Breaking News

ಬೆಂಗಳೂರು

ಚರ್ಚ್,‌ಮಸೀದಿ ಬಿಟ್ಟು ದೇವಸ್ಥಾನಗಳ ಮೇಲೆ ಯಾಕೆ ಅಧಿಕಾರಿಗಳ ಕಣ್ಣು : ರೇಣುಕಾಚಾರ್ಯ ಕಿಡಿ

ಬೆಂಗಳೂರು: ಮೈಸೂರಿನಲ್ಲಿ ದೇಗುಲಗಳ ತೆರವು ಕಾರ್ಯದಿಂದ ಸಾಕಷ್ಟು ಮಂದಿ ಬೇಸರ ವ್ಯಕ್ತಪಡಿಸಿದ್ದಾರೆ. ಸ್ವಪಕ್ಷದವರೇ ಈ ಕಾರ್ಯಕ್ಕೆ ವಿರೋಧಿಸಿದ್ದಾರೆ. ಇದೀಗ ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಶಾಸಕ ಎಂಪಿ ರೇಣುಕಾಚಾರ್ಯ, ಗುಡುಗಿದ್ದಾರೆ. ಚರ್ಚ್, ಮಸೀದಿ ಬಿಟ್ಟು ಯಾಕೆ ಅಧಿಕಾರಿಗಳು ಕೇವಲ ದೇವಾಲಯಗಳನ್ನೇ ಟಾರ್ಗೆಟ್ ಮಾಡಿದ್ದಾರೆ ಎಂದು ಗುಡುಗಿದ್ದಾರೆ. ದೇವಸ್ಥಾನದ ಮೇಲೆ ಅಧಿಕಾರಿಗಳು ಏಕಾಏಕಿ ದಾಳಿ ಮಾಡೋದು ಸರಿಯಲ್ಲ. ಈಗಾಗಲೇ 1700 ದೇಗುಲ‌ನೆಲಸಮ ಮಾಡೋದಕ್ಕೆ ನೋಟಿಫಿಕೇಷನ್ ಬಂದಿದೆ. ನಮಗೆ ಚರ್ಚ್, ಮಸೀದಿ ಒಂದೇ. ಆದ್ರೆ …

Read More »

‘ನಿನಗೆ ಕನ್ನಡ ಪದಗಳು ಗೊತ್ತಾಗಲ್ಲ’: ದೇಶಪಾಂಡೆ ಕಿಚಾಯಿಸಿದ ಸಿದ್ದು

ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ಆಸ್ಕರ್‌ ಪರ್ನಾಂಡಿಸ್‌ ಅವರ ನಿಧನದ ಸಂತಾಪ ಸೂಚಕದ ಮೇಲಿನ ಚರ್ಚೆ ವೇಳೆ ಆರ್.ವ್ಹಿ.ದೇಶಪಾಂಡೆ ಅವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಚಾಯಿಸಿದ್ದರೆ. ‘ನಿನ್ಗೆ ಅನೇಕ ಕನ್ನಡದ ಪದಗಳು ಗೊತ್ತಾಗಲ್ಲ ದೇಶಪಾಂಡೆ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ನಾನು ಮುಖ್ಯಮಂತ್ರಿಯಾಗಿದ್ದಾಗ ಫರ್ನಾಂಡಿಸ್‌ ಅವರು ಕೇಂದ್ರದಲ್ಲಿ ಸರ್ಫೇಸ್‌ ಟ್ರಾನ್ಸ್‌ ಪೋರ್ಟ್‌ ಮಿನಿಸ್ಟರ್ ಇದ್ದರು ಎಂದು ಹೇಳಿದ್ದರು ಅದನ್ನ ನೆನಪಿಸಿಕೊಂಡ ಸಿದ್ದರಾಮಯ್ಯ, ಅದು ಕನ್ನಡದಲ್ಲಿ ಅದನ್ನು ‘ಭೂ ಸಾರಿಗೆ’ ಎಂದು ಹೇಳುತ್ತಾರೆ ಎಂದರು. …

Read More »

ಬೆಳಗ್ಗೆ ಎದ್ದು ಹಿಂದೂ ಹಿಂದೂ ಎನ್ನುವ ಬಿಜೆಪಿಯವರು ದೇವಸ್ಥಾನ ಒಡೆಯುತ್ತಿದ್ದಾರೆ: ರೇವಣ್ಣ

ಬೆಂಗಳೂರು: ಬೆಳಗ್ಗೆ ಎದ್ದರೆ ನಾವು ಹಿಂದೂ ಹಿಂದೂ ಎನ್ನುವ ಬಿಜೆಪಿಯವರು ಇದೀಗ ಹಿಂದೂ ದೇವಸ್ಥಾನ ಒಡೆಯುತ್ತಿದ್ದಾರೆ ಎಂದು ಜೆಡಿಎಸ್ ನಾಯಕ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹೇಳಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಂಜನಗೂಡಿನ ದೇವಸ್ಥಾನಕ್ಕೆ‌ ತನ್ನದೇ ‌ಇತಿಹಾಸ‌ವಿದೆ. ಪುರಾತನ ಕಾಲದಲ್ಲಿ‌ ದೇವಸ್ಥಾನ ನಿರ್ಮಿಸಲಾಗಿದೆ. ಸುಪ್ರೀಂ ಕೋರ್ಟ್ ಆದೇಶ ಪಾಲನೆ ಬೇಡವೆಂದು ಹೇಳುತ್ತಿಲ್ಲ. ಆದರೆ ದೇವಸ್ಥಾನ ಸಮಿತಿ ಜೊತೆ ಚರ್ಚಿಸಬೇಕು. ಪರ್ಯಾಯ ದೇವಸ್ಥಾನ ನಿರ್ಮಿಸಿ ನಂತರ ತೆರವು ಮಾಡಲಿ ಎಂದರು. ಜೆಡಿಎಸ್ ಇಲ್ಲದೆ …

Read More »

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಕಾಮಗಾರಿ: ಈ ವಾಹನಗಳ ಸಂಚಾರಕ್ಕೆ ನಿರ್ಬಂಧ

ಬೆಂಗಳೂರು, ಸೆಪ್ಟೆಂಬರ್ 14: ಬೆಂಗಳೂರು-ಮೈಸೂರು ನಡುವಿನ ದಶಪಥ ಹೆದ್ದಾರಿ ಕಾಮಗಾರಿ ಶುರುವಾಗಲಿದ್ದು, ದ್ವಿಚಕ್ರ ವಾಹನ, ಆಟೋ ಹಾಗೂ ಟ್ರ್ಯಾಕ್ಟರ್‌ಗಳ ಓಡಾಟವನ್ನು ನಿಷೇಧಿಸಲಾಗಿದೆ. ಯೋಜನೆಗಾಗಿ ಒಟ್ಟು 8,172 ಕೋಟಿ ರೂ. ವ್ಯಯಿಸುತ್ತಿದ್ದು, 2022ರ ಅಕ್ಟೋಬರ್‌ನಲ್ಲಿ ಕಾಮಗಾರಿ ಪೂರ್ಣಗೊಳಿಸುವ ಭರವಸೆಯನ್ನು ನೀಡಲಾಗಿದೆ. ಈ ಕಾಮಗಾರಿ ಮುಗಿದಲ್ಲಿ ಬೆಂಗಳೂರು-ಮೈಸೂರು ನಡುವಿನ ಪ್ರಯಾಣ ಈಗಿರುವ 3 ಗಂಟೆಗೆ ಬದಲಾಗಿ 90 ನಿಮಿಷಕ್ಕೆ ಇಳಿಯಲಿದೆ. 2019ರಿಂದ ಕಂಪನಿಯು ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಂಡಿದೆ. ದಶಪಥಗಳ ಹೆದ್ದಾರಿ ವಿಸ್ತರಣೆ …

Read More »

ಹಿಂದಿ ಹೇರಿಕೆ ಖಂಡಿಸಿ ಟ್ವಿಟರ್ ಅಭಿಯಾನ, ಕನ್ನಡಿಗರು ಕೈ ಜೋಡಿಸಲು ಕರ್ನಾಟಕ ರಕ್ಷಣಾ ವೇದಿಕೆ ಮನವಿ

ಬೆಂಗಳೂರು: ಸೆಪ್ಟೆಂಬರ್ 14ರಂದು ದೇಶಾದ್ಯಂತ ಹಿಂದಿ ದಿವಸ್(Hindi Diwas) ಆಚರಣೆ ಮಾಡಲಾಗುತ್ತಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಟ್ವಿಟರ್ನಲ್ಲಿ ದೇಶದ ಜನತೆಗೆ ಹಿಂದಿ ದಿನದ ಶುಭಾಶಯ ಕೋರಿದ್ದಾರೆ. ಆದ್ರೆ ಹಿಂದಿ ದಿವಸ್ ಹಾಗೂ ಹಿಂದಿ ಹೇರಿಕೆ ವಿರೋಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಹಿಂದಿಯನ್ನು ಹಿಂದಿಯೇತರ ಭಾಷಿಕ ಸಮುದಾಯಗಳ ಮೇಲೆ ಹೇರುವ ಒಕ್ಕೂಟ ಸರ್ಕಾರದ ದುರುದ್ದೇಶ ಖಂಡಿಸಿ ಕರ್ನಾಟಕ …

Read More »

ಬೆಂಗಳೂರಿನಲ್ಲಿ ಡ್ರಗ್ಸ್​ ಮಾರುತ್ತಿದ್ದ ಮೂವರನ್ನು ಬಂಧಿಸಿದ ಸಿಸಿಬಿ ಪೊಲೀಸ

ಬೆಂಗಳೂರು: ಬೆಂಗಳೂರಿನಲ್ಲಿ ಎಂಡಿಎಂಎ, ಎಕ್ಸ್‌ಟಸಿ ಮಾತ್ರೆಗಳನ್ನು ಡೀಲಿಂಗ್ ಮಾಡುತ್ತಿದ್ದ ಆರೋಪದ ಮೇಲೆ ಸಿಸಿಬಿ ಪೊಲೀಸರು ಮೂವರು ಆರೋಪಿಗಳನ್ನು ಬಂಧನಕ್ಕೆ ಒಳಪಡಿಸಿದ್ದಾರೆ. ಬಂಧಿತರಲ್ಲಿ ಇಬ್ಬರು ವಿದೇಶಿ ಪ್ರಜೆಗಳಾಗಿದ್ದು, ಓರ್ವ ನೆರೆಯ ಕೇರಳ ರಾಜ್ಯದವನಾಗಿದ್ದಾನೆ. ಆರೋಪಿಗಳು ಬೆಂಗಳೂರಿನ ಕೊಡಿಗೆಹಳ್ಳಿಯಲ್ಲಿ ಡ್ರಗ್ಸ್ ಮಾರಾಟ ಮಾಡಲು ಯತ್ನಿಸುತ್ತಿರುವಾಗ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿ ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 30 ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ, ಎಕ್ಸ್‌ಟಸಿ ಮಾತ್ರೆ ಜಪ್ತಿ ಮಾಡಲಾಗಿದ್ದು, ಆ …

Read More »

ಕರ್ನಾಟಕ ಟಿಇಟಿ ಫಲಿತಾಂಶ ಬಿಡುಗಡೆ: 45,074 ಅಭ್ಯರ್ಥಿಗಳಿಗೆ ಅರ್ಹತೆ

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯು, ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(ಕೆಎಆರ್‌ಟಿಇಟಿ-2021)ಯ ಫಲಿತಾಂಶ ಬಿಡುಗಡೆ ಮಾಡಿದೆ. ವಿವಿಧ ತರಗತಿಗಳ ಬೋಧಕರಿಗೆ ನಡೆಸಲಾಗುವ ಪತ್ರಿಕೆ 1 ಹಾಗೂ 2 ರಲ್ಲಿ ಒಟ್ಟಾರೆಯಾಗಿ 2,31,886 ಅಭ್ಯರ್ಥಿಗಳು ಹಾಜರಾಗಿದ್ದರು. ಈ ಪೈಕಿ 45,074 ಜನರು ಅರ್ಹತೆ ಪಡೆದಿದ್ದು, ಶೇ.19 ಉತ್ತೀರ್ಣತೆ ದಾಖಲಾಗಿದೆ. ಕಳೆದ ವರ್ಷ ಪರೀಕ್ಷೆಗೆ ಹಾಜರಾಗಿದ್ದ 2,02,991 ಅಭ್ಯರ್ಥಿಗಳ ಪೈಕಿ 7,980 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದರು, ಶೇ.3.93 ಫಲಿತಾಂಶ ದಾಖಲಾಗಿತ್ತು. ಈ ಬಾರಿ ಶೇ.15 ರಷ್ಟು …

Read More »

ದಸರಾ ಬಳಿಕ ಪ್ರಾಥಮಿಕ ತರಗತಿ ಆರಂಭಕ್ಕೆ ಶಿಕ್ಷಣ ಇಲಾಖೆ ಸಿದ್ಧತೆ

ಬೆಂಗಳೂರು: ರಾಜ್ಯದಲ್ಲಿ ಪಿಯುಸಿ, ಪ್ರೌಢಶಾಲೆ ಹಾಗೂ ಹಿರಿಯ ಪ್ರಾಥಮಿಕ ಶಾಲೆ (6ರಿಂದ 12ನೇ ತರಗತಿ) ವಿದ್ಯಾರ್ಥಿಗಳಿಗೆ ಭೌತಿಕ ತರಗತಿ ಸುಸೂತ್ರವಾಗಿ ನಡೆಯುತ್ತಿರುವ ಹಿನ್ನೆಲೆಯಲ್ಲಿ 1ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೂ ದಸರಾ ಬಳಿಕ ಭೌತಿಕ ತರಗತಿ ಆರಂಭಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಸಿದ್ಧತೆ ಆರಂಭಿಸಿದೆ. ಸರಕಾರ ಹಾಗೂ ಕೊರೊನಾ ತಾಂತ್ರಿಕ ತಜ್ಞರ ಸಮಿತಿಯ ಅಭಿಪ್ರಾಯ ಹಾಗೂ ಒಪ್ಪಿಗೆ ಪಡೆದೇ ಭೌತಿಕ ತರಗತಿಗಳನ್ನು ಆರಂಭಿಸಬೇಕು. ಈಗಾಗಲೇ ನಡೆಯುತ್ತಿರುವ ಭೌತಿಕ ತರಗತಿಗಳಿಗೆ ವಿದ್ಯಾರ್ಥಿಗಳು, ಪಾಲಕ, …

Read More »

ಸಾರಿಗೆ ನೌಕರರಿಗೆ ಸಿಹಿ ಸುದ್ದಿ?

ಬೆಂಗಳೂರು: ಸಾರಿಗೆ ಮುಷ್ಕರದಿಂದ ಅಮಾನತು, ವಜಾ, ವರ್ಗಾವಣೆ ಮುಂತಾದವುಗಳಿಂದ ಅತಂತ್ರರಾಗಿರುವ ಸಾವಿರಾರು ನೌಕರರ ಬಗ್ಗೆ ಸಹಾನುಭೂತಿ ತೋರಿರುವ ಸರಕಾರ, ಶೀಘ್ರದಲ್ಲೇ ಈ ಸಂಬಂಧ ಮಹತ್ವದ ನಿರ್ಧಾರ ಕೈಗೊಳ್ಳಲಿದೆ. ಸಾರಿಗೆ ನೌಕರರ ಹಿತಕ್ಕಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಾಲ್ಕೂ ಸಾರಿಗೆ ನಿಗಮಗಳ ಹಿರಿಯ ಅಧಿಕಾರಿಗಳೊಂದಿಗೆ ಸಾರಿಗೆ ಸಚಿವ ಬಿ. ಶ್ರೀರಾಮುಲು ಚರ್ಚೆ ನಡೆಸಿ, ಮಾಹಿತಿ ಕಲೆಹಾಕಿದರು. ಈ ಸಂದರ್ಭದಲ್ಲಿ ನೌಕರರ ಅಮಾನತು, ವಜಾ ಬಗ್ಗೆಯೂ ಪ್ರಸ್ತಾಪವಾಗಿದ್ದು, ಮುಖ್ಯಮಂತ್ರಿಗಳು ಎರಡು ದಿನಗಳಲ್ಲಿ ಸೂಕ್ತ …

Read More »

ವಿಧಾನಸಭೆ ಅಧಿವೇಶನ : ಹಲವು ವಿಶೇಷತೆಗಳಿಗೆ ಕಾರಣವಾದ ಸದನ

ಬೆಂಗಳೂರು, ಸೆ.13- ವಿಧಾನಸಭೆ ಅಧಿವೇಶನದ ಮೊದಲ ದಿನವಾದ ಇಂದು ಹೊಸ ಸಚಿವರ ಸಂಭ್ರಮ ಸೇರಿದಂತೆ ಹಲವು ವಿಶೇಷತೆಗಳಿಗೆ ಸದನ ಸಾಕ್ಷಿಯಾಯಿತು.ಕಳೆದ ಅಧಿವೇಶನದಲ್ಲಿ ಮುಖ್ಯಮಂತ್ರಿಯಾಗಿ ಪಾಲ್ಗೊಂಡಿದ್ದ ಬಿ.ಎಸ್.ಯಡಿಯೂರಪ್ಪ ಅವರು ಇಂದು ಮಾಜಿ ಮುಖ್ಯಮಂತ್ರಿಯಾಗಿ ಮುಖ್ಯ ಸಚೇತಕರ ಪಕ್ಕದ ಆಸನದಲ್ಲಿ ಕುಳಿತಿದ್ದರು. ಕಳೆದ ಅಧಿವೇಶನದಲ್ಲಿ ಸಚಿವರಾಗಿದ್ದ ಜಗದೀಶ್ ಶೆಟ್ಟರ್, ಸುರೇಶ್‍ಕುಮಾರ್ ಅವರು ಈ ಅಧಿವೇಶನದಲ್ಲಿ ಹಿಂದಿನ ಸಾಲಿಗೆ ಸ್ಥಳಾಂತರಗೊಂಡಿದ್ದದ್ದು ಕಂಡು ಬಂದಿತು.ನೂತನ ಸಚಿವರಾದ ಮುನಿರತ್ನ ಹಾಗೂ ಶಂಕರಪಾಟೀಲ್ ಮುನೇನ ಕೊಪ್ಪ ಸದನದಲ್ಲಿ ಪರಸ್ಪರ …

Read More »