Breaking News

ಗೋಕಾಕ

ಘಟಪ್ರಭಾ : ಬೈಕ್ ಕಳುವು ಆರೋಪಿ ಅರೆಸ್ಟ್

ಘಟಪ್ರಭಾ: ಬೈಕ್ ಗಳನ್ನು ಕಳುವು ಮಾಡುತ್ತಿದ್ದ ಆರೋಪಿಯೊಬ್ಬನ್ನು ಘಟಪ್ರಭಾ ಪೊಲೀಸರು ಬಂಧಿಸಿದ್ದಾರೆ.   ಇಷ್ಟಕ್ಕೂ ಈತನ ಬಳಿಯಿಂದ ಪೊಲೀಸರು ವಶಪಡಿಸಿಕೊಂಡಿದ್ದು ಬರಿ ಒಂದೆರಡು ಬೈಕ್ ಗಳಲ್ಲ. ಬರೊಬ್ಬರಿ 11 ಬೈಕ್ ಗಳು !   ಪೊಲೀಸರು ಈತನನ್ನು ವಿಚಾರಣೆಗೆ ಗುರಿಪಡಿಸಿದ್ದು ಘಟಪ್ರಭಾ ಪೊಲೀಸ್ ಸಿಬ್ಬಂದಿ ಕಾರ್ಯಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Read More »

ಬಿಜೆಪಿಯವರಿಗೆ ತಿರಂಗಾ ಝಂಡಾ ಹಾರಿಸೋ ಅಧಿಕಾರ ಇಲ್ಲ: ಸತೀಶ ಜಾರಕಿಹೊಳಿ

ಮಾನವ ಬಂಧುತ್ವ ವೇದಿಕೆ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಇಡೀ ರಾಜ್ಯಾಧ್ಯಂತ ನಾಗರ ಪಂಚಮಿಯನ್ನು ಬಸವ ಪಂಚಮಿಯನ್ನಾಗಿ ಪರಿವರ್ತನೆ ಮಾಡಿ ಆಚರಿಸುತ್ತಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು. ಗೋಕಾಕ್‍ನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸತೀಶ ಜಾರಕಿಹೊಳಿ 12ನೇ ಶತಮಾನದಲ್ಲಿಯೇ ವಿಶ್ವಗುರು ಬಸವಣ್ಣನವರು ಮೌಢ್ಯತೆ ಆಚರಿಸುವುದು ಸರಿಯಲ್ಲ ಎಂದು ತಮ್ಮ ವಚನಗಳ ಮೂಲಕ ತಿಳಿಸಿದ್ದಾರೆ. ಆದರೆ ಇನ್ನು ಕೂಡ ಜನರು ಮೂಢನಂಬಿಕೆ, ಮೌಢ್ಯತೆಯಲ್ಲಿಯೇ ಮುಳುಗಿದ್ದಾರೆ. ಇದನ್ನು ಬದಲಾವಣೆ …

Read More »

ಚೈನ ಸ್ನ್ಯಾಚರ ಹಾಗೂ ಬೈಕ ಕಡಿಯುತ್ತಿದ್ದ ಕಳ್ಳರನ್ನು ಹೆಡೆ ಮೂರಿ ಕಟ್ಟಿದ ಗೋಕಾಕ ಪೊಲೀಸರು

ಗೋಕಾಕ ಶಹರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಳೆದ ಕೆಲವು ತಿಂಗಳುಗಳಿಂದ ಚೈನ್ ಸ್ಟ್ಯಾಚಿಂಗ ಹಾಗೂ ಮೋಟಾರ ಸೈಕಲಗಳು ಕಳ್ಳತನವಾಗುತ್ತಿದ್ದು ಈ ಬಗ್ಗೆ ಪ್ರಕರಣಗಳು ದಾಖಲಾಗಿದ್ದು ಅವುಗಳ ಪತ್ತೆಗಾಗಿ ಮಾನ್ಯ ಶ್ರೀ ಸಂಜೀವ ಪಾಟೀಲ ಆರಕ್ಷಕ ಅಧೀಕ್ಷಕರು ಬೆಳಗಾವಿ, ಹಾಗೂ ಮಾನ್ಯ ಶ್ರೀ ಮಹಾನಿಂಗ ನಂದಗಾವಿ ಹೆಚ್ಚುವರಿ ಎಸ್ ಪಿ ಬೆಳಗಾವಿ ರವರು ಮತ್ತು ಶ್ರೀ ಮನೋಜಕುಮಾರ ನಾಯಿಕ ಡಿಎಸ್‌ಪಿ ಗೋಕಾಕ ರವರ ಮಾರ್ಗದರ್ಶನದಲ್ಲಿ, ಗೋಕಾಕ ವೃತ್ತದ ಸಿಪಿಐ ಶ್ರೀ ಗೋಪಾಲ …

Read More »

ಗೋಕಾಕ ತಾಲೂಕಿನ ಭಾಗದಲ್ಲಿ ಮತ್ತೆ ಪ್ರವಾಹ ಭೀತಿ

ಜಿಲ್ಲಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು ಮೂಡಲಗಿ ತಾಲೂಕಿನ ನಾಲ್ಕು ಸೇತುವೆಗಳು ಜಲಾವೃತವಾಗಿದೆ. ಕೆಲ ಬೈಕ್ ಸವಾರರು ಅಪಾಯ ಲೆಕ್ಕಿಸದೇ ಜಲಾವೃತವಾದ ಸೇತುವೆ ಮೇಲೆಯೇ ಸಂಚರಿಸಿದ್ದಾರೆ. ಪ್ರಮುಖವಾಗಿ ಅವರಾದಿ – ಮಹಾಲಿಂಗಾಪುರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ, ಸುಣಧೋಳ -ಮೂಡಲಗಿಗೆ ಸಂಪರ್ಕ ಕಲ್ಪಿಸುವ ಸೇತುವೆ, ವಡೇರಹಟ್ಟಿ-ಉದಗಟ್ಟಿಗೆ ಸಂಪರ್ಕ ಕಲ್ಪಿಸುವ ಸೇತುವೆ ಹಾಗೂ ಮೂಡಲಗಿ-ಭೈರನಹಟ್ಟಿಗೆ ಸಂಪರ್ಕ ಕಲ್ಪಿಸುವ ಸೇತುವೆ ಜಲಾವೃತವಾಗಿವೆ. ಪರಿಣಾಮ ಈ ಗ್ರಾಮಗಳು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಗೆ ಸಂಚಾರ ಸ್ಥಗಿತವಾಗಿದೆ. ಸದ್ಯ ಬಳ್ಳಾರಿ ನಾಲಾ, …

Read More »

ಗೋಕಾಕ ತಾಲೂಕಿನ ಶಿಂಗಳಾಪುರ ಸೇತುವೆ ಮುಳುಗಡೆ

ಗೋಕಾಕ: ಮಳೆಯ ಆರ್ಭಟ ಮುಂದುವರಿದಿದ್ದು ಕೃಷ್ಣಾ ನದಿ ಮಟ್ಟ ಮೀರಿ ಹರಿಯುತ್ತಿದೆ. ಈ ಮಧ್ಯೆ ಶಿಂಗಳಾಪುರ ಸೇತುವೆ ಶನಿವಾರ ಮುಳುಗಡೆಯಾಗಿದ್ದು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಸೇತುವೆ ಮೇಲಿನಿಂದ ವ್ಯಾಪಕ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದು ಜನ ಸಂಚರಿಸದಂತೆ ಎಚ್ಚರಿಕೆ ಕ್ರಮವಾಗಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸೇತುವೆಯ ಎರಡೂ ಕಡೆಗಳಲ್ಲಿ ಗೋಕಾಕ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದಾರೆ. ಸ್ಥಳಕ್ಕೆ ಗೋಕಾಕ ಪಿಎಸ್ಐ ಭೇಟಿ ನೀಡಿ ಪರಿಶೀಲಿಸಿದ್ದು ಸುರಕ್ಷತೆ ಬಗ್ಗೆ ಸಿಬ್ಬಂದಿಗೆ ಮಾರ್ಗದರ್ಶನ ನೀಡಿದ್ದಾರೆ.

Read More »

ರೈತರಿಗೆ ಮೇವು ಕತ್ತರಿಸುವ ಯಂತ್ರ ಹಾಗೂ ಮ್ಯಾಟ್‍ಗಳನ್ನು ವಿತರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಗೋಕಾಕ: ಕೆಎಂಎಫ್‍ನಿಂದ ರೈತ ಸಮುದಾಯಕ್ಕೆ ಸಾಕಷ್ಟು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರೈತ ವೃಂದಕ್ಕೆ ಕರೆ ನೀಡಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಜಿಲ್ಲಾ ಹಾಲು ಒಕ್ಕೂಟದಿಂದ ನಡೆದ ರಾಸು ವಿಮೆಗಳ ಚೆಕ್ ವಿತರಿಸಿ ಮಾತನಾಡಿದ ಅವರು, ರೈತರ ಆರ್ಥಿಕ ಅಭಿವೃದ್ಧಿಗಾಗಿಯೇ ಕೆಎಂಎಫ್ ಬದ್ಧವಿದ್ದು ರೈತರಿಗೆ ಬೇಕಾಗಿರುವ ಎಲ್ಲ ಸೌಲತ್ತುಗಳನ್ನು ನೀಡುತ್ತಿದೆ ಎಂದು ಹೇಳಿದರು. ರೈತರಿಗೆ …

Read More »

ರಮೇಶ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಕೊಣ್ಣೂರ ಪುರಸಭೆ ಕಾರ್ಯಾಲಯದಲ್ಲಿ ಪ್ರಗತಿ ಪರಿಶೀಲನಾ ಸಭೆ

ಗೋಕಾಕ ಮತಕ್ಷೇತ್ರದ ಕೊಣ್ಣೂರ ಪುರಸಭೆ ಕಾರ್ಯಾಲಯದಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಇಂದು ಕೊಣ್ಣೂರ ಪುರಸಭೆ ವ್ಯಾಪ್ತಿಯಲ್ಲಿ ಸಂಭಾವ್ಯ ಪ್ರವಾಹ ಕುರಿತು ಸಿದ್ಧತೆ ಹಾಗೂ ಪ್ರಗತಿ ಪರಿಶೀಲನಾ ಸಭೆ ಜರುಗಿತು.  ಗೋಕಾಕ ಮತಕ್ಷೇತ್ರದ ಕೊಣ್ಣೂರ ಪುರಸಭೆ ಕಾರ್ಯಾಲಯದಲ್ಲಿ ಶಾಸಕ ರಮೇಶ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಕೊಣ್ಣೂರು ಪುರಸಭೆಯ ಅಧಿಕಾರಿಗಳೊಂದಿಗೆ ಪ್ರವಾಹ ತಡೆ ಪರಿಶೀಲನಾ ಸಭೆ ನಡೆಯಿತು. ಈ ವೇಳೆ ಪ್ರವಾಹ ನಿಯಂತ್ರಣ ಹಾಗೂ ಅಧಿಕಾರಿಗಳು ಈ ವೇಳೆ ತರೆಗೆದುಕೊಳ್ಳಬೇಕಾದ ಕ್ರಮಗಳನ್ನು …

Read More »

ಪ್ರವಾಸೀ ತಾಣಗಳಿಗೆ ಬಂದಾಗ ಸಾರ್ವಜನಿಕರು ತುಂಬಾ ಎಚ್ಚರಿಕೆಯಿಂದ ವರ್ತಿಸಬೇಕು: S.P. ಸಂಜೀವ್ ಪಾಟೀಲ್

ಪ್ರವಾಸೀ ತಾಣಗಳಿಗೆ ಬಂದಾಗ ಸಾರ್ವಜನಿಕರು ತುಂಬಾ ಎಚ್ಚರಿಕೆಯಿಂದ ವರ್ತಿಸಬೇಕು. ತಮ್ಮ ಹಾಗೂ ತಮ್ಮ ಜೊತೆ ಬಂದವರ ಕುರಿತಂತೆ ಕಾಳಜಿ ವಹಿಸಬೇಕೆಂದು ಬೆಳಗಾವಿ ಎಸ್‍ಪಿ ಡಾ. ಸಂಜೀವ್ ಪಾಟೀಲ್ ಹೇಳಿದ್ದಾರೆ. ಹೌದು ಬೆಳಗಾವಿ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದರು ಜನಪ್ರಿಯ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಭೇಟಿ ನಿಡುತ್ತಿದ್ದಾರೆ. ಇನ್ನು ಅವರ ಸುರಕ್ಷತೆಯನ್ನು ಸ್ವತಃ ಪ್ರವಾಸಿಗರೇ ಮಾಡಿಕೊಳ್ಳಬೇಕು. ಈ ಹಿನ್ನೆಲೆಯಲ್ಲಿ ಇಂದು ಎಸ್‍ಪಿ ಡಾ. ಸಂಜೀವ್ ಪಾಟೀಲ್ ಬೆಳಗಾವಿ ಜಿಲ್ಲೆಯ ಗೋಕಾಕ್ ಫಾಲ್ಸ್‍ಗೆ ಭೇಟಿ ನೀಡಿ …

Read More »

ಮಹಾ ಮಂಡಳಕ್ಕೇK.M.F. ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನೇತೃತ್ವ ದಲ್ಲಿ ಅವಿರೋಧ ಆಯ್ಕೆ…

ಗೋಕಾಕ: ಹಿಡಕಲ್ ಡ್ಯಾಂ ಘಟಪ್ರಭಾ ಯೋಜನಾ ಮಟ್ಟದ ನೀರು ಬಳಕೆದಾರರ ಸಹಕಾರಿ ಸಂಘಗಳ ಮಹಾಮಂಡಳದ ನೂತನ ಅಧ್ಯಕ್ಷರಾಗಿ ಗೋಕಾಕ ತಾಲೂಕಿನ ದುರದುಂಡಿ ಗ್ರಾಮದ ಅಶೋಕ ಶಿವಪುತ್ರ ಖಂಡ್ರಟ್ಟಿ ಹಾಗೂ ಉಪಾಧ್ಯಕ್ಷರಾಗಿ ಮುಗಳಖೋಡ ಗ್ರಾಮದ ಮಲ್ಲಿಕಾರ್ಜುನ ಪರಮಾನಂದ ಹುಂಡೇಕರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗುರುವಾರದಂದು ಹಿಡಕಲ್ ಡ್ಯಾಂನ ಮಹಾಮಂಡಳದ ಪ್ರಧಾನ ಕಛೇರಿಯಲ್ಲಿ ಜರುಗಿದ ಮಹಾಮಂಡಳದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ತಲಾ ಒಂದೊಂದು ನಾಮಪತ್ರಗಳು ಸಲ್ಲಿಕೆಯಾಗಿದ್ದರಿಂದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಗಳಿಗೆ …

Read More »

ಸಹಾಯಧನ ಚೇಕ್ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ.!

ಸಹಾಯಧನ ಚೇಕ್ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ.!     ಗೋಕಾಕ: ಆಕಸ್ಮೀಕ ಸಿಡಿಲು ಬಡಿದು ಮೃತಪಟ್ಟ ಜಾನುವಾರು ಮಾಲಕಿ ನಾಗವ್ವ ಪರಸನ್ನವರ ಅವರಿಗೆ ಶಾಸಕ ರಮೇಶ ಜಾರಕಿಹೊಳಿ ಬುಧವಾರದಂದು ತಮ್ಮ ಗೃಹ ಕಚೇರಿಯಲ್ಲಿ ೩೦ಸಾವಿರ ರೂಗಳ ಚೇಕ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ, ಮಾಜಿ ಜಿಪಂ ಸದಸ್ಯ ಟಿ ಆರ್ ಕಾಗಲ, ಗ್ರಾಮ ಲೆಕ್ಕಾಧಿಗಳು ಇದ್ದರು.

Read More »