ಬೆಳಗಾವಿಯಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಮೃಣಾಲ್ ಹೆಬ್ಬಾಳ್ಕರ್ , ಮೃಣಾಲ್ ಬೆಳಗಾವಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ಚರ್ಚೆಗೆ ಸಂಬಂಧಿಸಿದಂತೆ, ಕಾರ್ಯಕರ್ತರು ನಮ್ಮ ತಾಯಿ,ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿ ಚರ್ಚೆಗೆ ಮಾಡುತ್ತಿದ್ದಾರೆ ಇದು ಸ್ವಾಗತಾರ್ಹ. ಆದರೆ ಪಕ್ಷದ ಮುಖಂಡರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಆಪ್ತ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಪಕ್ಷದ ಹಿರಿಯ ನಾಯಕರು ತೀರ್ಮಾನ ಕೈಗೊಳ್ಳಲಿದ್ದಾರೆ. ಕ್ಷೇತ್ರದ ಜನತೆ ವಿಶ್ವಾಸದಿಂದ ಲಕ್ಷ್ಮೀ ಹೆಬಾಳ್ಕರ್ ಅವರನ್ನು ಎರಡನೇ …
Read More »ಸಮಾಜ ಸೇವಕಿ ಪುಷ್ಪಾ ಬಾಳಾಸಾಹೇಬ್ ಕೋರೆ ನಿಧನ
ಕಾಗವಾಡ ತಾಲೂಕಿನ ಶೇಡಬಾಳ ಸ್ಟೇಷನ್ ಗ್ರಾಮದ ಹಿರಿಯ ಸಮಾಜ ಸೇವೆಗೆ ಶ್ರೀಮತಿ ಪುಷ್ಪಾ ಬಾಳಾಸಾಹೇಬ್ ಕೋರೆ, ಅವರು ನಿಧನರಾಗಿದ್ದಾರೆ ತಮ್ಮ 56 ವಯಸ್ಸಿನಲ್ಲಿ ಶನಿವಾರ ಸಂಜೆ ಆಕಸ್ಮಿಕವಾಗಿ ನಿಧನ ಹೊಂದಿದರು ಮೃತರು ಶೀಡಬಾಳ ಪೋಸ್ಟ್ ಕಚೇರಿಯ ನಿವೃತ್ತ ಪೋಸ್ಟ್ ಮಾಸ್ಟರ್ ಬಾಳಾಸಾಹೇಬ್ ಕೋರೆ ಇವರ ಧರ್ಮಪತ್ನಿಯಾಗಿದ್ದರು, ಇಬ್ಬರ ಪುತ್ರಿಯರು ಮೊಮ್ಮಕ್ಕಳು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
Read More »ನಗರದಲ್ಲಿ ನೈತಿಕ ಪೊಲೀಸ್ ಗಿರಿ ಗೆ ಅವಕಾಶವಿಲ್ಲ ಆರೋಪಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುತ್ತೇವೆ: ಆಸೀಫ್ ಸೇಠ್
ನಗರದಲ್ಲಿ ನೈತಿಕ ಪೊಲೀಸ್ ಗಿರಿ ಗೆ ಅವಕಾಶವಿಲ್ಲ ಆರೋಪಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಶಾಸಕ ಆಸೀಫ್ ಸೇಠ್ ಹೇಳಿದರು. ನಗರದಲ್ಲಿ ಕ್ರಿಶ್ಚಿಯನ ಕಮೀಟಿಯಿಂದ ಆಯೋಜಿಸಿದ ಸತ್ಕಾರ್ ಕಾರ್ಯಕ್ರಮಕ್ಕೆ ಆಗಮಿಸಿದ ಶಾಸಕ ಆಸೀಫ್ ಸೇಠ್,ಮಾಧ್ಯಮದವರೊಂದಿಗೆ ಮಾತುನಾಡಿ ನಗರದಲ್ಲಿ ನಡೆದಿರುವ ನೈತಿಕ ಪೊಲೀಸ್ ಗಿರಿ ನಮಗೆ ಮಾಹಿತಿಯಿಲ್ಲ , ನೈತಿಕ ಪೊಲೀಸ್ ಗಿರಿಗೆ ಜಿಲ್ಲೆಯಲ್ಲಿ ಅವಕಾಶವಿಲ್ಲ, ಯಾರೇ ಭಾಗಿಯಾಗಿದ್ದರು ಕಠಿಣ ಕ್ರಮ ಕೈಗೊಳ್ಳತ್ತೇವೆ ಅಂತಾ ಹೇಳಿದ್ದರು. ಇನ್ನೂ ಲೋಕಸಭಾ ಚುನಾವಣೆ …
Read More »ವಿದ್ಯುತ್ ತಂತಿ ಬೇಲಿ ಸ್ಪರ್ಶಿಸಿ ಸ್ಥಳದಲ್ಲೇ ಸಾವನ್ನಪ್ಪಿದ ಹಾರೂರಿನ ರೈತ
ಖಾನಾಪೂರ ತಾಲೂಕಿನ ಹಾರೂರಿನಲ್ಲಿ ಜಮೀನಿಗೆ ಅಳವಡಿಸಿದ್ದ ವಿದ್ಯುತ್ ತಂತಿ ಬೇಲಿ ಸ್ಪರ್ಶಿಸಿ ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿದರೆ ಇರ್ನೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿದೆ ಏನ್ನೇಂದರೆ ಹೊಲಕ್ಕೆ ಅಳವಡಿಸಿದ್ದ ವಿದ್ಯುತ್ ಬೇಲಿಯ ತಂತಿ ತಗುಲಿ ಈ ಘಟನೆ ನಡೆದಿದೆ. ವಿದ್ಯುತ್ ಸ್ಪರ್ಶಗೊಂಡಿದ್ದ ಸಹೋದರ ರಕ್ಷಿಸಲು ಹೋಗಿ ವಿದ್ಯುತ್ ಸ್ಪರ್ಶಿಸಿದಾಗ ಇನ್ನೋರ್ವ ಪಕ್ಕಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾನೆ. ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಗೆ ಕಳುಹಿಸಲಾಗಿದೆ. ಹಾರೂರಿನ ರೈತ ಹಾಗೂ …
Read More »ಬೆಳಗಾವಿ ಸಸ್ಯ ಸಂತೆ: ಗಮನ ಸೆಳೆದ ದುಬಾರಿ ಮಿಯಾಜಾಕಿ ಮಾವಿನ ಸಸಿ
ಬೆಳಗಾವಿ : ತೋಟಗಾರಿಕೆ ಬೆಳೆ ಬೆಳೆಯುವ ರೈತರು ಹಾಗೂ ಮನೆ ಮುಂದೆ ಮತ್ತು ಟೆರಸ್ ಮೇಲೆ ಕೈತೋಟ ನಿರ್ಮಾಣ ಮಾಡುವ ಸಾರ್ವಜನಿಕರ ಅನುಕೂಲಕ್ಕಾಗಿ ಬೆಳಗಾವಿಯಲ್ಲಿ ನಿನ್ನೆಯಿಂದ ಮೂರು ದಿನ ಆಯೋಜಿಸಿರುವ ಸಸ್ಯ ಸಂತೆಗೆ ಚಾಲನೆ ಸಿಕ್ಕಿದ್ದು, ತರಹೇವಾರಿ ಸಸಿಗಳು ಎಲ್ಲರನ್ನೂ ಕೈ ಬೀಸಿ ಕರೆಯುತ್ತಿವೆ. ಹೌದು, ಬೆಳಗಾವಿ ನಗರದ ಕ್ಲಬ್ ರಸ್ತೆಯಲ್ಲಿರುವ ಹ್ಯೂಮ್ ಪಾರ್ಕ್ನಲ್ಲಿ ತೋಟಗಾರಿಕಾ ಇಲಾಖೆಯಿಂದ ಆಯೋಜಿಸಿರುವ ಸಸ್ಯ ಸಂತೆ, ತೋಟಗಾರಿಕಾ ಅಭಿಯಾನ ಮತ್ತು ತಾಳೆ ಬೆಳೆ ಸಸಿ ವಿತರಣೆ …
Read More »ಕರ್ನಾಟಕ, ಮಹಾರಾಷ್ಟ್ರದ ಹಲವೆಡೆ ಬೈಕ್ಗಳ ಕಳ್ಳತನ ಮಾಡಿದ್ದ ಆರೋಪಿಗಳನ್ನು ಬೆಳಗಾವಿ ಅಂಕಲಗಿ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ: ಕರ್ನಾಟಕ ಹಾಗೂ ಮಹಾರಾಷ್ಟ್ರದ ವಿವಿಧೆಡೆ ಬೈಕ್ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಗೋಕಾಕ್ ತಾಲೂಕಿನ ಅಂಕಲಗಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರಿಂದ 8.25 ಲಕ್ಷ ರೂ ಮೌಲ್ಯದ ಬೈಕ್ಗಳನ್ನು ವಶಕ್ಕೆ ಪಡೆದಿದ್ದಾರೆ. ಮಹಾರಾಷ್ಟ್ರದ ಕೊಲ್ಹಾಪುರ ತಾಲ್ಲಕಿನ ಕಳಂಭದ ನಿವಾಸಿ ಸಂತೋಷ ರಾಮಚಂದ್ರ ನಿಶಾನೆ (30) ಹಾಗೂ ಗೋಕಾಕ ತಾಲ್ಲೂಕಿನ ತೆಳಗಿನಹಟ್ಟಿಯ ಭರಮಪ್ಪ ಯಲ್ಲಪ್ಪ ಕೊಪ್ಪದ (21) ಬಂಧಿತರು. ಇವರಿಂದ ವಿವಿಧ ಕಂಪನಿಗಳ 23 ಬೈಕ್ಗಳನ್ನು ಜಪ್ತಿ ಮಾಡಲಾಗಿದೆ. ಗೋಕಾಕ …
Read More »ಮಳೆ ಕೊರತೆಯಿಂದ ಕಂಗಾಲಾಗಿರುವ ರೈತರಿಗೆ ಬೇಕಿದೆ ಸರ್ಕಾರದ ನೆರವು
ಚಿಕ್ಕೋಡಿ : ಪ್ರತಿ ವರ್ಷ ವಾಡಿಕೆಯಂತೆ ಮುಂಗಾರು ಮಳೆ ಜೂನ್ ಮೊದಲನೇ ವಾರದಲ್ಲಿ ಪ್ರಾರಂಭವಾಗಿ ರೈತರು ಬಿತ್ತನೆ ಕಾರ್ಯವನ್ನು ಮಾಡುತ್ತಿದ್ದರು. ಪ್ರಸ್ತುತ ವರ್ಷ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆ ಮುಂಗಾರು ಬಿತ್ತನೆ ಆಗದೆ ಕೃಷಿ ಚಟುವಟಿಕೆಗಳು ಮಂದಗತಿಯಲ್ಲೇ ಸಾಗಿದ್ದವು. ಅಲ್ಪ ಸ್ವಲ್ಪ ಮಳೆಯಲ್ಲೇ ಬೀಜ ಬಿತ್ತಿದ್ದ ರೈತರಿಗೆ ಆಘಾತವಾಗಿದೆ. ಮಳೆ ಕೈಕೊಟ್ಟ ಪರಿಣಾಮ, ಬಿತ್ತನೆ ಮಾಡಿರುವ ಬೀಜಗಳು ಮೊಳಕೆಯಲ್ಲಿ ಒಣಗುತ್ತಿರುವ ಹಿನ್ನೆಲೆ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಬೆಳಗಾವಿ ಜಿಲ್ಲೆಯ …
Read More »ಶುದ್ಧ ನೀರು ಬರುತ್ತಿಲ್ಲ. ಕಲುಷಿತ ನೀರು ಕುಡಿದು ಮಕ್ಕಳೆಲ್ಲ ಅನಾರೋಗ್ಯ ಮೂಲ ಸೌಕರ್ಯಗಳಿಲ್ಲದೆ ಬೆಳಗಾವಿಯ ಕೆಹೆಚ್ಬಿ ಕಾಲೋನಿ ನಿವಾಸಿಗಳ ಗೋಳು
ಬೆಳಗಾವಿ: ಮಹಾನಗರದ ಪಕ್ಕದಲ್ಲಿದ್ದರೂ ಈ ಬಡಾವಣೆ ಮಾತ್ರ ಮೂಲ ಸೌಕರ್ಯಗಳಿಂದ ವಂಚಿತವಾಗಿದೆ. ಕಣ್ಮುಂದೆಯೇ ಬೆಳಗಾವಿ ಮಹಾನಗರ ಕಾಣಿಸಿದರೂ, ಅದನ್ನು ತಲುಪಲು ಸುತ್ತಿಬಳಸಿ ಬರಬೇಕಾದ ಸಂದಿಗ್ಧತೆ ಎದುರಾಗಿದೆ. ಇದು ಬಸವನ ಕುಡಚಿಯಲ್ಲಿರುವ ಕೆಹೆಚ್ಬಿ ಕಾಲೋನಿ ಜನರಿಗೆ ಎದುರಾಗಿರುವ ಸಂಕಷ್ಟ. ಕರ್ನಾಟಕ ಗೃಹ ಮಂಡಳಿ 2012ರಲ್ಲಿ ಈ ಬಡಾವಣೆಯನ್ನು ನಿರ್ಮಾಣ ಮಾಡಿದ್ದು, 137 ಎಕರೆ ಪ್ರದೇಶದಲ್ಲಿ ಹರಡಿಕೊಂಡಿದೆ. ವಿವಿಧ ಗಾತ್ರಗಳ 1,573 ನಿವೇಶನಗಳನ್ನು ರೂಪಿಸಿ, ಸರ್ಕಾರಿ ನಿಯಮಾನುಸಾರ ಜನರಿಗೆ ಹಂಚಲಾಗಿದೆ. 125 ನಿವೇಶನಗಳಲ್ಲಿ ಸರ್ಕಾರದಿಂದಲೇ …
Read More »ಚಂದರಗಿ ಗ್ರಾಮ ಪಂಚಾಯತ ಆವರಣದಲ್ಲಿ ರಕ್ತದಾನ
ರಾಮದುರ್ಗ ತಾಲೂಕಿನ ಕೆ ಚಂದರಗಿ ಗ್ರಾಪಂ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಹುಲಕುಂದ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಚಂದರಗಿ ಗ್ರಾಮ ಪಂಚಾಯತ ಆವರಣದಲ್ಲಿ ಸ್ವಯಂ ಪ್ರೇರಿತ ರಕ್ತ ದಾನ ಶಿಬಿರ ನಡೆಯಿತು. ಈ ವೇಳೆ 28ಕ್ಕೂ ಅಧಿಕ ಜನರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು. ಈ ವೇಳೆ ಮಾತನಾಡಿದ ಗ್ರಾಪಂ ಅಧ್ಯಕ್ಷ ಸಂಜಯ ಹಳ್ಳಿ, ರಕ್ತದಾನ ಶ್ರೇಷ್ಠದಾನ. ರಕ್ತದಾನ ಮಾಡುವುದರಿಂದ ಆರೋಗ್ಯ ವೃದ್ಧಿಸುತ್ತದೆ. ಹೀಗಾಗಿ ಎಲ್ಲರೂ ರಕ್ತದಾನ ಮಾಡಲು …
Read More »ರಾಜು ಕಾಗೆ ಇವರಿಗೆ ಅಥಣಿ ಜಿಲ್ಲಾ ಎಂದು ಘೋಷಣೆವಾಗಬೇಕು ಕಾರಣ ಸರ್ಕಾರಕ್ಕೆ ಒತ್ತಡ ಹಾಕಿರಿ ಎಂದು ಹೋರಾಟ ಸಮಿತಿ ವತಿಯಿಂದ ಉಗಾರದಲ್ಲಿ ಶಾಸಕರಿಗೆ ಮನವಿ
ಅಥಣಿ ಜಿಲ್ಲಾ ಹೋರಾಟ ಸಮಿತಿ ವತಿಯಿಂದ ಕಾಗವಾಡ ಶಾಸಕ ರಾಜು ಕಾಗೆ ಇವರಿಗೆ ಅಥಣಿ ಜಿಲ್ಲಾ ಎಂದು ಘೋಷಣೆವಾಗಬೇಕು ಕಾರಣ ಸರ್ಕಾರಕ್ಕೆ ಒತ್ತಡ ಹಾಕಿರಿ ಎಂದು ಹೋರಾಟ ಸಮಿತಿ ವತಿಯಿಂದ ಉಗಾರದಲ್ಲಿ ಶಾಸಕರಿಗೆ ಮನವಿ ಅರ್ಪಿಸಿದರು. ರವಿವಾರ ರಂದು ಅಥಣಿ ತಾಲೂಕ ಹೋರಾಟ ಸಮಿತಿ ವತಿಯಿಂದ ಹೋರಾಟ ಸಮಿತಿಯ ಅಧ್ಯಕ್ಷ ಪ್ರಶಾಂತ್ ತೂಡಕರ್ ಇವರು ಖ್ಯಾತ ನ್ಯಾಯವಾದಿಗಳಾದ ಕೆ ಎಲ್ ಕುಂದರಗಿ, ದೇವೇಂದ್ರ ಬಿಸವಾಗರ್ ಇವರ ನೇತೃತ್ವದಲ್ಲಿ ಶಾಸಕ ರಾಜು …
Read More »