Breaking News

ಬೆಂಗಳೂರು

ಸೈಟ್ ಮಾರಾಟ ಮಾಡಿಕೊಡುವುದಾಗಿ ನಂಬಿಸಿ ನಿವೃತ್ತ ಎಸಿಪಿಗೆ ವಂಚನೆ

ಬೆಂಗಳೂರು: ಸೈಟ್ ಮಾರಾಟ ಮಾಡಿಕೊಡುವುದಾಗಿ ನಂಬಿಸಿ ನಿವೃತ್ತ ಎಸಿಪಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪೆನಿ ಒಂದರ ವಿರುದ್ಧ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿವೃತ್ತ ಎಸಿಪಿ ಲವಕುಮಾರ್ ಎಂಬುವರು ಜಿಗಣಿಯ ನವ್ಯ ಲೇಔಟ್‍ನಲ್ಲಿ 90 ಲಕ್ಷ ಮೌಲ್ಯದ ಮೂರು ನಿವೇಶನ ಹೊಂದಿದ್ದರು. ಕೆಲದಿನಗಳ ಹಿಂದೆ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುವ ನಿರ್ಮಾಣ್ ಶೆಲ್ಟರ್ಸ್ ಕಂಪೆನಿ ಸಂಪರ್ಕಿಸಿ ತಮ್ಮ ಬಳಿಯಿರುವ ನಿವೇಶನಗಳನ್ನು ಮಾರಾಟ ಮಾಡಿಕೊಡಿಕೊಡುವುದಾಗಿ ಹೇಳಿದ್ದು, …

Read More »

ಕುಡಿದು ವಾಹನ ಚಾಲನೆ ಮಾಡಿದ್ರೆ ಹುಷಾರ್‌. ಪೊಲೀಸರಿಂದ ಸ್ಟ್ರಿಕ್ಟ್‌ ತಪಾಸಣೆ!

ಬೆಂಗಳೂರು: ನಗರದಲ್ಲಿ ಇತ್ತೀಚೆಗೆ ಸಾಲು ಸಾಲು ಅಪಘಾತಗಳು ಸಂಭವಿಸಿದ್ದು, ಸಾವು-ನೋವುಗಳಾಗಿವೆ. ಇದರಿಂದ ಎಚ್ಚೆತ್ತ ಟ್ರಾಫಿಕ್‌ ಪೊಲೀಸರು ಟಫ್‌ ರೂಲ್ಸ್‌ಗೆ ಮುಂದಾಗಿದ್ದು, ಸ್ಟ್ರಿಕ್ಟ್‌ ಆಗಿ ತಪಾಸಣೆ ನಡೆಸುತ್ತಿದ್ದಾರೆ. ಒಂದೂವರೆ ವರ್ಷದ ಬಳಿಕ ಮತ್ತೆ ಪೊಲೀಸರು, ಕುಡಿದು ವಾಹನ ಚಲಾಯಿಸುವವರ ಪರೀಕ್ಷೆ ಆರಂಭಿಸಿದ್ದಾರೆ. ವಾರದಲ್ಲಿ ಮೂರು ದಿನ ಡ್ರಂಕ್‌ ಅಂಡ್ ಡ್ರೈವ್ ಚೆಕ್ ಮಾಡುವಂತೆ ಆದೇಶಿಸಲಾಗಿದೆ. ವೀಕೆಂಡ್‌ನಲ್ಲಿ ಕುಡಿದು ವಾಹನ ಚಾಲನೆ ಮಾಡುವವರಿಗೆ ಖಡಕ್‌ ಎಚ್ಚರಿಕೆ ನೀಡಲಾಗಿದೆ. ಕುಡಿದು ಕಾರಲ್ಲಿ ಮೋಜು-ಮಸ್ತಿ ಮಾಡಿಕೊಂಡು …

Read More »

ಸಾಮಾಜಿಕ ಜಾಲತಾಣಗಳಲ್ಲಿ ಯುವತಿಯರ ಹೆಸರಲ್ಲಿ ನಕಲಿ ಖಾತೆ ತೆರೆದು ವಂಚನೆ: ಖದೀಮರ ಬಂಧನ

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಯುವತಿಯರ ಹೆಸರಲ್ಲಿ ನಕಲಿ ಖಾತೆ ತೆರೆದು, ವಂಚಿಸುತ್ತಿದ್ದ ಮೂವರನ್ನು ಸಿಐಡಿ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಹರಿಯಾಣದ ಮುಜಾಹಿದ್, ಇಕ್ಬಾಲ್ ಮತ್ತು ಆಸಿಫ್ ಬಂಧಿತರಾಗಿದ್ದು, ಉಳಿದವರಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಜಾಲತಾಣಗಳಲ್ಲಿ ಪುರುಷರನ್ನು ಪರಿಚಯ ಮಾಡಿಕೊಂಡು ಅವರ ಜತೆ ಸಲುಗೆಯಿಂದ ಮಾತಾಡಿ, ಅವರ ಬೆತ್ತಲೆ ವಿಡಿಯೋವನ್ನು ಸೆರೆಹಿಡಿದು ಈ ಗ್ಯಾಂಗ್ ಬ್ಲ್ಯಾಕ್ ಮೇಲ್ ಮಾಡುತ್ತಿತ್ತು ಎಂದು ತಿಳಿದುಬಂದಿದೆ. ಸೈಬರ್ ಖದೀಮರು ಸಾಮಾಜಿಕ ಜಾಲತಾಣಗಳಲ್ಲಿ ಯುವತಿಯರ ಸೋಗಿನಲ್ಲಿ …

Read More »

14ನೇ ವಯಸ್ಸಿನೊಳಗೇ ಶುರುವಾಗುತ್ತವೆ ಶೇಕಡಾ 50ರಷ್ಟು ಮಾನಸಿಕ ಸಮಸ್ಯೆಗಳು; ಮಕ್ಕಳಿಗೆ ಉತ್ತಮ ಬಾಲ್ಯ ರೂಪಿಸಲು ಸಲಹೆ

ಮನುಷ್ಯನ ಅನುಭವಿಸಬಹುದಾದ ಅರ್ಧಕ್ಕಿಂತ ಹೆಚ್ಚು ಮಾನಸಿಕ ಸಮಸ್ಯೆಗಳು 14 ವರ್ಷಕ್ಕಿಂತ ಮುನ್ನವೇ ಆರಂಭವಾಗಿರುತ್ತದೆ ಎಂದು ಚಂಡೀಗಡದ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ ಮಾನಸಿಕ ವಿಭಾಗದ ಮುಖ್ಯಸ್ಥೆ ಡಾ.ಸವಿತಾ ಮಲ್ಹೋತ್ರಾ ತಿಳಿಸಿದ್ದಾರೆ. ಪ್ರತಿಯೊಬ್ಬನ ಬಾಲ್ಯದ ಜೀವನ ಜೀವನದ ಉದ್ದಕ್ಖೂ ಪ್ರಭಾವ ಬೀರುತ್ತದೆ. ಹೀಗಾಗಿ ಬಾಲ್ಯದ ಜೀವನ ಅತ್ಯಂತ ಉತ್ತಮವಾಗಿರುವುದು ಮುಖ್ಯ ಎಂದು ಅವರು ತಿಳಿಸಿದ್ದಾರೆ. ‘ಮಕ್ಕಳ ಮಾನಸಿಕ ಆರೋಗ್ಯ- ಮಾನಸಿಕ ಆರೋಗ್ಯದ ವಿಶ್ವ’ ಎಂಬ ವಿಷಯದ ಅಡಿ ಉಪನ್ಯಾಸ …

Read More »

ಕರ್ನಾಟಕದಲ್ಲಿ ಹೊಸದಾಗಿ 1,003 ಜನರಿಗೆ ಕೊರೊನಾ ದೃಢ; 18 ಮಂದಿ ಸಾವು

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಸೆಪ್ಟೆಂಬರ್ 17) ಹೊಸದಾಗಿ 1,003 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,66,194 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,12,633 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 18 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,573 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 15,960 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ …

Read More »

IPS Bhaskar Rao: ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿಗೆ ಒಪ್ಪಿಗೆ ಸೂಚಿಸಿದ ಪ್ರವೀಣ್ ಸೂದ್

ಬೆಂಗಳೂರು: ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿಗೆ ಪೊಲೀಸ್​​ ಮಹಾನಿರ್ದೇಶಕ ಪ್ರವೀಣ್ ಸೂದ್​ರಿಂದ ಒಪ್ಪಿಗೆ ಸಿಕ್ಕಿದೆ. ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿಗೆ ಡಿಜಿ, ಐಜಿಪಿ ಒಪ್ಪಿಗೆ ಸೂಚಿಸಿದ್ದಾರೆ. ಕ್ಲಿಯರೆನ್ಸ್ ನೀಡಿ ರಾಜ್ಯ ಸರ್ಕಾರಕ್ಕೆ ಕಡತ ರವಾನೆ ಮಾಡಲಾಗಿದೆ. ಸರ್ಕಾರದ ಗೃಹ ಇಲಾಖೆಗೆ ಕಡತ ರವಾನಿಸಲಾಗಿದೆ. ಇನ್ನು ರಾಜ್ಯ ಸರ್ಕಾರದ ‌ಮಟ್ಟದಲ್ಲಿ ಒಪ್ಪಿಗೆ ಸೂಚಿಸುವುದು ಬಾಕಿ ಇದೆ. ರೈಲ್ವೇ ಪೊಲೀಸ್ ಆಗಿರುವ ಎಡಿಜಿಪಿ ಭಾಸ್ಕರ್ ರಾವ್ ಅವರು ಸೇವೆಯಿಂದ …

Read More »

ಮನೆಯಲ್ಲಿಯೇ ಡ್ರಗ್ಸ್‌ ತಯಾರಿ, ನ್ಯೂಜಿಲೆಂಡ್‌ ಸೇರಿ ವಿದೇಶಗಳಿಗೆ ಸರಬರಾಜು – ಸಿಸಿಬಿ ಬಲೆಗೆ ಬಿದ್ದ ನೈಜೀರಿಯಾ ಪ್ರಜೆ

ಬೆಂಗಳೂರು:ಮನೆಯಲ್ಲಿಯೇ ಡ್ರಗ್ಸ್‌ (ಮಾದಕವಸ್ತು) ತಯಾರಿ ಮಾಡಿ ನ್ಯೂಜಿಲೆಂಡ್‌ ಸೇರಿ ವಿದೇಶಗಳಿಗೆ ಸರಬರಾಜು ಮಾಡುತ್ತಿದ್ದ ಜಾಲವೊಂದನ್ನು ಬಯಲಿಗೆಳೆಯುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.   ಈ ಜಾಲದಲ್ಲಿ ಭಾಗಿಯಾಗಿದ್ದ ನೈಜೀರಿಯಾ ಮೂಲದ ಡೇವಿಡ್‌ ಜೊಹೊ ಮಲ್ವೆ ಎಂಬಾತನನ್ನು ಬಂಧಿಸಿರುವ ಸಿಸಿಬಿ ಮಾದಕವಸ್ತು ನಿಗ್ರಹ ಘಟಕ ಆರೋಪಿ ಬಳಿಯಿಂದ ಐದು ಕೋಟಿ ರೂ. ಮೌಲ್ಯದ ಕ್ರಿಸ್ಟೆಲ್‌, ಎಂಡಿಎಂಎ ಡ್ರಗ್ಸ್‌, ಹಾಗೂ ಈ ಡ್ರಗ್ಸ್‌ ತಯಾರಿಕೆಗೆ ಬಳಸಲಾಗುತ್ತಿದ್ದ ರಸಾಯನಿಕ ವಸ್ತುಗಳು ಹಾಗೂ ಇತರೆ ಪರಿಕರಗಳನ್ನು ಜಪ್ತಿ …

Read More »

ಡೇಟಿಂಗ್‌ ಆ್ಯಪ್ ಸುಂದರಿ ಬೀಸಿದ ಮೋಹಕ ಬಲೆಗೆ ಬಿದ್ದ ಚಾಲಕ- ಹಣ ಕಳೆದುಕೊಂಡು ಕಕ್ಕಾಬಿಕ್ಕಿ!

ಬೆಂಗಳೂರು: ಡೇಟಿಂಗ್  ವೆಬ್ ಸೈಟ್ ನಲ್ಲಿ ಪರಿಯಚಯವಾದ ಯುವತಿಯೊಬ್ಬಳನ್ನು ನಂಬಿ ಚಾಲಕನೊಬ್ಬ ಹಣ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಸುಂದರಿ ಬೀಸಿದ ಮೋಹದ ಬಲೆಗೆ ಬಿದ್ದ ಚಾಲಕ ಆಕೆ ಹೇಳಿದ ಬಣ್ಣದ ಮಾತುಗಳನ್ನು ನಂಬಿದ್ದಾನೆ. ಅಷ್ಟೇ ಅಲ್ಲದೆ ಆಕೆಯ ಸನಿಹ ಸೇರಲು ಹರಸಾಹಸಪಟ್ಟು ಆಕೆ ಹೇಳಿದಂತೆ ಹಣ ನೀಡಿ ಕಳೆದುಕೊಂಡು ಇದೀಗ ಆಕೆ ಹೇಳಿದ ಜೀವ ಬೆದರಿಕೆ ಕೇಳಿ ಕಕ್ಕಾಬಿಕ್ಕಿಯಾಗಿದ್ದಾನೆ. ಯಲಹಂಕ ಉಪನಗರದ ನಿವಾಸಿ ಮನೋಹರ್‌  (ಹೆಸರು ಬದಲಿಸಲಾಗಿದೆ) ವೃತ್ತಿಯಲ್ಲಿ …

Read More »

ಹಿರಿಯ ಐಪಿಎಸ್ ಅಧಿಕಾರಿ, ಪ್ರಸ್ತುತ ರೈಲ್ವೆ ಇಲಾಖೆ ಎಡಿಜಿಪಿಯಾಗಿರುವ ಭಾಸ್ಕರ್ ರಾವ್ ಸ್ವಯಂ ನಿವೃತ್ತಿಗೆ ಅವಕಾಶ ಕೋರಿದ್ದಾರೆ.

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ, ಪ್ರಸ್ತುತ ರೈಲ್ವೆ ಇಲಾಖೆ ಎಡಿಜಿಪಿಯಾಗಿರುವ ಭಾಸ್ಕರ್ ರಾವ್ ಸ್ವಯಂ ನಿವೃತ್ತಿಗೆ ಅವಕಾಶ ಕೋರಿದ್ದಾರೆ. ಈ ಮೂಲಕ ಪೊಲೀಸ್ ಅಧಿಕಾರಿ ಹುದ್ದೆಯಿಂದ ನಿವೃತ್ತಿ ಪಡೆದು ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರಾ ಎಂಬ ಚರ್ಚೆ ಆರಂಭವಾಗಿದೆ. ಭಾಸ್ಕರ್ ರಾವ್ ಅವರ ನಿವೃತ್ತಿಗೆ ಇನ್ನೂ ಮೂರು ವರ್ಷ ಬಾಕಿ ಇದೆ. ಆದರೆ ಈಗಲೇ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದಾರೆ. ವೈಯಕ್ತಿಕ ಕಾರಣಗಳನ್ನು ನೀಡಿ ಸ್ವಯಂ ನಿವೃತ್ತಿಗಾಗಿ ಸರ್ಕಾರದ ಮುಖ್ಯಕಾರ್ಯದರ್ಶಿ ಮತ್ತು …

Read More »

ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶನದ ಹೊಸ ಸಿನಿಮಾ ಪೋಸ್ಟರ್ ಆನ್ ಲೈನಲ್ಲಿ ಲೀಕ್

ಬೆಂಗಳೂರು: ಈ ಹಿಂದೆ ಸಂದರ್ಶನದಲ್ಲಿ ನಟ, ನಿರ್ದೇಶಕ ಉಪೇಂದ್ರ ಅವರು ಶೀಘ್ರದಲ್ಲಿ ತಮ್ಮ ನಿರ್ದೇಶನದ ಸಿನಿಮಾ ಬಗ್ಗೆ ಘೋಷಿಸುವುದಾಗಿ ಹೇಳಿದ್ದರು. ಉಪೇಂದ್ರ ಅವರು ತಮ್ಮ ಜನ್ಮದಿನವಾದ ಸೆ.18ರಂದು ತಮ್ಮ ನಿರ್ದೇಶನದಲ್ಲಿ ಮೂಡಿಬರಲಿರುವ ಚಿತ್ರವನ್ನು ಘೋಷಣೆ ಮಾಡಲಿದ್ದಾರೆ ಎಂದೇ ಹೇಳಲಾಗಿತ್ತು.   ಅಷ್ಟರೊಳಗೆ ಉಪೇಂದ್ರ ನಿರ್ದೇಶನದ ಹೊಸ ಸಿನಿಮಾ ಪೋಸ್ಟರ್ ಆನ್ ಲೈನಿನಲ್ಲಿ ಲೀಕ್ ಆಗಿರುವ ಸುದ್ದಿ ಹೊರಬಿದ್ದಿದೆ. ಇದೀಗ ಈ ಪೋಸ್ಟರ್ ವೈರಲ್ ಆಗಿದ್ದು ಅಭಿಮಾನಿಗಳ ಕುತೂಹಲವನ್ನು ಕೆರಳಿಸಿದೆ.   …

Read More »