Breaking News

ಖಾನಾಪುರ

ಸಾರ್ವಜನಿಕ ಭೇಟಿ ಮಾಡಿ ಸಮಸ್ಯೆ ಆಲಿಸಿ ಪರಿಹಾರ ನೀಡಿದ ಖಾನಾಪೂರ ನಗರ ಸೇವಕ

ಖಾನಾಪೂರದ ವಾರ್ಡ್ ನಂಬರ್ 2 ರ ನಗರ ಸೇವಕ ತೊಹೀದ್ ಚಾಂದಖಾನವರ ಭೇಟಿ ನೀಡಿ ಸಾರ್ವಜನಿಕ ಸಮಸ್ಯೆ ಆಲಿಸಿ ಪರಿಹಾರ ಮಾಡುವ ಭರವಸೆ  ಖಾನಾಪೂರ ಪಟ್ಟಣ ಪಂಚಾಯಿತಿಯ ವಾರ್ಡ್ ನಂಬರ್ 2ರ ನಗರ ಸೇವಕ ತೊಹೀದ್ ಚಾಂದಖಾನವರ ಅವರು ಮಿಚ್ಕೀನ್ ಕಂಪೌಂಡ್ ಪರಿಸರದಲ್ಲಿನ ಸಾರ್ವಜನಿಕರಿಗೆ ಭೇಟಿ ನೀಡಿ ಅವರ ಸಮಸ್ಯೆಗಳನ್ನು ಆಲಿಸಿ ಅದಕೆ ಸೂಕ್ತ ಪರಿಹಾರ ನೀಡುವ ಬಗ್ಗೆ ಭರವಸೆ ನೀಡಿದರು. ಮಿಚ್ಕೀನ್ ಕಾಂಪೌಂಡ್ ನಲ್ಲಿನ ರಸ್ತೆಗಳಿಗೆ ಫೇವರ್ಸ ಹಾಕುವುದು …

Read More »

ಕೆಎಸ್​ಆರ್​ಟಿಸಿ, ಬೈಕ್ ನಡುವೆ ಮುಖಾಮುಖಿ‌ ಡಿಕ್ಕಿ: ಒಬ್ಬನ ಸಾವು, ಮೂವರಿಗೆ ಗಂಭೀರ ಗಾಯ

  ಬೆಳಗಾವಿ: ಬೈಕ್ ಹಾಗೂ ಕೆಎಸ್‌ಆರ್​​ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್​​ ಸವಾರ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಖಾನಾಪುರ ತಾಲೂಕಿನ ಗೊಲ್ಲಿಹಳ್ಳಿ‌ ಗ್ರಾಮದ ಬಳಿ ನಡೆದಿದೆ. ಯಲ್ಲಪ್ಪ ವಣ್ಣೂರ್ (25)​ ಅಪಘಾತದಲ್ಲಿ ಮೃತ ಪಟ್ಟವರು. ಒಂದೇ ಬೈಕ್​ನಲ್ಲಿ ಚಲಿಸುತ್ತಿದ್ದ ಪಲ್ಲವಿ ವಣ್ಣೂರ್​ (16), ಐಶ್ವರ್ಯಾ ವಣ್ಣೂರ್ (16)​, ಭೀಮಪ್ಪ ವಣ್ಣೂರ್ (40) ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಿರಸಿಯಿಂದ ಬೆಳಗಾವಿ ಕಡೆಗೆ …

Read More »

ಇಟ್ಟಿಗೆ ಸಾಗಿಸುತ್ತಿದ್ದ ಲಾರಿ ಪಲ್ಟಿ ಓರ್ವ ಸಾವು

ಖಾನಾಪುರ: ತಾಲೂಕಿನ ದೇವಟ್ಟಿಯಿಂದ ಪಾರಿಷ್ವಾಡಕ್ಕೆ ಇಟ್ಟಿಗೆ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದು ಇನ್ನಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ದಾವಲ್ ಸಾಬ್ ಫಯಾಜ್ ಮುನವಳ್ಳಿ ಮೃತಪಟ್ಟವರು. ಚಾಲಕ ಮಂಜುನಾಥ ಚಂದ್ರು ಕುಕಡೊಳ್ಳಿ ಹಾಗೂ ಕಾರ್ಮಿಕ ಮಂಜುನಾಥ ಗುರನ್ನವರ ಗಾಯಗೊಂಡವರು. ಚಾಲಕನ ನಿಯಂತ್ರಣ ತಪ್ಪಿದ ವಾಹನ ರಸ್ತೆ ಪಕ್ಕದಲ್ಲಿ ಪಲ್ಟಿಯಾಯಿತು. ಅಪಘಾತದಲ್ಲಿ ವಾಹನದಲ್ಲಿದ್ದ ಇಟ್ಟಿಗೆಗಳು ಸಹ ನಷ್ಟಕ್ಕೀಡಾಗಿವೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More »

ಪೂಜೆ ಸಲ್ಲಿಸಿ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದ ಡಾ.ಅಂಜಲಿ ನಿಂಬಾಳಕರ್

ಖಾನಾಪುರ: ಸ್ಥಳೀಯ ಶಾಸಕಿ ಡಾ.ಅಂಜಲಿ ನಿಂಬಾಳಕರ ಗುರುವಾರ ಪಟ್ಟಣದ ಚೌರಾಶಿದೇವಿ ಮತ್ತು ತಾಲೂಕಿನ ಕಕ್ಕೇರಿ ಗ್ರಾಮದ ಬಿಷ್ಠಾದೇವಿ ದೇವಾಲಯಗಳಲ್ಲಿ ಉಭಯ ಶಕ್ತಿದೇವಿಯರಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಮುಂಬರುವ ಚುನಾವಣೆಯ ಪ್ರಚಾರ ಕಾರ್ಯಕ್ಕೆ ವಿದ್ಯುಕ್ತ ಚಾಲನೆ ನೀಡಿದರು. ಕಕ್ಕೇರಿ ಗ್ರಾಮದ ಬಿಷ್ಠಾದೇವಿ ಆಲಯದ ಮುಂಭಾಗದಲ್ಲಿ ತಮ್ಮ ಬೆಂಬಲಿಗರು ಮತ್ತು ಕಾಂಗ್ರೆಸ್ ಮುಖಂಡರೊಂದಿಗೆ ಪಕ್ಷದ ಪ್ರಚಾರ ವಾಹನಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, “ತಾಲೂಕಿನ ವಿವಿಧ ಭಾಗಗಳಲ್ಲಿ ಕಳೆದ 5 ವರ್ಷಗಳಿಂದ ಹಲವು …

Read More »

ಅಂದರ್- ಬಾಹರ್ ಆಟದಲ್ಲಿ ತೊಡಗಿದ್ದ ಎಂಟು ಜನ ಆರೋಪಿ ಪೊಲೀಸರು ವಶಕ್ಕೆ

ಖಾನಾಪುರ: ತಾಲೂಕಿನ ಪಾರಿಷ್ವಾಡ ಗ್ರಾಮದಲ್ಲಿ ಮಲಪ್ರಭಾ ನದಿ ದಂಡೆಯಲ್ಲಿ ಅಂದರ್- ಬಾಹರ್ ಆಟದಲ್ಲಿ ತೊಡಗಿದ್ದ ಎಂಟು ಜನ ಆರೋಪಿತರನ್ನು ಪೊಲೀಸರು ವಶಕ್ಕೆ ಪಡೆದ್ದಾರೆ. ಖಚಿತ ಮಾಹಿತಿ ಮೇರೆಗೆ ಖಾನಾಪುರ ಪೊಲೀಸ್ ಠಾಣೆ ಪಿಎಸ್ಐ ಪ್ರಕಾಶ ರಾಠೋಡ ಅವರು ಬೈಲಹೊಂಗಲ ಡಿಎಸ್ಪಿ ರವಿ ಡಿ.ನಾಯ್ಕ, ಖಾನಾಪುರ ಪಿಐ ರಾಮಚಂದ್ರ ನಾಯಕ ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳೊಂದಿಗೆ ದಾಳಿ ಮಾಡಿ 8 ಜನರನ್ನು ವಶಕ್ಕೆ ಪಡೆದರು.ಆರೋಪಿತರಿಂದ ಹಣ ಹಾಗೂ ಇಸ್ಪೀಟ್ ಎಲೆಗಳನ್ನು ಜಪ್ತಿ ಮಾಡಿಕೊಂಡಿದ್ದು, ತನಿಖೆ …

Read More »

ಕಾಡುಕೋಣ ಬೇಟೆಯಾಡಿ ಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆ ತಂಡ ಬಂಧಿಸಿದೆ.

ಖಾನಾಪುರ: ತಾಲೂಕಿನ ನಂದಗಡದಲ್ಲಿ ಕಾಡುಕೋಣ ಬೇಟೆಯಾಡಿ ಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆ ತಂಡ ಬಂಧಿಸಿದೆ. ಡೆವಿಡ್ ಫಿಗೇರ್ ಮತ್ತು ಹಸನ್ ಬೇಪಾರಿ ಬಂಧಿತರು. ಇವರಿಂದ 11 ಕೆಜಿ ಕಾಡುಕೋಣದ ಮಾಂಸ, ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನ, ೆರಡು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.     ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.     ಬೆಳಗಾವಿ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಚವ್ಹಾಣ ಅವರ …

Read More »

ಕಳಪೆ ಕಾಮಗಾರಿ 15 ದಿನಗಳಲ್ಲಿ ಹದಗೆಟ್ಟರಸ್ತೆ

ಖಾನಾಪುರ: ಪಟ್ಟಣದಿಂದ ಕೇವಲ ನಾಲ್ಕು ಕಿ.ಮೀ ಅಂತರದಲ್ಲಿರುವ ರಾಮಗುರವಾಡಿ ಗ್ರಾಮ ಹಲವು ಮೂಲಸೌಕರ್ಯಗಳ ಕೊರತೆಯಿಂದ ಬಡವಾಗಿದೆ. ಜಾಂಬೋಟಿ- ಜತ್ತ ರಾಜ್ಯ ಹೆದ್ದಾರಿಯಿಂದ ಉತ್ತರ ದಿಕ್ಕಿಗೆ 1 ಕಿ.ಮೀ ಅಂತರದಲ್ಲಿರುವ ಈ ಗ್ರಾಮಕ್ಕೆ ಸರಿಯಾದ ಸಂಪರ್ಕ ರಸ್ತೆಯೇ ಇಲ್ಲ. ಇದು ಇಲ್ಲಿನ ಬಹುಮುಖ್ಯ ಸಮಸ್ಯೆ. ರಸ್ತೆ ಸುಸ್ಥಿತಿಯಲ್ಲಿ ಇಲ್ಲದ ಕಾರಣ ಬಸ್‌ಗಳು ಗ್ರಾಮದೊಳಗೆ ಬರುತ್ತಿಲ್ಲ. ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ತೊಂದರೆ ಅನುಭವಿಸುವುದು ತಪ್ಪಿಲ್ಲ. 2,000 ಜನಸಂಖ್ಯೆ ಹೊಂದಿರುವ ರಾಮಗುರವಾಡಿ ಗ್ರಾಮದಲ್ಲಿ ಸ್ಥಳೀಯ …

Read More »

ಖಾನಾಪುರ | ಕಾಡಾನೆ ಹಿಂಡು ದಾಳಿ: ಅಪಾರ ಬೆಳೆ ಹಾನಿ

ಖಾನಾಪುರ: ತಾಲ್ಲೂಕಿನ ಭೂರಣಕಿ ಮತ್ತು ಕರೀಕಟ್ಟಿ ಗ್ರಾಮಗಳ ಸುತ್ತಲಿನ ಕೃಷಿ ಜಮೀನುಗಳಲ್ಲಿ ಶನಿವಾರ ನಸುಕಿನಜಾವ 16 ಕಾಡಾನೆಗಳ ಹಿಂಡು ದಾಳಿ ಮಾಡಿದ್ದು, ಅಪಾರ ಪ್ರಮಾಣದ ಬೆಳೆ ತಿಂದು, ತುಳಿದು ನಾಶ ಮಾಡಿವೆ. ಇದರಿಂದ ಗ್ರಾಮಗಳಲ್ಲಿ ಆತಂಕದ ವಾತಾವರಣ ಮನೆ ಮಾಡಿದೆ.   ಶುಕ್ರವಾರ ರಾತ್ರಿಯೇ ದಾಂಡೇಲಿ ಅರಣ್ಯದಿಂದ ಬಂದ ನಾಲ್ಕು ಮರಿ ಹಾಗೂ 12 ದೊಡ್ಡ ಆನೆಗಳು ತಾವರಗಟ್ಟಿ, ಚುಂಚವಾಡ ಮಾರ್ಗವಾಗಿ ಭೂರಣಕಿ ಗ್ರಾಮದ ಕಡೆ ಬಂದವು. ಮಧ್ಯರಾತ್ರಿಯಿಂದ ಶನಿವಾರ ನಸುಕಿನಜಾವದವರೆಗೆ …

Read More »

ನಂದಗಡದಲ್ಲಿ ಈಗ ಸುಧಾರಣಾ ಪರ್ವ ಆರಂಭ

ನಂದಗಡ (ಖಾನಾಪುರ ತಾಲ್ಲೂಕು): ಕ್ರಾಂತಿಯ ನೆಲ, ರಕ್ತಸಿಕ್ತ ಇತಿಹಾಸಕ್ಕೆ ಸಾಕ್ಷಿಯಾಗಿ ನಿಂತ ತಾಲ್ಲೂಕಿನ ನಂದಗಡದಲ್ಲಿ ಈಗ ಸುಧಾರಣಾ ಪರ್ವ ಆರಂಭವಾಗಿದೆ. ಈ ಸ್ಥಳಕ್ಕೆ ಜಾಗತಿಕ ಗುರುತು ತಂದುಕೊಟ್ಟ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಸಮಾಧಿ ಈಗ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ.   ಹಲವು ವರ್ಷಗಳಿಂದ ನಂದಗಡ ನಿರ್ಲಕ್ಷ್ಯಕ್ಕೆ ಒಳಗಾಗಿತ್ತು. ಚನ್ನಮ್ಮನ ಕಿತ್ತೂರು, ಬೈಲಹೊಂಗಲದಲ್ಲಿ ಆದಂಥ ಅಭಿವೃದ್ಧಿ ಕಾರ್ಯಗಳನ್ನು ಇಲ್ಲಿಯೂ ಮಾಡಬೇಕು ಎಂದು ಜನ ದಶಕದಿಂದ ಹೋರಾಟ ಮಾಡಿದ್ದರು. ಇತ್ತೀಚಿನ ವರ್ಷಗಳಲ್ಲಿ ಶುಕ್ರದೆಸೆ …

Read More »

ನಂದಗಡದಲ್ಲಿ ಶಾಲೆಗಳ ನೂತನ ಕೊಠಡಿಗಳ ಉದ್ಘಾಟನೆ: ಅಂಜಲಿ ನಿಂಬಾಳ್ಕರ್

ಖಾನಾಪೂರ ತಾಲೂಕಿನ ನಂದಗಡ ಗ್ರಾಮದಲ್ಲಿನ ಜೆಸಿಎಸ್ ಆವರಣದಲ್ಲಿನ ಉರ್ದು ಹೆಣ್ಣು ಮಕ್ಕಳ ಶಾಲೆಯ ಕೊಠಡಿ, ಅದರಂತೆ ಮರಾಠಿ ಶಾಲೆಯ ನೂತನ ಕೊಠಡಿಯ ಉದ್ಘಾಟನೆಯನ್ನು ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ನೆರವೇರಿಸುವರು. ಈ ಸಂದರ್ಭದಲ್ಲಿ ಉರ್ದು ಶಾಲೆಯ ವಿದ್ಯಾರ್ಥಿಗಳೊಂದಿಗೆ,ದುವಾ ಅದರಂತೆ ಮರಾಠಿ ಶಾಲೆಯ ಮಕ್ಕಳೊಂದಿಗೆ ಪೂಜೆ ಸಲ್ಲಿಸಿ ಮಕ್ಕಳಲ್ಲಿ ಸರಳತೆಯಿಂದ ಶಾಲಾ ಕೊಠಡಿಗಳನ್ನು ಉದ್ಘಾಟಿಸಿ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಟ್ಟರು.ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಮತ್ತು ಶಿಕ್ಷಕರಿಂದ ಶಾಸಕಿ ಅಂಜಲಿ ಅವರನ್ನು …

Read More »