Breaking News

ಚಿಕ್ಕೋಡಿ

ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನ ಎಂದೂ ಒಪ್ಪಲ್ಲ, ಬಿಜೆಪಿಗೆ ಭ್ರಷ್ಟ ಎಂಬ ಲೇಬಲ್‌ ಕೊಟ್ಟಿದ್ದೇ ಬಿವೈ ವಿಜಯೇಂದ್ರ:ರಮೇಶ್ ಜಾರಕಿಹೊಳಿ

ಚಿಕ್ಕೋಡಿ: ಬಿಜೆಪಿ ( BJP) ನಾಯಕರ ಜೊತೆ ಆರ್‌ಎಸ್‌ಎಸ್ (RSS) ನಡೆಸಿದ ಸಂಘಟನಾ ಸಭೆ ವಿಚಾರವಾಗಿ ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi) ಪ್ರತಿಕ್ರಿಯೆ ನೀಡಿದ್ದು, ಈ ಸಂದರ್ಭದಲ್ಲಿ ಸ್ವಪಕ್ಷೀಯ ನಾಯಕರ ವಿರುದ್ಧವೇ ಗುಡುಗಿದ್ದಾರೆ. ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra) ವಿರುದ್ದ ಮತ್ತೊಮ್ಮೆ ಗುಡುಗಿರುವ ರಮೇಶ್ ಜಾರಕಿಹೊಳಿ, ವಿಜಯೇಂದ್ರನನ್ನು ರಾಜ್ಯಾಧ್ಯಕ್ಷ (BJP State President) ಎಂದು ಒಪ್ಪಿಲ್ಲ ಒಪ್ಪುವುದೂ ಇಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.   ವಿಜಯೇಂದ್ರವ ರಾಜ್ಯಾಧ್ಯಕ್ಷ ಸ್ಥಾನ …

Read More »

ಜೆಸಿಬಿಗೆ ಸಿಲುಕಿ ಮೂರು ವರ್ಷದ ಬಾಲಕಿ ದಾರುಣ ಮೃತ್ಯು

ಚಿಕ್ಕೋಡಿ: ತಾಲೂಕಿನ ಕಬ್ಬೂರ ಪಟ್ಟಣದ ಹನುಮಾನ ನಗರದ ತೋಟದ ಹತ್ತಿರ ಪೈಪಲೈನ್ ಹರಿ ತೆಗಿಯುವಾಗ ಜೆಸಿಬಿಗೆ ಸಿಲುಕಿ 3 ವರ್ಷದ ಬಾಲಕಿ ಮೃತಪಟ್ಟ ಧಾರುಣ ಘಟನೆ ಸಂಭವಿಸಿದೆ. ಪಟ್ಟಣ ಪಂಚಾಯತಿ ವತಿಯಿಂದ ಜಲಕುಂಭ ಕಾಮಗಾರಿಯನ್ನು ರಮೇಶ ಕುಕನೂರ ಎಂಬುವರ ಮನೆ ಮುಂದುಗಡೆ ರಸ್ತೆಯ ಬದಿ ಪೈಪಲೈನ್ ಹರಿ ತೆಗೆಯುವಾಗ ಮನೆಯ ಹತ್ತಿರ ಆಟ ಆಡುತ್ತಿದ್ದ 3 ವರ್ಷದ ಬಾಲಕಿ ಭೂಮಿಕಾ ರಮೇಶ ಕುಕನೂರ ಜೆಸಿಬಿಗೆ ಸಿಲುಕಿ ಮೃತಪಟ್ಟಿದ್ದಾರೆ. ಈ ಘಟನೆಯಿಂದಾಗಿ ಮೃತ …

Read More »

171 ಶಾಲಾ ಕೊಠಡಿ ನಿರ್ಮಾಣ: ಹುಕ್ಕೇರಿ

ಚಿಕ್ಕೋಡಿ: ‘ಕಳೆದ ಎರಡು ವರ್ಷಗಳಲ್ಲಿ ವಾಯವ್ಯ ಶಿಕ್ಷಕರ ಮತಕ್ಷೇತ್ರದಲ್ಲಿ ₹30 ಕೋಟಿ ಮೊತ್ತದಲ್ಲಿ 171 ಶಾಲಾ ಕೊಠಡಿ, ತಲಾ ₹50 ಲಕ್ಷ ಅನುದಾನದಲ್ಲಿ 3 ಪಿಯು ಕಾಲೇಜು ಕಟ್ಟಡಗಳು ನಿರ್ಮಾಣವಾಗುತ್ತಿವೆ’ ಎಂದು ವಿಧಾನ ಪರಿಷತ್ ಸದಸ್ಯ, ಕರ್ನಾಟಕ ಸರ್ಕಾರದ ದೆಹಲಿಯ ವಿಶೇಷ ಪ್ರತಿನಿಧಿ 2 ಪ್ರಕಾಶ ಹುಕ್ಕೇರಿ ಹೇಳಿದರು.   ಪಟ್ಟಣದ ಹೊರ ವಲಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಉಪ ನಿರ್ದೇಶಕರ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ, …

Read More »

ಕೊಯ್ನಾ ಜಲಾಶಯದಿಂದ ನೀರು ಬಿಡುವ ಸೂಚನೆ: ನದಿ ತೀರದಲ್ಲಿ ಎಚ್ಚರಿಕೆ

ಚಿಕ್ಕೋಡಿ: ಮಹಾರಾಷ್ಟ್ರ ಕೃಷ್ಣಾ ಹಾಗೂ ಉಪನದಿಗಳ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು, ಕೊಯ್ನಾ ಆಣೆಕಟ್ಟೆಯಿಂದ 32,100 ಕ್ಯುಸೆಕ್ ನೀರನ್ನು ಗುರುವಾರ ಬೆಳಿಗ್ಗೆ 6ರಿಂದ ಹರಿಬಿಡಲಾಗುವುದು ಎಂದು ಮಹಾರಾಷ್ಟ್ರದ ಅಧಿಕಾರಿಗಳು ತಿಳಿಸಿದ್ದಾರೆ.   105 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯದ ಈ ಜಲಾಶಯದಲ್ಲಿ 101.78 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಕೊಂಕಣ ಪ್ರದೇಶದಲ್ಲಿ ಮಳೆ ಹೆಚ್ಚಾಗಿದ್ದರಿಂದ ಆಣೆಕಟ್ಟೆಯಿಂದ ನೀರು ಬಿಡಲು ನಿರ್ಧರಿಸಲಾಗಿದೆ. ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ ಕೃಷ್ಣಾ …

Read More »

ಚಿಕ್ಕೋಡಿ: ಮಹಡಿ ಮನೆ ಮೊರೆ ಹೋದ ಜನರು

ಚಿಕ್ಕೋಡಿ: ಮೇಲಿಂದ ಮೇಲೆ ಬರುವ ನದಿ ಪ್ರವಾಹ ಭೀತಿಯಿಂದ ಹೊರ ಬರಲು ನದಿ ತೀರದ ಬಹುತೇಕ ಜನರು ಮಹಡಿ ಮನೆಗಳ ಮೊರೆ ಹೋಗಿದ್ದಾರೆ. ತೋಟದ ವಸತಿ ಪ್ರದೇಶದಲ್ಲೂ ಮಹಡಿ ಮನೆಗಳನ್ನು ನಿರ್ಮಿಸಿಕೊಂಡಿದ್ದಾರೆ. ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ ಕೃಷ್ಣಾ ಹಾಗೂ ಉಪ ನದಿಗಳಲ್ಲಿ ಪ್ರತಿ ವರ್ಷ ಮಳೆಗಾಲ ಬಂದರೆ ಸಾಕು ನದಿ ತೀರದ ಜನರು ಜೀವ ಕೈಯಲ್ಲಿ ಹಿಡಿದು ದಿನ ದೂಡಬೇಕಾಗುತ್ತದೆ. ಅದರಲ್ಲೂ ಕೃಷ್ಣಾ ನದಿ ತೀರದ ಚಿಕ್ಕೋಡಿ ತಾಲ್ಲೂಕಿನ ಮಾಂಜರಿ, …

Read More »

ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ: ಕೃಷ್ಣಾ ನದಿ ನೀರಿನ ಮಟ್ಟ ದಿಢೀರ್‌ ಏರಿಕೆ

ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶ ಹಾಗೂ ಜಿಲ್ಲೆಯ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಿಂದಾಗಿ, ದೂಧಗಂಗಾ ನದಿಯ ಮಲಿಕವಾಡ- ದತ್ತವಾಡ ಸೇತುವೆ ಸೋಮವಾರ ಜಲಾವೃತಗೊಂಡಿದೆ. ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ರಾಜಾಪೂರ ಬ್ಯಾರೇಜಿನಿಂದ ಕೃಷ್ಣಾ ನದಿಗೆ 47,250 ಕ್ಯುಸೆಕ್ ಹೊರ ಹರಿವು ಇದೆ. ದೂಧಗಂಗಾ ನದಿಗೆ 15,840 ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ-ಯಡೂರ ಬ್ಯಾರೇಜ್ ಬಳಿಯಲ್ಲಿ ಕೃಷ್ಣಾ ನದಿಗೆ 63,090 ಕ್ಯುಸೆಕ್ ನೀರು ಹರಿದು ಬರುತ್ತಿದೆ. …

Read More »

ಚಿಕ್ಕೋಡಿ: ಈ ಊರಿನ ಹೆಸರೇ ‘ಸೈನಿಕ ಮಲಿಕವಾಡ’; ಪ್ರತಿ ಮನೆಯಲ್ಲೂ ಇದ್ದಾರೆ ಸೈನಿಕ

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಮಲಿಕವಾಡ ಗ್ರಾಮವು ‘ಸೈನಿಕ ಮಲಿಕವಾಡ’ ಎಂದೇ ಹೆಸರಾಗಿದೆ. ಈ ಊರಿನ ಪ್ರತಿಯೊಂದು ಕುಟುಂಬದಲ್ಲೂ ಕನಿಷ್ಠ ಒಬ್ಬರು ಭಾರತೀಯ ಸೇನೆಯಲ್ಲಿದ್ದಾರೆ. ಸಿಆರ್‌ಪಿಎಫ್, ಬಿಎಸ್‍ಎಫ್, ಸಿಐಎಸ್‍ಎಫ್, ಎಸ್‍ಎಸ್‍ಬಿ ಸೇರಿ ವಾಯುಪಡೆ, ಭೂಸೇನೆ, ನೌಕಾಪಡೆಯಲ್ಲಿ ಇದ್ದಾರೆ.   ಏಳು ದಶಕಗಳಿಂದ ಹೀಗೆ ಸೇನೆ ಸೇರಿದವರ ಸಂಖ್ಯೆ ಬಹಳ ದೊಡ್ಡದು. ಈಗಲೂ 150ಕ್ಕೂ ಹೆಚ್ಚು ಯುವಕರು ಸೇನೆಯಲ್ಲಿದ್ದಾರೆ. 1965ರಲ್ಲಿ ಭಾರತ-ಚೀನಾ ಯುದ್ಧ, 1971ರಲ್ಲಿ ಭಾರತ- ಬಾಂಗ್ಲಾದೇಶ ಯುದ್ಧ ಮತ್ತು 1999ರಲ್ಲಿ ಕಾರ್ಗಿಲ್ …

Read More »

ವಿದ್ಯಾರ್ಥಿಗಳ ಬದುಕಿಗೆ ‘ನಿರ್ಮಾಣ’ ಆಸರೆ

ಚಿಕ್ಕೋಡಿ: ತಾಲ್ಲೂಕಿನ ಕೇರೂರು ಗ್ರಾಮದಲ್ಲಿ 15-20 ಜನ ಯುವಕ-ಯುವತಿಯರ ಗುಂಪು ಸೇರಿ ಸ್ಥಾಪಿಸಿದ ಉಚಿತ ಗ್ರಂಥಾಲಯ ಹಲವು ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣಗೊಳ್ಳಲು ಸಹಕಾರಿಯಾಗಿದೆ. ಕಳೆದ 6 ವರ್ಷಗಳ ಹಿಂದೆ ಸ್ಥಾಪಿಸಿದ ಉಚಿತ ಗ್ರಂಥಾಲಯ ಸೇವೆಯಿಂದ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಅನುಕೂಲವಾಗುತ್ತಿದೆ. ಪ್ರತಿ ದಿನವೂ ಗ್ರಂಥಾಲಯದಲ್ಲಿ ಓದಬಹುದು. ಮನೆಗೆ ಪುಸ್ತಕಗಳನ್ನು ಎರವಲು ಪಡೆದು ಓದಬಹುದಾಗಿದೆ. ಆದರೆ ಎಲ್ಲವೂ ಇಲ್ಲಿ ಉಚಿತ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗ್ರಾಮೀಣ ಭಾಗದ ಮಕ್ಕಳಿಗೆ ಅನುಕೂಲವಾಗಬೇಕೆಂಬ ಕಾರಣದಿಂದ ಸ್ಪರ್ಧಾತ್ಮಕ …

Read More »

ಬಾಲಕಿಯರ ಮೆಟ್ರಿಕ್‌ ನಂತರದ ಹಾಸ್ಟೆಲ್‌ ಕಟ್ಟಡದ ಉದ್ಘಾಟನೆ ಯಾವಾಗ?

ಚಿಕ್ಕೋಡಿ: ಪಟ್ಟಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬಾಲಕಿಯರ ಮೆಟ್ರಿಕ್ ನಂತರದ ವಸತಿ ನಿಲಯದ ಕಟ್ಟಡ ಕಾಮಗಾರಿ ಮುಗಿದು ಒಂದು ವರ್ಷ ಕಳೆದಿದೆ. ಆದರೆ, ಅದಕ್ಕೆ ಇನ್ನೂ ಉದ್ಘಾಟನೆ ಭಾಗ್ಯ ಸಿಕ್ಕಿಲ್ಲ. 1997ರಲ್ಲಿ ಚಿಕ್ಕೋಡಿಗೆ ಈ ವಸತಿ ನಿಲಯ ಮಂಜೂರಾಯಿತು. ಅಂದಿನಿಂದಲೂ ಪಟ್ಟಣದಲ್ಲಿ ಬೇರೆ ಬೇರೆ ಬಾಡಿಗೆ ಕಟ್ಟಡಗಳಲ್ಲಿ ಇದು ಕಾರ್ಯನಿರ್ವಹಿಸುತ್ತಿದೆ. ಇದರಿಂದಾಗಿ ಅಲ್ಲಿ ದಾಖಲಾಗುವ ಪಿಯುಸಿ ಹಾಗೂ ಪದವಿ ವಿದ್ಯಾರ್ಥಿನಿಯರಿಗೆ ತೊಂದರೆಯಾಗುತ್ತಿದೆ. ಹಾಸ್ಟೆಲ್‌ನಿಂದ ಕಾಲೇಜಿಗೆ ತೆರಳಲು ಸರಿಯಾಗಿ ಬಸ್‌ …

Read More »

ಕೋಥಳಿ-ಕುಪ್ಪಾಣವಾಡಿ ಆಶ್ರಮದ ಸಾಕಾನೆ ‘ಉಷಾರಾಣಿ’ ಸಾವು

ಚಿಕ್ಕೋಡಿ: ತಾಲ್ಲೂಕಿನ ಕೋಥಳಿ-ಕುಪ್ಪಾನವಾಡಿಯ ಆಚಾರ್ಯ ದೇಶಭೂಷಣ ಜೈನ ಆಶ್ರಮದ ಸಾಕು ಆನೆ ಉಷಾರಾಣಿ (50) ಅನಾರೋಗ್ಯದಿಂದ ಶನಿವಾರ ಸಾವನ್ನಪ್ಪಿದ್ದು, ಆಚಾರ್ಯ ದೇಶ ಭೂಷಣ ಆಶ್ರಮ ಟ್ರಸ್ಟ್ ಹಾಗೂ ಶಾಂತಿಗಿರಿ ಟ್ರಸ್ಟ್ ವತಿಯಿಂದ ಅಂತಿಮ ನಮನಗಳನ್ನು ಸಲ್ಲಿಸಲಾಯಿತು. ಆಶ್ರಮದ ಆವರಣದಲ್ಲಿ ಧಾರ್ಮಿಕ ವಿಧಿ ವಿಧಾನಗಳ ಅನ್ವಯ ಜೈನ ಮುನಿಗಳು ಹಾಗೂ ಸ್ಥಳೀಯ ಮುಖಂಡರ ನೇತೃತ್ವದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು ಎಂದು ತಿಳಿಸಲಾಗಿದೆ. 1977ರಲ್ಲಿ 3 ವರ್ಷದ ಮರಿ ಇದ್ದಾಗ ಶಿವಮೊಗ್ಗದ ಅರಣ್ಯ ಪ್ರದೇಶದಿಂದ ತರಲಾಗಿದ್ದ …

Read More »