ಚಿಕ್ಕೋಡಿಯ ಹಿರೇಕೋಡಿಯ ನಂದಿ ಪರ್ವತ ಆಶ್ರಮದ ಆಚಾರ್ಯ ಶ್ರೀ 108 ಕಾಮಕುಮಾರ ರಾಜ ಮಹಾರಾಜರ ಬರ್ಬರ ಹತ್ಯೆ ಹಿನ್ನೆಲೆಯಲ್ಲಿ ಇಲ್ಲಿನ ವರೂರಿನ ನವಗ್ರಹ ತೀರ್ಥ ಕ್ಷೇತ್ರದ ಆಚಾರ್ಯ ಗುಣಧರನಂದಿ ಮಹಾರಾಜರು ಜೈನ್ ಮುನಿಗಳಿಗೆ, ಜೈನ್ ಬಸದಿಗಳಿಗೆ ಸರ್ಕಾರ ರಕ್ಷಣೆ ನೀಡುವಂತೆ ಆಗ್ರಹಿಸಿ ಸಲ್ಲೇಖನ ವ್ರತ ಕೈಗೊಂಡಿದ್ದರು ಈ ಹಿನ್ನೆಲೆಯಲ್ಲಿ ಇಂದು ಗೃಹ ಸಚಿವ ಜಿ.ಪರಮೇಶ್ವರ ಅವರು ನವಗ್ರಹ ಕ್ಷೇತ್ರಕ್ಕೆ ಭೇಟಿ ಕೊಟ್ಟು ಜೈನ್ ಮುನಿಗಳಿಗೆ ರಕ್ಷಣೆ ನೀಡುವ ಭರವಸೆ ನೀಡಿದರು. …
Read More »ಹೆಚ್ಚಿನ ಮುತುವರ್ಜಿ ವಹಿಸಿ ತನಿಖೆ ನಡೆಸುತ್ತಿದ್ದೇವೆ- ಬೆಳಗಾವಿ ಎಸ್ಪಿ
ಚಿಕ್ಕೋಡಿ (ಬೆಳಗಾವಿ): ಚಿಕ್ಕೋಡಿಯ ಹಿರೇಕೋಡಿ ಜೈನ ಆಶ್ರಮದ ಕಾಮಕುಮಾರ ನಂದಿ ಮಹಾರಾಜರ ಭೀಕರ ಕೊಲೆ ಪ್ರಕರಣವನ್ನು ಹೆಚ್ಚಿನ ಮುತುವರ್ಜಿ ವಹಿಸಿ ತನಿಖೆ ನಡೆಸಲಾಗುವುದು ಎಂದು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ್ ಪಾಟೀಲ್ ಹೇಳಿದ್ದಾರೆ. ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ನಂದಿ ಪರ್ವತ ಆಶ್ರಮದಲ್ಲಿ ಶ್ರೀಗಳ ಮೃತದೇಹಗಳ ಅಂತಿಮ ಕಾರ್ಯಗಳ ಸಕಲ ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೈನ ಮುನಿಗಳ ಪಾರ್ಥಿವ ಶರೀರವನ್ನು ಬೆಳಗಾವಿಯಲ್ಲಿ ಪರೀಕ್ಷೆ ನಡೆಸಿ …
Read More »ಕಾಮಕುಮಾರ ನಂದಿ ಮಹಾರಾಜರ ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಬಿಜೆಪಿ ಶಾಸಕ ಅಭಯ ಪಾಟೀಲ್ ಸರ್ಕಾರವನ್ನು ಒತ್ತಾಯ
ಬೆಳಗಾವಿ : ಚಿಕ್ಕೋಡಿ ತಾಲೂಕಿನ ಹಿರೇಕೋಡಿಯ ಜೈನ ಮುನಿಗಳಾದ ಕಾಮಕುಮಾರ ನಂದಿ ಮಹಾರಾಜರ ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ್ ಆಗ್ರಹಿಸಿದರು. ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುನಿಗಳು ಹಣಕಾಸಿನ ವ್ಯವಹಾರ ಮಾಡಿದ್ದಾರೆ ಎಂದು ಪೊಲೀಸರು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದಾರೆ. ಈ ಮೂಲಕ ಜೈನ ಸಮುದಾಯಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನಿಸುತ್ತಿದ್ದಾರೆ. ಪ್ರಕರಣದ ತನಿಖೆ ಅನುಮಾನ ಮೂಡಿಸುವಂತಿದೆ. ಹಾಗಾಗಿ ಸಿಬಿಐಗೆ …
Read More »ಜೈನ ಮುನಿ ಕೊಲೆ ಪ್ರಕರಣ: ಇಬ್ಬರು ಆರೋಪಿಗಳನ್ನು ವಶಕ್ಕೆ
ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿಯ ನಂದಿ ಪರ್ವತ ಜೈನ ಆಶ್ರಮದ ಜೈನ ಮುನಿ ಕಾಮ ಕುಮಾರ ನಂದಿ ಮಹಾರಾಜರ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಬೆಳಗಾವಿ ಎಸ್ಪಿ ಡಾ ಸಂಜೀವ ಪಾಟೀಲ್ ಹೇಳಿದರು. ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟಕಬಾವಿ ಗ್ರಾಮದಲ್ಲಿ ಮಾಧ್ಯಮಮಗಳ ಜೊತೆ ಮಾತನಾಡಿದ ಅವರು, ರಾಯಭಾಗ ತಾಲೂಕು ಕಟಕಬಾವಿ ಗ್ರಾಮದ ನಿವಾಸಿ ನಾರಾಯಣ ಮಾಳಿ ಹಾಗೂ ಚಿಕ್ಕೋಡಿ ಪಟ್ಟಣದ ನಿವಾಸಿ …
Read More »ನಾಪತ್ತೆಯಾಗಿದ್ದ ಚಿಕ್ಕೋಡಿಯ ಜೈನಮುನಿ ಹತ್ಯೆ.. ವೈಯಕ್ತಿಕ ಕಾರಣಕ್ಕೆ ಕೊಲೆ : S.P.
ಚಿಕ್ಕೋಡಿ (ಬೆಳಗಾವಿ): ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಹಿರೇಕೋಡಿ ಆಶ್ರಮದ ಜೈನ ಮುನಿ ಕೊಲೆಗೀಡಾಗಿದ್ದಾರೆ. ಕಳೆದ ಬುಧವಾರ ಹಿರೇಕೋಡಿ ಆಶ್ರಮದ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರು ನಾಪತ್ತೆಯಾಗಿದ್ದರು. ರಾಯಬಾಗ ತಾಲೂಕಿನ ಕಟಕಬಾವಿ ಗ್ರಾಮದಲ್ಲಿ ಮಹಾರಾಜರು ಹತ್ಯೆಗೀಡಾಗಿರುವುದು ಪೊಲೀಸರಿಗೆ ತಿಳಿದಿದೆ. ಸ್ಥಳಕ್ಕೆ ಬೆಳಗಾವಿ ಎಸ್ಪಿ ಸಂಜೀವ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಎಸ್ಪಿ ಸಂಜೀವ್ ಪಾಟೀಲ್, ಬುಧವಾರ ರಾತ್ರಿಯಿಂದ ಸ್ವಾಮೀಜಿ ಕಾಣೆಯಾಗಿರುವ ಬಗ್ಗೆ ಶುಕ್ರವಾರ ಭಕ್ತರು …
Read More »ಅಕ್ರಮವಾಗಿ ರಾತ್ರೋರಾತ್ರಿ ಮರಳು ಗಣಿಗಾರಿಕೆ ನಡೆಸುತ್ತಿರುವ ಅಡ್ಡೆಗಳ ಮೇಲೆ ಅಥಣಿ ಪೊಲೀಸರ ದಾಳಿ
ಚಿಕ್ಕೋಡಿ (ಬೆಳಗಾವಿ): ಕೃಷ್ಣಾ ನದಿಯಲ್ಲಿ ಅಕ್ರಮವಾಗಿ ರಾತ್ರೋರಾತ್ರಿ ಮರಳು ಗಣಿಗಾರಿಕೆ ನಡೆಸುತ್ತಿರುವ ಅಡ್ಡೆಗಳ ಮೇಲೆ ಅಥಣಿ ಪೊಲೀಸರು ದಾಳಿ ನಡೆಸಿ 30ಕ್ಕೂ ಹೆಚ್ಚು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಮಳೆಯಿಲ್ಲದೇ ಬತ್ತಿ ಹೋಗಿರುವ ನದಿಯೊಡಲಿನ ಅಲ್ಲಲ್ಲಿ ಮರಳು ಗಣಿಗಾರಿಕೆ ನಡೆಯುತ್ತಿದೆ. ಸರ್ಕಾರ ಇದಕ್ಕಾಗಿ ನಿಯಮಗಳನ್ನು ಮಾಡಿದ್ದರೂ ಗುತ್ತಿಗೆ ಪಡೆಯದೇ ಅಧಿಕಾರಿಗಳಿಗೆ ತಿಳಿಯದಂತೆ ದಂದೆ ನಡೆಸುತ್ತಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅಥಣಿ ತಾಲೂಕಿನ ಮಹಿಷವಾಡಗಿ ಗ್ರಾಮದ ಸಮೀಪದಲ್ಲಿ ಹರಿಯುವ ಕೃಷ್ಣಾ ನದಿಯಲ್ಲಿ ರಾತ್ರಿ ಅಕ್ರಮವಾಗಿ ಮರಳು …
Read More »12 ವರ್ಷಗಳ ನಂತರ ಗೋಚರಿಸಿದ ಪುರಾತನ ದೇವಾಲಯ
ಚಿಕ್ಕೋಡಿ (ಬೆಳಗಾವಿ): ಜೂನ್ ತಿಂಗಳು ಮುಗಿದರೂ ಮಳೆ ಮಾತ್ರ ಆಗುವ ಲಕ್ಷಣಗಳು ಕಾಣುತ್ತಿಲ್ಲ. ಈಗಾಗಲೇ ಬರದ ಛಾಯೆ ಆವರಿಸಿ ಹಲವು ಜಿಲ್ಲೆಯಲ್ಲಿ ಬಹುತೇಕ ನದಿಗಳು ಬತ್ತಿ ಹೋಗಿವೆ. ಮಳೆಯಾಗದೇ ಇರುವುದರಿಂದ ಉತ್ತರ ಕರ್ನಾಟಕದ ಬಹುತೇಕ ಡ್ಯಾಂಗಳು ಖಾಲಿಖಾಲಿಯಾಗಿ ಗೋಚರಿಸುತ್ತಿವೆ. ಹಾಗೇ ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಂ ನೀರು ಖಾಲಿಯಾಗಿದ್ದು, ಬರೋಬ್ಬರಿ 12 ವರ್ಷಗಳ ನಂತರ ಪುರಾತನ ದೇವಸ್ಥಾನವೊಂದು ದರ್ಶನಕ್ಕೆ ಮುಕ್ತವಾಗಿದೆ. ವಿಠ್ಠಲ ದೇವಾಲಯ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಂ …
Read More »ಇಂಡಿಯಾ ಬುಕ್ ಆಫ್ ರೆಕಾರ್ಡ್ ಸೇರಿದ ಅಥಣಿಯ 2 ವರ್ಷದ ಪುಟಾಣಿಯ ವಿಶೇಷ ಜ್ಞಾಪಕಶಕ್ತಿ!
ಚಿಕ್ಕೋಡಿ : ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎಂಬ ಗಾದೆ ಮಾತಿದೆ. ಅದರಂತೆ ಇಲ್ಲೊಬ್ಬ ಬಾಲಕನ ಜ್ಞಾಪಕಶಕ್ತಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ನಿಂದ ಪ್ರಶಸ್ತಿ ದೊರೆತಿದೆ. ಅಂದಹಾಗೆ ಇದು ಅಥಣಿಯ ಪುಟಾಣಿಯ ಸಾಧನೆ. 2 ವರ್ಷ 9 ತಿಂಗಳಿನ ಸ್ಕಂದ ಗುರುರಾಜ ಮಳಸಿದ್ದನವರ ಎಂಬ ಬಾಲಕ ವಾಹನ, ಬಣ್ಣ, ಸಂಕೇತಗಳನ್ನು ಗುರುತಿಸುವುದು, ರೈಮ್ಸ್, ಶ್ಲೋಕ ಹೇಳುವುದರ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ನಲ್ಲಿ ದಾಖಲೆ ಮಾಡಿ ಚಿಕ್ಕ ವಯಸ್ಸಿನಲ್ಲೇ ಪ್ರತಿಷ್ಟಿತ ಪ್ರಶಸ್ತಿ …
Read More »ಕಾಗವಾಡದಲ್ಲಿ ಭೀಕರ ರಸ್ತೆ ಅಪಘಾತ ಓರ್ವ ಸಾವು, 11 ಜನರಿಗೆ ಗಾಯ
ಚಿಕ್ಕೋಡಿ : ಆಟೋ ರಿಕ್ಷಾ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ಇನ್ನುಳಿದ 11 ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಸಮೀಪದಲ್ಲಿ ಅಪಘಾತ ಸಂಭವಿಸಿದೆ. ಆಟೋ ಪ್ರಯಾಣಿಕ ವಿನೋದ ಕಾಂಬಳೆ (20) ಮೃತರು. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ: ಉಗಾರ ಗ್ರಾಮದಿಂದ ಐನಾಪುರ ಗ್ರಾಮಕ್ಕೆ ತೆರಳುತಿದ್ದ ಪ್ಯಾಸೆಂಜರ್ ಆಟೋದಲ್ಲಿ ಒಟ್ಟು 12 ಜನ …
Read More »ಕಾಂಗ್ರೆಸ್ನವರು ಹತ್ತಲ್ಲ 15 ಕೆ.ಜಿ ಅಕ್ಕಿ ಕೊಡಬೇಕು: ಶಶಿಕಲಾ ಜೊಲ್ಲೆ
ಚಿಕ್ಕೋಡಿ (ಬೆಳಗಾವಿ): ಕಾಂಗ್ರೆಸ್ ನಾಯಕರು ಚುನಾವಣೆಯ ಸಂದರ್ಭದಲ್ಲಿ ಬಿಪಿಎಲ್ ಕಾರ್ಡ್ದಾರರ ಪ್ರತಿಯೊಬ್ಬರಿಗೆ 10 ಕೆಜಿ ಅಕ್ಕಿಯನ್ನು ವಿತರಣೆ ಮಾಡಲಾಗುವುದೆಂದು ಗ್ಯಾರಂಟಿ ಕಾರ್ಡ್ಗಳನ್ನು ನೀಡಿದ್ದಾರೆ. ಆದರೆ ಆ ಭರವಸೆಗಳನ್ನು ಅವರಿಗೆ ಈಡೇರಿಸಲು ಆಗುತ್ತಿಲ್ಲ. ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ಮೇಲೆ ಆರೋಪ ಹಾಕಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಈ ಪ್ರತಿಭಟನೆ ಖಂಡಿಸುತ್ತೇವೆ ಎಂದು ಮಾಜಿ ಸಚಿವೆ ಹಾಗೂ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು. ಬೆಳಗಾವಿ ಜಿಲ್ಲೆಯ …
Read More »