Breaking News

ಚಿಕ್ಕೋಡಿ

ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ ಯುವಕರಿಬ್ಬರ ಕುತ್ತಿಗೆ ಭಾಗದ ಮೇಲೆ ಬ್ಲೇಡ್‌ನಿಂದ ಹಲ್ಲೆ

ಸಂಕೇಶ್ವರ : ಪಟ್ಟಣದಲ್ಲಿ ಶುಕ್ರವಾರ ಮಧ್ಯಾಹ್ನ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ, ವ್ಯಕ್ತಿಯೊಬ್ಬ ಯುವಕರಿಬ್ಬರ ಕುತ್ತಿಗೆ ಭಾಗದ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿದ್ದು, ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ.   ಇಲ್ಲಿನ ವಡ್ಡರ ಓಣಿಯ ನಿವಾಸಿಗಳಾದ ಸಂತೋಷ ವಡ್ಡರ ಹಾಗೂ ಇವರ ಸಹೋದರ ಲಕ್ಷ್ಮಣ ವಡ್ಡರ ಗಾಯಗೊಂಡವರು. ಆರೋಪಿ ದಿಲೀಪ್‌ ಎಂಬಾತ ಚಪ್ಪಲಿಯ ಚರ್ಮ ಕತ್ತರಿಸುವ ಬ್ಲೇಡ್‌ನಿಂದ ಹಲ್ಲೆ ಮಾಡಿದ್ದಾನೆ. ಜೂಜಾಟವೇ ಗಲಾಟೆಗೆ ಕಾರಣವಾಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ದಿಲೀಪ್‌ಗೆ …

Read More »

ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಎಲ್ಲೆಂದರಲ್ಲಿ ತಗ್ಗು ,ಅಪಾಯಕ್ಕೆ ಆಹ್ವಾನ

ಬೆಳಗಾವಿ: ಮತ್ತೊಂದು ಮಳೆಗಾಲ ಬಂದರೂ ಹಳ್ಳಿಗಳ ಸಂಪರ್ಕ ರಸ್ತೆಗಳು ಮಾತ್ರ ಇನ್ನೂ ದುರಸ್ತಿ ಕಂಡಿಲ್ಲ. ಕಳೆದ ಬಾರಿಯ ಅತಿವೃಷ್ಟಿ ಹಾಗೂ ಪ್ರವಾಹ ಪ್ರಭಾವದಿಂದ ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಎಲ್ಲೆಂದರಲ್ಲಿ ತಗ್ಗು ಬಿದ್ದಿದ್ದವು. ಅವುಗಳಲ್ಲಿ ಕೆಲವನ್ನು ತೇಪೆ ಹಚ್ಚಿ ದುರಸ್ತಿ ಮಾಡಲಾಗಿದೆ. ಮತ್ತೆ ಕೆಲವು ಇನ್ನೂ ಹಾಗೇ ಇವೆ. ಹೀಗಾಗಿ, ಹಳ್ಳಿ ಮತ್ತು ನಗರಗಳ ಮಧ್ಯೆ ಸಂಚಾರ ಕೊಂಡಿಯಾದ ರಸ್ತೆಗಳೇ ಈಗ ಸಂಚಕಾರ ತರುವಂತಾಗಿವೆ. ಅತಿಯಾಗಿ ಮಳೆ ಬಿದ್ದ ಬೆಳಗಾವಿ ತಾಲ್ಲೂಕು, …

Read More »

ತನ್ನ ಹೇಳಿಕೆಯಿಂದ U ಟರ್ನ್ ಹೊಡೆದ ಕತ್ತಿ

ಚಿಕ್ಕೋಡಿ:2024ರ ಬಳಿಕ ಕರ್ನಾಟಕದಲ್ಲಿ ಎರಡು ರಾಜ್ಯ ಹಾಗೂ ದೇಶದಲ್ಲಿ 50 ರಾಜ್ಯಗಳು ನಿರ್ಮಾಣ ಆಗುತ್ತವೆ ಎಂದು ಹೇಳಿಕೆ ನೀಡಿದ್ದ ಸಚಿವ ಸಚಿವ ಉಮೇಶ ಕತ್ತಿ ಮತ್ತೆ ತಮ್ಮ ಹೇಳಿಕೆಯನ್ನು ಪುನರುಚ್ಚರಿಸಿದ್ದಾರೆ. ಪದೇ ಪದೇ ಉತ್ತರಕರ್ನಾಟಕ ಪ್ರತ್ಯೇಕ ರಾಜ್ಯ ಆಗುತ್ತದೆ ಎಂದು ಹೇಳಿಕೆ ನೀಡುತ್ತಲೇ ಬಂದಿದ್ದ ಉಮೇಶ ಕತ್ತಿ ಇದೀಗ ಇನ್ನು ಒಂದು ಹೆಜ್ಜೆ ಮುಂದೆ ಹೋಗಿದ್ದು, ಭಾನುವಾರ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮ ರಾಜ್ಯ ಸೇರಿ …

Read More »

ಯಡೂರದಿಂದ ಶ್ರಿಶೈಲ್’ದವರೆಗೆ ಸುಮಾರು 560 ಕಿ.ಮೀದವರೆಗೆ ಸಸಿ ನೆಡುವ ಕಾರ್ಯಕ್ರಮಕ್ಕೆ ಸಚಿವ ಉಮೇಶ ಕತ್ತಿ ಚಾಲನೆಯನ್ನು ‌ನೀಡಿದರು…

ಶ್ರೀಶೈಲ್ ಜಗದ್ಗುರಗಳ ದ್ವಾದಶ ಪೀಠಾರೋಹಣ ಮಹೋತ್ಸವ ಹಾಗೂ ಜನ್ಮ ಸುವರ್ಣ ಮಹೋತ್ಸವ ಅಂಗವಾಗಿ ಯಡೂರದಿಂದ ಶ್ರಿಶೈಲ್’ದವರೆಗೆ ಸುಮಾರು 560 ಕಿ.ಮೀದವರೆಗೆ ಸಸಿ ನೆಡುವ ಕಾರ್ಯಕ್ರಮಕ್ಕೆ ಸಚಿವ ಉಮೇಶ ಕತ್ತಿ ಚಾಲನೆಯನ್ನು ‌ನೀಡಿದರು… ಚಿಕ್ಕೋಡಿ ತಾಲೂಕಿನ ಯಡೂರಿನ ವೀರಭದ್ರೇಶ್ವರ ದೇವಸ್ಥಾನದ ಕಾಡಸಿದ್ದೇಶ್ವರ ಕಲ್ಯಾಣಭವನದ ಆವರಣದಲ್ಲಿ ಸಸಿ‌ ನೆಡುವ ಕಾರ್ಯಕ್ರಮಕ್ಕೆ ಶ್ರೀಶೈಲ ಜದ್ಗುರುಗಳು ಹಾಗೂ ನಿಡಸೋಸಿಯ ಪಂಚಮಶಿವಲಿಂಗೇಶ್ವರ ಸ್ವಾಮೀಜಿಯವರ ದಿವ್ಯಸಾನಿಧ್ಯದಲ್ಲಿ ಸಚಿವ ಉಮೇಶ ಕತ್ತಿ ಚಾಲನೆಯನ್ನು ನೀಡಿದರು..ನಂತರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಚಿವ …

Read More »

ಅಗೆದಷ್ಟೂ, ಬಗೆದಷ್ಟೂ ಪತ್ತೆಯಾಗ್ತಿವೆ ಭ್ರೂಣಗಳ ಚರಿತ್ರೆ- ಬೆಳಗಾವಿಯ ಆಸ್ಪತ್ರೆಗಳ ಭಯಾನಕ ಕಥೆಗಳು ಬೆಳಕಿಗೆ..!

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯಲ್ಲಿ ಜೂನ್. 23ರ ರಾತ್ರಿ ಐದು ಬಾಟಲ್‌ಗಳಲ್ಲಿ ಏಳು ಭ್ರೂಣಗಳು ಪತ್ತೆಯಾಗಿದ್ದು, ಜನರಲ್ಲಿ ಭಾರಿ ಆತಂಕ ಮೂಡಿಸಿದ್ದವು. ಕೊನೆಗೆ ತನಿಖೆ ಕೈಗೊಂಡಿದ್ದ ಅಧಿಕಾರಿಗಳಿಗೆ ಇವು ಮೂಡಲಗಿ ಪಟ್ಟಣದಲ್ಲಿರುವ ವೆಂಕಟೇಶ್ ಹೆರಿಗೆ ಆಸ್ಪತ್ರೆ ಮತ್ತು ಸ್ಕ್ಯಾನಿಂಗ್ ಸೆಂಟರ್​ಗಳ ಕೃತ್ಯ ಎನ್ನುವುದು ತಿಳಿದಿತ್ತು. ಮೂರು ವರ್ಷಗಳಿಂದ ಅಬಾಷನ್ ಮಾಡಿದ್ದ ಏಳು ಭ್ರೂಣಗಳು ಇವಾಗಿದ್ದು, ಪೊಲೀಸರ ದಾಳಿ ಭೀತಿಯಿಂದ ರಾತ್ರೋರಾತ್ರಿ ಏಳು ಭ್ರೂಣಗಳನ್ನು ಹಳ್ಳಕ್ಕೆ ಎಸೆದಿದ್ದೆವು ಎಂದು ತಪ್ಪೊಪ್ಪಿಕೊಂಡಿದ್ದರು ಸಿಬ್ಬಂದಿ. ಇದರ ಬೆನ್ನಲ್ಲೇ …

Read More »

ಎತ್ತಿನ ಮೇಲೆ ದಿವಂಗತ ಅಪ್ಪು ಚಿತ್ರ ಬಿಡಿಸಿ ವಿಶೇಷ ರೀತಿಯಲ್ಲಿ ಕಾರ ಹುಣ್ಣಿಮೆ ಆಚರಣೆ

ಕಾರ ಹುಣ್ಣಿಮೆ ಎನ್ನುವುದು ಉತ್ತರ ಕರ್ನಾಟಕದ ರೈತರಿಗೆ ವಿಷೇಶ ಹಬ್ಬವಾಗಿದೆ. ಈ ಹಬ್ಬದಂದು ರೈತರು ತಾವು ಸಾಕಿರುವ ಎತ್ತುಗಳನ್ನು ವಿಶೇಷ ರೀತಿಯಲ್ಲಿ ಬಣ್ಣಗಳಿಂದ ಅಲಂಕಾರ ಮಾಡಿ ಮೆರವಣಿಗೆ ಮಾಡುವುದು ವಿಶೇಷವಾಗಿದೆ. ಇಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಶಮನೇವಾಡಿಯಲ್ಲಿ ಕಾರು ಹುಣ್ಣಿಮೆ ನಿಮಿತ್ಯ ಗ್ರಾಮದ ಯುವಕ ಪ್ರದೀಪ್ ಖೋತ ಇವರ ಎತ್ತುಗಳ ಮೇಲೆ ದಿವಂಗತ ಪುನೀತ್ ರಾಜಕುಮಾರ್ ಇವರ ಭಾವಚಿತ್ರ ಬಿಡಿಸುವ ಮೂಲಕ ವಿಶೇಷವಾಗಿ ಆಚರಣೆ ಮಾಡಿದ್ದಾರೆ. ಪುನೀತ್ ರಾಜಕುಮಾರ …

Read More »

ಲಾರಿ ಚಕ್ರಕ್ಕೆ ಸಿಲುಕಿದ ಅರ್ಧ ದೇಹ : ನರಳಾಡಿ..ನರಳಾಡಿ ಸತ್ತ ಬಾಲಕ..

ಚಿಕ್ಕೋಡಿ (ಬೆಳಗಾವಿ): ಆ ಬಾಲಕನ ದೇಹದ ಸೊಂಟದವರೆಗಿನ ಅರ್ಧ ಭಾಗ ಹೊರಗಿದ್ರೆ..ಉಳಿದ ಅರ್ಧ ಭಾಗ ಚರಂಡಿ ಹಾಗೂ ಲಾರಿ ಚಕ್ರದ ನಡುವೆ ಸಿಲುಕಿತ್ತು..ಹೀಗಾಗಿ ಆ ಬಾಲಕ ನರಳಾಡುತ್ತಿದ್ದ..ಕೊನೆಗೆ ಲಾರಿ ಚಕ್ರಕ್ಕೆ ಸಿಲುಕಿದ್ದ ಆ ಬಾಲಕನನ್ನು ಅದ್ಯಾಗೋ ರಕ್ಷಿಸಲಾಯಿತು.ಆದ್ರೂ ತೀವ್ರವಾಗಿ ಗಾಯಗೊಂಡಿದ್ದ ಆ ಬಾಲಕ ಚಿಕಿತ್ಸೆ ಫಲಕಾರಿಯಾಗದೇ ಸಾವು ಕಂಡಿದ್ದಾನೆ.   ಅಂದ ಹಾಗೇ ಇಂತಹ ಧಾರುಣ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಗೀರಗಾಂವ ಗ್ರಾಮದಲ್ಲಿ ನಡೆದಿದೆ. ಸದ್ಯ ಚಿಕ್ಕೋಡಿ …

Read More »

ಲಾರಿ ಚಕ್ರಕ್ಕೆ ಸಿಲುಕಿ ಮಹಿಳೆ ದೇಹ ಛಿದ್ರ ಛಿದ್ರ

ಚಿಕ್ಕೋಡಿ (ಬೆಳಗಾವಿ ) :ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮಹಿಳೆ ಸ್ಥಳದಲ್ಲೇ ಸಾವು ಕಂಡ ಘಟನೆ ಚಿಕ್ಕೋಡಿ ಬೆಳಗಾವಿ ರಸ್ತೆಯ ಜೈನಾಪುರ ಬಳಿ ನಡೆದಿದೆ. ಸದ್ಯ ಮೃತ ಮಹಿಳೆಯ ಹೆಸರು ತಿಳಿದು ಬಂದಿಲ್ಲ.ಅಲ್ಲದೆ,ಇದೇ ಅಪಘಾತದಲ್ಲಿ ದ್ವಿಚಕ್ರ ವಾಹನದ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.   ಅಂದ ಹಾಗೇ ಚಿಕ್ಕೋಡಿ ಬೆಳಗಾವಿ ರಸ್ತೆಯ ಜೈನಾಪುರ ಬಳಿ ದ್ವಿಚಕ್ರ ವಾಹನದ …

Read More »

ವಿಷಕಾರಿ ಹಾವು ಕಚ್ಚಿ ನಾಲ್ಕು ವರ್ಷದ ಮಗು ಸಾವು

ಚಿಕ್ಕೋಡಿ(ಬೆಳಗಾವಿ): ವಿಷಕಾರಿ ಹಾವು ಕಚ್ಚಿ ಮಗುವೊಂದು ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯರನಾಳ ಗ್ರಾಮದಲ್ಲಿ ನಡೆದಿದೆ.   ಇಶಾಂತ್ ರಾಘವೇಂದ್ರ ಕಾಂಬಳೆ (04) ಮೃತ ಮಗು. ಯರನಾಳ ಗ್ರಾಮದಲ್ಲಿ ನಿನ್ನೆ ರಾತ್ರಿ ಮಗು ಮನೆಯಲ್ಲಿ ಮಲಗಿದ್ದಾಗ ವಿಷಪೂರಿತ ಹಾವು ಕಚ್ಚಿದ ಪರಿಣಾಮ ಮಗು ಸಾವನ್ನಪ್ಪಿದೆ. ಹಾವು ಕಚ್ಚಿದ ಪರಿಣಾಮ ಮಗು ಅಳಲು ಆರಂಭಿಸಿದಾಗ ಮಗುವನ್ನು ಬೆಳಗಾವಿಯ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ …

Read More »

ನನ್ನ ಅಣ್ಣಂದಿರಿಗೆ ಇನ್ನೂ ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲ. ನನಗೂ ಹೆಣ್ಣು ಸಿಗುವುದಿಲ್ಲ ಎಂದು ರೈತ ಆತ್ಮಹತ್ಯೆ

ಚಿಕ್ಕೋಡಿ: ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗಲಿಲ್ಲ ಎಂಬ ಕಾರಣಕ್ಕೆ ಯುವ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕರಗುಪ್ಪಿ ಯಲ್ಲಾಪುರ ಗ್ರಾಮದಲ್ಲಿ ನಡೆದಿದೆ. ತನ್ನ ಜಮೀನಿನ ಮಾವಿನ ಮರಕ್ಕೆ ನೇಣು ಹಾಕಿಕೊಂಡು ರಮೇಶ್ ಬಾಳಪ್ಪ ಪಾಟೀಲ್ (25) ಸಾವನ್ನಪ್ಪಿದ್ದಾನೆ. ಮನೆಯಲ್ಲಿ ತನ್ನ ಹಿರಿಯ ಇಬ್ಬರು ಸಹೋದರರು ಬಹುದಿನಗಳಿಂದ ಮದುವೆ ಮಾಡಿಕೊಳ್ಳಲು ಹೆಣ್ಣು ಹುಡುಕುತ್ತಿದ್ದರು ಅವರಿಗೆ ಇನ್ನೂ ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲ. ನನ್ನ ಅಣ್ಣಂದಿರಿಗೆ ಇನ್ನೂ ಮದುವೆ …

Read More »