ಹಾವೇರಿ : ನಾಲ್ಕು ವರ್ಷಗಳ ಹಿಂದೆ ಕಾಣಿಸಿಕೊಂಡಿದ್ದ ಕೊರೊನಾ ಜಿಲ್ಲೆಯಲ್ಲಿ ಹಲವು ಅವಾಂತರಗಳನ್ನ ಸೃಷ್ಟಿಸಿತ್ತು. ಕೊರೊನಾದಲ್ಲಿ ನೂರಾರು ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದರು. ಕೋವಿಡ್ನಿಂದ ಹೆಚ್ಚು ಸಾವು ಕಂಡ ಜಿಲ್ಲೆಗಳಲ್ಲಿ ಹಾವೇರಿ ಜಿಲ್ಲೆಯೂ ಸಹ ಒಂದಾಗಿತ್ತು. ನಂತರ ಎರಡನೇ ಅಲೆ, ಮೂರನೇ ಅಲೆ ಕಾಣಿಸಿಕೊಂಡರೂ ಸಹ ಹೇಳಿಕೊಳ್ಳುವಂತಹ ಅನಾಹುತಗಳು ಸಂಭವಿಸಿರಲಿಲ್ಲ. ಮತ್ತೆ ಇದೀಗ ಕೊರೊನಾ ಕಾಣಿಸಿಕೊಂಡಿರುವುದರಿಂದ ಜಿಲ್ಲೆಯ ಜನರಲ್ಲಿ ಆತಂಕ ಮನೆಮಾಡಿದೆ. ಈಗಾಗಲೇ ಹಾವೇರಿ ತಾಲೂಕಿನ 73 ವರ್ಷದ ವೃದ್ಧನೊಬ್ಬನಿಗೆ ಕೊರೊನಾ …
Read More »ಫೋರ್ಜರಿ ಸಹಿ ಮತ್ತು ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಇಲಾಖೆಗೆ ವಂಚನೆ ಮಾಡಿರುವ ಆರೋಪದಡಿ ತೇರದಾಳ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಶೈಕ್ಷಣಿಕ ಮಾನ್ಯತೆ ರದ್ದಾಗಿದೆ.
ಚಿಕ್ಕೋಡಿ (ಬೆಳಗಾವಿ): ನಕಲಿ ದಾಖಲಾತಿಗಳನ್ನು ಸೃಷ್ಟಿಸಿದ ಇಲಾಖೆಗೆ ವಂಚನೆ ಮಾಡಿರುವ ಹಿನ್ನೆಲೆಯಲ್ಲಿ ತೇರದಾಳ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಶೈಕ್ಷಣಿಕ ಮಾನ್ಯತೆಯನ್ನು ರದ್ದು ಪಡಿಸಲಾಗಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸಿಂಧು ಬಿ ರೂಪೇಶ್ ಆದೇಶ ಹೊರಡಿಸಿದ್ದಾರೆ. ಅಥಣಿ ಪಟ್ಟಣದ ಹೊರವಲಯದಲ್ಲಿ 2019-20ನೇ ಸಾಲಿನಲ್ಲಿ ಆರಂಭಗೊಂಡ ಶ್ರೀ ಅಣ್ಣಪ್ಪ ತೇರದಾಳ ಗ್ರಾಮೀಣಾಭಿವೃದ್ಧಿ ಶಿಕ್ಷಣ ಸಂಸ್ಥೆಯ ತೇರದಾಳ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯವರು ಶಾಲಾ ಶಿಕ್ಷಣ ಇಲಾಖೆಯ (ಪದವಿ …
Read More »ಹೆದ್ದಾರಿ ಕೆಲಸ ಮುಗಿಸಿ ಹೊರಟವರ ಮೇಲೆ ಹರಿದ ಟ್ಯಾಂಕರ್
ಬೆಳಗಾವಿ: ರಾಷ್ಟ್ರೀಯ ಹೆದ್ದಾರಿಯ ದುರಸ್ತಿ ಕೆಲಸ ಮುಗಿಸಿ, ಮನೆ ಕಡೆ ಹೊರಟಿದ್ದವರ ಮೇಲೆ ಎಣ್ಣೆ ಟ್ಯಾಂಕರ್ ಹರಿದು ಸ್ಥಳದಲ್ಲೇ ಮೂವರು ಸಾವನ್ನಪ್ಪಿ, ಟ್ಯಾಂಕರ್ ಚಾಲಕ ಸೇರಿ ನಾಲ್ವರಿಗೆ ಗಾಯವಾಗಿರುವ ದಾರುಣ ಘಟನೆ ಜಿಲ್ಲೆಯ ಕಿತ್ತೂರು ತಾಲೂಕಿನ ಇಟಗಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮಧ್ಯಾಹ್ನ ಸಂಭವಿಸಿತು. ಕಾರ್ಮಿಕರು ಇನ್ನೇನು ಮನೆ ಕಡೆ ಹೋಗಬೇಕು ಅನ್ನುವಷ್ಟರಲ್ಲಿ ಟ್ಯಾಂಕರ್ ರೂಪದಲ್ಲಿ ಬಂದ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ರಾಮಚಂದ್ರ ಜಾಧವ (45), ಇವರ ಪುತ್ರ …
Read More »ಸಲೂನ್ & ಸ್ಪಾಗೆ ನುಗ್ಗಿ ಲೇಡಿ ಗ್ಯಾಂಗ್ ಅಟ್ಟಹಾಸ
ಬೆಂಗಳೂರು, ಮೇ 31: ನಗರದಲ್ಲಿ ಅಮೃತಹಳ್ಳಿಯ ರಾಯಲ್ ಸಲೂನ್ ಮತ್ತು ಸ್ಪಾಗೆ ಎಂಟ್ರಿ ಕೊಟ್ಟಿದ್ದ ಲೇಡಿ ಡಾನ್ ಗ್ಯಾಂಗ್ (Lady Don Gang) ಮಾಲೀಕ ಸಂಜು ಮೇಲೆ ದಾಳಿ (attack) ಮಾಡಿದ್ದರು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನ ಬಂಧಿಸಲಾಗಿದೆ. ಬಂಧಿತ ಮೂವರಲ್ಲಿ ಕಾವ್ಯಗೆ ರೌಡಿಸಂ ಲಿಂಕ್ ಇದೆ. ಹೇಗೆ ಅಂದರೆ ಬೆಂಗಳೂರಿನ ರೌಡಿಶೀಟರ್ ಮುನಿಕೃಷ್ಣ ಅಲಿಯಾಸ್ ಅಮೃತಹಳ್ಳಿ ಕಪ್ಪೆ ಪ್ರಿಯತಮೆ ಈ ಕಾವ್ಯ. ತನ್ನ ರೌಡಿ ಲವರ್ ಕಪ್ಪೆ ಹೆಸರನ್ನ ಬಳಸಿಕೊಂಡು ಏರಿಯಾದಲ್ಲಿ ಕಾವ್ಯ …
Read More »ಹುಕ್ಕೇರಿ ನಗರದಲ್ಲಿ ಯುಥ್ ಕಾಂಗ್ರೆಸ್ ಕಮೀಟಿಯ ವತಿಯಿಂದ ರಾಹುಲ ಅಣ್ಣಾ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ
ಹುಕ್ಕೇರಿ : ಯುವಕರು ಮೊಬೈಲ್ ಆಟ ಬಿಟ್ಟು ದೇಶಿ ಆಟ ಆಡಬೇಕು – ಪುರಸಭೆ ಅಧ್ಯಕ್ಷ ಇಮ್ರಾನ್ ಹುಕ್ಕೇರಿ ನಗರದಲ್ಲಿ ಯುಥ್ ಕಾಂಗ್ರೆಸ್ ಕಮೀಟಿಯ ವತಿಯಿಂದ ರಾಹುಲ ಅಣ್ಣಾ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಗಳು ನಡೆದವು. ಕಳೆದ ಐದು ದಿನಗಳಿಂದ ಜರಗುತ್ತಿರುವ 30 ಯಾರ್ಡ ಸರ್ಕಲ್ ಓಪನ ಕ್ರಿಕೆಟ್ ಪಂದ್ಯಾವಳಿಗಳಲ್ಲಿ ಬೆಳಗಾವಿ ಜಿಲ್ಲೆಯ ವಿವಿಧ ಭಾಗಗಳಿಂದ ಕ್ರಿಕೆಟ್ ತಂಡಗಳು ಭಾಗವಹಿಸಿದವು. ಶುಕ್ರವಾರ ಸಾಯಂಕಾಲ ಜರುಗಿದ ಕೊನೆಯ ಫೈನಲ್ ಆಟದಲ್ಲಿ ಗಜಬರವಾಡಿ ತಂಡ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ನ್ನದಾಸೋಹ ಕಾರ್ಯಕ್ರಮ ಗೋಕಾಕ ತಾಲ್ಲೂಕಿನ ನೆಲಗಂಟಿ ಗ್ರಾಮದ ಶ್ರೀ ಬಸವಣ್ಣ ದೇವರ ದೇವಸ್ಥಾನದಲ್ಲಿ
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ನೆಲಗಂಟಿ ಗ್ರಾಮದ ಶ್ರೀ ಬಸವಣ್ಣ ದೇವರ ದೇವಸ್ಥಾನದಲ್ಲಿ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ …
Read More »ಸರ್ಕಾರಿ ಶಾಲೆಗೆ ತರಗತಿ ಕೊಠಡಿಗಳ ಮಂಜೂರಾತಿಗೆ ಆಗ್ರಹಿಸಿ ಧರಣಿ ನಡೆಸುತ್ತಿದ್ದ ಶಿಕ್ಷಕನನ್ನು ಅಮಾನತುಗೊಳಿಸಿ ಬಿಇಒ ಆದೇಶ
ಬೆಳಗಾವಿ: ಸರ್ಕಾರಿ ಶಾಲೆಗೆ ತರಗತಿ ಕೊಠಡಿಗಳ ಮಂಜೂರಾತಿಗೆ ಆಗ್ರಹಿಸಿ ಧರಣಿ ನಡೆಸುತ್ತಿದ್ದ ಶಿಕ್ಷಕನನ್ನು ಕರ್ತವ್ಯಲೋಪ ಎಸಗಿದ ಆರೋಪದಲ್ಲಿ ಅಮಾನತುಗೊಳಿಸಿರುವ ಘಟನೆ ರಾಯಬಾಗದಲ್ಲಿ ನಡೆದಿದೆ. ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ವೀರಣ್ಣ ಮಡಿವಾಳರ ಅಮಾನತುಗೊಂಡವರು. ನಿಡಗುಂದಿ ಗ್ರಾಮದ ಅಂಬೇಡ್ಕರ್ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 146 ವಿದ್ಯಾರ್ಥಿಗಳಿದ್ದರೂ ಅಗತ್ಯ ಕೊಠಡಿಗಳಿಲ್ಲ. ಹಾಗಾಗಿ, ಮಕ್ಕಳ ಸಂಖ್ಯೆ ಅನುಸಾರ ಕೊಠಡಿಗಳ ಮಂಜೂರಾತಿ ಮಾಡುವಂತೆ ಮಂಗಳವಾರ ಶಾಲೆಯ …
Read More »ಪರೀಕ್ಷೆ ಬರೆದು ಒಂದೇ ಗಂಟೆಯಲ್ಲಿ 50 ಸಾವಿರ ವಿದ್ಯಾರ್ಥಿಗಳ ಫಲಿತಾಂಶ:VTU RESULT RECORD
ಬೆಳಗಾವಿ: ಅಂತಿಮ ಸೆಮಿಸ್ಟರ್ ಬಿ.ಇ./ಬಿ.ಟೆಕ್/ಬಿ.ಪ್ಲಾನ್/ಬಿ.ಆರ್ಕ್/ಬಿ.ಎಸ್ಸಿ (ಆನರ್ಸ್) ಪರೀಕ್ಷೆಯ ಫಲಿತಾಂಶವನ್ನು ಪರೀಕ್ಷೆ ಮುಗಿದ ಕೇವಲ ಒಂದು ಗಂಟೆಯೊಳಗೆ ಪ್ರಕಟಿಸುವ ಮೂಲಕ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) ಹೊಸ ಇತಿಹಾಸ ನಿರ್ಮಿಸಿದೆ. ಮೇ 30ರಂದು ಅಂತಿಮ ಸೆಮಿಸ್ಟರ್ನ 50,321 ವಿದ್ಯಾರ್ಥಿಗಳ ಪರೀಕ್ಷೆಗಳು ಮುಗಿದ ಕೇವಲ ಒಂದು ಗಂಟೆಯ ನಂತರ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ ಎಂದು ವಿಟಿಯು ಕುಲಪತಿ ಪ್ರೊ. ಎಸ್. ವಿದ್ಯಾಶಂಕರ ತಿಳಿಸಿದ್ದಾರೆ. ಕಳೆದ ವರ್ಷ ಮೂರು ಗಂಟೆಯಲ್ಲಿ ಫಲಿತಾಂಶ ಪ್ರಕಟ: ಕಳೆದ ಬಾರಿ ಮೂರು …
Read More »ಬೈಲಹೊಂಗಲ ತಾಲೂಕಿನಾದ್ಯಂತ ಟ್ರ್ಯಾಕ್ಟರ್ ಟ್ರೈಲರ್ ಕಳ್ಳತನ…. ಐವರು ಕಳ್ಳರನ್ನು ಬಂಧಿಸಿ 14 ಲಕ್ಷ ಮೌಲ್ಯದ ಟ್ರೈಲರ್ ವಶಪಡಿಸಿಕೊಂಡ ಪೊಲೀಸರು..
ಬೈಲಹೊಂಗಲ ತಾಲೂಕಿನಾದ್ಯಂತ ಟ್ರ್ಯಾಕ್ಟರ್ ಟ್ರೈಲರ್ ಕಳ್ಳತನ…. ಐವರು ಕಳ್ಳರನ್ನು ಬಂಧಿಸಿ 14 ಲಕ್ಷ ಮೌಲ್ಯದ ಟ್ರೈಲರ್ ವಶಪಡಿಸಿಕೊಂಡ ಪೊಲೀಸರು…. ಬೈಲಹೊಂಗಲ ತಾಲೂಕಿನಲ್ಲಿ ಟ್ರ್ಯಾಕ್ಟರ್ ಟ್ರೈಲರ್ ಕಳ್ಳರನ್ನು ಬೈಲಹೊಂಗಲ ಠಾಣೆಯ ಪೊಲೀಸರು ಬಂಧಿಸಿದ್ದಾರೆ ಗೋಕಾಕ ತಾಲೂಕಿನ ನೆಲಗಂಟಿ ಗ್ರಾಮದ ಬಸಪ್ಪ ಸತ್ಯಪ್ಪ ತಳವಾರ 27 ಅಡಿವಪ್ಪ ಲಕ್ಷ್ಮಣ್ ಸಿಂತಮನಿ 28 ರಾಜು ಶೆಟ್ಟಿಪ್ಪ ನಾಯ್ಕ 26 ಸಿದ್ದಪ್ಪ ಶಿವಪ್ಪ ಚಿಕ್ಕೊಪ್ಪದವರ 20 ಪರಪ್ಪ ಬಸಪ್ಪ ಕಡ್ಲಿ 21 ಬಂಧಿತ ಆರೋಪಿಗಳು ಬಂದಿತ …
Read More »ಸರ್ಕಾರ ಮಾಡದ ಕಾರ್ಯ NGO ಗಳಿಂದ ಸಾಧ್ಯ – ಡಿ ಡಿ ಪಿ ಆಯ್ ಆರ್ ಶಿತಾರಾಂ
ಹುಕ್ಕೇರಿ : ಸರ್ಕಾರ ಮಾಡದ ಕಾರ್ಯ NGO ಗಳಿಂದ ಸಾಧ್ಯ – ಡಿ ಡಿ ಪಿ ಆಯ್ ಆರ್ ಶಿತಾರಾಂ ಸರ್ಕಾರ ಮಾಡದ ಕಾರ್ಯ ಗಳನ್ನು ಸರಕಾರೆತರ ಸಂಘ ಸಂಸ್ಥೆಗಳು ಮಾಡುತ್ತಿವೆ ಎಂದು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಶಿಕ್ಷಣ ಇಲಾಖೆ ಉಪ ನಿರ್ದೆಶಕ ಆರ್ ಶಿತಾರಾಂ ಹೇಳಿದರು. ಅವರು ಇಂದು 2025 – 26 ನೇ ಸಾಲಿನ ಶಾಲಾ ಪ್ರಾರಂಭೊತ್ಸವ ಅಂಗವಾಗಿ ಹುಕ್ಕೇರಿ ನಗರದ ಗುರುಶಾಂತೇಶ್ವರ ಅಕ್ಷರ ದಾಸೋಹ ಕೇಂದ್ರದಲ್ಲಿ …
Read More »