ಅಥಣಿ: ‘ಇಲ್ಲಿ ಶರಣ ಸಂಸ್ಕೃತಿ ಹಾಸುಹೊಕ್ಕಾಗಿದೆ. ಹೊರಗಿನಿಂದ ಬಂದವರೆಲ್ಲರನ್ನೂ ತಮ್ಮವರೆಂದು ಪ್ರೀತಿ, ವಿಶ್ವಾಸ ಕೊಟ್ಟು ಜಾತಿ, ಮತವೆನ್ನದೆ ಎಲ್ಲರನ್ನೂ ಅಪ್ಪಿಕೊಳ್ಳುವ ಗುಣ ಈ ಮಣ್ಣಿನದಾಗಿದೆ’ ಎಂದು ಗಚ್ಚಿನ ಮಠದ ಶಿವಬಸವ ಸ್ವಾಮೀಜಿ ಹೇಳಿದರು. ಶೆಟ್ಟರ ಮಠದ ಮರುಳಸಿದ್ಧ ಸ್ವಾಮೀಜಿ ಅವರ 128ನೇ ಪುಣ್ಯಾರಾಧನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಭಾರತೀಯ ಆಹಾರ ಪದ್ಧತಿಯಲ್ಲಿ ದಿವ್ಯ ಔಷಧಿಗಳಿವೆ. ಆದಾಗ್ಯೂ ಎಲ್ಲರೂ ಮುನ್ನೆಚ್ಚರಿಕೆ ಕ್ರಮ ಅನುಸರಿಸಿ ಸೋಂಕಿನಿಂದ ದೂರವಿರಬೇಕು’ ಎಂದು ಸಲಹೆ ನೀಡಿದರು. …
Read More »ತಂಗಡಿ ಗ್ರಾಮದಲ್ಲಿ ದಲಿತರ ಮೇಲೆ ದಬ್ಬಾಳಿಕೆ.?
ತಂಗಡಿ ಗ್ರಾಮದಲ್ಲಿ ದಲಿತರ ಮೇಲೆ ದಬ್ಬಾಳಿಕೆ ಅಥಣಿ ತಾಲೂಕಿನ ತಂಗಡಿ ಗ್ರಾಮದಲ್ಲಿ ದಲಿತರು ತಮ್ಮ ಮಾಲ್ಕಿ ಜಮೀನಿನಲ್ಲಿ ತಮಗೆ ಅನುಕೂಲ ಆಗುವ ಗೋಸ್ಕರ ರಸ್ತೆಯನ್ನು ಮಾಡಿಕೊಳ್ಳುವುದಕ್ಕೆ ಹೋದರೆ ಗ್ರಾಮದ ಬೇರೆ ಜಾತಿಯ ಪ್ರಭಾವಿ ವ್ಯಕ್ತಿಗಳು ತಮ್ಮ ತಮ್ಮ ಪ್ರಭಾವ ಬೀರಿ ರಸ್ತೆ ನಿರ್ಮಾಣಕ್ಕೆ ತಡೆ ಒಡ್ಡುತ್ತಿದ್ದಾರೆ ಇದೇ ಸಂದರ್ಭದಲ್ಲಿ ಗ್ರಾಮದ ದಲಿತ ಯುವಕರು ಮಾತನಾಡಿ ಹಲವಾರು ವರ್ಷದಿಂದ ರಸ್ತೆ ನಿರ್ಮಾಣ ಕಾರ್ಯಕ್ಕೆ ಕೈ ಹಾಕಿದರು ಇಲ್ಲಿ ದಲಿತರ ಜಮೀನು …
Read More »ವಿಪತ್ತು ನಿರ್ವಹಣೆ: ಸ್ವಯಂ ಸೇವಕರಿಗೆ ತರಬೇತಿ
ಅಥಣಿ: ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಟ್ರಸ್ಟ್ನ ಇಲ್ಲಿನ ಶಾಖೆಯಿಂದ ವಿಪತ್ತು ನಿರ್ವಹಣೆ ಕುರಿತು ತಾಲ್ಲೂಕಿನ ಮುರುಗುಂಡಿ ಮುರಸಿದ್ದೇಶ್ವರ ದೇವಾಲಯದಲ್ಲಿ ಸ್ವಯಂ ಸೇವಕರಿಗೆ ತರಬೇತಿ ಶಿಬಿರ ನಡೆಸಲಾಯಿತು. ತಹಶೀಲ್ದಾರ್ ದುಂಡಪ್ಪ ಕೋಮಾರ ಉದ್ಘಾಟಿಸಿ ಮಾತನಾಡಿ, ‘ಸರ್ಕಾರದೊಂದಿಗೆ ಸಂಘ ಸಂಸ್ಥೆಗಳು ಸ್ವಯಂಸೇವಕರ ಮೂಲಕ ಕೈ ಜೋಡಿಸಿದರೆ ವಿಪತ್ತನ್ನು ಸುಲಭವಾಗಿ ನಿರ್ವಹಿಸಬಹುದು’ ಎಂದರು. ‘ತಾಲ್ಲೂಕಿನಲ್ಲಿ ಪ್ರತಿ ವರ್ಷ ನೆರೆ ಹಾವಳಿ ಕಾಡುತ್ತಿರುತ್ತದೆ. ಆಗ ಎನ್ಡಿಆರ್ಎಫ್, ಪೊಲೀಸರು, ಸೈನ್ಯದವರು ಬಂದು ತಲುಪವರಿಗೆ ಸಾಕಷ್ಟು ಸಂಕಷ್ಟಗಳನ್ನು ಎದುರಿಸಬೇಕಾಗುತ್ತದೆ. ಮಹಾಪೂರ …
Read More »ರಾಜಕೀಯದ ನಿಖರ ಭವಿಷ್ಯದ ಮೂಲಕ ಖ್ಯಾತಿಗಳಿಸಿದ್ದ ಪಂ.ಶ್ರೀಪಾಲ್ ಇನ್ನಿಲ್ಲ
ಅಥಣಿ : ರಾಜಕೀಯ ಭವಿಷ್ಯ ನುಡಿಯುವ ಮೂಲಕ ಖ್ಯಾತಿಗಳಿಸಿದ್ದ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಕೋನಟ್ಟಿಯ ಪಂಡಿತ ಶ್ರೀಪಾಲ್ ಉಪಾಧ್ಯೆ (78) ಮಂಗಳವಾರ ಬೆಳಗ್ಗೆ ನಿಧನರಾದರು. ನ್ಯುಮೋನಿಯಾದಿಂದ ಬಳಲುತ್ತಿದ್ದ ಉಪಾಧ್ಯೆ ಅವರು ಬೆಳಗಿನ ಜಾವ 6.30ಕ್ಕೆ ನಿಧನರಾದರು.1985ರಲ್ಲಿ ಚುನಾವಣೆಗೆ ಸ್ಪರ್ಧಿಸದ ಆ ಧೀಮಂತ ವ್ಯಕ್ತಿ ಮುಖ್ಯಮಂತ್ರಿ ಆಗ್ತಾರೆ ಎಂದು ಕವಡೆ ಭವಿಷ್ಯ ನುಡಿದಿದ್ದರು. ಅದರಂತೆ ಅಂದು ಚುನಾವಣೆಗೆ ಸ್ಪರ್ಧಿಸದ ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಯಾಗಿದ್ದರು. 2018ರ ವಿಧಾನಸಭೆ ಚುನಾವಣೆ ವೇಳೆ ಎಚ್.ಡಿ.ಕುಮಾರಸ್ವಾಮಿಯೇ …
Read More »ವ್ಯಕ್ತಿ ಬಂಧನ: 15 ದ್ವಿಚಕ್ರವಾಹನ ವಶಕ್ಕೆ
ಅಥಣಿ: ದ್ವಿಚಕ್ರ ವಾಹನಗಳ ಕಳವು ಆರೋಪದ ಮೇಲೆ ಇಲ್ಲಿನ ಪೊಲೀಸರು ವ್ಯಕ್ತಿಯೊಬ್ಬರನ್ನು ಗುರುವಾರ ಬಂಧಿಸಿದ್ದಾರೆ. ತಾಲ್ಲೂಕಿನ ಶಿರಹಟ್ಟಿಯ ರಮಜಾನ ಹುಸೇನಸಾಬ ಐನಾಪುರ (27) ಬಂಧಿತ. ‘ಜಿಲ್ಲೆ, ಬಾಗಲಕೋಟೆ ಹಾಗೂ ನೆರೆಯ ಮಹಾರಾಷ್ಟ್ರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳವಾದ ₹ 5 ಲಕ್ಷ ಮೌಲ್ಯದ 15 ದ್ವಿಚಕ್ರವಾಹನಗಳನ್ನು ಆರೋಪಿಯಿಂದ ಜಪ್ತಿ ಮಾಡಲಾಗಿದೆ. ಪ್ರಕರಣ ದಾಖಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ. ಪಟ್ಟಣ ಹಾಗೂ ತಾಲ್ಲೂಕಿನಾದ್ಯಂತ ದ್ವಿಚಕ್ರವಾಹನಗಳ ಕಳವು ಪ್ರಕರಣ ಹೆಚ್ಚುತ್ತಿದ್ದುದ್ದರಿಂದ ಡಿಎಸ್ಪಿ ಎಸ್.ವಿ. …
Read More »ಅಥಣಿ ತಾಲೂಕಿನಲ್ಲಿ ಕಳೆದ ನಾಲ್ಕು ದಿನಗಳಿಂದ ಮಳೆ ಕಡಿಮೆಯಾಗಿದ್ದರಿಂದ ನದಿ ತೀರದಲ್ಲಿ ಪ್ರವಾಹ ಇಳಿಮುಖ
ಅಥಣಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಹಾಗೂ ಅಥಣಿ ತಾಲೂಕಿನಲ್ಲಿ ಕಳೆದ ನಾಲ್ಕು ದಿನಗಳಿಂದ ಮಳೆ ಕಡಿಮೆಯಾಗಿದ್ದರಿಂದ ನದಿ ತೀರದಲ್ಲಿ ಪ್ರವಾಹ ಇಳಿಮುಖವಗುತ್ತಿದ್ದು, ನದಿ ತೀರದ ಗ್ರಾಮದ ಜನರು ನಿರಾಳರಾಗಿದ್ದಾರೆ. ಆದ್ರೆ ಈ ಗ್ರಾಮದಲ್ಲಿ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ. ತಾಲೂಕಿನ ನದಿ ತೀರದ ಗ್ರಾಮಗಳಾದ ಝುಂಜರವಾಡ, ಶಿರಹಟ್ಟಿ, ಸವದಿ, ನದಿ ಇಂಗಳಗಾಂವ, ಜನವಾಡ, ಸಪ್ತಸಾಗರ, ದರೂರ, ಹಲ್ಯಾಳ, ಮಹಿಷವಾಡಗಿ, ಅವರಖೋಡ, ಖವಟಗೊಪ್ಪ, ಸೇರಿದಂತೆ ಇತರೆ ನದಿ ತೀರದ ಗ್ರಾಮಗಳಲ್ಲಿ ಸೊಳ್ಳ, …
Read More »ಸಂತ್ರಸ್ತರಿಗೆ ಪರಿಹಾರ ಕೊಡಿಸುತ್ತೇವೆ ಶಾಸಕ ಮಹೇಶ ಕುಮಟಳ್ಳಿ ಭರವಸೆ
ಅಥಣಿ: ತಾಂತ್ರಿಕ ದೋಷದಿಂದಾಗಿ ಕೆಲವು ಪ್ರವಾಹ ಸಂತ್ರಸ್ತರಿಗೆ ಪರಿಹಾರ ವಿತರಣೆ ವಿಳಂಬವಾಗಿದೆ. ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಹಾಗೂ ತಾವು ಮುಖ್ಯಮಂತ್ರಿಗಳ ಗಮನಕ್ಕೆ ತರುವ ಮೂಲಕ ಸಂತ್ರಸ್ತರಿಗೆ ಪರಿಹಾರ ಕೊಡಿಸುತ್ತೇವೆ ಎಂದು ಶಾಸಕ ಮಹೇಶ ಕುಮಟಳ್ಳಿ ಭರವಸೆ ನೀಡಿದ್ದಾರೆ. ತಾಲೂಕಿನಲ್ಲಿ ವಿವಿಧ ಗ್ರಾಮಗಳಲ್ಲಿ ನಬಾರ್ಡ25 ರಲ್ಲಿ ಯೋಜನೆ ಅಡಿಯಲ್ಲಿ ಹೆಚ್ಚುವರಿ ಶಾಲಾ ಕೊಠಡಿ ನಿರ್ಮಾಣಕ್ಕೆ ಚಾಲಲೆ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಸಕ್ತ ಸಾಲಿನಲ್ಲಿ ಪ್ರವಾಹಕ್ಕೆ ಅಪಾರ ಪ್ರಮಾಣದಲ್ಲಿ …
Read More »ಬ್ಯಾರಲ್ನಲ್ಲಿ ಹೋಗುತ್ತಿದ್ದವರ ನೆರವಿಗೆ ಬಂದ ಸಿಎಂ : ಸಿಕ್ತು ಬೋಟ್
ಅಥಣಿ : ಬೋಟ್ ಇಲ್ಲದೇ ಪ್ಲಾಸ್ಟಿಕ್ ಬ್ಯಾರೆಲ್ಗಳ ಮೇಲೆ ಕುಳಿತು ಪ್ರವಾಹದ ನೀರಿನಲ್ಲಿ ಸಾಗುತ್ತಿದ್ದ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹುಲಗಬಾಳಿಯಲ್ಲಿ ನೆರೆ ಸಂತ್ರಸ್ತರಿಗೆ (ಮಾಂಗ ವಸ್ತಿ ಜನರು) ಬೋಟ್ ವ್ಯವಸ್ಥೆ ಕಲ್ಪಿಸಲಾಗಿದೆ. ಕೃಷ್ಣಾ ನದಿ ಪ್ರವಾಹದಿಂದಾಗಿ ಹುಲಗಬಾಳಿ ಜಲಾವೃತವಾಗಿತ್ತು. ಇಲ್ಲಿಯ ಮಾಂಗ ವಸ್ತಿ ಜನರು ಬೋಟ್ ಇಲ್ಲದೇ ಪ್ಲಾಸ್ಟಿಕ್ ಬ್ಯಾರೆಲ್ಗಳ ಮೂಲಕ ಪ್ರವಾಹದ ನೀರಿನಲ್ಲಿ ಸಾಗುತ್ತಿದ್ದರು. ಈ ಬಗ್ಗೆ ಸುವರ್ಣ ನ್ಯೂಸ್ ವರದಿ ಮಾಡಿತ್ತು. ಈ ವರದಿಯನ್ನು ಗಮನಿಸಿದ …
Read More »ಅತ್ಯಾಚಾರಿ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು
ಅಥಣಿ: ಧಾರವಾಡ ಜಿಲ್ಲೆಯ ಬೋಗುರ ಗ್ರಾಮದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಖಂಡಿಸಿ ಪಟ್ಟಣದಲ್ಲಿ ಜಂಗಮ ಸಮಾಜದ ಪದಾಧಿಕಾರಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು. ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿ, ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದರು. ಅಥಣಿ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರ ಮನವಿ ಸಲ್ಲಿಸಿದರು. ಪುಟ್ಟ ಹಿರೇಮಠ ಮಾತನಾಡಿ, ಅಮ್ಮನಿಗೆ ಆರೋಗ್ಯ ಸರಿ ಇಲ್ಲದ ಕಾರಣ ದೇವಸ್ಥಾನಕ್ಕೆ ತೆರಳಿದ್ದ ಬಾಲಕಿ ಮೇಲೆ ಪಕ್ಕದ ಗ್ರಾಮದ ಯುವಕ ಅತ್ಯಾಚಾರ …
Read More »ವರ್ಷ ಕಳೆದರೂ ತಪ್ಪಿಲ್ಲ ಬೆಳಗಾವಿ ಪ್ರವಾಹ ಸಂತ್ರಸ್ತರ ಸಂಕಟ!
ಬೆಳಗಾವಿ: ಪ್ರವಾಹಕ್ಕೆ ನಲುಗಿ ಒಂದು ವರ್ಷ ಕಳೆದರೂ ಜಿಲ್ಲೆಯ ಎಲ್ಲ ಸಂತ್ರಸ್ತರಿಗೆ ಇನ್ನೂ ಪರಿಹಾರ ದೊರೆತಿಲ್ಲ. ಪರಿಹಾರ ಕೊಡುವಂತೆ ಒತ್ತಾಯಿಸಿ, ಈಗಲೂ ಅಲ್ಲೊಂದು, ಇಲ್ಲೊಂದು ಪ್ರತಿಭಟನೆಗಳು ನಡೆಯುತ್ತಲೇ ಇವೆ. ಕಳೆದ ವರ್ಷ ಆಗಸ್ಟ್ ತಿಂಗಳಿನಲ್ಲಿ ಕೃಷ್ಣಾ, ಮಲಪ್ರಭಾ, ಘಟಪ್ರಭಾ, ಹಿರಣ್ಯಕೇಶಿ ಸೇರಿದಂತೆ ಬಹುತೇಕ ಎಲ್ಲ ನದಿಗಳಲ್ಲಿ ಪ್ರವಾಹ ಕಾಣಿಸಿಕೊಂಡಿತ್ತು. ಇದರ ಜೊತೆ ಅತಿವೃಷ್ಟಿಯೂ ಕೂಡಿಕೊಂಡು ಅಪಾರ ಹಾನಿಯನ್ನುಂಟು ಮಾಡಿತ್ತು. ಬೆಳಗಾವಿ, ಖಾನಾಪುರ, ಚಿಕ್ಕೋಡಿ, ಅಥಣಿ, ಗೋಕಾಕ, ರಾಮದುರ್ಗ, ಸವದತ್ತಿ, ರಾಯಬಾಗ, ಹುಕ್ಕೇರಿ …
Read More »