ದಾವಣಗೆರೆ : ರೈತ ಮಕ್ಕಳಿಗೆ ಶಿಷ್ಯವೇತನ, ವಿವಿಧ ಸಾಮಾಜಿಕ ಭದ್ರತಾ ಮಾಸಾಶನ ಹೆಚ್ಚಳ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ನಮ್ಮದು ಮಾತನಾಡುವ ಸರ್ಕಾರವಲ್ಲ, ಕಾರ್ಯ ಮಾಡಿ ತೋರಿಸುವ ಸರ್ಕಾರ ಎಂದು ತೋರಿಸಿಕೊಟ್ಟಿದ್ದೇವೆ ಎಮದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದ ಜಿ.ಎಂ.ಐ.ಟಿ. ಕಾಲೇಜು ಆವರಣದಲ್ಲಿ ಇಂದು (ಗುರುವಾರ, ಸೆಪ್ಟೆಂಬರ್ 2) ಕೇಂದ್ರ ಗೃಹ ಸಚಿವ ಅಮಿತ್ ಶಾ ಉಪಸ್ಥಿತಿಯಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದ ಅವರು, …
Read More »ಬೆಲೆ ಏರಿಕೆಯನ್ನು ಸಮರ್ಥನೆ ಮಾಡಿದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್
ಬೆಂಗಳೂರು: ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆ ತಾತ್ಕಾಲಿಕ ಅಷ್ಟೇ. ಮುಂದಿನ ದಿನಗಳಲ್ಲಿ ಬೆಲೆ ಕಡಿಮೆಯಾಗಲಿದೆ. ಟೊಮೆಟೊ, ಪೆಟ್ರೊಲ್, ಡಿಸೆಲ್, ಈರುಳ್ಳಿ ಒಂದು ವಸ್ತುವಿನ ಬೆಲೆ ಮೇಲೆ ಮಾತ್ರ ಪ್ರಶ್ನೆ ಮಾಡಿದರೆ ನಾನು ಉತ್ತರ ನೀಡಲು ಆಗುವುದಿಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಡವರಿಗೆ ಮೋದಿ ಸರ್ಕಾರ ಅನೇಕ ಯೋಜನೆ ಮಾಡಿದೆ. ರೈತರ ಖಾತೆಗಳಿಗೆ ಆರು ಸಾವಿರ ರೂ. ಹಾಕುತ್ತಿದ್ದಾರೆ. ಆಯುಷ್ಮಾನ್ ಭಾರತ …
Read More »ಎತ್ತಿನ ಬಂಡಿ ಓಟ: ‘ಸುಪ್ರೀಂ’ ಆದೇಶ ಪಾಲಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ
ಬೆಂಗಳೂರು: ಸುಪ್ರೀಂಕೋರ್ಟ್ ವಿಧಿಸಿರುವ ಷರತ್ತುಗಳ ಪಾಲನೆಯನ್ನು ಖಾತರಿಪಡಿಸಿಕೊಂಡ ಬಳಿಕವೇ ಎತ್ತಿನ ಬಂಡಿಗಳ ಓಟದ ಸ್ಪರ್ಧೆಗೆ ಅನುಮತಿ ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಮೈಸೂರಿನ ಪೀಪಲ್ ಫಾರ್ ಅನಿಮಲ್ ಎಂಬ ಸರ್ಕಾರೇತರ ಸಂಸ್ಥೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇತ್ಯರ್ಥಗೊಳಿಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠ, ‘ಪ್ರಾಣಿಗಳ ಹಿಂಸೆ ತಡೆ ಕಾಯ್ದೆ-2017 (ಎರಡನೇ ತಿದ್ದುಪಡಿ ಕಾಯ್ದೆ)ಯ ಪ್ರಕಾರ, ಎತ್ತಿನ ಬಂಡಿ ಓಟದ ಸ್ಪರ್ಧೆಗೆ …
Read More »ಸೈಟ್, ಮನೆ, ಜಮೀನು, ಫ್ಲ್ಯಾಟ್ ಖರೀದಿಸುವವರಿಗೆ ಸಿಹಿ ಸುದ್ದಿ: ಮಾರ್ಗಸೂಚಿ ದರ ಕಡಿತ ಸಾಧ್ಯತೆ
ಬೆಂಗಳೂರು: ನಿವೇಶನ, ಜಮೀನು, ಫ್ಲಾಟ್ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ರಾಜ್ಯ ಸರ್ಕಾರ ಭೂಮಿ ಮಾರ್ಗಸೂಚಿ ದರ ಕಡಿತಗೊಳಿಸಲು ಮುಂದಾಗಿದೆ. ಕೃಷಿ ಜಮೀನು, ಕೃಷಿಯೇತರ ಜಮೀನು, ಮನೆ, ಅಪಾರ್ಟ್ಮೆಂಟ್, ವಾಣಿಜ್ಯ ಮಳಿಗೆಗಳ ಮಾರಾಟ ಮತ್ತು ಖರೀದಿಸುವಾಗ ಮಾರ್ಗಸೂಚಿ ದರ ಹೆಚ್ಚಾಗಿರುವುದರಿಂದ ನಿರೀಕ್ಷಿತ ಪ್ರಮಾಣದಲ್ಲಿ ನೋಂದಣಿ ಆಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಮಾರ್ಗಸೂಚಿ ದರ ಕಡಿತಗೊಳಿಸಿ ರಿಯಲ್ ಎಸ್ಟೇಟ್ ಉದ್ಯಮ ಚೇತರಿಕೆಗೆ ಅವಕಾಶ ನೀಡಲು ಸರ್ಕಾರ ಚಿಂತನೆ ನಡೆಸಿದೆ. ಕೊರೋನಾದಿಂದಾಗಿ ನೆಲಕಚ್ಚಿರುವ ರಿಯಲ್ ಎಸ್ಟೇಟ್ …
Read More »ಜೆಡಿಎಸ್ದ್ದು ಹಣದ ಮೇಲೆ ರಾಜಕಾರಣ ಮಾಡುವ ಸಂಸ್ಕೃತಿ: ನಳಿನ್ ಕುಮಾರ್ ಕಟೀಲ್
ಮೈಸೂರು: ಜೆಡಿಎಸ್ ಪಕ್ಷದ್ದು ಹಣದ ಮೇಲೆ ರಾಜಕಾರಣ ಮಾಡುವ ಸಂಸ್ಕೃತಿ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬುಧವಾರ ಇಲ್ಲಿ ತಿರುಗೇಟು ನೀಡಿದರು. ‘ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಹಣ ವಸೂಲಿಗಾಗಿ ಆಗಾಗ್ಗೆ ರಾಜ್ಯಕ್ಕೆ ಬರುತ್ತಿರುತ್ತಾರೆ’ ಎಂಬ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ ಅವರು ತಿರುಗೇಟು ನೀಡಿದ್ದಾರೆ. ‘ತಮ್ಮ ಅನುಭವವನ್ನು ಕುಮಾರಸ್ವಾಮಿ ಹೇಳಿಕೊಂಡಿದ್ದಾರೆ. ಕಾಮಾಲೆ ಕಣ್ಣಿಗೆ ಎಲ್ಲವೂ ಹಳದಿಯಾಗಿ ಕಾಣುತ್ತದೆ. ರಾಜ್ಯ, ದೇಶ ಆಳಿದ ಇವರ ನಾಲಿಗೆ ಸರಿಯಾಗಿದ್ದಿದ್ದರೆ …
Read More »ಬೆಲೆ ಏರಿಕೆ ವಿರುದ್ಧ ಸದನದ ಹೊರಗೆ, ಒಳಗೆ ಹೋರಾಟಕ್ಕೆ ಕಾಂಗ್ರೆಸ್ ಸಿದ್ದತೆ: ಡಿಕೆಶಿ
ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಆಗುತ್ತಿದೆ. ಗ್ಯಾಸ್, ಆಟೋ ಗ್ಯಾಸ್ ದರ ಸಹಾ ಹೆಚ್ಚಳವಾಗುತ್ತಿರುವುದರ ವಿರುದ್ಧ ಕಾಂಗ್ರೆಸ್ ಹೋರಾಟ ರೂಪಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಬೆಲೆ ಏರಿಕೆ ಸಂಬಂಧ ಸೆಪ್ಟಂಬರ್ 5 ಹಾಗೂ 6 ರಂದು ಪಕ್ಷದ ಮುಖಂಡರ ಸಭೆ ನಡೆಸಿ ತೀರ್ಮಾನ ಮಾಡುತ್ತೇವೆ. ಸದನದಲ್ಲೂ ಈ ವಿಚಾರ ಇಟ್ಟುಕೊಂಡು ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ. ಚಾಮರಾಜನಗರದಲ್ಲಿ ನೋ ವ್ಯಾಕ್ಸಿನ್ …
Read More »ಬೆಂಗಳೂರಿನ ಕಾರು ಅಪಘಾತ ಪ್ರಕರಣ: ಬಾರ್ನಲ್ಲಿ ಮದ್ಯ ಖರೀದಿ, ಕಾರಿನಲ್ಲೇ ಪಾರ್ಟಿ
ಬೆಂಗಳೂರು: ಕೋರಮಂಗಲದ 80 ಅಡಿ ರಸ್ತೆಯಲ್ಲಿ ಔಡಿ ಕ್ಯೂ3 ಕಾರು ಅಪಘಾತ ಸಂಭವಿಸಿ ಏಳು ಮಂದಿ ಮೃತಪಟ್ಟ ಪ್ರಕರಣದ ಕುರಿತು ಆಗ್ನೇಯ ವಿಭಾಗದ (ಸಂಚಾರ) ಎಸಿಪಿ ನೇತೃತ್ವದ ತಂಡ ತನಿಖೆ ಚುರುಕುಗೊಳಿಸಿದೆ. ಮೃತರು ಓಡಾಡಿದ್ದ ಸ್ಥಳಗಳ ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಸಂಗ್ರಹಿಸುತ್ತಿದೆ. ‘ಕಾರು ಚಾಲಕನ ಅತಿವೇಗದ ಚಾಲನೆ ಹಾಗೂ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೆಂಬುದು ಮೇಲ್ನೋಟಕ್ಕೆ ಗೊತ್ತಾಗಿದೆ. ಚಾಲಕನ ವಿರುದ್ಧವೇ ಪ್ರಕರಣ ದಾಖಲಾಗಿದೆ. ಕಾರಿನಲ್ಲಿದ್ದ ಏಳು ಮಂದಿಯೂ ಮೃತಪಟ್ಟಿದ್ದಾರೆ. ಹೀಗಾಗಿ, ಅಪಘಾತ …
Read More »ಸಬ್ ಇನ್ಸ್ಪೆಕ್ಟರ್ ನೇಮಕಾತಿ ಲಿಖಿತ ಪರೀಕ್ಷೆ ಮುಂದೂಡಿಕೆ: ಸೆ.26ರ ಬದಲಿಗೆ ಅ.3ಕ್ಕೆ
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ನಿಗದಿಯಾಗಿದ್ದ ಲಿಖಿತ ಪರೀಕ್ಷೆ ದಿನಾಂಕವನ್ನು ತಾಂತ್ರಿಕ ಸಮಸ್ಯೆಯಿಂದ ಇಲಾಖೆ ಮುಂದೂಡಿದೆ. 545 ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಸೆಪ್ಟೆಂಬರ್ 26ಕ್ಕೆ ಲಿಖಿತ ಪರೀಕ್ಷೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ತಾಂತ್ರಿಕ ಸಮಸ್ಯೆಯಿಂದ ಅಂದು ಪರೀಕ್ಷೆ ನಡೆಸಲು ಸಾಧ್ಯವಾಗುತ್ತಿಲ್ಲ. ಬದಲಿಗೆ ಅಕ್ಟೋಬರ್ 3ರ ಬೆಳಗ್ಗೆ 10.30 ರಿಂದ 12 ಗಂಟೆ ವರೆಗೆ ಪತ್ರಿಕೆ-1 ಮತ್ತು ಮಧ್ಯಾಹ್ನ 1.30ರಿಂದ 3 ಗಂಟೆ ವರೆಗೆ …
Read More »ದೇಶದ ಜನರನ್ನು ಆರ್ಥಿಕವಾಗಿ ದಿವಾಳಿ ಮಾಡಿದ್ದೇ ‘ಡಬಲ್ ಇಂಜಿನ್’ ಸರ್ಕಾರದ ದೊಡ್ಡ ಸಾಧನೆ: ದಿನೇಶ್ ಗುಂಡೂರಾವ್
ಬೆಂಗಳೂರು : ದೇಶದ ಜನರನ್ನು ಆರ್ಥಿಕವಾಗಿ ದಿವಾಳಿ ಮಾಡಿದ್ದೇ ‘ಡಬಲ್ ಇಂಜಿನ್’ ಸರ್ಕಾರದ ದೊಡ್ಡ ಸಾಧನೆ ಎಂದು ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ. ತೆರಿಗೆ ವಿಚಾರವಾಗಿ ಸರಕಾರದ ವಿರುದ್ಧ ಟ್ವೀಟ್ ಮಾಡಿದ ದಿನೇಶ್, ಜನರನ್ನು ತೆರಿಗೆ ವಿಷವರ್ತುಲಕ್ಕೆ ತಳ್ಳಿರುವ ಡಬಲ್ ಇಂಜಿನ್ ಸರ್ಕಾರ, ರಕ್ತ ಹೀರುವ ತಿಗಣೆಯಂತೆ ತೆರಿಗೆ ಹೀರುತ್ತಿದೆ. ದೇಶದ ಜನರಿಗೆ ದರಿದ್ರಭಾಗ್ಯ ಕಲ್ಪಿಸಿದ ಈ ಡಬಲ್ ಇಂಜಿನ್ ಸರ್ಕಾರ ಒಂದು ರೀತಿ ಸ್ಮಶಾನದ ಹೆಣವಿದ್ದಂತೆ ಎಂದು …
Read More »ಮತ್ತೆ ಪ್ರತ್ಯೇಕ ಲಿಂಗಾಯತ ಧರ್ಮ ಪ್ರಸ್ತಾಪ ಮಾಡಿದ ಎಂ.ಬಿ.ಪಾಟೀಲ್
ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮದ ಬಗ್ಗೆ ಮತ್ತೆ ಪ್ರಸ್ತಾಪಿಸಿರುವ ಮಾಜಿ ಸಚಿವ ಎಂ.ಬಿ.ಪಾಟೀಲ್, ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಪಂಚಪೀಠದವರು ಎಲ್ಲರೂ ಸೇರಿ ಬಸವ ಧರ್ಮ ಆಗಬೇಕು. ಪ್ರತ್ಯೇಕ ಲಿಂಗಾಯತ ಧರ್ಮ ಆದರೆ ನಮಗೆ ಸೌಲಭ್ಯ ಸಿಗುತ್ತದೆ. ಮುಸ್ಲಿಂ, ಜೈನರ ಮಾದರಿಯಲ್ಲಿ ಅಲ್ಪಸಂಖ್ಯಾತ ಸ್ಥಾನಮಾನ ದೊರೆಯುತ್ತದೆ ಎಂದು ಹೇಳಿದರು. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟ ಕಾರಣವಲ್ಲ ಎಂದ ಅವರು, …
Read More »
Laxmi News 24×7