ಖಾನಾಪುರ ತಾಲೂಕಿನ ಚಿಕ್ಕ ಮುನವಳ್ಳಿ ಗ್ರಾಮದಲ್ಲಿ ದೇವಸ್ಥಾನ ಪ್ರವೇಶಕ್ಕೆ ದಲಿತ ಕುಟುಂಬಗಳಿಗೆ ನಿಷೇಧಿಸಲಾಗಿತ್ತು. ಇದೀಗ ಈ ದಲಿತ ಕುಟುಂಬಗಳಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಭೀಮ ವಾದ) ಜಿಲ್ಲಾ ಘಟಕದ ವತಿಯಿಂದ ಆಹಾರ ಸಾಮಗ್ರಿಗಳನ್ನು ವಿತರಣೆ ಮಾಡಲಾಯಿತು. ಹೌದು ಚಿಕ್ಕಮುನವಳ್ಳಿ ಗ್ರಾಮದಲ್ಲಿ ಇತ್ತಿಚಿಗೆ ಗ್ರಾಮದೇವಿಗೆ ಉಡಿ ತುಂಬುವ ಕಾರ್ಯಕ್ರಮವಿತ್ತು. ಈ ವೇಳೆ ದಲಿತರಿಗೆ ದೇವಸ್ಥಾನಗದ ಒಳಗೆ ಪ್ರವೇಶ ಇಲ್ಲ ಎಂದು ಕಮೀಟಿ ಅವರು ಹೇಳಿದ್ದರು. ಈ ವಿಚಾರ ಇಡೀ ರಾಜ್ಯದಲ್ಲಿಯೇ ತೀವ್ರ …
Read More »ಸಹಕಾರಿ ಸಂಘಗಳು ರೈತರ ಜೀವನಾಡಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
-ಉ. ಖಾನಾಪುರ ಅರ್ಬನ್ ಕೋ ಆಪರೇಟಿವ್ ಸೊಸೈಟಿ 25ನೇ ವರ್ಷದ ಬೆಳ್ಳಿ ಹಬ್ಬ ಹಾಗೂ ಹೊಸ ಸರ್ಕಾರಿ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಯಮಕನಮರಡಿ: ಸಕಾಲಕ್ಕೆ ಸಾಲ ಮರುಪಾವತಿಸಿದಾಗ ಮಾತ್ರ ಸಹಕಾರಿ ಸಂಘಗಳು ಮುಂದೆ ಬರಲು ಸಾಧ್ಯ ಎಂದು ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಉ. ಖಾನಾಪುರ ಗ್ರಾಮದಲ್ಲಿ ನಡೆದ ಉ. ಖಾನಾಪುರ ಅರ್ಬನ್ ಕೋ ಆಪರೇಟಿವ್ ಸೊಸೈಟಿ 25ನೇ ವರ್ಷದ ಬೆಳ್ಳಿ ಹಬ್ಬ ಹಾಗೂ …
Read More »ದಿನಕ್ಕೊಂದು ತಾಲ್ಲೂಕಿನಲ್ಲಿ ಮಿಂಚಿನ ಓಡಾಟ ನಡೆಸಿರುವ ರಮೇಶ್ ಜಾರಕಿಹೊಳಿ
ಬೆಳಗಾವಿ-ವಿಧಾನ ಪರಿಷತ್ರಿನ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಅವರ ಪರವಾಗಿ ಮಿಂಚಿನ ಪ್ರಚಾರ ನಡೆಸಿದ್ದಾರೆ. ದಿನಕ್ಕೊಂದು ತಾಲ್ಲೂಕಿನಲ್ಲಿ ಮಿಂಚಿನ ಓಡಾಟ ನಡೆಸಿರುವ ರಮೇಶ್ ಜಾರಕಿಹೊಳಿ ನಿನ್ನೆ ಗುರುವಾರ ಖಾನಾಪೂರ ತಾಲ್ಲೂಕಿನಲ್ಲಿ ಭರ್ಜರಿ ಪ್ರಚಾರ ಮಾಡಿದ್ದಾರೆ. ಒಂದೇ ದಿನ ಖಾನಾಪೂರ ತಾಲ್ಲೂಕಿನ 50 ಕ್ಕೂ ಹೆಚ್ವು ಗ್ರಾಮ ಪಂಚಾಯತಿ ಸದಸ್ಯರನ್ನು ಭೇಟಿಯಾಗಿ ಮತಯಾಚನೆ ಮಾಡುವ ಮೂಲಕ ರಾಜಕೀಯ ವಿರೋಧಿಗಳಿಗೆ ನಡುಕ ಹುಟ್ಟಿಸಿದ್ದಾರೆ. …
Read More »ವಿವಿಧ ಬೇಡಿಕೆ ಈಡೇರಿಸುವಂತೆ ನಂದಗಡ ಗ್ರಾಮಸ್ಥರಿಂದ ತಹಶೀಲ್ದಾರರ ಮೂಲಕ ಸಿಎಂಗೆ ಮನವಿ
ಖಾನಾಪುರ: ತಾಲೂಕಿನ ನಂದಗಡ ಗ್ರಾಮಕ್ಕೆ ಬಸ್ ಸೌಲಭ್ಯ ಕಲ್ಪಿಸಬೇಕು. ಪ್ರಕೃತಿ ವಿಕೋಪದಲ್ಲಿ ಮನೆ ಕಳೆದಕೊಂಡವರಿಗೆ ಹಾಗೂ ಹಾನಿಗೊಳಗಾದ ರೈತರಿಗೆ ಶೀಘ್ರವೇ ಪರಿಹಾರ ನೀಡಬೇಕೆಂದು ಒತ್ತಾಯಿಸಿ ನಂದಗಡ ಗ್ರಾಮಸ್ಥರು ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.ರಾಯಣ್ಣನ ಪುಣ್ಯಭೂಮಿ ನಂದಗಡ ಹೆದ್ದಾರಿ ಪಕ್ಕದಲ್ಲಿದ್ದರೂ ಸರಿಯಾಗಿ ಬಸ್ ಸೌಲಭ್ಯವಿಲ್ಲದ್ದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ. ಇನ್ನು ಕಳೆದ ಎರಡು ವರ್ಷಗಳಿಂದ ಸುರಿದ ಭಾರೀ ಮಳೆಗೆ ನಂದಗಡ ಗ್ರಾಮಸ್ಥರು ಕೆಲವರು ಮನೆಯನ್ನು ಕಳೆದುಕೊಂಡಿದ್ದಾರೆ. ಇನ್ನು ವಿಪರೀತ ಮಳೆಯಿಂದ ಕೆಲ …
Read More »ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷ ಸೋನಾಲಿ ಸರ್ನೋಬ ತ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ
ಖಾನಾಪುರ :ದಿ. 18-10-2021 ರಂದು ಖಾನಾಪುರ ತಾಲೂಕಿನ ಭೋರುಣಕಿ ಗ್ರಾಂ ಪಂ ವ್ಯಾಪ್ತಿಯಲ್ಲಿ ಬರುವ ಗಸ್ಟೋಳ್ಳಿ ಮತ್ತು ಚಣಕೆಬೈಲ ಗ್ರಾಮದಲ್ಲಿ ಪಡಿತರ ರೇಶನ್ ಪಡೆಯಲಿಕ್ಕೆ ಇಲ್ಲಿನ ಗ್ರಾಮಸ್ಥರು, ಇಲ್ಲಿಂದ ಸುಮಾರು 7km ದೂರದ ಗೊಳಿಹಳ್ಳಿಯಿಂದ ರೇಶನ್ ತೆಗೆದುಕೊಂಡು ಬರುತ್ತಿದ್ದರು. ಇದನ್ನು ಬೆಳಗಾವಿ ಮಹಿಳಾ ಮೋರ್ಚಾ ಉಪಾಧ್ಯಕ್ಷರು ಹಾಗೂ ಖಾನಾಪುರ ತಾಲೂಕಿನ ಪ್ರಭಾರಿಗಳು ಆದ ಡಾ. ಸೋನಾಲಿ ಸರ್ನೋಬತ್. ರವರು ಗ್ರಾಮಸ್ಥರ ಸಮಸ್ಯೆಯನ್ನು ನೋಡಿ ಸಂಬಂಧಿಸಿದ ಸಚಿವರಿಗೆ ಹಾಗೂ ಅಧಿಕಾರಿಗಳಿಗೆ …
Read More »ಮರ್ಡರ್ ಮಾಡಿದ್ದ ಐವರು ಖದೀಮರನ್ನು ಪೊಲೀಸರು ಒದ್ದು ಒಳಗೆಹಾಕಿದ್ದಾರೆ
ಕಿತ್ತೂರು – ಕ್ಷುಲ್ಲಕ ಕಾರಣಕ್ಕೆ ದಾಬಾ ಮಾಲಿಕನನ್ನು ಮರ್ಡರ್ ಮಾಡಿದ್ದ ಐವರು ಖದೀಮರನ್ನು ಪೊಲೀಸರು ಒದ್ದು ಒಳಗೆಹಾಕಿದ್ದಾರೆ. ಕೊಲೆಯಾಗಿರುವ ಪ್ರಕಾಶ ತನ್ನ ಮುದ್ದಾದ ಮಕ್ಕಳೊಂದಿಗೆ ಇದ್ದ ಚಿತ್ರ ಖರೀದಿಸಿದ್ದ ಹೂವಿನ ಹಣ 1500 ರೂಗಳನ್ನು ಹೂವಿನ ವ್ಯಾಪಾರಿಗೆ ಕೊಡು ಎಂದು ಹೇಳಿದ್ದಕ್ಕೆ ಐವರು ಸೇರಿ ದಾಬಾ ಮಾಲಿಕ ಪ್ರಕಾಶ ಬಸವರಾಜ ನಾಗನೂರು (35) ಅವರನ್ನು ಕೊಲೆ ಮಾಡಿದ್ದರು. ಮಹಮ್ಮದಶಫೀ …
Read More »ಖಾನಾಪುರ ಪಟ್ಟಣದಲ್ಲಿ ಮಂಗಳವಾರದಿಂದ ಸಂಪೂರ್ಣ ಲಾಕ್ ಡೌನ್: ಕಿರಾಣಿ, ದಿನಸಿ ಸೇರಿದಂತೆ ಎಲ್ಲ ವ್ಯಾಪಾರ-ವ್ಯವಹಾರಗಳಿಗೂ ನಿರ್ಬಂಧ
ಖಾನಾಪುರ: ದಿನದಿಂದ ದಿನಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತಿರುವ ಕೋವಿಡ್ ಸೊಂಕನ್ನು ಹತ್ತಿಕ್ಕಲು ಪಟ್ಟಣದಲ್ಲಿ ಮಂಗಳವಾರ ಮೇ.೧೧ರಿಂದ ಶನಿವಾರದವರೆಗೆ ಐದು ದಿನಗಳ ಕಾಲ ಎಲ್ಲ ರೀತಿಯ ವ್ಯಾಪಾರ -ವಹಿವಾಟನ್ನು ನಿಷೇಧಿಸಿ ಖಡಕ್ ಲಾಕ್ ಡೌನ್ ಘೋಷಿಸಲಾಗಿದ್ದು, ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಸ್ಥಳೀಯ ಆಡಳಿತ ಕೈಗೊಂಡಿರುವ ಈ ಕ್ರಮಕ್ಕೆ ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕೆಂದು ಉಪವಿಭಾಗಾಧಿಕಾರಿ ಅಶೋಕ ತೇಲಿ ಹೇಳಿದರು. ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ಪಟ್ಟಣದ ವಿವಿಧ ಜಾತಿ, …
Read More »ಮನಸಾಪೂರ ಗ್ರಾಮದಲ್ಲಿ ದಾಳಿ: ಗಾಂಜಾ ವಶ
ಖಾನಾಪೂರ ತಾಲೂಕಿನ ಮನಸಾಪೂರ ಗ್ರಾಮದಲ್ಲಿ ಗಾಂಜಾ ಗಿಡ ಬೆಳೆಸಿದ್ದ ಓರ್ವ ವ್ಯಕ್ತಿಯನ್ನು ಬಂಧಿಸುವುದರಲ್ಲಿ ಖಾನಾಪೂರ ಪೆÇಲೀಸರು ಯಶಸ್ವಿಯಾಗಿದ್ದಾರೆ. ಫ್ರಾನ್ಸಿಸ್ ಸೂಜ್ ಎಂಬ 29 ವರ್ಷದ ಯುವಕ ಬಂಧಿತ ಆರೋಪಿಯಾಗಿದ್ದು, ಆತನಿಂದ ಒಟ್ಟು 476 ಗ್ರಾಂ ತೂಕದ ಗಾಂಜಾ ಗಿಡಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಸಿಪಿಐ ಸುರೇಶ್ ಶಿಂಗಿ, ಪಿಎಸ್ಐ ಬಸನಗೌಡ ಪಾಟೀಲ್, ಕಂದಾಯ ನಿರೀಕ್ಷಕ ಶಶಿಕಾಂತ ಠಕ್ಕೇಕರ ಸೇರಿದಂತೆ ಇನ್ನಿತರರು ಹಾಜರಿದ್ದರು. ಪಂಚನಾಮೆ ಮಾಡಿ, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು …
Read More »ಗ್ರಾಪಂ.ಚುನಾವಣೆಗೆ ಸ್ಪರ್ಧಿಸಿದ್ದ ಅಂಬೋಜಿ ನಿಧನ
ಖಾನಾಪುರ : ತಾಲ್ಲೂಕಿನ ನ್ಯಾಯವಾದಿ, ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿದ್ದ ಸಿ.ಬಿ.ಅಂಬೋಜಿ (64) ಭಾನುವಾರ ಬೆಳಿಗಿನ ಜಾವ ನಿಧನರಾದರು. ಬಿಷ್ಟಾದೇವಿ ಜೀರ್ಣೊದ್ದಾರ ಟ್ರಸ್ಟ್ ಅಧ್ಯಕ್ಷರಾಗಿದ್ದರು. ಕಕ್ಕೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಕಕ್ಕೇರಿ ಗ್ರಾಪಂ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಮಂಗಳವಾರ ನಡೆದ ಗ್ರಾಪಂ ಚುಣಾವಣೆಗೆ ಕಕ್ಕೇರಿ ಗ್ರಾಮದ ವಾರ್ಡ್ ನಂ.2ಕ್ಕೆ ಸ್ಪರ್ಧೆ ಮಾಡಿದ್ದರು.
Read More »ಖಾನಾಪುರ : ಮಗಳ ಗಂಡನನ್ನ ಕೊಚ್ಚಿ ಕೊಲೆಗೈದ ಪಾಪಿ ಮಾವ
ಕಕ್ಕೇರಿ : ಕೌಟುಂಬಿಕ ಕಲಹದಿಂದ ಅಳಿಯನನ್ನ ಕೊಚ್ಚಿ ಕೊಲೆಗೈದಿರುವ ಘಟನೆ ಖಾನಾಪುರ ತಾಲ್ಲೂಕಿನ ಕಕ್ಕೇರಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಬಿಷ್ಟಪ್ಪ ಕೊನಸಕುಂಪಿ(43) ಕೊಲೆಯಾದ ದುರ್ದೈವಿ. ಸೋಮವಾರ ರಾತ್ರಿ ಬಿಷ್ಟಪ್ಪ ತನ್ನ ಹೆಂಡತಿಯ ತಂದೆಯೊಂದಿಗೆ ಜಗಳವಾಡಿದ್ದಾನೆ. ಬಳಿಕ ರಾತ್ರಿ ಭತ್ತದ ರಾಶಿ ಕಾಯಲು ಕಣದಲ್ಲಿ ಹೋಗಿದ್ದಾನೆ. ಈ ವೇಳೆ ಮಾವ ಮಲಗಿದ್ದ ಬಿಷ್ಟಪ್ಪ ನ ಮಾರಕಾಸ್ತ್ರಗಳಿಂದ ತಲೆಗೆ ಹೊಡೆದು ಕೊಂದು ಹಾಕಿ, ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಆರೋಪಿ ಹೆಸರು ತಿಳಿದು …
Read More »