ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಪಡಿಸಿದ್ದಲ್ಲದೇ, ಸೂಸೈಡ್ ಮತ್ತು ಸುಪಾರಿ ಭಾಗ್ಯ ನೀಡಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಎಂದು ಬರೆದಿರುವ ಪೋಸ್ಟರ್ಗಳನ್ನು ಸಾರ್ವಜನಿಕ ಶೌಚಾಲಯದ ಗೋಡೆಗೆ ಅಂಟಿಸಿ ನಗರದ ಸೌಂದರ್ಯಕ್ಕೆ ಧಕ್ಕೆ ತಂದ ಆರೋಪದಡಿ ಬಿಜೆಪಿ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಸಿ.ಟಿ.ರವಿ ಮತ್ತಿತರರ ವಿರುದ್ಧದ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಪ್ರಕರಣ ಸಂಬಂಧ ತಮ್ಮ ವಿರುದ್ಧ ಹೈಗ್ರೌಂಡ್ಸ್ ಠಾಣಾ ಪೊಲೀಸರು …
Read More »ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಅಲ್ಪಸಂಖ್ಯಾತರಿಗೆ ವಸತಿ ಮೀಸಲಾತಿ ಹೆಚ್ಚಳ: ಸಿಎಂ ಸಮರ್ಥನೆ
ಬೆಂಗಳೂರು: “ವಸತಿ ಮೀಸಲಾತಿ ಹೆಚ್ಚಳ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿರುವ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಆಧಾರದ ಮೇಲೆ ತೆಗೆದುಕೊಂಡ ತೀರ್ಮಾನವಾಗಿದೆ” ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, “ರಾಜ್ಯ ಸರ್ಕಾರದ ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ರಿಶ್ಚಿಯನ್, ಮುಸ್ಲಿಂ, ಜೈನರು ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಗಳ ಫಲಾನುಭವಿಗಳ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಸಚಿವ ಸಂಪುಟವು ಒಂದು ನಿರ್ಣಯವನ್ನು ಕೈಗೊಂಡಿದೆ. ಇದು …
Read More »ಬಿಎಸ್ವೈ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿಗೆ ವಿಳಂಬ: ರಾಜ್ಯಪಾಲರ ಕಚೇರಿಗೆ ಹೈಕೋರ್ಟ್ ನೋಟಿಸ್
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಕೈಗಾರಿಕಾ ಪ್ರದೇಶದಲ್ಲಿ 187 ಕೋಟಿ ರೂ. ಬೆಲೆಬಾಳುವ 116.17 ಎಕರೆ ಜಮೀನನ್ನು ಕೇವಲ 50 ಕೋಟಿ ರೂ.ಗೆ ಸೆಂಟರ್ ಫಾರ್ ಎಜುಕೇಷನ್ ಆ್ಯಂಡ್ ಸೋಷಿಯಲ್ ಸ್ಟಡೀಸ್ (ಸಿಇಎಸ್ಎಸ್) ಸಂಸ್ಥೆಗೆ ಮಂಜೂರು ಮಾಡಿರುವ ಆರೋಪ ಪ್ರಕರಣದಲ್ಲಿ ಲೋಕಾಯುಕ್ತ ವಿಶೇಷ ನ್ಯಾಯಾಲಯದ ವಿಚಾರಣೆಗೆ (ಪ್ರಾಸಿಕ್ಯೂಷನ್) ಪೂರ್ವಾನುಮತಿ ಕೋರಿ ಸಲ್ಲಿಸಿರುವ ಅರ್ಜಿ ಇತ್ಯರ್ಥಪಡಿಸಲು ವಿಳಂಬ ಮಾಡುತ್ತಿರುವ ಸಂಬಂಧ ರಾಜ್ಯಪಾಲರ ಕಚೇರಿ ಮತ್ತು ಲೋಕಾಯುಕ್ತ ಸಂಸ್ಥೆಗೆ ಹೈಕೋರ್ಟ್ ನೋಟಿಸ್ ಜಾರಿ …
Read More »ಬ್ರೇಕ್ ಫೆಲ್ಯೂರ್ ಆಗಿ ಬೈಕ್ – ಕಾರಿಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್
ಬೆಂಗಳೂರು : ಬ್ರೇಕ್ ಫೆಲ್ಯೂರ್ ಆಗಿ ಶಾಲಾ ಬಸ್ವೊಂದು ನಿಯಂತ್ರಣ ತಪ್ಪಿ ಕಾರು ಹಾಗೂ ಬೈಕ್ಗೆ ಡಿಕ್ಕಿ ಹೊಡೆದಿರುವ ಘಟನೆ ಬುಧವಾರ ಬೆಳಗ್ಗೆ ಮಹದೇವಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಕನ್ನಮಂಗಲ ಗೇಟ್ನಿಂದ ವೈಟ್ ಫೀಲ್ಡ್ ಕಡೆ ಹೋಗುವಾಗ ಈ ದುರ್ಘಟನೆ ನಡೆದಿದೆ. ಜೈನ್ ಹೆರಿಟೇಜ್ ಶಾಲೆಯ ಬಸ್ ಇದಾಗಿದೆ. ಮಕ್ಕಳನ್ನ ಶಾಲೆಗೆ ಬಿಟ್ಟು ಇಂಧನ ತುಂಬಿಸಿಕೊಳ್ಳಲು ಬಸ್ ಚಾಲಕ ಪೆಟ್ರೋಲ್ ಬಂಕ್ಗೆ ಹೋಗುವಾಗ ಬ್ರೇಕ್ …
Read More »ಇಸ್ರೇಲ್ ನಿಂದ ತವರಿಗೆ ಬಂದ ಕನ್ನಡಿಗರು
ಬೆಂಗಳೂರು : ಪೌರಾಡಳಿತ ಅಧ್ಯಯನಕ್ಕೆಂದು ಇಸ್ರೇಲ್ ಪ್ರವಾಸಕ್ಕೆ ರಾಜ್ಯದಿಂದ ತೆರಳಿದ್ದ 18 ಜನರ ತಂಡ ರಾಜ್ಯಕ್ಕೆ ಗುರುವಾರ ಹಿಂದಿರುಗಿದೆ. ಇಸ್ರೇಲ್ ದೇಶದಲ್ಲಿ ಪೌರಾಡಳಿತ ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂಬುದನ್ನು ಅಧ್ಯಯನ ಮಾಡುವುದಕ್ಕಾಗಿ ರಾಜ್ಯದಿಂದ ಬಿ ಪ್ಯಾಕ್ ತಂಡದಲ್ಲಿ 18 ಜನರು ತೆರಳಿದ್ದರು. ಇರಾನ್ -ಇಸ್ರೇಲ್ ದೇಶಗಳ ನಡುವೆ ಕಳೆದ ಕೆಲ ದಿನಗಳಿಂದ ಭೀಕರ ಯುದ್ಧ ನಡೆಯುತ್ತಿದೆ. ಈ ಮಧ್ಯೆ ಇಸ್ರೇಲ್ನಲ್ಲಿ ಸಿಲುಕಿದ್ದವರನ್ನು ಸುರಕ್ಷಿತವಾಗಿ ಕರೆತರಲಾಗಿದೆ. ಇಸ್ರೇಲ್ ನಿಂದ ಕುವೈತ್, ಕುವೈತ್ನಿಂದ ಮುಂಬೈ …
Read More »ಮಳೆಹಾನಿ ಸಂತ್ರಸ್ತರಿಗೆ ಪರಿಹಾರ ಬಿಡುಗಡೆ ಮಾಡಿದ ಸರ್ಕಾರ, ಯಾರಿಗೆ ಎಷ್ಟು ಹಣ ಸಿಗುತ್ತೆ?
ಬೆಂಗಳೂರು, (ಜೂನ್ 18): 2025-26ನೇ ಸಾಲಿನಲ್ಲಿ ಕರ್ನಾಟಕದ (Karnataka)ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ನಿಗದಿತ ಸಮಯಕ್ಕಿಂತ ಮೊದಲೇ ಮುಂಗಾರು ಮಳೆ (Monsoon Rains) ಪ್ರಾರಂಭವಾಗಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ಥವಾಗಿದೆ. ಹೀಗಾಗಿ ರಾಜ್ಯ ಸರ್ಕಾರ, ಅತಿವೃಷ್ಟಿ / ಪ್ರವಾಹದಿಂದ ಹಾನಿಯಾದ ಮನೆಗಳ ಹಾಗೂ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ಥರಿಗೆ ಪರಿಹಾರ ಬಿಡುಗಡೆ ಮಾಡಿದೆ. ನಿಯಾಮಾನುಸಾರ ಅರ್ಹತೆಯಂತೆ ಜಿಲ್ಲಾಧಿಕಾರಿಗಳ ಹಂತದಲ್ಲಿಯೇ ಅವರ ಪಿ.ಡಿ. ಖಾತೆಯಲ್ಲಿ ಲಭ್ಯವಿರುವ ಅನುದಾನದಿಂದ ಪರಿಹಾರ ಪಾವತಿಸಲು ಆದೇಶ ಹೊರಡಿಸಿದೆ. 1-4-2025ರಿಂದ …
Read More »ಬಂಧನ ಭೀತಿಯಿಂದ ಪಾರಾಗಲು ನಿರೀಕ್ಷಣಾ ಜಾಮೀನಿಗೆ ಮೊರೆ ಹೋದ ಲೋಕಾಯುಕ್ತ ಐಪಿಎಸ್
ಬೆಂಗಳೂರು: ಭ್ರಷ್ಟರ ವಿರುದ್ಧ ಸಮರ ಸಾರಬೇಕಿದ್ದ ಲೋಕಾಯುಕ್ತ ಅಧಿಕಾರಿಗಳೇ ಭ್ರಷ್ಟರಾಗಿರುವ ಗಂಭೀರ ಆರೋಪ ಕೇಳಿಬಂದಿದೆ. ಅಬಕಾರಿ ಇಲಾಖೆಯ ಅಧಿಕಾರಿಗಳನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಹೆಡ್ ಕಾನ್ ಸ್ಟೇಬಲ್ ನಿಂಗಪ್ಪ ಜೊತೆ ಸಂಪರ್ಕದಲ್ಲಿದ್ದ ಲೋಕಾಯುಕ್ತ ಎಸ್ಪಿ-1 ಆಗಿದ್ದ ಶ್ರೀನಾಥ್ ಮಹದೇವನ್ ಜೋಷಿ ಅವರು ಬಂಧನ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ಲೋಕಾಯುಕ್ತ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಲೋಕಾಯುಕ್ತದಲ್ಲಿ ಲಂಚಾವತಾರ ಆರೋಪ ಭುಗಿಲೆದ್ದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ …
Read More »ಐಶ್ವರ್ಯ ಗೌಡ ವಿರುದ್ಧ ವಂಚನೆ ಪ್ರಕರಣ: ಸಿಐಡಿ ತನಿಖೆಗೆ ಆದೇಶಿಸಿದ ಪೊಲೀಸ್ ಇಲಾಖೆ
ಬೆಂಗಳೂರು: ಮಾಜಿ ಸಂಸದ ಡಿ.ಕೆ.ಸುರೇಶ್ ಸಹೋದರಿ ಸೋಗಿನಲ್ಲಿ ಚಿನ್ನದ ವ್ಯಾಪಾರಿಗೆ ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಕುರಿತು ಐಶ್ವರ್ಯ ಗೌಡ ವಿರುದ್ಧ ದಾಖಲಾಗಿದ್ದ ವಂಚನೆ ಪ್ರಕರಣಗಳ ಸಮಗ್ರ ತನಿಖೆ ನಡೆಸುವಂತೆ ಸಿಐಡಿಗೆ ಪೊಲೀಸ್ ಇಲಾಖೆಯು ಆದೇಶಿಸಿದೆ. ಚಂದ್ರಾಲೇಔಟ್, ಆರ್.ಆರ್. ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ನಾಲ್ಕು ಪ್ರಕರಣಗಳು ಹಾಗೂ ಮಂಡ್ಯದಲ್ಲಿ ದಾಖಲಾಗಿದ್ದ ಎರಡು ಪ್ರಕರಣ ಸೇರಿದಂತೆ ಒಟ್ಟು ಆರು ಪ್ರಕರಣಗಳನ್ನು ತನಿಖೆ ನಡೆಸುವಂತೆ ಇಲಾಖೆಯು ಸಿಐಡಿಗೆ ಆದೇಶಿಸಿದೆ. ಡಿ.ಕೆ. ಸುರೇಶ್ …
Read More »ಸರ್ಕಾರಿ ಅಧಿಕಾರಿಗಳಿಂದ ಹಣ ಸುಲಿದು ಕ್ರಿಪ್ಟೋದಲ್ಲಿ ಹೂಡಿಕೆ ಮಾಡುತ್ತಿದ್ದ ಮಾಜಿ ಕಾನ್ಸ್ಟೇಬಲ್ ನಿಂಗಪ್ಪ
ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳಿಂದ ದಾಳಿಯ ಭೀತಿ ಹುಟ್ಟಿಸಿ ಸರ್ಕಾರಿ ಅಧಿಕಾರಿಗಳಿಂದ ತಿಂಗಳಿಗೆ ಲಕ್ಷಾಂತರ ರೂಪಾಯಿ ಹಣ ಪಡೆಯುತ್ತಿದ್ದುದಾಗಿ ಮಾಜಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ನಿಂಗಪ್ಪ ತನಿಖಾಧಿಕಾರಿಗಳ ಮುಂದೆ ಒಪ್ಪಿಕೊಂಡಿದ್ದಾನೆ. ಚಿತ್ರದುರ್ಗದ ನಿಂಗಪ್ಪ ಅಲಿಯಾಸ್ ಸಾವಂತ್ ವಿರುದ್ಧ ಲೋಕಾಯುಕ್ತ ಹಿರಿಯ ಅಧಿಕಾರಿಗಳ ಹೆಸರು ದುರ್ಬಳಕೆ ಮಾಡಿಕೊಂಡು ಅಬಕಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಹಣ ವಸೂಲಿ ಮಾಡುತ್ತಿದ್ದ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದಾಗ, ತಾನು ಕಳೆದ ಆರು …
Read More »2025-26ನೇ ಸಾಲಿನ ಸರ್ಕಾರಿ ನೌಕರರ ವರ್ಗಾವಣೆ ಮಾರ್ಗಸೂಚಿ ಹೊರಡಿಸಿದ ಸರ್ಕಾರ
2025-26ನೇ ಸಾಲಿನ ಸರ್ಕಾರಿ ನೌಕರರ ವರ್ಗಾವಣೆ ಮಾರ್ಗಸೂಚಿ ಹೊರಡಿಸಿದ ಸರ್ಕಾರ ಬೆಂಗಳೂರು: 2025-26ನೇ ಸಾಲಿನಲ್ಲಿ ಮಾಡುವ ಸರ್ಕಾರಿ ನೌಕರರ ವರ್ಗಾವಣೆಗಳನ್ನು ನಿಯಂತ್ರಿಸಲು ಸರ್ಕಾರ ವರ್ಗಾವಣೆ ಮಾರ್ಗಸೂಚಿ ಹೊರಡಿಸಿದೆ. ಈ ಆದೇಶದ ಕಂಡಿಕೆ 4ರಲ್ಲಿ 2025-26ನೇ ಸಾಲಿನ ಸಾರ್ವತ್ರಿಕ ವರ್ಗಾವಣೆಗಳನ್ನು ಸದರಿ ಆದೇಶದಲ್ಲಿ ವಿವರಿಸಿರುವ ಷರತ್ತುಗಳಿಗೊಳಪಟ್ಟು ಮೇ 12 ರಿಂದ ಜೂನ್ 14ರ ವರೆಗೆ ಕೈಗೊಳ್ಳಲು ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಆಯಾ ಇಲಾಖಾ ಸಚಿವರಿಗೆ ಹಾಗೂ ಗ್ರೂಪ್-ಸಿ …
Read More »