ಗೋಕಾಕ: ತಾಲೂಕಿನ ಸಾವಳಗಿ ಗ್ರಾಮದಲ್ಲಿ ಕೆಇಬಿ (ವಿದ್ಯುತ್ ಇಲಾಖೆ) ನಿರ್ಲಕ್ಷ್ಯದಿಂದಾಗಿ ದೊಡ್ಡ ಮಟ್ಟದ ಆರ್ಥಿಕ ನಷ್ಟ ಸಂಭವಿಸಿದೆ. ಅಚಾನಕ್ ವಿದ್ಯುತ್ ವೋಲ್ಟೇಜ್ ಏರಿಳಿತದಿಂದ ಮನೆಗಳಲ್ಲಿ ಬಳಸುತ್ತಿದ್ದ ಟಿವಿ, ಫ್ರಿಜ್ ಸೇರಿದಂತೆ ಅನೇಕ ವಿದ್ಯುತ್ ಉಪಕರಣಗಳು ಹಾನಿಗೊಳಗಾಗಿವೆ. ಸ್ಥಳೀಯರ ಮಾಹಿತಿ ಪ್ರಕಾರ, ಸುಮಾರು ₹3 ಲಕ್ಷ ಮೌಲ್ಯದ ಟಿವಿ ಮತ್ತು ಫ್ರಿಜ್ ಉಪಕರಣಗಳು ಸಂಪೂರ್ಣವಾಗಿ ಸುಟ್ಟು ಹಾಳಾಗಿವೆ. ವಿದ್ಯುತ್ ಸರಬರಾಜಿನಲ್ಲಿ ನಿಯಂತ್ರಣದ ಕೊರತೆ ಮತ್ತು ಸರಿಯಾದ ನಿರ್ವಹಣೆಯಿಲ್ಲದೆ ಈ ಘಟನೆ ಸಂಭವಿಸಿದೆ …
Read More »ಕ್ಷೇತ್ರದಲ್ಲಿ ಎಲ್ಲ ಸಮುದಾಯ ಒಗ್ಗೂಡಿಸಿಕೊಂಡು ಅಭಿವೃದ್ಧಿ ಕೆಲಸ
ಗೋಕಾಕ: ಸಾಮಾಜಿಕ ನ್ಯಾಯದ ರೂವಾರಿ ಬಸವಣ್ಣನವರ ಅನುಭವ ಮಂಟಪದ ಮಾದರಿಯಲ್ಲಿ ಅರಭಾವಿ ಕ್ಷೇತ್ರದಲ್ಲಿ ಎಲ್ಲ ಸಮುದಾಯ ಒಗ್ಗೂಡಿಸಿಕೊಂಡು ಅಭಿವೃದ್ಧಿ ಕೆಲಸ ಮಾಡಲಾಗುತ್ತಿದೆ ಎಂದು ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಗೋಕಾಕ ತಾಲೂಕಿನ ತಳಕಟ್ಟನಾಳ ಗ್ರಾಮದಲ್ಲಿ ಬುಧವಾರ ವಿವಿಧ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಅರಬಾವಿ ಕ್ಷೇತ್ರದಲ್ಲಿ ಯಾವುದೇ ಸಮುದಾಯಕ್ಕೆ ಅನ್ಯಾಯವಾಗದಂತೆ ಜಾತಿ, ಮತ, ಪಂಥಗಳ ಬೇಧ ಭಾವ ಮಾಡದೇ ಬಸವಣ್ಣನವರ ತತ್ವಾದರ್ಶ ಅಳವಡಿಸಿಕೊಂಡು ಜನೋಪಯೋಗಿ ಕೆಲಸ ಮುಂದುವರೆಸಿಕೊಂಡು …
Read More »ಅಂಕಲಗಿ ಘಟಕ ಹೋಮ್ಗಾರ್ಡಗೆ ಮುಖ್ಯಮಂತ್ರಿಗಳ ಸೇವಾ ಪದಕ ಶಾಸಕರಿಂದ ಸತ್ಕಾರ
ಗೋಕಾಕ: ತಾಲೂಕಿನ ಅಂಕಲಗಿ ಘಟಕ ಹೋಮ್ಗಾರ್ಡ ಆಗಿರುವ ಹೊಳೆಪ್ಪಾ ಬಸವಣ್ಣಿ ನೇಸರಗಿ ಅವರಿಗೆ ೨೦೨೫ರ ಮುಖ್ಯಮಂತ್ರಿಗಳ ಸೇವಾ ಪದಕ ದೊರೆತಿರುವುದಕ್ಕಾಗಿ ಶಾಸಕ ರಮೇಶ ಜಾರಕಿಹೊಳಿ ಅವರು ನಗರದ ತಮ್ಮ ಗೃಹ ಕಚೇರಿಯಲ್ಲಿ ಸನ್ಮಾನಿಸಿ ಗೌರವಿಸಿದರು. ಹೊಳೆಪ್ಪಾ ನೇಸರಗಿ ಅವರ ಸಮರ್ಪಣಾ ಮನೋಭಾವವನ್ನು ಗುರುತಿಸುವುದು ಮತ್ತು ಪ್ರೋತ್ಸಾಹಿಸುವುದು. ದೀರ್ಘಕಾಲದ ಸೇವೆ ಬಂದೋಬಸ್ತ್ ಕರ್ತವ್ಯ, ತುರ್ತು ಸಂದರ್ಭಗಳಲ್ಲಿ ಅಗ್ನಿ ಸುರಕ್ಷತೆ, ಮತ್ತು ಶೌರ್ಯ ಪ್ರದರ್ಶಿಸಿದ ಕಾರಣ ಸಿಎಂ ಪದಕ ಲಭಿಸಿದ್ದು ಇಂಥಹ ಸಿಬ್ಬಂದಿಗಳಿಗೆ …
Read More »ಧರ್ಮದ ಜ್ಯೋತಿ ನಿರಂತರವಾಗಿ ಬೆಳಗಲಿ
ಮಮದಾಪುರ: ಕತ್ತಲದಿಂದ ಅಧರ್ಮ ಜ್ಯೋತಿ ಮಾಯವಾಗಿ ಬೆಳಕಿನಡೆಗೆ ಧರ್ಮದ ಜ್ಯೋತಿ ನಿರಂತರವಾಗಿ ಬೆಳಗಲಿ ಎಂದು ನದಿ ಇಂಗಳಗಾಂವನ ಸಿದ್ಧಲಿಂಗ ಸ್ವಾಮೀಜಿ ಹೇಳಿದರು. ಗೋಕಾಕ ತಾಲೂಕಿನ ಕೊಳವಿ ಗ್ರಾಮದ ಗುರುಲಿಂಗ ಜಂಗಮ ಮಠದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಯುಗಾದಿ ಮಹೋತ್ಸವ, ಶರಣ ಸಂಸ್ಕೃತಿ ಹಾಗೂ ಪ್ರವಚನ ಮಂಗಲೋತ್ಸವದ ಧರ್ಮಸಭೆಯಲ್ಲಿ ಮಾತನಾಡಿದರು. ಮುರುಘೇಂದ್ರ ಶಿವಯೋಗಿಗಳು ಅಥಣಿಯಿಂದ ಅಂಕಲಗಿ ಅಡವಿಸಿದ್ದೇಶ್ವರ ಮಠದವರೆಗೆ ಪಾದಯಾತ್ರೆ ಮೂಲಕ ಸಂಚರಿಸುವ ಸಂದರ್ಭದಲ್ಲಿ ತೆಪ್ಪೋತ್ಸವ ನೆರವೇರಿಸಿದ ಕೊಳವಿ ಗ್ರಾಮದ ಗುರುಲಿಂಗ ಜಂಗಮ …
Read More »ರಂಜಾನ್ ವೇಳೆ 1 ತಿಂಗಳ ಕಠಿಣ ಉಪವಾಸ ಮಾಡಿದ 10ವರ್ಷದ ಬಾಲಕ,6 ವರ್ಷದ ಬಾಲಕಿ!
ಘಟಪ್ರಭಾ: ಪವಿತ್ರ ರಂಜಾನ್ ಹಬ್ಬದ ಸಂದರ್ಭದಲ್ಲಿ ಒಂದು ಹನಿ ನೀರು ಕುಡಿಯದೆ ಮುಸ್ಲಿಂ ಬಾಂಧವರು ಕಟ್ಟುನಿಟ್ಟಾದ ಉಪವಾಸ ಪಾಲನೆ ಮಾಡುತ್ತಾರೆ.ಇಂತಹ ಕಠಿಣ ಉಪವಾಸ ಒಂದು ತಿಂಗಳವರೆಗೆ ಮಾಡೋದು ಕೆಲವೊಂದು ಸಲ ದೊಡ್ಡವರಿಗೂ ಕಷ್ಟವಾಗುತ್ತದೆ.ಆದರೆ,ಇಂತಹ ಕಠಿಣ ಉಪವಾಸವನ್ನು ಒಂದು ತಿಂಗಳವರೆಗೆ ಕಟ್ಟು ನಿಟ್ಟಾಗಿ ಆಚರಿಸುವ ಮೂಲಕ ಘಟಪ್ರಭಾ ಪಟ್ಟಣದಲ್ಲಿ ಇಬ್ಬರು ಸಹೋದರ,ಸಹೋದರಿ ಗಮನ ಸೆಳೆದಿದ್ದಾರೆ. ಘಟಪ್ರಭಾ ಪಟ್ಟಣದ ಬಸವ ನಗರದದಲ್ಲಿರುವ ಫಾರೂಖ್ ಅತ್ತಾರ ಎಂಬುವರ ಮಕ್ಕಳಾದ 10ವರ್ಷದ ಪುತ್ರ ಫಹೀಮ್ ಹಾಗೂ …
Read More »ಅಂತರರಾಜ್ಯ ವಂಚಕರ ಜಾಲವನ್ನು ಭೇದಿಸಿದ ಗೋಕಾಕ ಪೊಲೀಸರು
ಬೆಳಗಾವಿ: ಜಿಲ್ಲೆಯ ಗೋಕಾಕದಲ್ಲಿ ಸಾರ್ವಜನಿಕರಿಗೆ ಹಣದ ಆಮಿಷವೊಡ್ಡಿ ವಂಚಿಸುತ್ತಿದ್ದ ಅಂತರರಾಜ್ಯ ವಂಚಕರ ಜಾಲವನ್ನು ಪೊಲೀಸರು ಭೇದಿಸಿದ್ದು, ಈ ದಂಧೆಯಲ್ಲಿ ಮಹಾರಾಷ್ಟ್ರದ ಇಬ್ಬರು ಪೊಲೀಸ್ ಸಿಬ್ಬಂದಿ ಸೇರಿದಂತೆ ಒಟ್ಟು ಏಳು ಮಂದಿ ಬಂಧಿಸಲಾಗಿದೆ ಎಂದು ಎಸ್ಪಿ. ಕೆ. ರಾಮರಾಜನ್ ಹೇಳಿದರು. ಗೋಕಾಕದ ಶ್ರೀನಗರದಲ್ಲಿರುವ ಮನೆಯೊಂದರಲ್ಲಿ ಹಣವನ್ನು ನಾಲ್ಕು ಪಟ್ಟು ಮಾಡಿಕೊಡುವುದಾಗಿ ನಂಬಿಸಿ ಸಾರ್ವಜನಿಕರಿಗೆ ವಂಚಿಸುತ್ತಿದ್ದ ಜಾಲದ ಮೇಲೆ ಗೋಕಾಕ ಶಹರ ಠಾಣಾ ಪೊಲೀಸರು ದಾಳಿ ನಡೆಸಿದ್ದಾರೆ. ಈ ಪ್ರಕರಣದಲ್ಲಿ ಬಂಧಿತರಾದವರನ್ನು ಪರಶುರಾಮ …
Read More »ಆರೋಗ್ಯ ಉಚಿತ ತಪಾಸಣಾ ಶಿಬಿರ 16ರಂದು
ಗೋಕಾಕ: ಉಚಿತ ಕಣ್ಣಿನ ಪೊರೆ ತಪಾಸಣೆ ಬೃಹತ್ ಶಿಬಿರವನ್ನು ಮಾರ್ಚ್ 16ರಂದು ಮುಂಜಾನೆ 9ರಿಂದ ಮಧ್ಯಾಹ್ನ 1:30ರ ವರೆಗೆ ತಾಲ್ಲೂಕಿನ ಮಮದಾಪೂರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾಗಿದೆ. ಶಿಬಿರದಲ್ಲಿ ವಿಶೇಷವಾಗಿ ಮಕ್ಕಳ ತಪಾಸಣೆ, ರಕ್ತದೊತ್ತಡ, ಹೃದಯ, ಚರ್ಮರೋಗ ತಪಾಸಣೆ ಸಹ ಉಚಿತವಾಗಿ ಮಾಡಲಾಗುತ್ತಿದೆ. ಡಾ.ಎಂ.ಎಸ್.ಕೊಪ್ಪದ, ಡಾ.ಅಶೋಕ ಮುರಗೋಡ, ಡಾ.ಸಿದ್ದಣ್ಣ ಕಮತ, ಕಣ್ಣಿನ ತಜ್ಞ ಡಾ. ಸಂದೀಪ್ ಕೋಲಕಾರ, ಡಾ. ಅಮರ ಮುರುಗೋಡ, ಡಾ.ಪ್ರಮಿತಾ ಮುರುಗೋಡ, ಡಾ.ಪ್ರೀತಿ ಚೌಧರಿ ಹಾಗೂ ನೇತ್ರಾಧಿಕಾರಿ …
Read More »ಯುವ ನಾಯಕ ರಾಹುಲ್ ಜಾರಕಿಹೊಳಿ ಮದುವೆ ಸಮಾರಂಭದಲ್ಲಿ ಭಾಗಿಯಾಗಿ ಶುಭಾಶಯ ಕೋರಿದರು
ಗೋಕಾಕ ತಾಲೂಕಿನ ಸಾವಳಗಿ ಗ್ರಾಮದ ಗ್ರಾಮ ಪಂಚಾಯತಿ ಮಾಜಿ ಸದಸ್ಯರಾದ ಪ್ರಸಾದ್ ನಾಯಿಕ (ನಾಯಕಗೌಡರು) ಅವರ ಮದುವೆಯಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ ಇತ್ತೀಚೆಗೆ ನಡೆದ ಮದುವೆ ಸಮಾರಂಭದಲ್ಲಿ ಭಾಗಿಯಾಗಿ ವರ–ವಧುವರಿಗೆ ಶುಭಾಶಯ ಕೋರಿದರು. ಈ ವೇಳೆ ಕುಟುಂಬಸ್ಥರು, ಬಂಧುಮಿತ್ರರು ಹಾಗೂ ಅಭಿಮಾನಿಗಳೊಂದಿಗೆ ಮಾತನಾಡಿ, ಹೊಸ ದಂಪತಿಗೆ ಸುಖಮಯವಾದ ದಾಂಪತ್ಯ ಜೀವನವಾಗಲಿ ಎಂದು ಆಶಿಸಿದರು. ಮದುವೆ ಸಮಾರಂಭದಲ್ಲಿ ಹಲವಾರು ಗಣ್ಯರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದು, ಕಾರ್ಯಕ್ರಮವು ಹರ್ಷೋದ್ಗಾರಗಳ ನಡುವೆ …
Read More »ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಅಭಿವೃದ್ಧಿಯ ಬಜೆಟ್: ಸಂಸದೆ ಪ್ರಿಯಂಕಾ ಜಾರಕಿಹೊಳಿ
ಬೆಳಗಾವಿ: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಜನಪರವಾದ ಮತ್ತು ರಾಜ್ಯದ ಅಭಿವೃದ್ಧಿ ಯ ಬಜೆಟ್ ಆಗಿದೆ ಎಂದು ಸಂಸದೆ ಪ್ರಿಯಂಕಾ ಜಾರಕಿಹೊಳಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಅವರು, ರಾಜ್ಯದ ಸರ್ವತೋಮುಖ ಅಭಿವೃದ್ಧಿ ಯ ದೃಷ್ಟಿಯಿಂದ ನಾಡಿನ ಜನಪರವಾದ ಈ ಬಜೆಟ್ ನಲ್ಲಿ ಬೆಳಗಾವಿ ಜಿಲ್ಲೆಗೂ ಉತ್ತಮ ಆದ್ಯತೆ ನೀಡಿರುವುದು ಶ್ಲಾಘನೀಯವಾಗಿದೆ. ಸರ್ವರಿಗೂ ಸಮಪಾಲು ಎಂಬಂತೆ ಎಲ್ಲಾ ಕ್ಷೇತ್ರಕ್ಕೂ ಸಿಎಂ ಸಿದ್ದರಾಮಯ್ಯ ಅವರು ಆದ್ಯತೆ …
Read More »ಲೋಳಸೂರ ಸೇತುವೆ ನಿರ್ಮಾಣ ಕಾಮಗಾರಿ ಪರಿಶೀಲಿಸಿದ ಸಚಿವ ಸತೀಶ್ ಜಾರಕಿಹೊಳಿ
ಗೋಕಾಕ: ಗೋಕಾಕ ನಗರದ ಸಮೀಪದ ಲೋಳಸೂರ ಗ್ರಾಮದಲ್ಲಿ ಘಟಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಲು ಉದ್ದೇಶಿಸಿರುವ 30.21 ಕೋಟಿ ರೂ. ವೆಚ್ಚದ ಲೋಳಸೂರ ಸೇತುವೆ ನಿರ್ಮಾಣ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಪರಿಶೀಲಿಸಿದರು. ನೂತನ ಸೇತುವೆ ನಿರ್ಮಾಣದಿಂದ ಸಾರ್ವಜನಿಕರ ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಬಹಳಷ್ಟು ಅನುಕೂಲವಾಗಲಿದೆ. ಮಳೆಗಾಲ, ಪ್ರವಾಹದಂತಹ ಸಂದರ್ಭಗಳಲ್ಲಿಯೂ ಸಹ ಅದನ್ನು ಎದುರಿಸಲಿಕ್ಕೆ ಇನ್ನು ಮುಂದೆ ಸರಳವಾಗಲಿದೆ. ಬ್ರಿಟಿಷರ ಕಾಲದಲ್ಲಿ ನಿರ್ಮಾಣವಾಗಿದ್ದ ಕಿರಿದಾದ ಸೇತುವೆ …
Read More »
Laxmi News 24×7