Breaking News

ಬೆಂಗಳೂರು

ಮೂಡಲಗಿ ಅತ್ಯಾಚಾರ ಪ್ರಕರಣ ಕುರಿತು ಜೈ ಭೀಮ್ ಸಂಘರ್ಷ ಸಮಿತಿ ಹಾಗೂ ಅಂಬೇಡ್ಕರ ವಾಣಿ ವತಿಯಿಂದ ಅತ್ಯಾಚಾರ ಮಾಡಿದ ಆರೋಪಿಗಳಿಗೆ ಕ್ರಮ ಕೈಗೊಳ್ಳುವ ಮನವಿ

ಈ ಮೇಲಿನ ವಿಷಯದಂತೆ ನಾವು ತಮ್ಮಲ್ಲಿ ವಿನಂತಿಸಿಕೊಳ್ಳುವುದೇನೆಂದರೆ, ಮೂಡಲಗಿ ತಾಲೂಕಿನ ರಾಜಾಪೂರ ಗ್ರಾಮದಲ್ಲಿ ಜುಲೈ-2021 ತಿಂಗಳಲ್ಲಿ 16 ವರ್ಷದ ಅಪ್ರಾಪ್ತ ಪರಿಶಿಷ್ಟ ಜಾತಿಯ ಬಾಲಕಿ ಮೇಲೆ 5 ಜನ ಅನ್ಯಜನಾಂಗದ ಕಾಮುಕರು ಸಾಮೂಹಿಕವಾಗಿ ಅತ್ಯಾಚಾರ ಮಾಡಿರುತ್ತಾರೆ. ಬಳಿಕ ಈ ಕೃತ್ಯದ ಬಗ್ಗೆ ಯಾರಿಗಾದರೂ ಹೇಳಿದರೆ ನಿನ್ನನ್ನು ಬಿಡುವುದಿಲ್ಲ ಅಂತಾ ಜೀವ ಬೆದರಿಕೆ ಹಾಕಿದ್ದ ಕಾಮುಕರನ್ನು ಈಗಾಗಲೇ 4 ಜನ ಕಾಮುಕರನ್ನು ಘಟಪ್ರಭಾ ಪೊಲೀಸರು ಬಂಧಿಸಿರುತ್ತಾರೆ. ಇನ್ನುಳಿದ ಕಾಮುಕನನ್ನು ತಕ್ಷಣವೇ ಬಂಧಿಸುವುದಾಗಲೆ …

Read More »

ಭೀಕರ ರಸ್ತೆ ಅಪಘಾತ, ಶಾಸಕರ ಮಗ. 3 ಯುವತಿಯರು ಸೇರಿ ಏಳು ಜನ ಸ್ಥಳದಲ್ಲೆ ಸಾವು

ಬೆಂಗಳೂರಿನಲ್ಲಿ ತಡರಾತ್ರಿ ಭೀಕರ ರಸ್ತೆ ಅಪಘಾತವಾಗಿದೆ. ಕೋರಮಂಗಲದ ಮಂಗಳ ಕಲ್ಯಾಣಮಂಟಪದ ರಾತ್ರಿ 1:30ರ ಸುಮಾರಿಗೆ ಘಟನೆ ನಡೆದಿದೆ. ವೇಗವಾಗಿ ಬಂದ ಆಡಿ ಕ್ಯೂ3 ಕಾರ್ ಫುಟ್ ಪಾತ್ ಮೇಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ 7 ಜನ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಈ ಕಾರಿನಲ್ಲಿ ಮೂವರು ಯುವತಿಯರು ನಾಲ್ಕು ಯುವಕರು ಪ್ರಯಾಣ ಮಾಡುತ್ತಿದ್ದರು. ಕಾರಿನ ಮುಂಬದಿ ಸೀಟಿನಲ್ಲಿ ಮೂವರು ಹಿಂದೆ ನಾಲ್ವರು ಕುಳಿತಿದ್ದರು‌. ಎಲ್ಲರೂ 25-30ರ ವಯೋಮಾನದವರಾಗಿದ್ದಾರೆ. ಕರುಣಾಸಾಗರ, …

Read More »

ಸರಳ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ ಸಾದ್ಯತೆ

ಬೆಂಗಳೂರು, ;ಸಾರ್ವಜನಿಕರು ಹಾಗೂ ಹಿಂದೂಪರ ಸಂಘಟನೆಗಳು ಮತ್ತು ಜನಪ್ರತಿನಿಧಿಗಳ ಒತ್ತಡಕ್ಕೆ ಮಣಿದಿರುವ ರಾಜ್ಯ ಸರ್ಕಾರ ಗಣೇಶ ಹಬ್ಬ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡುವ ನಿರೀಕ್ಷೆಯಿದೆ. ಈ ಬಾರಿಯ ಗಣೇಶೋತ್ಸವಕ್ಕೆ ರಾಜ್ಯ ಸರ್ಕಾರ ನಿರ್ಬಂಧ ಹಾಕಿ ಸರಳವಾಗಿ ಆಚರಿಸುವಂತೆ ಅಧಿಸೂಚನೆ ಹೊರಡಿಸಿತ್ತು. ಇದಕ್ಕೆ ಕೆಲವು ಹಿಂದೂಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದವು. ಅದರಲ್ಲೂ ಆಡಳಿತಾರೂಢ ಬಿಜೆಪಿಯ ಸಚಿವರು ಮತ್ತು ಶಾಸಕರೇ ಸರ್ಕಾರದ ನಿರ್ಧಾರಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿ ಗಣಪತಿ ಹಬ್ಬ ಆಚರಣೆಗೆ …

Read More »

500 ರೂ. ಗೆ ಐಫೋನ್‍ ನಕಲಿ ಬ್ಯಾಕ್ ಕೇಸ್ ಮಾರುತ್ತಿದ್ದವರು ಅರೆಸ್ಟ್

ಆಯಪಲ್ ಕಂಪನಿಯ ಐಫೋನ್ ಇರಿಸಿಕೊಳ್ಳುವುದು ಪ್ರತಿಷ್ಠೆಯ ವಿಷಯವಾಗಿ ಬಹಳ ದಿನಗಳಾಗಿವೆ. ಅಷ್ಟೇ ದೊಡ್ಡ ಪ್ರತಿಷ್ಠೆ ಐಫೋನ್‍ಗಳಿಗೆ ಬ್ಯಾಕ್ ಕೇಸ್ ಹಾಕಿಸುವುದು. ಕಂಪನಿಯದ್ದೇ ಒರಿಜಿನಲ್ ಕೇಸ್‍ನ ಬೆಲೆ 4500 ರೂ. ನಿಂದ ಆರಂಭವಾಗುತ್ತದೆ. ಆದರೆ ಇದರ ನಕಲಿ ರೂಪ ಕೆಲವೆಡೆ ಸಿಗುತ್ತದೆ. ಅದರ ಬೆಲೆಯೇನು ಕಡಿಮೆ ಇಲ್ಲ, ಸುಮಾರು 500 ರೂ. ಇಂಥದ್ದೇ ನಕಲಿ ಬ್ಯಾಕ್ ಕೇಸ್‍ಗಳನ್ನು ಮಾರುತ್ತಿದ್ದ ಚೆನ್ನೈನ ಅಮಿನ್‍ಜಿಕರೈನ ಇಬ್ಬರು ನಿವಾಸಿಗಳನ್ನು ಪೊಲೀಸರು ಬಂಧಿಸಿದ್ದಾರೆ.   ಇವರ ಬಳಿಯಿಂದ …

Read More »

ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದ್ದು, ಇಂದಿನಿಂದ ಸೆಪ್ಟಂಬರ್ 2 ರವರೆಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.   ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇಂದಿನಿಂದ ಮೂರು ದಿನ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, …

Read More »

ಅಕ್ರಮ ಕಟ್ಟಡ ನಿರ್ಮಾಣದ ವಿರುದ್ಧ ಧ್ವನಿ ಎತ್ತಿದ RTI ಕಾರ್ಯಕರ್ತನ ಮೇಲೆ ಹಲ್ಲೆ

ಬೆಂಗಳೂರು: ಅಕ್ರಮ ಕಟ್ಟಡ ನಿರ್ಮಾಣದ ವಿರುದ್ಧ ಅರ್ಜಿ ಸಲ್ಲಿಸಿದ್ದ RTI ಕಾರ್ಯಕರ್ತರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಸರ್ಜಾಪುರದ ಸೋಂಪುರ ಬಳಿ ನಡೆದಿದೆ. ಮಾಡ್ರನ್ ಸ್ಪೇಸ್ ಕಂಪನಿಯ ಯತೀಶ್ ಮತ್ತು ಮಂಜುನಾಥ್ ಅಕ್ರಮ ಕಟ್ಟಡ ಕಾಮಗಾರಿ ಮಾಡಲು ಮುಂದಾಗಿದ್ದಾರೆ ಎಂದು ಆರೋಪಿಸಿ RTI ಕಾರ್ಯಕರ್ತ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ರು. ಅರ್ಜಿ ಪರಿಶೀಲಿಸಿ ಎಚ್ಚೆತ್ತುಕೊಂಡ ಅಧಿಕಾರಿಗಳು, ಡ್ರೀಮ್ಸ್ ಇನ್ ಪ್ರಾ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಗೆ ಸಂಬಂಧಿಸಿದ ಸೋಂಪುರದ ಸರ್ವೆ …

Read More »

ಶಾಲೆಗಳ ಆರಂಭದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧಾರ!

ಬೆಂಗಳೂರು, ಆ. 30: ರಾಜ್ಯದಲ್ಲಿ ಶಾಲೆಗಳ ಆರಂಭದ ಕುರಿತು ತಾಂತ್ರಿಕ ಸಮಿತಿ ಸಭೆಯಲ್ಲಿ ಚರ್ಚಿಸಿದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧಾರ ತೆಗೆದು ಕೊಳ್ಳಲಿದ್ದಾರೆ. ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ಸೋಮವಾರ ಮಲ್ಲೇಶ್ವರದ ರಾಜ್ಯ ಬಿಜೆಪಿ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರು ಮತ್ತು ಸಾರ್ವಜನಿಕರನ್ನು ಭೇಟಿ ಮಾಡಿದರು. ನಂತರ ಮಾತನಾಡಿದ ನಾಗೇಶ್, ಒಂದನೇ ತರಗತಿಯಿಂದ ಶಾಲೆಗಳನ್ನು ಆರಂಭಿಸಬೇಕೇ …

Read More »

ಲಾರಿಯಲ್ಲಿ ತುಂಬಿದ್ದ ಸಸಿಗಳ ಅಡಿಯಲ್ಲಿತ್ತು 3,400 ಕೆ.ಜಿ. ಗಾಂಜಾ!

ಬೆಂಗಳೂರು: ನರ್ಸರಿಯಿಂದ ತಂದಿದ್ದ ಸಸಿಗಳ ಜೊತೆಯಲ್ಲೇ ಬೃಹತ್‌ ಪ್ರಮಾಣದ ಗಾಂಜಾ ಸಾಗಣೆ ಮಾಡುತ್ತಿದ್ದ ಮೂವರನ್ನು ಎನ್‌ಸಿಬಿ ಬೆಂಗಳೂರು ವಲಯದ ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ. ಲಾರಿಯಲ್ಲಿದ್ದ 3,400 ಕೆ.ಜಿ. ಗಾಂಜಾ ಜಪ್ತಿ ಮಾಡಿದ್ದಾರೆ. ಡಿ.ಶಿಂಧೆ, ಎಂ.ಆರ್‌.ಕಾಂಬ್ಳೆ ಹಾಗೂ ಎನ್‌.ಜೋಗದಾಂದ್‌ ಬಂಧಿತರು. ಇವರೆಲ್ಲಾ ಮಹಾರಾಷ್ಟ್ರದ ಲಾತೂರ್‌ ಜಿಲ್ಲೆಯವರು. ಲಾರಿಯ ಮೂಲಕ ಗಾಂಜಾ ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾದ ಬೆನ್ನಲ್ಲೇ ಜಂಟಿ ಕಾರ್ಯಾಚರಣೆ ನಡೆಸಿದ ಬೆಂಗಳೂರು ಹಾಗೂ ಹೈದರಾಬಾದ್‌ ಅಧಿಕಾರಿಗಳ ತಂಡ ಹೈದರಾಬಾದ್‌ …

Read More »

ಬೆಂಗಳೂರು ಅಭಿವೃದ್ಧಿಗೆ ನನ್ನ ಸಮಯ ಮೀಸಲಿಡುತ್ತೇನೆ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು :ನಮ್ಮ ಮೆಟ್ರೋ ರಾಮನಗರದವರೆಗೂ ಹೋಗಬೇಕು ಅಂತ ಚಿಂತನೆ ಇದೆ. ರಾಮನಗರ, ರಾಜಾನುಕುಂಟೆ, ಮಾಗಡಿವರೆಗೂ ಮೆಟ್ರೋ ಮಾರ್ಗ ವಿಸ್ತರಿಸುವ ಗುರಿಯಿದೆ ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮೆಟ್ರೋ ವಿಸ್ತರಿತ ಮಾರ್ಗಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜನಸಂದಣಿ ಹೆಚ್ಚಿರುವ ಪ್ರದೇಶದಲ್ಲಿ ಮೆಟ್ರೋ ಅಗತ್ಯವಾಗಿದೆ. ಹೀಗಾಗಿ ನಾಯಂಡಹಳ್ಳಿ-ಕೆಂಗೇರಿಯವರೆಗೆ ಮೆಟ್ರೋ ಅಗತ್ಯ ಇತ್ತು. ನಮ್ಮ ಮೆಟ್ರೋ ಬೆಂಗಳೂರಿನ ಭವಿಷ್ಯದ ಕೊಂಡಿ. ದೇಶ-ವಿದೇಶಗಳಿಂದ ಬರುವ ಗಣ್ಯರಿಗೆ ಉತ್ತಮ ಸಾರಿಗೆ ಬೇಕು. ಅದನ್ನು ನಮ್ಮ …

Read More »

ಬೆಂಗಳೂರಿನಲ್ಲಿ ಹೆಚ್ಚಾದ ಪುಡಿ ರೌಡಿಗಳ ಉಪಟಳ: ಬಾರ್​ಗೆ ನುಗ್ಗಿ ದಾಂಧಲೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪುಡಿ ರೌಡಿಗಳ ಉಪಟಳ ಹೆಚ್ಚಾಗಿದ್ದು, ಮಾರಕಾಸ್ತ್ರಗಳನ್ನ ಹಿಡಿದು ಬಾರ್​ಗೆ ನುಗ್ಗಿ ರೌಡಿಗಳು ಗಲಾಟೆ ನಡೆಸಿದ್ದಾರೆ. ಸುಬ್ರಹ್ಮಣ್ಯಪುರ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಸಂಜೆ ಸುಮಾರು 7.30ರ ಸುಮಾರಿಗೆ ಪ್ರಕರಣ ನಡೆದಿದೆ. ಇಟ್ಟಮಡು ಬಳಿ ​ಎಸ್​​ಎಲ್​ವಿ ಬಾರ್​​ಗೆ ನುಗ್ಗಿ ಗ್ಲಾಸ್​ಗಳನ್ನ ಒಡೆದು ಹಾಕಿದ್ದಾರೆ. ಜೊತೆಗೆ ಪಕ್ಕದ ಬಾರ್​ಗೂ ನುಗ್ಗಿ ಗ್ಲಾಸ್​ಗಳನ್ನ ಒಡೆದು ಹಾಕಿದ್ದು, ಈ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ …

Read More »