ಗೋಕಾಕ: ತಾಲೂಕಿನ ಎಲ್ಲಾ ಪೆಟ್ರೋಲ್ ಪಂಪ್ ಮಾಲೀಕರಿಗೆ ಹಾಗೂ ಸಿಬ್ಬಂದಿಗಳಿಗೆ ಸತೀಶ್ ಶುಗರ್ಸ್ ವತಿಯಿಂದ ಮಾಸ್ಕ್, ಸ್ಯಾನಿಟೈಸರ್ ಹಾಗೂ ಹ್ಯಾಂಡ್ ಗ್ಲೌಸ್ ಗಳನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಮಂಗಳವಾರ ವಿತರಿಸಿದರು. ಜಿಲ್ಲೆಯಲ್ಲಿ ಕೊರೋನಾ ವ್ಯಾಪಕವಾಗಿ ವಿಸ್ತಾರಗೊಳ್ಳುತ್ತಿರುವ ಹಿನ್ನೆಲೆ ಜನರ ರಕ್ಷಣೆಗಾಗಿ ರಾಹುಲ್ ಅವರು ಮಾಸ್ಕ್, ಸ್ಯಾನಿಟೈಸರ್ ವಿತರಿಸಿ, ಕೊರೋನಾ ಜಾಗೃತಿ ಮೂಡಿಸುತ್ತಿದ್ದಾರೆ. ಗ್ರಾಮೀಣ ಜನತೆ ಸ್ವಚ್ಛತೆಗೆ ಆಧ್ಯತೆ ನೀಡಬೇಕು. ಈ ಹೆಮ್ಮಾರಿ ಸೋಂಕನ್ನು ಕಟ್ಟಿಹಾಕಲು ಸಾಮಾಜಿಕ ಅನಿರ್ವಾಯ ಎಂದರು. …
Read More »ಸೋಯಾಬಿನ ಬೆಳೆಯನ್ನು ಬಿತ್ತನೆ ಮಾಡುವ ರೈತರು ಹದವಾದ ಮಳೆಯಾದ ಮೇಲೆ ಭೂಮಿಯ ತೇವಾಂಶ ನೋಡಿಕೋಂಡು ಬಿತ್ತನೆ ಮಾಡಬೇಕು: ಸಹಾಯಕ ಕೃಷಿ ನಿರ್ದೇಶಕ ಎಂ.ಎಂ. ನದಾಫ
ಗೋಕಾಕ: ಸೋಯಾಬಿನ ಬೆಳೆಯನ್ನು ಬಿತ್ತನೆ ಮಾಡುವ ರೈತರು ಹದವಾದ ಮಳೆಯಾದ ಮೇಲೆ ಭೂಮಿಯ ತೇವಾಂಶ ನೋಡಿಕೋಂಡು ಬಿತ್ತನೆ ಮಾಡಬೇಕು ಎಂದು ಗೋಕಾಕ ಹಾಗೂ ಮೂಡಲಗಿ ತಾಲೂಕಿನ ರೈತರಿಗೆ ಸಹಾಯಕ ಕೃಷಿ ನಿರ್ದೇಶಕ ಎಂ.ಎಂ. ನದಾಫ ರವರು ಸಲಹೆ ನೀಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಸೋಯಾಬಿನ ಬಿತ್ತನೆ ಮಾಡಲು ಜೂನ ಮೊದಲನೆಯ ವಾರದಿಂದ ಜುಲೈ 2ನೇ ವಾರದವರೆಗೆ ಅವಕಾಶ ಇದ್ದು ಸಾಕಷ್ಠು ಮಳೆಯಾಗಿ ಭೂಮಿ ಹಸಿಯಾದ ನಂತರ …
Read More »ಗ್ರೇಡ್-2 ತಹಶೀಲ್ದಾರಾಗಿ ಅಧಿಕಾರವನ್ನು ಸ್ವೀಕರಿಸಿದ ಎಲ್.ಎಚ್.ಭೋವಿ
ಗೋಕಾಕ: ಸಮೀಪದ ಅರಭಾವಿ ನಾಡ ಕಛೇರಿಯಲ್ಲಿ ಉಪತಹಶೀಲ್ದಾರರಾಗಿ ಕಾರ್ಯ ನಿರ್ವಹಿಸುತ್ತಿದ್ದ ಎಲ್.ಎಚ್.ಭೋವಿ ಅವರು ಸರ್ಕಾರದ ಆದೇಶ ಮೇರೆಗೆ ಗ್ರೇಡ್-2 ತಹಶೀಲ್ದಾರರಾಗಿ ಪದನೊತ್ತಿ ಹೊಂದಿ ಸೋಮವಾರದಂದು ಇಲ್ಲಿಯ ತಹಶೀಲ್ದಾರ ಕಚೇರಿಯಲ್ಲಿ ಗ್ರೇಡ್-2 ತಹಶೀಲ್ದಾರಾಗಿ ಅಧಿಕಾರವನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ, ಗ್ರೇಡ್-2 ತಹಶೀಲ್ದಾರ ಎಮ್.ಎ.ಚೌಧರಿ, ಪ್ರಥಮ ದರ್ಜೆ ಸಹಾಯಕ ಆರ್.ಆಯ್. ನೇಸರಗಿ, ಗೋಕಾಕ ಕಂದಾಯ ನಿರೀಕ್ಷಕ ಎಸ್.ಎನ್.ಹಿರೇಮಠ ಸೇರಿದಂತೆ ಇತರೆ ಸಿಬ್ಬಂದಿಗಳು ಶುಭ ಹಾರೈಸಿದರು. ಎಲ್.ಎಚ್.ಭೋವಿ ಅವರು ಸರ್ಕಾರದ …
Read More »ಗೋಕಾಕ್ ತಾಲೂಕಿನ ಲೊಳಸರ ಗ್ರಾಮದಲ್ಲಿ ಆಟವಾಡುತ್ತಿದ್ದ ಮಗು ಚರಂಡಿಗೆ ಬಿದ್ದು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ
ಬೆಳಗಾವಿ: ಕೊರೊನಾ ಲಾಕ್ ಡೌನ್ ನಡುವೆ ಬೆಳಗಾವಿಯಲ್ಲಿ ದುರಂತವೊಂದು ಸಂಭವಿಸಿದೆ. ಮನೆಮುಂದೆ ಆಟವಾಡುತ್ತಿದ್ದ ಮಗು ಚರಂಡಿಗೆ ಬಿದ್ದು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಸಂಭವಿಸಿದೆ. ಗೋಕಾಕ್ ತಾಲೂಕಿನ ಲೊಳಸರ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮನೆ ಮುಂದೆ ಇದ್ದ ಚಂಡಿಗೆ ಸಾದಿಕಾ ಸದ್ದಾಂ ಎಂಬ ಒಂದು ವರ್ಷದ ಮಗು ಬಿದ್ದು ಸಾವನ್ನಪ್ಪಿದೆ. ಚರಂಡಿ ನೀರು ಮನೆ ಮುಂದೆ ಕಟ್ಟಿಕೊಂಡಿದ್ದರೂ ಈ ಬಗ್ಗೆ ಮನೆಯವರಾಗಲಿ, ಸಂಬಂಧಪಟ್ಟವರಾಗಲಿ ಗಮನಹರಿಸಿಲ್ಲ. ಆಟವಾಡಲು ಹೋದ ಮಗು ಆಯತಪ್ಪಿ …
Read More »ಕೊರೋನಾ 2ನೇ ಅಲೆಯು ಗ್ರಾಮೀಣ ಭಾಗದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗ ದಳದ ಕಾರ್ಯಕರ್ತರಿಂದ ಪ್ರಾರಂಭಿಸಲಾದ ಉಚಿತ ಅಂಬ್ಯುಲೆನ್ಸ್ ಸೇವೆ
ಗೋಕಾಕ: ಕೊರೋನಾ 2ನೇ ಅಲೆಯು ಗ್ರಾಮೀಣ ಭಾಗದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗ ದಳದ ಕಾರ್ಯಕರ್ತರಿಂದ ಪ್ರಾರಂಭಿಸಲಾದ ಅಂಬ್ಯುಲೆನ್ಸ್ ಉಚಿತ ಸೇವೆಗೆ ಆರ್ಎಸ್ಎಸ್ನ ಬೆಳಗಾವಿ ವಿಭಾಗ ಸಂಚಾಲಕ ಎಮ್.ಡಿ.ಚುನಮರಿ ಅವರು ಶನಿವಾರದಂದು ನಗರದ ಪಟಗುಂದಿ ಮಾರುತಿ ದೇವಸ್ಥಾನದ ಆವರಣದಲ್ಲಿ ಚಾಲನೆ ನೀಡಿದರು. ಭಜರಂಗದಳದ ಬೆಳಗಾವಿ ವಿಭಾಗೀಯ ಸಂಯೋಜಕ ಸದಾಶಿವ ಗುದಗಗೋಳ ಅವರು ಮಾತನಾಡಿ, ಜನತೆ ಧೈರ್ಯದಿಂದ ಈ ಕೊರೋನಾ ವೈರಸ್ನ್ನು ಎದುರಿಸಿ, ನಿಮ್ಮೊಂದಿಗೆ …
Read More »ಲಕ್ಷ್ಮಿ ನಿವ್ಸ್ ಫೇಸ್ ಬುಕ್ ಪೇಜ್ ಹ್ಯಾಕ್ ಮಾಡಿದ್ದಾರೆ, ಏನೇ ತಪ್ಪು ಸಂದೇಶ ಬಂದ್ರು ವಾಹಿನಿಯ ವೀಕ್ಷಕರು ತಪ್ಪು ತಿಳಿಯಬೇಡಿ…
ಎಲ್ಲಾ ಲಕ್ಷ್ಮಿ news ವೀಕ್ಷಕರಿಗೆ ನಮಸ್ಕಾರ .. ಒಂದು ವಿಷಾದದ ಸಂಗತಿ , ನಮ್ಮ ಹಾಗುವನಿಮ್ಮೆಲ್ಲರ್ ಗೋಕಾಕ ನ ಲಕ್ಷ್ಮಿ news ವಾಹಿನಿ ಫೇಸ್ಬುಕ್ ಪೇಜ ಅನ್ನ ಯಾರೋ ಕಿಡಿ ಗೆಡಿ ಗಳು ನಿನ್ನೆ ಹ್ಯಾಕ್ ಮಾಡಿದ್ದಾರೆ. ಹಾಗೂ ಅದರಲ್ಲಿ ಅಶ್ಲೀಲ ಚಿತ್ರ ಗಳನ್ನ ಹಾಕುತ್ತಿದ್ದಾರೆ, ದಯವಿಟ್ಟು ಯಾರು ವಾಹಿನಿಯ ಬಗ್ಗೆ ತಪ್ಪು ತಿಳುವಳಿಕೆ ಯನ್ನ ತಿಳಿಬೇಡಿ ಇದು ಯಾರೋ ಕುತಂತ್ರಿ ಗಳ ಕೆಲ್ಸ ಹಾಗೂ ತಾವು ಕಂಡಂತೆ ನಮ್ಮ …
Read More »ಹಿಲ್ ಗಾರ್ಡನ್ ಕಚೇರಿಯಲ್ಲಿ ಸ್ಯಾನಿಟೈಸರ್, ಮಾಸ್ಕ್ ಹಾಗೂ ಪಿಪಿಇ ಕಿಟ್ ಗಳನ್ನು ವಿತರಿಸಿದ ರಾಹುಲ್ ಜಾರಕಿಹೊಳಿ
ಗೋಕಾಕ: ಯಮಕನಮರಡಿ ಮತಕ್ಷೇತ್ರದ 6 ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ಕೊರೊನಾ ವಾರಿಯರ್ಸ್ ಗಳಿಗೆ ಯುವ ಮುಖಂಡರಾದ ರಾಹುಲ್ ಜಾರಕಿಹೊಳಿ ಅವರು ಇಂದು ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಸ್ಯಾನಿಟೈಸರ್, ಮಾಸ್ಕ್ ಹಾಗೂ ಪಿಪಿಇ ಕಿಟ್ ಗಳನ್ನು ವಿತರಿಸಿದರು. ನಂತರ ಮಾತನಾಡಿದ ಅವರು, “ಕೋವಿಡ್ ನಿಯಂತ್ರಣದಲ್ಲಿ ಕೊರೊನಾ ವಾರಿಯರ್ಸ್ ಗಳ ಪಾತ್ರ ಮಹತ್ವದ್ದಾಗಿದೆ. ವಾರಿಯರ್ಸ್ ಗಳು ಸಾರ್ವಜನಿಕರೊಂದಿಗೆ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ಜನರು ಕೂಡ ಕೊರೊನಾ ವಾರಿಯರ್ಸ್ ಗಳೊಂದಿಗೆ ಸಹಕರಿಸಬೇಕು” ಎಂದು …
Read More »ಕೋರೋಣ ವಾರಿಯರ್ಸ್ ಗೆ ಬಿಜೆಪಿ ಗೃಹ ಕಚೇರಿಯಲ್ಲಿ ಕೋವಿಡ್ ಕಿಟ್ ರಮೇಶ್ ಜಾರಕಿಹೊಳಿವಿತರಣೆ ಮಾಡಿದರು
ಗೋಕಾಕ: ಮತಕ್ಷೇತ್ರದ ಶಾಸಕರಾದ ಸಾಹುಕಾರ ಶ್ರೀ ರಮೇಶ ಜಾರಕಿಹೊಳಿ ಅವರು ಇಂದು ನಗರದ ಗೃಹ ಕಛೇರಿಯಲ್ಲಿ ವೈಯಕ್ತಿಕವಾಗಿ ತಾಲೂಕಿನ ಕೊರೋನಾ ವಾರಿಯರ್ಸಗಳಾದ. ಗ್ರಾಮ ಪಂಚಾಯಿತಿ,ಪಟ್ಟಣ ಪಂಚಾಯಿತಿ,ಪತ್ರಕರ್ತರು,ಪುರಸಭೆ,ನಗರಸಭೆ,ಕಂದಾಯ ಇಲಾಖೆ,ಆಶಾ ಕಾರ್ಯಕರ್ತೆಯರು,ಆರೋಗ್ಯ ಇಲಾಖೆ ಸಿಬ್ಬಂದಿಗಳು ಸೈನಿಟೈಜರ, ಹ್ಯಾಂಡ್ ಗ್ಲೋಸ್,ಮಾಸ್ಕ್, ಫೇಸ್ ಶಿಲ್ಡ್ ಸೇರಿದಂತೆ ಕೋವಿಡ್ ರಕ್ಷಾ ಕಿಟ್ ವಿತರಣೆ ಮಾಡಿದರು. ಈ ಸಂಧರ್ಭದಲ್ಲಿ ಜಿ.ಪಂ ಸದಸ್ಯ ಟಿ.ಆರ್ ಕಾಗಲ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು
Read More »ಕೃಷಿ ಇಲಾಖೆ ವತಿಯಿಂದ ತಾಲೂಕಿನ ಎಲ್ಲಾ ಉಪಕೇಂದ್ರಗಳಲ್ಲಿ ಸಹಾಯಧನದಲ್ಲಿ ಮುಂಗಾರು ಬಿತ್ತನೆ ಬೀಜ ವಿತರಣೆ
ಗೋಕಾಕ :ಮತಕ್ಷೇತ್ರದ ಶಾಸಕರಾದ ಶ್ರೀ ರಮೇಶ್ ಜಾರಕಿಹೊಳಿ ಅವರು ಇಂದು ನಗರದ ಗೃಹ ಕಚೇರಿಯಲ್ಲಿ ಗೋಕಾಕ್ ಕೃಷಿ ಇಲಾಖೆ ವತಿಯಿಂದ. ತಾಲೂಕಿನ ಎಲ್ಲಾ ಉಪಕೇಂದ್ರಗಳಲ್ಲಿ ಸಹಾಯಧನದಲ್ಲಿ ಮುಂಗಾರು ಬಿತ್ತನೆ ಬೀಜ ವಿತರಣೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಟಿ ಆರ್ ಕಾಗಲ್ ಹಾಗೂ ಪೌರಾಯುಕ್ತರಾದ ಶಿವಾನಂದ ಹಿರೇಮಠ ಸೇರಿದಂತೆ ಕೃಷಿ ಇಲಾಖೆಯ ಅಧಿಕಾರಿ ಗಳಾದ ಎಮ್ಎಮ್ ನದಾಫ ಅಶೋಕ ಮೇಸ್ತ್ರಿ ಉಪಸ್ಥಿತರಿದ್ದರು …
Read More »ಹಿಡಕಲ್ ಜಲಾಶಯದಿಂದ ಜಿಎಲ್ಬಿಸಿ, ಜಿಆರ್ಬಿಸಿ, ಸಿಬಿಸಿ ಕಾಲುವೆಗಳಿಗೆ ನೀರು ಬಿಡುಗಡೆ- ಕೆಎಮ್ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ.
ಗೋಕಾಕ: ಹಿಡಕಲ್ ಜಲಾಶಯದಿಂದ ಘಟಪ್ರಭಾ ಕಾಲುವೆಗಳಿಗೆ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರನ್ನು ಮೇ.27 ರಿಂದ 7 ದಿನಗಳ ವರೆಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಕಹಾಮ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಗುರುವಾರದಿಂದ ಹಿಡಕಲ್ ಜಲಾಶಯದಿಂದ ಮೂರೂ ಕಾಲುವೆಗಳಿಗೆ ನೀರು ಬಿಡುಗಡೆಯಾಗಲಿದೆ ಎಂದು ಅವರು ಹೇಳಿದ್ದಾರೆ. ಘಟಪ್ರಭಾ ಎಡದಂಡೆ ಕಾಲುವೆ ಮತ್ತು ಘಟಪ್ರಭಾ ಬಲದಂಡೆ ಕಾಲುವೆಗಳಿಗೆ ತಲಾ 1.50 ಟಿಎಂಸಿ ಹಾಗೂ ಸಿಬಿಸಿ ಕಾಲುವೆಗೆ …
Read More »
Laxmi News 24×7