Breaking News

ಅಥಣಿ

ಮಸೀದಿ ಪಕ್ಕದಲ್ಲಿ ಆಕಸ್ಮಿಕವಾಗಿ ಸತ್ತು ಬಿದ್ದಿದ್ದ ಮಂಗಕ್ಕೆ ಗ್ರಾಮಸ್ಥರಿಂದ ಅರ್ಥಪೂರ್ಣ ಅಂತ್ಯಸಂಸ್ಕಾರ

ಅಥಣಿ: ಮಸೀದಿ ಪಕ್ಕದಲ್ಲಿ ಆಕಸ್ಮಿಕವಾಗಿ ಸತ್ತು ಬಿದ್ದಿದ್ದ ಮಂಗಕ್ಕೆ ಗ್ರಾಮಸ್ಥರಿಂದ ಅರ್ಥಪೂರ್ಣ ಅಂತ್ಯಸಂಸ್ಕಾರ ನೆರವೇರಿಸಿ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೆಲಸಂಗ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಕೋತಿಗೆ ಗ್ರಾಮಸ್ಥರು ಮನುಷ್ಯರಿಗೆ ಮಾಡುವ ಅಂತ್ಯಸಂಸ್ಕಾರ ಕ್ರಿಯೆ ಮಾಡಿದ್ದಾರೆ. ಮೃತ ಮಂಗನ ದೇಹವನ್ನು ಲಕ್ಷ್ಮಿ ದೇವಸ್ಥಾನದ ಎದುರು ಇಟ್ಟು ಸತತ 5ಗಂಟೆಗಳ ಕಾಲ ಭಜನೆ ಮಾಡಿದ್ದಾರೆ. ನಂತರ ಮೆರವಣಿಗೆ ಮಾಡಿ ಮಾಡಿ ಉತ್ತರ ಕ್ರಿಯೆ ನೆರವೆರಿಸಿದ್ದಾರೆ. ಈ ಕಾರ್ಯವನ್ನು ಹಿಂದೂ ಮುಸ್ಲಿಮರು …

Read More »

ಗೋಕಾಕ್​​​ ಶಾಸಕರಿಗೆ, ಸವದಿಗೆ ಸಚಿವ ಸಂಪುಟ ಸ್ಥಾನಮಾನ ಕೊಡಲಿ: ಮಹೇಶ್​ ಕುಮಠಳ್ಳಿ

ಅಥಣಿ: ಗೋಕಾಕ್​​ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನಮಾನ ನೀಡಲಿ. ನನಗೆ ಸಚಿವ ಸ್ಥಾನಕ್ಕಿಂತಲೂ ನನ್ನ ಕ್ಷೇತ್ರದ ಅಭಿವೃದ್ಧಿ ಮುಖ್ಯವಾಗಿದೆ. ನನಗೆ ಸಚಿವ ಸಂಪುಟದಲ್ಲಿ ಸ್ಥಾನ ಬೇಡ ಎಂದು ಶಾಸಕ ಮಹೇಶ್ ಕುಮಠಳ್ಳಿ ಅವರು ಹೇಳಿಕೆ ನೀಡಿದ್ದಾರೆ. ಅವರು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಗ್ರಾಮದಲ್ಲಿ ನೂತನ ಪೊಲೀಸ್ ಠಾಣೆ ಉದ್ಘಾಟನೆ ನೆರವೇರಿಸಿ ಮಾತನಾಡಿ, ನನಗೆ ಕ್ಷೇತ್ರದ ಅಭಿವೃದ್ಧಿ ಮುಖ್ಯವಾಗಿದೆ. …

Read More »

ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಅವರನ್ನ ನಾನೂ ಸ್ವಾಗತಿಸುತ್ತೇನೆ ಎಂದ ಲಕ್ಷ್ಮಣ್ ಸವದಿ

ಅಥಣಿ: ರಾಜ್ಯಕ್ಕೆ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ವಾದ್ರಾ ಅವರು ಆಗಮಿಸಿದ್ದು, ಅವರಿಗೆ ನಾನು ಸ್ವಾಗತ ಕೋರುತ್ತೇನೆ, ಅವರು ಕಾಲು ಇಟ್ಟಲೆಲ್ಲ ಬಿಜೆಪಿಯ ಕಮಲ ಅರಳುತ್ತದೆ. ಹಾಗಾಗಿ ನಾನು ಅವರನ್ನ ಸ್ವಾಗತ ಬಯಸುತ್ತೇನೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಲಕ್ಷ್ಮಣ್ ಸವದಿ ಕೈ ಮುಖಂಡರ ವಿರುದ್ಧ ವ್ಯಂಗ್ಯವಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಗ್ರಾಮದಲ್ಲಿ ನೂತನವಾಗಿ ಪೊಲೀಸ್ ಠಾಣಾ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಸದ್ಯ …

Read More »

200 ವರ್ಷ ಇತಿಹಾಸ ಇರುವ ದೇವನಾಥ ಮಂದಿರ ಕಾಮಗಾರಿ ಶಾಸಕರಿಂದ ಪೂಜೆ

ಅಥಣಿ ಮತಕ್ಷೇತ್ರದ ಜನಪ್ರೀಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಕೊಳಗೇರಿ ಅಭಿವೃದ್ಧಿ ನಿಗಮ ಮಂಡಳಿಯ ಅಧ್ಯಕ್ಷರಾದ ಮಹೇಶ ಕುಮಟಳ್ಳಿಯವರಿಂದ ಹಲ್ಯಾಳ ಗ್ರಾಮದಲ್ಲಿ ಸುಮಾರು 12ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಶ್ರೀ ದೇವನಾಥ ದೇವಸ್ಥಾನ ಕಾಮಗಾರಿ ಭೂಮಿ ಪೂಜೆ ಹಾಗೂ 5 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಶ್ರೀ ಹನುಮಾನ ದೇವಸ್ಥಾನದ ಸಮುದಾಯ ಭವನಗಳ ಕಾಮಗಾರಿ ಪೂಜೆಯನ್ನು ನೆರವೇರಿಸಲಾಯಿತು..   ಈ ಸಂದರ್ಭದಲ್ಲಿ ಶ್ರೀ ಮ. ನಿ ಪ್ರ ಗುರುಸಿದ್ದೆಶ್ವರ ಮಹಾಸ್ವಾಮಿಗಳು …

Read More »

ಅಥಣಿಯಲ್ಲಿ ಭಾರಿ ಮಳೆಗೆ ಕೊಚ್ಚಿಹೋದ ಸೇತುವೆ

ಅಥಣಿ(ಬೆಳಗಾವಿ): ಕಳೆದ ಎರಡು ದಿನದ ಹಿಂದೆ ಸುರಿದ ಧಾರಾಕಾರ ಮಳೆಗೆ ತೇಲಸಂಗ ಗ್ರಾಮದ ತೋಟದ ವಸ್ತಿ ಜನಕ್ಕೆ ಸಂಪರ್ಕ ಕಲ್ಪಿಸುವ ದೋಣಿಹಳ್ಳದ ತಾತ್ಕಾಲಿಕ‌ ಸೇತುವೆ ಕೊಚ್ಚಿಹೋಗಿ ಗ್ರಾಮಸ್ಥರು, ಶಾಲೆ ಮಕ್ಕಳು ಜೀವ ಪಣಕ್ಕಿಟ್ಟು ಹಳ್ಳ ದಾಟುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೇಲಸಂಗ- ಬಿಜ್ಜರಗಿ ರಸ್ತೆಯ ಡೋಣಿ ಹಳ್ಳಕ್ಕೆ ನಿರ್ಮಿಸಿದ ಸೇತುವೆ ಭಾರಿ ಮಳೆಗೆ ಕೊಚ್ಚಿ ಹೋಗಿದ್ದು, ತೋಟದ ಕೆಲಸಕ್ಕೆ ಹೋದ ರೈತರು ಹಾಗೂ ಶಾಲೆ ಮಕ್ಕಳು ಹಗ್ಗ ಹಿಡಿದು ಹಳ್ಳ …

Read More »

ಯುವಕನ ಮಿದುಳು ನಿಷ್ಕ್ರಿಯ ಯುವಕನ ಅಂಗಾಂಗ ದಾನ ಮಾಡಿದ ಕುಟುಂಬಸ್ಥರು

ಅಥಣಿ: ಮನೆಯಲ್ಲಿ ಜಾರಿಬಿದ್ದು ಗಂಭೀರವಾಗಿ ಗಾಯಗೊಂಡ ಯುವಕನ ಮೆದುಳು ನಿಷ್ಕ್ರೀಯಗೊಂಡ ಹಿನ್ನೆಲೆ, ಕುಟುಂಬಸ್ಥರು ಯುವಕನ ಅಂಗಾಂಗ ದಾನ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ಪಟ್ಟಣದಲ್ಲಿ ಮಂಗಳವಾರ ಪ್ರಶಾಂತ ವಿಠ್ಠಲ ಮಲ್ಲೆವಾಡಿ ಎನ್ನುವ 30 ವರ್ಷದ ಯುವಕ ಮನೆಯಲ್ಲಿ ಶೌಚಾಲಯಕ್ಕೆ ಹೋಗಿ ಮರಳಿ ಬರುವಾಗ ಕಾಲು ಜಾರಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು‌ ಪೋಷಕರು ಅಥಣಿಯ ಅನ್ನಪೂರ್ಣ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಕಾರಣ ಕೋಮಾಗೆ …

Read More »

ಮಾತಿಗೆ ತಪ್ಪಿದರೆ ನವೆಂಬರ್ 2ನೇ ವಾರದಲ್ಲಿ ಬೆಂಗಳೂರಿನಲ್ಲಿ ಪಂಚಮಸಾಲಿ ಸಮಾಜದಿಂದ 25 ಲಕ್ಷ ಜನಸಂಖ್ಯೆ ಸೇರಿ ವಿಧಾನಸೌಧ ಮುಂದೆ ಪ್ರತಿಭಟನೆ

ಅಥಣಿ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮಾನಸ ಪುತ್ರರಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೇಲೆ ಒತ್ತಡ ಹಾಕಿ ಪಂಚಮಸಾಲಿ ಸಮಾಜಕ್ಕೆ ನ್ಯಾಯ ಒದಗಿಸಬೇಕೆಂದು ಕೂಡಲಸಂಗಮ ಪೀಠದ ಶ್ರೀಗಳು ಹಾಗೂ ಪಂಚಮಸಾಲಿ ಸಮಾಜದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದ್ದಾರೆ. ಅಥಣಿ ಪಟ್ಟಣದಲ್ಲಿ ನಡೆದ ಖಾಸಗಿ ಕಾರ್ಯಕ್ರಮ ಒಂದರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶೈಕ್ಷಣಿಕವಾಗಿ ಆರ್ಥಿಕವಾಗಿ, ಹಿಂದುಳಿದ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕೇಳುತ್ತಿದ್ದೇವೆ. …

Read More »

ಅಥಣಿಯಲ್ಲಿ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ.. ನವಜಾತ ಮಗು ಪತ್ತೆ.. ಸಿಕ್ಕಿ ಬಿದ್ದ ಕಳ್ಳಿ

ಅಥಣಿ: ಸಿನಿಮೀಯ ಮಾದರಿಯಲ್ಲಿ ಸರ್ಕಾರಿ ಆಸ್ಪತ್ರೆಯಿಂದ ನವಜಾತ ಶಿಶು ಕಳ್ಳತನ ಮಾಡಿದ ಘಟನೆ ನಗರದಲ್ಲಿ ನಡೆದಿದೆ. ಆದರೆ, ಎರಡೂವರೆ ಗಂಟೆಯಲ್ಲಿ ಮಗುವನ್ನು ಬೆಳಗಾವಿ ಪೊಲೀಸರು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕು ಆಸ್ಪತ್ರೆಯಲ್ಲಿ ನಿನ್ನೆಯಷ್ಟೇ ಜನಿಸಿದ್ದ ನವಜಾತ ಗಂಡು ಮಗು ಪತ್ತೆ ಹಚ್ಚಿ ತಾಯಿಗೆ ಹಸ್ತಾಂತರಿಸುವಲ್ಲಿ ಅಥಣಿ ಮತ್ತು ಕಾಗವಾಡ ಪೊಲೀಸರು ಯಶಸ್ವಿಯಾಗಿದ್ದು, ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ. ಇಂದು ಬೆಳಗಿನ ಜಾವ 10.15 ಕ್ಕೆ ಸರ್ಕಾರಿ ಆಸ್ಪತ್ರೆಗೆ ನರ್ಸ್ …

Read More »

2A ಮೀಸಲಾತಿ ವಿಳಂಬ 5 ಸಾವಿರಕ್ಕೂ ಹೆಚ್ಚು ಜನ ಬೊಮ್ಮಾಯಿನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ: ರಮೇಶ್ ಗೌಡ ಪಾಟೀಲ್

  ಅಥಣಿ  :ಪಂಚಮಸಾಲಿ ಸಮಾಜಕ್ಕೆ ೨ಎ ಮೀಸಲಾತಿ ನೀಡುವಂತೆ ಹಲವು ದಶಕಗಳ ಹೋರಾಟ ಇದಾಗಿದೆ, ಆದರೆ ಸರ್ಕಾರಗಳು ಭರವಸೆ ನೀಡುತ್ತಾ ಬಂದಿದೆ, ಇದನ್ನು ಖಂಡಿಸಿ ನಾವು ಬರುವ ದಿನಾಂಕ ಇಪ್ಪತ್ತರಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಅಥಣಿ ತಾಲೂಕು ಪಂಚಮಸಾಲಿ ಸಂಘಟನೆಯ ಅಧ್ಯಕ್ಷರಾದ ರಮೇಶ್ ಗೌಡ ಪಾಟೀಲ್ ಅವರು ಹೇಳಿದರು. ಅವರು ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತಾ, ಪಂಚಮಸಾಲಿ ಸಮಾಜ …

Read More »

ಅದ್ದೂರಿ ಗಣೇಶೋತ್ಸವ ಮಾಡುತ್ತೇವೆ, ಡಿಜೆ ಬಳಕೆ ಮಾಡುತ್ತೇವೆ. ವಿದ್ಯುತ್ ಶುಲ್ಕ ಪಾವತಿ ಮಾಡಲ್ಲ:ಯತ್ನಾಳ್

ಅಥಣಿ, : ಇತರೆ ರಾಜ್ಯಗಳಂತೆ ಕರ್ನಾಟಕದಲ್ಲೂ ಅಪ್ಪ ಮಕ್ಕಳಿಗೆ ಟಿಕೆಟ್ ನೀಡಬಾರದೆಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲಾಗಿದೆ ಎಂದು ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ಹೇಳಿದ್ದಾರೆ.   ಬಿಜೆಪಿಯಲ್ಲಿ ಕುಟುಂಬಕ್ಕೆ ಒಂದೇ ಟಿಕೆಟ್ ಎಂದು ನಿಯಮ ಜಾರಿಯಾಗಿದೆ. ಈ ಕುರಿತು ನಾನು ಕೂಡ ಕರ್ನಾಟಕದಲ್ಲಿ ತ್ವರಿತವಾಗಿ ಈ ನಿಯಮ ಜಾರಿ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೇನೆ. ಅಪ್ಪ ಮಕ್ಕಳಿಗೆ ಹಾಗೂ ಕುಟುಂಬ ರಾಜಕೀಯಕ್ಕೆ …

Read More »