Breaking News

ಗೋಕಾಕ

ವಿಶೇಷಚೇತನರಿಗೆ ತ್ರಿಚಕ್ರ ವಾಹನ ವಿತರಿಸಿದ ಸಚಿವ ರಮೇಶ ಜಾರಕಿಹೊಳಿ

ಗೋಕಾಕ: ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 2019-20 ನೇ ಸಾಲಿನಲ್ಲಿ ವಿಶೇಷ ಚೇತನರಿಗೆ ಮಂಜೂರಾದ ತ್ರಿಚಕ್ರ ವಾಹನಗಳನ್ನು ಫಲಾನುಭವಿಗಳಿಗೆ ಸಚಿವ ರಮೇಶ ಜಾರಕಿಹೊಳಿ ಹಂಚಿಕೆ ಮಾಡಿದರು. ಇಲ್ಲಿನ ತಮ್ಮ ಗೃಹ ಕಚೇರಿ ಆವರಣದಲ್ಲಿ 15 ವ ವಿಶೇಷಚೇತನ ಫಲಾನುಭವಿಗಳಿಗೆ ವಾಹನ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಜಿಪಂ ಸದಸ್ಯರಾದ ಟಿ.ಆರ್ ಕಾಗಲ ಮಡ್ಡಪ್ಪ ತೋಳಿನವರ.ಬಿಜೆಪಿ ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಸೇರಿದಂತೆ ಇಲಾಖೆ ಅಧಿಕಾರಿಗಳು,ಮುಖಂಡರು ಉಪಸ್ಥಿತರಿದ್ದರು.

Read More »

ವಿವಾದಾತ್ಮಕ ಪುಸ್ತಕ ಬಿಡುಗಡೆ; ಮಹಾ ಸರ್ಕಾರದ ವಿರುದ್ಧ ಕರವೇ ಪ್ರತಿಭಟನೆ

ಗೋಕಾಕ- ಕನಾ೯ಟಕ ಸೀಮಾವಾದ ಸಂಘಷ೯ ಸಂಕಲ್ಪ ಎಂಬ ವಿವಾದಾತ್ಮಕ ಪುಸ್ತಕವನ್ನು ಇಂದು ಮಹಾರಾಷ್ಟ್ರ ಸರ್ಕಾರ ಬಿಡುಗಡೆಗೊಳ್ಳಸುತ್ತಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಗೋಕಾಕ ತಾಲೂಕಾ ಘಟಕದ ಕಾರ್ಯಕರ್ತರು ತಾಲೂಕಾಧ್ಯಕ್ಷ ಬಸವರಾಜ ಖಾನಪ್ಪನವರ ನೇತೃತ್ವದಲ್ಲಿ ವಾಲ್ಮೀಕಿ ವೃತ್ತದಲ್ಲಿ ಸೇರಿ ಮಹಾ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪುಸ್ತಕದ ಮುಖ ಪುಟವನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಈ ಪ್ರತಿಭಟನೆಯಲ್ಲಿ ಕೃಷ್ಣಾ ಖಾನಪ್ಪನವರ, ದೀಪಕ ಹಂಜಿ, ಮುಗುಟ ಪೈಲ್ವಾನ್, ರಮೇಶ ಕಮತಿ, ಶೆಟ್ಟೆಪ್ಪಾ ಗಾಡಿವಡ್ಡರ, …

Read More »

ಗೋಕಾಕ ಬಳಿ ಭಾರಿ ಪ್ರಮಾಣದಲ್ಲಿ ಜಿಲಿಟಿನ್ ಕಡ್ಡಿ ವಶ

ಗೋಕಾಕ ತಾಲೂಕನಲ್ಲಿ ಅಕ್ರಮವಾಗಿ ಸಂಗ್ರಹಿಸಲ್ಪಟ್ಟಿದ್ದ 49 ಜಿಲಿಟಿನ್ ಸ್ಫೋಟಕ ಪದಾರ್ಥಗಳನ್ನು ಆಂತರಿಕ ಭದ್ರತಾ ವಿಭಾಗದ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ. ಗೋಕಾಕ ತಾಲೂಕಿನ ಮಣ್ಣಿಕೇರಿ ರಾಮೇಶ್ವರ ಕೆನಾಲ್ ಹತ್ತಿರ ಈ ಸ್ಫೋಟಕ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ. ರಾಯಬಾಗ ತಾಲೂಕಿನ ನಿಪನಾಳದ ವಿಠ್ಠಲ ಯಮನಪ್ಪ ಹಳಬರ ಟ್ರ್ಯಾಕ್ಟರ್ ನಲ್ಲಿ ಸಂಗ್ರಹಿಸಿಟ್ಟುಕೊಂಡಿದ್ದ. 23 ಇಡಿ ಕೇಬಲ್ ಹಾಗೂ ಬ್ಲಾಸ್ಟಿಂಗ್ ಚಾರ್ಜರ್ ಬ್ಯಾಟರಿ ಕೂಡ ಆತನ ಬಳಿ ಇತ್ತು. ಇದರ ಮೌಲ್ಯ 2,03,500 ರೂ. ಕುಲಗೋಡ ಪೊಲೀಸ್ ಠಾಣೆಯಲ್ಲಿ …

Read More »

ಗೋಕಾಕ: ನಗರದ ತಾಲೂಕಾ ವಾಲ್ಮೀಕಿ ಕ್ರೀಡಾಂಗಣದಲ್ಲಿ ತಾಲೂಕಾಡಳಿತದ ಆಶ್ರಯದಲ್ಲಿ ಜರುಗಿದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಅವರು ಮಾತನಾಡುತ್ತಿರುವುದು.

ಗೋಕಾಕ: ಗಣರಾಜ್ಯವು ದೇಶದ ನಾಗರೀಕರಿಗೆ ತನ್ನ ರಾಷ್ಟ್ರದ ಜವಾಬ್ದಾರಿಯನ್ನು ನೀಡಿದ ದಿನವಾಗಿದ್ದು, ಗಣತಂತ್ರ ವ್ಯವಸ್ಥೆಯು ಭಾರತೀಯರಿಗೆ ಸಾರ್ವಭೌಮಾಧಿಕಾರವನ್ನು ಕಲ್ಪಿಸಿಕೊಟ್ಟ ಮಹತ್ವದ ದಿನವಾಗಿದೆ ಎಂದು ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಹೇಳಿದರು. ಮಂಗಳವಾರದಂದು ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ತಾಲೂಕಾಡಳಿತ ಹಾಗೂ ನಗರಸಭೆ ಇವುಗಳ ಆಶ್ರಯದಲ್ಲಿ ಜರುಗಿದ 72ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಗಣತಂತ್ರವು ವ್ಯಕ್ತಿ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯಗಳನ್ನು ನೀಡುವುದರ ಮೂಲಕ ಮೂಲಭೂತ ಹಕ್ಕುಗಳನ್ನು ನೀಡಿದೆ ಎಂದು ತಿಳಿಸಿದರು. …

Read More »

ಗೋಕಾಕ ಹಿಲ್ ಗಾರ್ಡನ್ ಕಚೇರಿಯಲ್ಲಿ 72ನೇ ಗಣರಾಜೋತ್ಸವ ಆಚರಣೆ

ಗೋಕಾಕ್ : ಪಟ್ಟಣದ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರ ಹಿಲ್ ಗಾರ್ಡನ್ ಕಚೇರಿಯಲ್ಲಿ 72ನೇ ಗಣರಾಜೋತ್ಸವವನ್ನು ಅದ್ಧೂರಿಯಾಗಿ ಇಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ವಿಠ್ಠಲ ಪರಸಣ್ಣವರ, ವಿವೇಕ ಜತ್ತಿ, ಪಾಡು ರಂಗಸೂಭೆ,ಪ್ರಕಾಶ ಬಸಾಪುರ , ಸುರೇಶ್ ಸೇರಿದಂತೆ ಇತರರು ಇದ್ದರು.

Read More »

ಪ್ರತಿಭಟನಾ ನಿರತ ರೈತರ ಮೇಲಿನ ಹಲ್ಲೆ ಖಂಡನೀಯ : ಅಶೋಕ ಪೂಜಾರಿ

ಗೋಕಾಕ : ಕೇಂದ್ರ ಸರ್ಕಾರದ ಕೃಷಿ ಮಸೂದೆ ಜಾರಿಯನ್ನು ಸುಪ್ರೀಂ ಕೋರ್ಟ್ ತಡೆದಿದೆ . ಜತೆಗೆ ಪ್ರತಿಭಟನೆ ಜನಸಾಮಾನ್ಯರ ಹಕ್ಕು ಅದನ್ನು ಮೊಟಕುಗೊಳಿಸಬಾರದು ಎಂದು ಮಹತ್ವದ ನಿರ್ದೇಶನವನ್ನು ನೀಡಿದೆ. ಇದರ ಹೊರತಾಗಿಯೂ ಸಹ ಕೇಂದ್ರ ಸರ್ಕಾರ ಮಸೂದೆಯನ್ನು ತರಲು ಹೊರಟಿದೆ ಎಂದು ಜೆಡಿಎಸ್ ಮುಖಂಡ ಅಶೋಕ ಪೂಜಾರಿ ಕಿಡಿ ಕಾರಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೃಷಿ ಮಸೂದೆಯನ್ನು ವಿರೋಧಿ ದೇಶದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರ …

Read More »

ಘಟಪ್ರಭಾದಲ್ಲಿ ಮುಂದಿನ ಬಾರಿ ರಾಷ್ಟ್ರೀಯ ನಾಯಕರಿಂದ ಧ್ವಜಾರೋಹಣ: ಸತೀಶ ಜಾರಕಿಹೊಳಿ

ಘಟಪ್ರಭಾ: ಪಟ್ಟಣದ ಡಾ.ಎನ್.ಎಸ್. ಹರ್ಡೀಕರ್ ಸೇವಾದಳ ತರಬೇತಿ ಕೇಂದ್ರದಲ್ಲಿ ಮುಂದಿನ ಬಾರಿ ಗಣರಾಜ್ಯೋತ್ಸವಕ್ಕೆ ರಾಷ್ಟ್ರೀಯ ನಾಯಕರನ್ನು ಕರೆಸಿ ಧ್ವಜಾರೋಹಣ ನೆರವೇರಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು. ಮಂಗಳವಾರ ಧ್ವಜಾರೋಹಣದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೇವಾದಳ ತರಬೇತಿ ಕೇಂದ್ರದಲ್ಲಿ ರಾಷ್ಟ್ರೀಯ ದಿನಗಳು ಸೇರಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನೂ ವಿಭಿನ್ನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು. “ಸ್ವಾತಂತ್ರ್ಯ ಹೋರಾಟದಲ್ಲಿ ಹರ್ಡೀಕರ್ ಅವರ ನೇತೃತ್ವದಲ್ಲಿ ಸೇವಾದಳದ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿಯಿಂದ ತಪಸಿ ಗ್ರಾಪಂ. ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿ : ಡಾ.ರಾಜೇಂದ್ರ

ಬೆಟಗೇರಿ: ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ತಪಸಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಈಗಾಗಲೇ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ಕೌಜಲಗಿ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು. ಸಮೀಪದ ತಪಸಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಜ್ಜಿಹಾಳ ಗ್ರಾಮದಿಂದ ಗಲಗಲಿ ತೋಟ ಮತ್ತು ತಿರಕನ್ನವರ ತೋಟ ಹಾಗೂ ಬಣಜಿಗೇರ ತೋಟಕ್ಕೆ ಕುಡಿಯುವ ನೀರು ಸರಬರಾಜು ಪೈಪ್‍ಲೈನ್ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಬಳಿಕ …

Read More »

ಗೋಕಾಕದಲ್ಲಿ ಟ್ರಾಫಿಕ್ ಸ್ಟೇಷನ್ ಚಾಲನೆಯನ್ನು ಎಸ್ಪಿ ಲಕ್ಷ್ಮಣ ನಿಂಬರಗಿ ನೀಡಿದರು

ಗೋಕಾಕ:  ಗೋಕಾಕ ತಾಲೂಕು ಕೇಂದ್ರಗಳಲ್ಲಿ ಟ್ರಾಫಿಕ್ ಪೊಲೀಸ್ ಠಾಣೆ ಅವಶ್ಯಕತೆ ಇದೆ. ಈ ಸಂಬಂಧ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಹೇಳಿದರು. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೋಕಾಕನಲ್ಲಿ ಟ್ರಾಫಿಕ್ ಠಾಣೆಗೆ ಬೇಡಿಕೆ ಇಟ್ಟಿದ್ದೇವೆ. ಸರ್ಕಾರದಿಂದ ಅನುಮತಿ ಪಡೆದು ಮುಂದಿನ ದಿನಗಳಲ್ಲಿ ಈ ಎರಡು ತಾಲೂಕು ಕೇಂದ್ರಗಳಲ್ಲಿ ಟ್ರಾಫಿಕ್ ಠಾಣೆ ಆರಂಭಿಸಲಾಗತ್ತೆ ಎಂದು ಹೇಳಿದರು.

Read More »

ಶಿಕ್ಷಕರ ಸಂಘದ ಪದಾಧಿಕಾರಿಗಳಿಂದ ಶಾಸಕ ಸತೀಶ ಜಾರಕಿಹೊಳಿಗೆ ಸನ್ಮಾನ

ಗೋಕಾಕ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಹುಕ್ಕೇರಿ ತಾಲೂಕು ನೂತನ ಪದಾಧಿಕಾರಿಗಳು ಶನಿವಾರ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಸತ್ಕರಿಸಿದರು. ಇಲ್ಲಿನ ಹಿಲ್ ಗಾರ್ಡನ್ ನಲ್ಲಿ ಶಾಸಕರನ್ನು ಭೇಟಿ ಮಾಡಿ ಸತ್ಕರಿಸಿದರು. ಈ ಸಂದರ್ಭದಲ್ಲಿ ಶಿಕ್ಷಕರ ಸಂಘದ ತಾಲೂಕು ಘಟಕದ ಅಧ್ಯಕ್ಷ ಎಂ.ಬಿ. ನಾಯಿಕ್, ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಬಿ. ಅಂಗಡಿ, ಪ್ರಧಾನ ಕಾರ್ಯದರ್ಶಿ ಆರ್. ಎನ್ ಸಿಂಗಾಡಿ, ಖಜಾಂಚಿ ರಾಜು ತಳವಾರ …

Read More »