ಚಿಕ್ಕೋಡಿ (ಬೆಳಗಾವಿ): ಎತ್ತಿನ ಗಾಡಿ ಆಯತಪ್ಪಿ ಹಳ್ಳಕ್ಕೆ ಬಿದ್ದ ಪರಿಣಾಮ ಇಬ್ಬರು ಮಕ್ಕಳು ಹಾಗೂ ಒಂದು ಎತ್ತು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ನಾಗನೂರ ಪಿಎ ಗ್ರಾಮದಲ್ಲಿ ಮಂಗಳವಾರ (ಮೇ 27) ನಡೆದಿದೆ. ಗಣೇಶ್ ಸಂಜು ಕಾಂಬಳೆ (9), ದೀಪಕ್ ಸಂಜು ಕಾಂಬಳೆ (11) ಮೃತ ಅಣ್ಣ- ತಮ್ಮ. ಎತ್ತಿನಗಾಡಿಯಲ್ಲಿ ಸಂಬರಗಿಯಿಂದ ನಾಗನೂರ ಪಿಎ ಗ್ರಾಮಕ್ಕೆ ಹೋಗುತ್ತಿದ್ದಾಗ ದಾರಿಮಧ್ಯದಲ್ಲಿ ಈ ಅವಘಡ ಸಂಭವಿಸಿದೆ. ಒಟ್ಟು ನಾಲ್ಕು ಜನ …
Read More »ಮುಂಗಾರು ಮಳೆಗೆ ಬಾಯ್ತೆರೆದ ಗುಂಡಿಗಳು
ಬೆಳಗಾವಿ: ಮುಂಗಾರು ಮಳೆಗೆ ಕುಂದಾನಗರಿಯ ಮುಖ್ಯ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿದ್ದು, ವಾಹನ ಸವಾರರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಪ್ರತಿ ವರ್ಷವೂ ನಮಗೆ ಈ ಗೋಳು ತಪ್ಪಿದ್ದಲ್ಲ. ನಮ್ಮ ಪ್ರಾಬ್ಲಂ ಕೇಳುವವರೇ ಇಲ್ಲ ಎಂದು ಆಡಳಿತಕ್ಕೆ ಜನ ಹಿಡಿಶಾಪ ಹಾಕುತ್ತಿದ್ದಾರೆ. ಬೆಳಗಾವಿ ನಗರ ಪ್ರವೇಶಿಸುವ ರಾಷ್ಟ್ರೀಯ ಹೆದ್ದಾರಿ ಪಕ್ಕದ ಗಾಂಧಿ ನಗರ ಸೇತುವೆ ಬಳಿಯ ಸರ್ವೀಸ್ ರಸ್ತೆಯಲ್ಲಿ ಗುಂಡಿಗಳ ಸಾಮ್ರಾಜ್ಯ ಸೃಷ್ಟಿಯಾಗಿದೆ. ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸುತ್ತಿದ್ದಾರೆ. ಜನರು ಇಷ್ಟೆಲ್ಲಾ …
Read More »ಒಳಚರಂಡಿ ಕಳಪೆ ಕಾಮಗಾರಿಗೆ ಬೇಸತ್ತ ಜನ
ಹುಕ್ಕೇರಿ : ಒಳಚರಂಡಿ ಕಳಪೆ ಕಾಮಗಾರಿಗೆ ಬೇಸತ್ತ ಜನ ಕಳಪೆ ಮಟ್ಟದ ಒಳಚರಂಡಿ ಕಾಮಗಾರಿ ಅಧಿಕಾರಿಗಳ ವಿರುದ್ಧ ಜನರ ಹಿಡಿಶಾಪ ಹುಕ್ಕೇರಿ ನಗರದಲ್ಲಿ ನಡೆಯುತ್ತಿರುವ ಕಾಮಗಾರಿ ಪುರಸಭೆ ಅಧಿಕಾರಿಗಳು ಗುಣಮಟ್ಟ ಪರಿಶೀಲಿಸುವಂತೆ ಆಗ್ರಹ
Read More »ರೈತರು ಮುಂಗಾರು ಬೆಳೆ ಬೆಳೆಯಲು ಸಿದ್ದರಾಗಿ – ಶಾಸಕ ನಿಖಿಲ್ ಕತ್ತಿ
ಹುಕ್ಕೇರಿ : ರೈತರು ಮುಂಗಾರು ಬೆಳೆ ಬೆಳೆಯಲು ಸಿದ್ದರಾಗಿ – ಶಾಸಕ ನಿಖಿಲ್ ಕತ್ತಿ ಹುಕ್ಕೇರಿ ತಾಲೂಕಿನಲ್ಲಿ ಮಳೆ ಚನ್ನಾಗಿ ಆಗಿದ್ದರಿಂದ ರೈತರು ಜಮೀನುಗಳನ್ನು ಹದ ಮಾಡಿದ್ದರ ಹಿನ್ನಲೆಯಲ್ಲಿ ಕೃಷಿ ಇಲಾಖೆಯಿಂದ ರೈತರಿಗೆ ಬಿಜ ವಿತರಣಾ ಕಾರ್ಯಕ್ರಮ ಜರುಗಿತು. ಹುಕ್ಕೇರಿ ಕೃಷಿ ಇಲಾಖೆ ಆವರಣದಲ್ಲಿ ಜರುಗಿದಚಸರಳ ಸಮಾರಂಭದಲ್ಲಿ ಶಾಸಕ ನಿಖಿಲ್ ಕತ್ತಿ ಬೀಜಗಳಿಗೆ ಪೂಜೆ ಸಲ್ಲಿಸಿ ರೈತರಿಗೆ ಸೋಯಾಬೀನ, ಗೋವಿನ ಜೋಳ ಮತ್ತು ಹೆಸರು ಕಾಳುಗಳನ್ನು ವಿತರಣೆ ಮಾಡಿದರು. ನಂತರ …
Read More »ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮಿಡಿಯಾ ಜರ್ನಲಿಸ್ಟ್ ಅಸೊಸಿಯೇಷನ್ ಚಿಕ್ಕೋಡಿ ಘಟಕದ ಪದಾಧಿಕಾರಿಗಳ ಆಯ್ಕೆ…
ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮಿಡಿಯಾ ಜರ್ನಲಿಸ್ಟ್ ಅಸೊಸಿಯೇಷನ್ ಚಿಕ್ಕೋಡಿ ಘಟಕದ ಪದಾಧಿಕಾರಿಗಳ ಆಯ್ಕೆ… ಬೆಳಗಾವಿ : ಕೆಲ ತಿಂಗಳಗಳ ಹಿಂದಷ್ಟೇ ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮಿಡಿಯಾ ಜರ್ನಲಿಸ್ಟ್ ಅಸೊಸಿಯೇಷನ್ ಪ್ರಾರಂಭ ಮಾಡಲಾಗಿತು. ಈ ಸಂಸ್ಥೆಯ ಅಂಗವಾದ ಚಿಕ್ಕೋಡಿ ಎಲೆಕ್ಟ್ರಾನಿಕ್ ಮಿಡಿಯಾ ಜರ್ನಲಿಸ್ಟ್ ಅಸೊಸಿಯೇಷನ್ ಅನ್ನು ಇಂದು ಪ್ರಾರಂಭ ಮಾಡಿ ಅಧ್ಯಕ್ಷ, ಉಪಾಧ್ಯಕ್ಣ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ ಹಾಗೂ ಖಜಾಂಚಿಯನ್ನು ಆಯ್ಕೆ ಮಾಡಲಾಗಿದೆ. ಸೋಮವಾರ ಬೆಳಗಾವಿ ಕನ್ನಡ ಸಾಹಿತ್ಯ ಭವನದಲ್ಲಿ ನಡೆದ …
Read More »ರೈತರಿಗೆ ಬೀಜ ವಿತರಿಸಿದ ಚನ್ನರಾಜ ಹಟ್ಟಿಹೊಳಿ
ರೈತರಿಗೆ ಬೀಜ ವಿತರಿಸಿದ ಚನ್ನರಾಜ ಹಟ್ಟಿಹೊಳಿ ಹಿರೆಬಾಗೇವಾಡಿ: ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಸೋಮವಾರ ಹಿರೇಬಾಗೇವಾಡಿ ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ ರೈತರಿಗೆ ಬಿತ್ತನೆ ಬೀಜಗಳನ್ನು ವಿತರಿಸಿದರು. ಮುಂಗಾರು ಹಂಗಾಮು ಆರಂಭವಾಗಿರುವ ಹಿನ್ನೆಲೆಯಲ್ಲಿ, ಬೀಜಗಳನ್ನು ವಿತರಿಸಿ, ರೈತರ ಕೃಷಿ ಚಟುವಟಿಕೆಗಳಿಗೆ ಅವರು ಚಾಲನೆ ನೀಡಿದರು. ಈ ವೇಳೆ ರೈತರು, ಗ್ರಾಮದ ಮುಖಂಡರು, ಕೃಷಿ ಇಲಾಖೆಯ ಅಧಿಕಾರಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
Read More »ಕೋವಿಡ್ ಸಂಬಂಧಿಸಿದಂತೆ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ಆರೋಗ್ಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಸಭೆ
ಕೋವಿಡ್ ಸಂಬಂಧಿಸಿದಂತೆ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ಆರೋಗ್ಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಅಧಿಕಾರಿಗಳು, ತಜ್ಞರು ಮತ್ತು ಸಚಿವರುಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿಗಳು ಈ ಕೆಳಗಿನ ಸೂಚನೆಗಳನ್ನು ನೀಡಿದರು… *ಸದ್ಯಕ್ಕೆ ಆತಂಕ ಪಡುವ ಅಗತ್ಯವಿಲ್ಲ. ಆದರೆ, ಮುಂಚಿತವಾಗಿಯೇ ಮುಂದೆ ಸಂಭವಿಸಬಹುದಾದ ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯವಾದ ಎಲ್ಲಾ ಸವಲತ್ತು, ಸಲಕರಣೆಗಳನ್ನು ಸಜ್ಜುಗೊಳಿಸಿಟ್ಟುಕೊಳ್ಳಬೇಕು. *ಸದ್ಯಕ್ಕೆ ಆತಂಕ ಪಡುವ …
Read More »ಮಳೆ ರಭಸಕ್ಕೆ ಬೆಳಗಾವಿ – ಗೋವಾ ಹೆದ್ದಾರಿ ಬಂದ್…
ಮಳೆ ರಭಸಕ್ಕೆ ಕೊಚ್ಚಿ ಹೋದ ರಸ್ತೆ…ಮುಳುಗಡೆಯ ಹಂತದಲ್ಲಿ ನಿರ್ಮಾಣಾಧೀನ ಸೇತುವೆ…. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮಲಪ್ರಭಾ ನದಿಯಲ್ಲಿ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಬೆಳಗಾವಿ-ಗೋವಾ ಸಂಪರ್ಕಿಸುವ ಹೆದ್ದಾರಿ ಬಂದ್ ಆಗಿದ್ದು, ಬೆಳಗಾವಿ, ಖಾನಾಪೂರ ಮತ್ತು ರಾಮನಗರದ ಜನರು ಪೇಚಿಗೆ ಸಿಲುಕಿದ್ದಾರೆ. ಖಾನಾಪುರ ತಾಲೂಕಿನ ಕಣಕುಂಬಿ ಇದು ಮಲಪ್ರಭಾ ನದಿ ಉಗಮ ಸ್ಥಾನ. ಇದೇ ಮಾರ್ಗದಲ್ಲಿರುವ ಕಸಮಳಿ ಗ್ರಾಮದ ಬಳಿ ನದಿಗೆ ಅಡ್ಡಲಾಗಿ ಸೇತುವೆ ಕಾಮಗಾರಿ ನಡೆಯುತ್ತಿದೆ. …
Read More »ಬೆಳಗಾವಿ ಕ್ಯಾಂಪ್ ಧೋಬಿ ಘಾಟ್’ನಲ್ಲಿ ಉದ್ಯಾನವನ 18 ಲಕ್ಷದ ಕಾಮಗಾರಿಗೆ ಶಾಸಕ ಆಸೀಫ್ ಸೇಠ್ ಚಾಲನೆ….
ಬೆಳಗಾವಿ ಕ್ಯಾಂಪ್ ಧೋಬಿ ಘಾಟ್’ನಲ್ಲಿ ಉದ್ಯಾನವನ…ನೀರು ಕೊಯ್ಲು ವ್ಯವಸ್ಥೆ… 18 ಲಕ್ಷದ ಕಾಮಗಾರಿಗೆ ಶಾಸಕ ಆಸೀಫ್ ಸೇಠ್ ಚಾಲನೆ…. ಬೆಳಗಾವಿಯ ಕ್ಯಾಂಪ್ ಧೋಬಿ ಘಾಟ್ ಪ್ರದೇಶದಲ್ಲಿ ಉದ್ಯಾನವನ ಮತ್ತು ನೀರು ಕೊಯ್ಲು ವ್ಯವಸ್ಥೆಗೆ ಉತ್ತರ ಶಾಸಕ ಆಸೀಫ್ ಸೇಠ್ ಅವರು ಚಾಲನೆಯನ್ನು ನೀಡಿದರು. ಬೆಳಗಾವಿಯ ಕ್ಯಾಂಪ್ ಧೋಬಿ ಘಾಟ್ ಪ್ರದೇಶದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ 19 ಲಕ್ಷ ರೂಪಾಯಿ ಅನುದಾನದಲ್ಲಿ ಸುಸಜ್ಜಿತ ಉದ್ಯಾನವನ ಮತ್ತು ನೀರು ಕೊಯ್ಲು ವ್ಯವಸ್ಥೆ ನಿರ್ಮಾಣಕ್ಕೆ ಉತ್ತರ …
Read More »ವಾಯುರೂಪದಲ್ಲಿ ಮತ್ತೆ ಬಾಧೆ! ಮೇಘಸ್ಫೋಟದ ಬಗ್ಗೆ ಕೋಡಿಮಠ ಸ್ವಾಮೀಜಿ ಭವಿಷ್ಯ
ಬೆಳಗಾವಿ: ಮತ್ತೆ ವಾಯುರೂಪದಲ್ಲಿ ಬಾಧೆ ಅಪ್ಪಳಿಸಲಿದೆ. ಮೇಘಸ್ಫೋಟವೂ ಸಂಭವಿಸಿ, ಸಾವು-ನೋವು ಹೆಚ್ಚಾಗಲಿದೆ. ‘ಅರಸನ ಅರಮನೆಗೆ ಕಾರ್ಮೋಡ ಕವಿದಿದೆ’ ಎನ್ನುವ ಮೂಲಕ ಅನೇಕ ರಾಜಕೀಯ ಮುಖಂಡರು ಸಾವನ್ನಪ್ಪುತ್ತಾರೆ ಎಂದು ಕೋಡಿಮಠದ ಡಾ. ಶಿವಯೋಗಿ ಶಿವಾನಂದ ಸ್ವಾಮೀಜಿ ಮತ್ತೆ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಐದು ವರ್ಷ ಕೋವಿಡ್ ಮಹಾಮಾರಿ ಬೇರೆ ಬೇರೆ ರೂಪದಲ್ಲಿ ಇರಲಿದೆ. ಜನರು ಹುಷಾರಾಗಿ ಇರುವುದು ಒಳ್ಳೆಯದು. ಉಸಿರಾಟಕ್ಕೆ ತೊಂದರೆಯಾಗಿ ಸಾವು ಬರುವ ಸಾಧ್ಯತೆಗಳಿವೆ ಎಂದರು. …
Read More »