ಚಿಕ್ಕೋಡಿ: ಹೃದಯಾಘಾತದಿಂದ ಸಾವನ್ನಪ್ಪಿದ ಉಮೇಶ್ ಕತ್ತಿ(Umesh Katti) ಸಮಾಧಿಗೆ ಕುಟುಂಬಸ್ಥರು ಪೂಜೆ ನೆರವೇರಿಸಿ ಅಂತಿಮ ವಿಧಿ ವಿಧಾನವನ್ನು ಇಂದು ಪೂರೈಸಿದರು. ನಿನ್ನೆ ಬೆಳಗಾವಿ(Belagavi) ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿರುವ ಗದ್ದೆಯಲ್ಲಿ ತಂದೆ ತಾಯಿ ಸಮಾಧಿ ಪಕ್ಕವೇ ಅವರ ಅಂತ್ಯಕ್ರಿಯೆ ನಡೆದಿತ್ತು. ಸಮಾಧಿಗೆ ತೆರಳಿ ಪುತ್ರ ನಿಖಿಲ್ ಕತ್ತಿ, ಅಳಿಯ ನಿತಿನ್ ಪ್ರಭುದೇವ ಅವರು ಪುರೋಹಿತರ ಮಾರ್ಗದರ್ಶನದಂತೆ ಪೂಜೆ ಸಲ್ಲಿಸಿದರು. ಸಮಾಧಿಗೆ ಪೂಜೆ ಮಾಡಿ ಸಮಾಧಿಯ ಮೇಲೆ ಅವರಿಷ್ಟದ ತಿಂಡಿ, …
Read More »ರಾಯಬಾಗದಲ್ಲಿ ಚಲಿಸುತ್ತಿದ್ದ ರೈಲಿಗೆ ಸಿಲುಕಿದ ಹದಿನೈದು ಕುರಿಗಳು ಸ್ಥಳದಲ್ಲೇ ಸಾವು…!
ಚಿಕ್ಕೋಡಿ: ರೈಲು ಹಳಿಯಲ್ಲಿ ಹೋಗುತ್ತಿದ್ದ ಕುರಿಗಳ ಮೇಲೆ ರೈಲು ಹರಿದ ಪರಿಣಾಮ 15 ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಬೆಳಗಾವಿಯ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದ ರೈಲು ನಿಲ್ದಾಣದ ಹೊರವಲಯದಲ್ಲಿರುವ ರೈಲ್ವೆ ಗೇಟ್ ಬಳಿ ಅವಘಡ ಸಂಭವಿಸಿದೆ. ಚಿಂಚಲಿ ಪಟ್ಟಣದ ವಸಂತ ಜಾವೇದಾರ್ ಎಂಬುವವರಿಗೆ ಸೇರಿದ 15 ಕುರಿಗಳು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಕುರಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಘಟನೆಯಿಂದ …
Read More »ಪೊಲೀಸ್ ಎಂದು ನಂಬಿಸಿ ಮಹಿಳೆಯ ಚಿನ್ನಾಭರಣ ಎಗರಿಸಿದ್ದ ಆರೋಪಿ ಅಂದರ್
ಚಿಕ್ಕೋಡಿ: ತಾನು ಪೊಲೀಸ್ ಎಂದು ನಂಬಿಸಿ ಮಹಿಳೆಯ ಬಳಿ ಇದ್ದ ಚಿನ್ನಾಭರಣ ಎಗರಿಸಿದ್ದ ಆರೋಪಿಯನ್ನು ಸಂಕೇಶ್ವರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮಹಾರಾಷ್ಟ್ರದ ಸಾಂಗ್ಲಿಯ ಮಹಮ್ಮದ್ ಯೂಸುಫ್ ಇರಾನಿ ಎಂದು ಗುರುತಿಸಲಾಗಿದೆ. ಇತ್ತಿಚೆಗೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ವಿಜಯಲಕ್ಷ್ಮೀ ರಾಜು ಚೌಗಲೆ ಎಂಬ ಮಹಿಳೆಗೆ ತಾನು ಪೊಲೀಸ್ ಎಂದು ನಂಬಿಸಿ, ಬೇರೆ ಕಡೆ ಗಮನ ಸೆಳೆದು 1.5 ಲಕ್ಷ ರೂ. ಬೆಲೆಯ ಚಿನ್ನಾಭರಣ ಕದ್ದು ಪರಾರಿಯಾಗಿದ್ದ. ಪ್ರಕರಣ ದಾಖಲಿಸಿಕೊಂಡ …
Read More »ಲೋಕಕಲ್ಯಾಣಕ್ಕಾಗಿ 220 ಕಿ.ಮೀ. ಉರುಳು ಸೇವೆ ಮಾಡಿದ ಪಂಡರಪುರದ ವಿಠ್ಠಲನ ಭಕ್ತ
ಚಿಕ್ಕೋಡಿ: ಇಷ್ಟಾರ್ಥ ಸಿದ್ಧಿಗಾಗಿ ಭಕ್ತರು ದೇವಸ್ಥಾನಗಳಲ್ಲಿ ಉರುಳು ಸೇವೆ ಮಾಡೋದನ್ನ ಕೇಳಿದ್ದೀವಿ, ನೋಡಿದ್ದೀವಿ. ಅಷ್ಟೆ ಯಾಕೆ ಪಾದಯಾತ್ರೆ ಮೂಲಕ ತಮ್ಮ ಮನೆದೇವರ ಹರಕೆ ತೀರಿಸಿದವರನ್ನೂ ಸಹ ನೋಡಿರ್ತೀವಿ. ಆದರೆ ಇಲ್ಲೊಬ್ಬ ವಿಠ್ಠಲನ ಭಕ್ತ ಲೋಕಕಲ್ಯಾಣಕ್ಕಾಗಿ ಸುಮಾರು 220 ಕಿ.ಮೀ. ಉರುಳು ಸೇವೆ ಮಾಡಿ ಪಂಡರಪುರದ ವಿಠ್ಠಲನ ಕೃಪೆಗೆ ಪಾತ್ರನಾಗಿದ್ದಾನೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬೇವನೂರು ಗ್ರಾಮದ ನಿವಾಸಿ ಶಹಾಜೀ ಜಾಧವ್ ಉರುಳು ಸೇವೆ ಸಲ್ಲಿಸಿದ ಭಕ್ತ. ಶಹಾಜೀ ಅಥಣಿ ತಾಲೂಕಿನ …
Read More »ಬಸವೇಶ್ವರ ಜಾತ್ರಾಮಹೋತ್ಸವ ಅಂಗವಾಗಿ ಗ್ರಾಮದಲ್ಲಿ ಜನಮನ ಸೆಳೆದ ನಿಕಾಲಿ ಜಂಗಿ ಕುಸ್ತಿ
ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಬಸವೇಶ್ವರ ಜಾತ್ರಾಮಹೋತ್ಸವ ಅಂಗವಾಗಿ ನಿಕಾಲಿ ಜಂಗಿ ಕುಸ್ತಿಗಳನ್ನು ಆಯೋಜಿಸಲಾಗಿತ್ತು… ಕಳೆದ 2 ವರ್ಷಗಳಿಂದ ಕೊರೊನಾದಿಂದಾಗಿ ಸರಳವಾಗಿ ನಡೆದಿದ್ದ ಇಂಗಳಿ ಗ್ರಾಮದ ಬಸವೇಶ್ವರ ಜಾತ್ರಾಮಹೋತ್ಸವ ಈ ಬಾರಿ ಅದ್ದೂರಿಯಾಗಿ ಜರುಗಿತು .ಇನ್ನೂ ಜಾತ್ರಾಮಹೋತ್ಸವ ಅಂಗವಾಗಿ ನಿಕಾಲಿ ಜಂಗಿ ಕುಸ್ತಿಗಳನ್ನು ಆಯೋಜಿಸಲಾಗಿತ್ತು.ಇದರಲ್ಲಿ ಕರ್ನಾಟಕ, ಮಹಾರಾಷ್ಟ್ರದ, ಹರಿಯಾಣ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ಹೆಸರಾಂತ ಕುಸ್ತಿಪಟುಗಳು ಭಾಗಿಯಾಗಿದ್ದರು. ಈ ನಿಕಾಲಿ ಜಂಗಿ ಕುಸ್ತಿಗಳನ್ನು ನೋಡಲು ಶಾಸಕ ಗಣೇಶ ಹುಕ್ಕೇರಿ …
Read More »ರಸ್ತೆಅಗೆದು ಗ್ರಾಮಗಳಿಗೆ ಸಂಚಾರ ಬಂದ್ ಮಾಡಿದ್ದ ಬಿಜೆಪಿ ಮುಖಂಡನ ವಿರುದ್ಧ ಸಾರ್ವಜನಿಕರ ಆಕ್ರೋಶ
ಚಿಕ್ಕೋಡಿ: ತನ್ನ ಜಮೀನಿನಲ್ಲಿ ಕಾಲುವೆ ನೀರು ಬರುತ್ತಿದೆ ಎನ್ನುವ ಕಾರಣಕ್ಕೆ ರಸ್ತೆಯನ್ನು ಅಗೆದು ಎರಡು ಗ್ರಾಮಗಳಿಗೆ ಸಂಚಾರ ಬಂದ್ ಮಾಡಿದ್ದ ಬಿಜೆಪಿ ಮುಖಂಡನೋರ್ವನ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶೇಗುಣಶಿ – ಯಬರಟ್ಟಿ ರಸ್ತೆಯ ಪಕ್ಕದ ತನ್ನ ಗದ್ದೆಯಲ್ಲಿ ನೀರು ನಿಲ್ಲುತ್ತೆ ಎನ್ನುವ ಕಾರಣಕ್ಕೆ ಬಿಜೆಪಿ ಮುಖಂಡ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ತಮ್ಮಣ್ಣ ತೇಲಿ ಎಂಬಾತ ಸರ್ಕಾರದ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ರಸ್ತೆಯನ್ನೆ …
Read More »ಚಿಕ್ಕೋಡಿ-ಸದಲಗಾ ಕ್ಷೇತ್ರದಿಂದ ಪವನ ರಮೇಶ ಕತ್ತಿ ಸ್ಪರ್ಧೆ?
ಚಿಕ್ಕೋಡಿ: ಬಿಜೆಪಿ ಪಕ್ಷದ ವರಿಷ್ಟರು. ನಮ್ಮ ಮನೆತನದ ಹಿರಿಯರು ಮತ್ತು ಸಚಿವರಾದ ಉಮೇಶ ಕತ್ತಿ ಮತ್ತು ನಮ್ಮ ತಂದೆಯವರಾದ ರಮೇಶ ಕತ್ತಿ ಒಪ್ಪಿಗೆ ನೀಡಿದರೆ ಚಿಕ್ಕೋಡಿ-ಸದಲಗಾ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಉತ್ಸುಕತೆ ಇದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಪವನ ರಮೇಶ ಕತ್ತಿ ಹೇಳಿದರು. ಚಿಕ್ಕೋಡಿ ತಾಲೂಕಿನ ಕಬ್ಬೂರ ಪಟ್ಟಣದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಅವರು ಮಾತನಾಡಿ, ಎಲ್ಲಾ ಕಡೆ ನಮ್ಮ ಅಭಿಮಾನಿಗಳು ಇದ್ದಾರೆ. ಅವರೆಲ್ಲ ಸ್ಪರ್ಧೆ ಮಾಡಬೇಕೆಂದು …
Read More »ರಾಯಬಾಗ ಕುಡಿಯುವ ನೀರಿನ ಯೋಜನೆಗೆ 237 ಕೋಟಿ ರೂ: ಶಾಸಕ ಐಹೊಳೆ ಸಂತಸ
ಚಿಕ್ಕೋಡಿ: ರಾಯಬಾಗ ಕ್ಷೇತ್ರ ವ್ಯಾಪ್ತಿಯ ರಾಯಬಾಗ ತಾಲೂಕಿನಲ್ಲಿಯ ಕುಡಿಯುವ ನೀರಿನ ಸಮಸ್ಯೆ ದೂರು ಮಾಡಲು ರಾಜ್ಯ ಸರ್ಕಾರ 237 ಕೋಟಿ ರೂ ವಿಶೇಷ ಅನುದಾನ ಮಂಜೂರು ಮಾಡಿದೆ. ಶೀಘ್ರವಾಗಿ ಟೆಂಡರ್ ಕರೆದು ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅನುಷ್ಠಾನ ಮಾಡಲಾಗುತ್ತದೆ ಎಂದು ಶಾಸಕ ದುರ್ಯೋಧನ ಐಹೊಳೆ ಹೇಳಿದರು. ಚಿಕ್ಕೋಡಿ ತಾಲೂಕಿನ ವಿಜಯನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ರಾಯಬಾಗ ತಾಲೂಕಿನ ಮಡ್ಡಿ ಭಾಗದಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ …
Read More »ಸ್ವಾತಂತ್ರ್ಯ ದಿನಾಚರಣೆ; ಅಂಬೇಡ್ಕರ್ ಭಾವಚಿತ್ರ ಮರೆತ ತಾಲೂಕಾಡಳಿತ; ದಲಿತ ಸಂಘನೆಗಳ ಆಕ್ರೋಶ
ಚಿಕ್ಕೋಡಿ: ಸ್ವಾತಂತ್ರ್ಯ ಅಮೃತ ಮಹೋತ್ಸವ ದಿನಾಚರಣೆಯ ವೇಳೆ ಚಿಕ್ಕೋಡಿ ತಾಲೂಕಾಡಳಿತ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರ ಮರೆತಿದ್ದ ಹಿನ್ನಲೆ ದಲಿತ ಸಂಘಟನೆಗಳು ತಾಲೂಕಾಡಳಿತ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಚಿಕ್ಕೋಡಿ ನಗರದ ತಾಲೂಕು ಕ್ರೀಡಾಂಗಣದಲ್ಲಿ ನಡೆದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ದಿನಾಚರಣೆ ಸಂದರ್ಭ ಚಿಕ್ಕೋಡಿ ತಾಲೂಕಾಡಳಿತ ಮಹಾತ್ಮಾ ಗಾಂಧೀಜಿಯವರ ಒಂದೇ ಪೋಟೋ ಇಟ್ಟು ಯಡವಟ್ಟು ಮಾಡಿಕೊಂಡಿದೆ. ಡಾ. ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಬಿಟ್ಟು ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ …
Read More »ಮಹಾರಾಷ್ಟ್ರ ಮತ್ತು ಕರ್ನಾಟಕದಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ್
ಚಿಕ್ಕೋಡಿ: ಮಹಾರಾಷ್ಟ್ರ ಮತ್ತು ಕರ್ನಾಟಕದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿ ಅವರಿಂದ 24 ಲಕ್ಷ ರೂ. ಮೌಲ್ಯದ 41ಬೈಕ್ಗಳನ್ನು ನಿಪ್ಪಾಣಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತ ನಾಲ್ವರು ಆರೋಪಿಗಳು ನಿಪ್ಪಾಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ಕಳ್ಳತನ ವೃತ್ತಿಗೆ ಇಳಿದಿದ್ದರು. ಬೈಕ್ ಕಳ್ಳತನವಾಗಿರುವ ಬಗ್ಗೆ ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೇಸ್ ದಾಖಲಿಸಿಕೊಂಡ ಪೊಲೀಸರು, ಸಿಪಿಐ ಸಂಗಮೇಶ ಶಿವಯೋಗಿ …
Read More »