Breaking News

ಗೋಕಾಕ

ಮೂಡಲಗಿ: ಮಲ್ಲಿಕಾರ್ಜುನ ದೇವಾಲಯ ಉದ್ಘಾಟನೆ

ಮೂಡಲಗಿ: ನೂರಾರು ವರ್ಷಗಳ ಪೂರ್ವ ಇತಿಹಾಸ ಹೊಂದಿರುವ ತಾಲ್ಲೂಕಿನ ಅವರಾದಿ ಗ್ರಾಮದ ಮಲ್ಲಿಕಾರ್ಜುನ ದೇವರು ಈ ಭಾಗದ ಆರಾಧ್ಯ ದೈವ. ಶತಮಾನಗಳಿಂದಲೂ ಚಿಕ್ಕ ದೇವಾಲಯದಲ್ಲಿಯೇ ಮಲ್ಲಿಕಾರ್ಜುನನ ಪೂಜೆ ಮಾಡಿಕೊಂಡು ಬಂದಿದ್ದ ಭಕ್ತರು ಈದೀಗ ದೇವಾಲಯವನ್ನು ನಿರ್ಮಿಸಿದ್ದಾರೆ.   ಗ್ರಾಮದ ಭಕ್ತರೆಲ್ಲ ಸೇರಿ ₹48 ಲಕ್ಷ ವೆಚ್ಚದಲ್ಲಿ ಹೊಸ ದೇವಸ್ಥಾನ ನಿರ್ಮಿಸಿದ್ದು, ಫೆ.25ರಿಂದ 29ರವರೆಗೆ ದೇವಸ್ಥಾನದ ಉದ್ಘಾಟನೆ ಮತ್ತು ಪ್ರಾಣ ಪ್ರತಿಷ್ಠಾಪನ ಕಾರ್ಯಕ್ರಮ ಅದ್ದೂರಿಯಾಗಿ ಜರುಗಲಿದೆ. ದೇವಾಲಯದಲ್ಲಿ ದೊಡ್ಡಬಳ್ಳಾಪುರ ಶಿಲೆಯಲ್ಲಿ ಲಿಂಗ ಮತ್ತು …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..

! ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಗಡಾ ಗ್ರಾಮದ ಶ್ರೀ ಕರೇಮ್ಮಾ ದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ …

Read More »

ಅಂಕಲಗಿ | ‘ನಗೆ ಹಬ್ಬ’ ಕಾರ್ಯಕ್ರಮ 26ರಂದು

ಅಂಕಲಗಿ: ಇಲ್ಲಿನ ಸಪ್ತಪದಿ ಕಲ್ಯಾಣ ಮಂಟಪದಲ್ಲಿ ಫೆ.26ರಂದು ಸಂಜೆ 5 ಗಂಟೆಗೆ ಗಂಗಾವತಿ ಪ್ರಾಣೇಶ ಹಾಗೂ ಅವರ ತಂಡದವರು ‘ನಗೆ ಹಬ್ಬ’ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ‘ಪ್ರಾಣೇಶ ತಂಡದಲ್ಲಿ ಬಸವರಾಜ ಮಹಾಮನಿ, ನರಸಿಂಹ ಜೋಶಿ, ಅಜೇಯ ಸಂಕೇಶ್ವರ, ತುಕಾರಾಮ ಬೀದರ್‌ ಅವರಿದ್ದಾರೆ. ಅಂಕಲಗಿಯ ಅಡವಿ ಸಿದ್ಧೇಶ್ವರ ಮಠದ ಅಮರಸಿದ್ಧೇಶ್ವರ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸುವರು’ ಎಂದು ಪ್ರಾಯೋಜಕ ಸುರೇಶ ಪಟ್ಟಣಶೆಟ್ಟಿ ತಿಳಿಸಿದ್ದಾರೆ.

Read More »

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ ಅವರಣದಲ್ಲಿ ಶ್ರೀ ಮಾರುತೇಶ್ವರ ಮೂರ್ತಿ ಪ್ರತಿಷ್ಠಾಪನೆ ಊರಿನ ಮುಖಂಡರಿಗೆ, ರೈತರಿಗೆ ಹಾಗೂ ಕಾರ್ಖಾನೆ ಸಿಬ್ಬಂದಿ ವರ್ಗದವರಿಗೆ ಸತ್ಕಾರ

ಗೋಕಾಕ ತಾಲೂಕಿನ ಹಿರೇನಂದಿ ಗ್ರಾಮದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ ಅವರಣದಲ್ಲಿ ಶ್ರೀ ಮಾರುತೇಶ್ವರ ಮೂರ್ತಿ ಪ್ರತಿಷ್ಠಾಪನೆ ಹಾಗೂ ನೂತನ ದೇವಸ್ಥಾನ ಕಟ್ಟಡದ ಉದ್ಘಾಟನೆ ನಿಮಿತ್ತವಾಗಿ ಆಧ್ಯಾತ್ಮಿಕ ನಾಟಕವನ್ನು ಹಮ್ಮಿಕೊಂಡಿದ್ದರು.   ಈ ಸಂದರ್ಭದಲ್ಲಿ ಪೂಜ್ಯರಿಗೆ, ಊರಿನ ಮುಖಂಡರಿಗೆ, ರೈತರಿಗೆ ಹಾಗೂ ಕಾರ್ಖಾನೆ ಸಿಬ್ಬಂದಿ ವರ್ಗದವರಿಗೆ ಸತ್ಕಾರ ಮಾಡಿದರು.   ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ ಅವರಣದಲ್ಲಿ ಶ್ರೀ ಮಾರುತೇಶ್ವರ ದೇವರ ಮೂರ್ತಿ ಪ್ರತಿಷ್ಠಾಪನೆ ಮಾಡಿದರು. ಯುವ ನಾಯಕ ಸಂತೋಷ …

Read More »

ಭಾವನೆ ಶುದ್ದವಾಗಿದ್ದರೆ ಭಾಗ್ಯಕ್ಕೆ ಕೊರತೆ ಇರುವುದಿಲ್ಲ: ನ್ಯಾಯಾಧೀಶರು ಎಂ.ಬಿ.ಕುಡವಕ್ಕಲಿಗೇರ

ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಕಾನೂನು ಮಹಾವಿದ್ಯಾಲಯದ ಸಾಂಸ್ಕೃತಿಕ, ಕ್ರೀಡಾ ಹಾಗೂ ಕಾನೂನು ಸೇವಾ ಘಟಕದ ಉದ್ಘಾಟನಾ ಸಮಾರಂಭ   ಗೋಕಾಕ : ಸದೃಢ ದೇಹದಲ್ಲಿ ಸದೃಢ ಮನಸ್ಸು ಇರುತ್ತದೆ, ವಿದ್ಯಾರ್ಥಿಗಳು ಸಾಂಸ್ಕೃತಿಕ ಹಾಗೂ ಕ್ರೀಡೆಗಳಲ್ಲಿ ಪಾಲ್ಗೊಂಡು ಆರೋಗ್ಯವಂತರಾಗಿರೆಂದು ಬೆಳಗಾವಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಎಂ.ಬಿ.ಕುಡವಕ್ಕಲಿಗೇರ ಹೇಳಿದರು. ಶುಕ್ರವಾರದಂದು ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಕಾನೂನು ಮಹಾವಿದ್ಯಾಲಯದ ಸಾಂಸ್ಕೃತಿಕ, ಕ್ರೀಡಾ ಹಾಗೂ ಕಾನೂನು ಸೇವಾ ಘಟಕದ …

Read More »

ಮೋದಿ ಮತ್ತೇ ಪ್ರಧಾನಿಯಾದರೆ ಭಾರತ ಪ್ರಪಂಚದಲ್ಲಿಯೇ ಶಕ್ತಿ ಶಾಲಿ ರಾಷ್ಟ್ರವಾಗಲಿದೆ

ಗೋಕಾಕದಲ್ಲಿಂದು ಜರುಗಿದ ಗ್ರಾಮ ಚಲೋ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ: ಭಾರತವು ಮತ್ತಷ್ಟು ಗಟ್ಟಿಯಾಗಲು ನರೇಂದ್ರ ಮೋದಿಯವರು ಮತ್ತೋಮ್ಮೆ ನಮ್ಮ ರಾಷ್ಟ್ರದ ಪ್ರಧಾನಿಯಾಗಬೇಕು. ಮತ್ತೋಮ್ಮೆ ಮೋದಿಯವರಿಗಾಗಿ ಕಾರ್ಯಕರ್ತರು ಪ್ರತಿ ಮನೆ-ಮನೆ ಬಾಗಿಲಿಗೆ ತೆರಳಿ ಕೇಂದ್ರ ಸರ್ಕಾರದ ಯೋಜನೆಗಳನ್ನು ವಿವರಿಸಬೇಕು. ಬರುವ ಮಾರ್ಚ-ಎಪ್ರೀಲ್ ತಿಂಗಳಲ್ಲಿ ಜರುಗುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಕಾರ್ಯಕರ್ತರು ಶ್ರಮಿಸುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕರೆ ನೀಡಿದರು. ಬುಧವಾರದಂದು …

Read More »

ಕೃಷಿ ವಿದ್ಯಾರ್ಥಿಗಳಿಂದ ಅಜೋಲಾ ಸಸ್ಯದ ಕೃಷಿ ಪ್ರಾತ್ಯಕ್ಷಿಕೆ

ಗೋಕಾಕ: ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದಡಿಯಲ್ಲಿ ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಿಂದ ಅಜೋಲಾ ಸಸ್ಯದ ಕೃಷಿ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಪ್ರಾಯೋಗಿಕವಾಗಿ ಕರಕುಚ್ಚಿ ಗ್ರಾಮದಲ್ಲಿ ಮಾಡಿದರು. ವಿದ್ಯಾರ್ಥಿಗಳು ರೈತರಿಗೆ ಅಜೋಲಾ ಸಸ್ಯದ ಮಹತ್ವ ಹಾಗೂ ವಿವಿಧ ತಳಿಗಳು, ಬೆಳೆಯುವ ಹಂತಗಳು ಕುರಿತು ಮಾಹಿತಿಯನ್ನು ನೀಡಿದರು. ಪಶುವಿನ ಉತ್ತಮ ಹಾಲಿನ ಇಳುವರಿಗಾಗಿ ಪಶುಗಳಿಗೆ ಹಾಕುವ ಹಿಂಡಿಯೊಂದಿಗೆ ಅಜೋಲಾ ಮಿಶ್ರಣ ಮಾಡಿ ಉಪಯೋಗಿಸಬೇಕು.ಅಜೋಲಾ ಬೆಳೆಯುವ ವಿಧಾನ ಹಾಗೂ …

Read More »

ಚಲಿಸುತ್ತಿರುವ ರೈಲಿನಿಂದ ಜಿಗಿದ ಯುವಕ

ಚಲಿಸುತ್ತಿರುವ ರೈಲಿನಿಂದ ಜಿಗಿದ ಯುವಕ!! ಸ್ಥಿತಿ ಗಂಭೀರ!!! ಘಟಪ್ರಭಾ : ಚಲಿಸುತ್ತಿರುವ ರೈಲಿನಿಂದ ಜಿಗಿದ ಯುವಕನ ಸ್ಥಿತಿ ಗಂಭೀರ ವಾಗಿದ ಘಟನೆ ಘಟಪ್ರಭಾ ರೈಲು ನಿಲ್ದಾಣದ ಮೊದಲನೆಯ ಗೆಟ್ ಹತ್ತಿರ ಸಂಭವಿಸಿದೆ.   ಹೌದು ಬೆಳಗಾವಿ ಇಂದ ರಾಣಿ ಚನ್ನಮ್ಮ ಎಕ್ಸ್ಪ್ರೆಸ್ ರೈಲಿನಲ್ಲಿ ಘಟಪ್ರಭಾ ಕ್ಕೆ ಹೊರಟಿದ್ದ ಪಾಮಲದಿನ್ನಿ ಗ್ರಾಮದ ಯುವಕ ವಿಠ್ಠಲ್ ಗುಜನಟ್ಟಿ (18) ಎಂಬ ಯುವಕ ರೈಲಿನಲ್ಲಿ ನಿದ್ದೆಗೆ ಜಾರಿದ್ದು ಕಣ್ಣು ತೆಗೆಯುವಷ್ಟರಲ್ಲಿ ಘಟಪ್ರಭಾ ರೈಲುನಿಲ್ದಾಣ ದಿಂದ …

Read More »

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ ಪುತ್ರ ಸೂರ್ಯಶ್ರೇಷ್ಠ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ ಪುತ್ರ ಸೂರ್ಯಶ್ರೇಷ್ಠ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ. ಗೋಕಾಕ : ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರು ಹಾಗೂ ಯುವ ನಾಯಕ ಸಂತೋಷ ಜಾರಕಿಹೊಳಿ ಅವರ ಪುತ್ರರಾದ ಸೂರ್ಯಶ್ರೇಷ್ಠ ಜಾರಕಿಹೊಳಿ ಅವರ ಹುಟ್ಟು ಹಬ್ಬವನ್ನು ಅಭಿಮಾನಿಗಳು ಸಮಾಜಮುಖಿಯಾಗಿ ಸರಳವಾಗಿ ಆಚರಿಸಿದರು. ಶ್ರೇಷ್ಠ ಫೌಂಡೇಶನ್ ವತಿಯಿಂದ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಗೂ ಶಿವಾ ಫೌಂಡೇಶನ್ ಮಕ್ಕಳಿಗೆ ಹಣ್ಣು …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲೂಕಿನ ಗುಜನಟ್ಟಿ ಗ್ರಾಮದಲ್ಲಿ ಶ್ರೀ ನಿಂಗಮ್ಮಾ ದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ …

Read More »