್, ಅರ್ಧಕ್ಕೆ ನಿಂತಿರುವ ಕಾಮಗಾರಿಗಳು ಹಾಗೂ ರಾಜಕಾಲುವೆಯನ್ನು …
Read More »
Laxmi News 24×7