Breaking News

ಅಥಣಿ

1500 ಕೋಟಿ ವೆಚ್ಚದ ಬೃಹತ್ ಏತ ನೀರಾವರಿ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ಕೊಡುವ ಮೂಲಕ ಲಕ್ಷ್ಮಣ ಸವದಿ ಅವರಿಗೆ ಕೊಟ್ಟ ಭರವಸೆ ಈಡೇರಿಸಿದ್ದೇವೆ:C.M.

ಬೆಳಗಾವಿ,  : 1500 ಕೋಟಿ ವೆಚ್ಚದ ಬೃಹತ್ ಏತ ನೀರಾವರಿ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ಕೊಡುವ ಮೂಲಕ ಲಕ್ಷ್ಮಣ ಸವದಿ ಅವರಿಗೆ ಕೊಟ್ಟ ಭರವಸೆ ಈಡೇರಿಸಿದ್ದೇವೆ. ನಮ್ಮ ಕಾಂಗ್ರೆಸ್ ಸರ್ಕಾರ ಈ ಬೃಹತ್ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ನೀಡಿದ್ದನ್ನು ಮರೆಯಲಾಗದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಕೊಟ್ಟಲಗಿಯ ಏತ ನೀರಾವರಿ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯ ಅವರು, ಲಕ್ಷ್ಮಣ್ ಸವದಿಗೆ ಸದ್ಯದಲ್ಲೇ ಒಳ್ಳೆ ಭವಿಷ್ಯ ಇದೆ …

Read More »

ಅಥಣಿ ತಾಲ್ಲೂಕಿನಾದ್ಯಂತ ಚುಟುಕುಹಬ್ಬ ಸಂತಸದ ಸಂಗತಿ: ಡಾ ಮಹಾಂತೇಶ ಉಕ್ಕಲಿ

ಅಥಣಿ: ‘ತಾಲ್ಲೂಕಿನ‌ ಪ್ರತಿಯೊಂದು ಶಾಲೆಗಳಿಗೆ ತೆರಳಿ ಚುಟುಕುಗೋಷ್ಠಿ ಆಯೋಜಿಸುವ ಮೂಲಕ ತಾಲ್ಲೂಕಿನಾದ್ಯಂತ ಚುಟುಕುಹಬ್ಬ ಮಾಡುತ್ತಿರುವುದು ಸಂತಸದ ಸಂಗತಿ’ ಎಂದು ಸಾಹಿತಿ ಡಾ ಮಹಾಂತೇಶ ಉಕ್ಕಲಿ ಹೇಳಿದರು. ತಾಲ್ಲೂಕಿನ‌ ಕಿರಣಗಿ ಗ್ರಾಮದಲ್ಲಿ ಚುಟುಕು ಸಾಹಿತ್ಯ ಪರಿಷತ್ ಹಾಗೂ ಅಥಣಿ ತಾಲ್ಲೂಕು ಪತ್ರಕರ್ತರ ಸಂಘದ ಸಹಯೋಗದಲ್ಲಿ ಜರುಗಿದ ‘ಶಾಲೆಗೊಂದು ಚುಟುಕುಗೋಷ್ಠಿ’ ಕಾರ್ಯಕ್ರಮದಲ್ಲಿ ಮಾತನಾಡಿ, ನೂತನ ಕವಿಗಳನ್ನು ಹುಟ್ಟುಹಾಕುವ ಪ್ರಯತ್ನ ಮಾಡಿ ಚುಟುಕು‌ ಸಾಹಿತ್ಯವನ್ನು ಶ್ರೀಮಂತಗೊಳಿಸುವ ಆಯೋಜಕರ ಪ್ರಯತ್ನ ಅಭಿನಂದನಾರ್ಹ ಎಂದರು.   ಯೋಗ …

Read More »

ಜಗದೀಶ್​ ಶೆಟ್ಟರ್ ನಮ್ಮ ಪ್ರೀತಿಯ ಮನುಷ್ಯ,ನಾನು ಸತತವಾಗಿ 06 ನೇ ಸಲ ಭೇಟಿಯಾಗಿದ್ದೇನೆ.

ರಮೇಶ್​ ಜಾರಕಿಹೊಳಿ-ಜಗದೀಶ್​ ಶೆಟ್ಟರನ್ನು ಭೇಟಿಯಾದ ವಿಚಾರವಾಗಿ ಪ್ರತಿಕ್ರಿಯಿಸಿ, ಜಗದೀಶ್​ ಶೆಟ್ಟರ್ ನಮ್ಮ ಪ್ರೀತಿಯ ಮನುಷ್ಯ. ಅವರು ಎಲ್ಲಿದ್ದರೂ ನಮ್ಮ ಹಿರಿಯರು. ಅವರನ್ನು ನಾನು ಸತತವಾಗಿ 06 ನೇ ಸಲ ಭೇಟಿಯಾಗಿದ್ದೇನೆ. ಈ ಸಲ ಅವರ ಭೇಟಿ ವಿಚಾರ ಲೀಕ್ ಆಗಿದೆ. ನಾನು ಅವರನ್ನು ತುಂಬಾ ಸಲ ಮೀಟ್ ಆಗಿದ್ದೇನೆ. ಶೆಟ್ಟರ್​ ಅವರು ಒಳ್ಳೆಯವರು. ನಮ್ಮ ಪಕ್ಷ ಬಿಡಬಾರದಾಗಿತ್ತು. ದುರ್ದೈವ ನೋಡೊಣ. ಮುಂದಿನ ದಿನಮಾನದಲ್ಲಿ ಏನಾಗುತ್ತೆಂದು. ರಾಜಕೀಯ ಚರ್ಚೆ ಏನೂ‌ ನಡೆದಿಲ್ಲ. …

Read More »

ಸಿದ್ದರಾಮಯ್ಯನವರ ಕ್ಯಾಬಿನೆಟ್​ನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಹಿಂಸೆಯಾಗುತ್ತಿದೆ.: ರಮೇಶ್ ಜಾರಕಿಹೊಳಿ ಕಳವಳ

ಚಿಕ್ಕೋಡಿ : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕ್ಯಾಬಿನೆಟ್​ನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಹಿಂಸೆಯಾಗುತ್ತಿದೆ. ಸಿದ್ದರಾಮಯ್ಯನವರು ಇದ್ದಾಗಲೇ ಸತೀಶ್​ಗೆ ಈ ರೀತಿ ಪರಿಸ್ಥಿತಿ ಬಂದಿದೆ. ಬೇರೆ ಯಾರಾದ್ರೂ ಸಿಎಂ ಇದ್ರೆ ಸತೀಶ್​ ಪರಿಸ್ಥಿತಿ ಏನು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕಳವಳ ವ್ಯಕ್ತಪಡಿಸಿದ್ದಾರೆ. ಸೋಮವಾರ ರಾತ್ರಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ನಂದಗಾಂವ್ ಗ್ರಾಮದ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮಾಧ್ಯಮಗಳ ಜೊತೆ ಮಾತನಾಡುತ್ತಾ, ಸಿಎಂ ಸಿದ್ದರಾಮಯ್ಯನವರ ಕಾಲದಲ್ಲಿ ಸತೀಶ್​ ಅವರಿಗೆ …

Read More »

ರಾಜು ಕಾಗೆ ಇವರಿಗೆ ಅಥಣಿ ಜಿಲ್ಲಾ ಎಂದು ಘೋಷಣೆವಾಗಬೇಕು ಕಾರಣ ಸರ್ಕಾರಕ್ಕೆ ಒತ್ತಡ ಹಾಕಿರಿ ಎಂದು ಹೋರಾಟ ಸಮಿತಿ ವತಿಯಿಂದ ಉಗಾರದಲ್ಲಿ ಶಾಸಕರಿಗೆ ಮನವಿ

ಅಥಣಿ ಜಿಲ್ಲಾ ಹೋರಾಟ ಸಮಿತಿ ವತಿಯಿಂದ ಕಾಗವಾಡ ಶಾಸಕ ರಾಜು ಕಾಗೆ ಇವರಿಗೆ ಅಥಣಿ ಜಿಲ್ಲಾ ಎಂದು ಘೋಷಣೆವಾಗಬೇಕು ಕಾರಣ ಸರ್ಕಾರಕ್ಕೆ ಒತ್ತಡ ಹಾಕಿರಿ ಎಂದು ಹೋರಾಟ ಸಮಿತಿ ವತಿಯಿಂದ ಉಗಾರದಲ್ಲಿ ಶಾಸಕರಿಗೆ ಮನವಿ ಅರ್ಪಿಸಿದರು. ರವಿವಾರ ರಂದು ಅಥಣಿ ತಾಲೂಕ ಹೋರಾಟ ಸಮಿತಿ ವತಿಯಿಂದ ಹೋರಾಟ ಸಮಿತಿಯ ಅಧ್ಯಕ್ಷ ಪ್ರಶಾಂತ್ ತೂಡಕರ್ ಇವರು ಖ್ಯಾತ ನ್ಯಾಯವಾದಿಗಳಾದ ಕೆ ಎಲ್ ಕುಂದರಗಿ, ದೇವೇಂದ್ರ ಬಿಸವಾಗರ್ ಇವರ ನೇತೃತ್ವದಲ್ಲಿ ಶಾಸಕ ರಾಜು …

Read More »

ವೃದ್ಧಾಪ್ಯ ವೇತನ, ಅಂಗವಿಕಲ ಮಾಸಾಶನಕ್ಕೆ ಫಲಾನುಭವಿಗಳನ್ನು ಆಯ್ಕೆ ಮಾಡುವಲ್ಲಿ ಅವ್ಯವಹಾರ

ಅಥಣಿ: ‘ಅಥಣಿ ಹಾಗೂ ಕಾಗವಾಡ ತಾಲ್ಲೂಕುಗಳಲ್ಲಿ ವೃದ್ಧಾಪ್ಯ ವೇತನ, ಅಂಗವಿಕಲ ಮಾಸಾಶನಕ್ಕೆ ಫಲಾನುಭವಿಗಳನ್ನು ಆಯ್ಕೆ ಮಾಡುವಲ್ಲಿ ಅವ್ಯವಹಾರ ನಡೆಯುತ್ತಿದೆ’ ಎಂದು ಕಾಗವಾಡ ಶಾಸಕ ಭರಮಗೌಡ ಕಾಗೆ ಆರೋಪಿಸಿದರು. ಇಲ್ಲಿನ ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಅಥಣಿ, ಕಾಗವಾಡ ತಾಲ್ಲೂಕುಗಳ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.   ’60 ವರ್ಷ ದಾಟಿದವರಿಗೆ ಹಾಗೂ ಶೇ 75ಕ್ಕಿಂತ ಅಧಿಕ ಅಂಗವೈಕಲ್ಯ ಹೊಂದಿದವರಿಗೆ ಈ ಸೌಲಭ್ಯ …

Read More »

ಸವದಿ ಮನವೊಲಿಸಲು ಬಂದ ಬಿಜೆಪಿ ಮುಖಂಡನ ಎಳೆದಾಡಿ, ಕಾರಿಗೆ ಗುದ್ದಿದ ಕಾರ್ಯಕರ್ತರು

ಅಥಣಿ (ಬೆಳಗಾವಿ ಜಿಲ್ಲೆ): ಪಕ್ಷ ಬಿಡದಂತೆ ಲಕ್ಷ್ಮಣ ಸವದಿ ಅವರ ಮನವೊಲಿಸಲು ಇಲ್ಲಿಗೆ ಗುರುವಾರ ಬಂದಿದ್ದ ಬಿಜೆಪಿ ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಶ ನೇರ್ಲಿ ಹಾಗೂ ಆರ್.ಎಸ್.ಎಸ್. ಮುಖಂಡರಿಗೆ ಸವದಿ ಬೆಂಬಲಿಗರು ಮುತ್ತಿಗೆ ಹಾಕಿ, ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡರು.   ಮತ್ತೆ ಕೆಲವರು ನೇರ್ಲಿ ಅವರ ಕಾರಿಗೆ ಗುದ್ದಿ ಕಿಡಿ ಕಾರಿದರು. ‘ನಮ್ಮ ಸಾಹುಕಾರಗೆ ಯಾಕೆ ಟಿಕಟ್ ತಪ್ಪಿಸಿದ್ದೀರಿ ಎಂದು ಉತ್ತರ ಕೊಟ್ಟೇ ಹೋಗಬೇಕು’ ಎಂದು ಪಟ್ಟು ಹಿಡಿದರು. ‘ಈ …

Read More »

ವಕೀಲರ ಮೇಲೆ ಹಲ್ಲೆ: ಪ್ರತಿಭಟನೆ

ಅಥಣಿ: ವಾಹನ ನಿಲುಗಡೆ ವಿಚಾರವಾಗಿ ಪೊಲೀಸರು ವಕೀಲರೊಬ್ಬರ ಮೇಲೆ ಹಲ್ಲೆ ಮಾಡಿದ್ದಾರೆ. ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಖು ಎಂದು ಆಗ್ರಹಿಸಿ ಅಥಣಿ ವಕೀಲರ ಸಂಘದಿಂದ ಶಿವಯೋಗಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಶೈಲ ಮೇತ್ರಿ ಮಾತನಾಡಿ, ‘ಮೂಲತಃ ರಾಮದುರ್ಗದ ವಕೀರೊಬ್ಬರು ಪ್ರಸ್ತುತ ಬೆಳಗಾವಿಯಲ್ಲಿ ವೃತ್ತಿ ನಡೆಸುತ್ತಿದ್ದು, ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಿ ಠಾಣೆ ಹಿಂಬದಿ ವಾಹನ ನಿಲ್ಲಿಸಿದ್ದರು. ಈ ವೇಳೆ ಮಹಿಳಾ ಪೊಲೀಸರು ಆಕ್ಷೇಪ ವ್ಯಕ್ತಪಡಿಸಿ ವಾಹನ …

Read More »

ಸಂವಿಧಾನದ ಆಶಯಕ್ಕೆ ಬದ್ಧರಾಗಿ’

ಅಥಣಿ: ‘ಡಾ.ಅಂಬೇಡ್ಕರ್ ನೇತೃತ್ವದ ತಂಡ ನೀಡಿರುವ ಸಂವಿಧಾನ ಸದೃಢ ಭಾರತ ನಿರ್ಮಾಣಕ್ಕೆ ಸಹಕಾರಿಯಾಗಿದೆ. ಈ ಸಂವಿಧಾನದ ಮೂಲಕ ಸಮಾನತೆ, ಸರ್ವರಿಗೂ ಶಿಕ್ಷಣ ದೊರೆತಿದ್ದು, ಮೂಲಭೂತ ಹಕ್ಕುಗಳ ಜೊತೆ ಮೂಲಭೂತ ಕರ್ತವ್ಯಗಳ ಬಗ್ಗೆ ನಾವು ಗಮನ ಹರಿಸಬೇಕು’ ಅಥರ್ವ ಸಾಂಗ್ಲಿಕರ ಟ್ರಸ್ಟ್‌ ಅಧ್ಯಕ್ಷ ಚಂದ್ರಕಾಂತ ಸಾಂಗ್ಲಿಕರ ಹೇಳಿದರು.   ಪಟ್ಟಣದ ಆದರ್ಶ ನಗರದ ಅನಿಲ ಕಾಂಬಳೆ ಇವರ ಸಂಸ್ಕೃತ ಭವನದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಅಥಣಿ ತಾಲ್ಲೂಕು ಘಟಕದಿಂದ …

Read More »

ಮೋಳೆ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಬಂಧಿಸಿದ ಅಬಕಾರಿ ತಂಡ

ಅಥಣಿ: ಇಲ್ಲಿನ ಅಬಕಾರಿ ವಲಯ ವ್ಯಾಪ್ತಿಯ ಮೋಳೆ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿರುವ ಅಬಕಾರಿ ತಂಡ ಆರೋಪಿಯನ್ನು ಸೋಮವಾರ ಬಂಧಿಸಿದೆ. ಸುರೇಶ ಅಪ್ಪಾಸಾಬ ಚೋರಮುಲೆ ಬಂಧಿತ. ಈತನಿಂದ 40,612 ರೂ. ಅಂದಾಜು ಮೌಲ್ಯದ 64.44 ಲೀ ಮದ್ಯ ಹಾಗೂ 46.8 ಲೀ ಬಿಯರ್ ವಶಪಡಿಸಿಕೊಳ್ಳಲಾಗಿದೆ. ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಬೆಳಗಾವಿ ಅಬಕಾರಿ ಅಪರ ಆಯುಕ್ತರು, ಬೆಳಗಾವಿ ಉತ್ತರ ಜಿಲ್ಲೆ ಜಂಟಿ …

Read More »