Breaking News

ಬೆಳಗಾವಿ

ಗೋಕಾಕ ಉದ್ಯಿಮಿ ಕೊಲೆ ಪ್ರಕರಣ ಭೇದಿಸಿದ ಎಲ್ಲ ಅಧಿಕಾರಿಗಳನ್ನು ಹೊಗಳಿದ ಎಸ್ಪಿ ಪಾಟೀಲ

ಗೋಕಾಕ: ಈಚೆಗೆ ಕೊಲೆಯಾದ ನಗರದ ಸಗಟು ವ್ಯಾಪಾರಿ ಶವ ಗುರುವಾರ ರಾತ್ರಿ ಪತ್ತೆಯಾಗಿದೆ. ತಾಲ್ಲೂಕಿನ ಪಂಚನಾಯಕನ ಹಟ್ಟಿ ಗ್ರಾಮದ ಹೊರವಲಯದಲ್ಲಿ, ಮಾರ್ಕಂಡೇಯ ನದಿ ಕಾಲುವೆಯಲ್ಲಿ ಶವ ಕೊಳೆತ ಸ್ಥಿತಿಯಲ್ಲಿ ಸಿಕ್ಕಿದೆ. ನಗರದ ಹಿಲ್‌ ಗಾರ್ಡನ್‌ ರಸ್ತೆಯ ನಿವಾಸಿ ರಾಜು ಝಂವರ (53) ಅವರನ್ನು ಫೆ.10ರಂದು ಅಪಹರಿಸಿ ಕೊಲೆ ಮಾಡಲಾಗಿತ್ತು. ಶವವನ್ನು ಗೋಕಾಕ ಫಾಲ್ಸ್‌ ಕಾಲುವೆಯಲ್ಲಿ ಎಸೆದಿದ್ದಾಗಿ ಆರೋಪಿಗಳು ಹೇಳಿಕೆ ನೀಡಿದ್ದರು. ಪೊಲೀಸ್‌, ಅಗ್ನಿಶಾಮಕ ಸಿಬ್ಬಂದಿ ಸೇರಿ 350 ಮಂದಿಯ ತಂಡ ಶವಕ್ಕಾಗಿ …

Read More »

ಅಥಣಿ | ಟ್ರ್ಯಾಕ್ಟರ್‌ ಪಲ್ಟಿ: ಇಬ್ಬರಿಗೆ ಗಂಭೀರ ಗಾಯ

ಅಥಣಿ: ಪಟ್ಟಣದಲ್ಲಿ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ ಶುಕ್ರವಾರ ಪಲ್ಟಿಯಾಗಿದ್ದು, ವಾಹನದಡಿ ಸಿಲುಕಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಒಬ್ಬರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಅಗ್ರಾಣಿ ಇಂಗಳಗಾವಿಯ ಕಲ್ಪನಾ ಮಾದರ, ಬಣಜವಾಡದ ಶ್ರೀದೇವಿ ಮಾಂಗ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಮಹಾರಾಷ್ಟ್ರದ ಮಿರಜ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.   ಡಿವೈಎಸ್‌ಪಿ ಶ್ರೀಪಾದ ಜಲ್ದೆ, ಸಿಪಿಐ ರವೀಂದ್ರ ನಾಯ್ಕೊಡಿ, ಪಿಎಸ್‌ಐ ಶಿವಶಂಕರ ಮುಖರಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪೊಲೀಸರು ಹಾಗೂ ಸ್ಥಳೀಯರು ಜೆಸಿಬಿ ಯಂತ್ರದ ನೆರವಿನಿಂದ ರಕ್ಷಣಾ …

Read More »

ಸಾಧನೆಗೆ ತಾಳ್ಮೆ, ಏಕಾಗ್ರತೆ ಅವಶ್ಯ: ಜಿ. ಎಂ. ಗಣಾಚಾರಿ

ಕಿತ್ತೂರು: : ಕಾಲೇಜು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಶ್ರೇಷ್ಠ ಸಾಧನೆ ಮಾಡಿದವರು ಹೆಚ್ಚಾಗಿ ಉತ್ತರ ಕರ್ನಾಟಕದವರೆ ಆಗಿದ್ದಾರೆ. ಇಲ್ಲಿಂದ ವಲಸೆ ಹೋಗಿ ಅಲ್ಲಿ ನೆಲೆಸಿದವರಾಗಿದ್ದಾರೆ ಎಂದು ಆರ್‌ಜಿಎಸ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಜಿ.ಎಂ. ಗಣಾಚಾರಿ ತಿಳಿಸಿದರು.   ಇಲ್ಲಿನ ಜ್ಞಾನಗಂಗಾ ಶಿಕ್ಷಣ ಸಂಸ್ಥೆಯಿಂದ ಗುರುವಾರ ಹಮ್ಮಿಕೊಂಡಿದ್ದ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಅವರು ಮಾತನಾಡಿದರು. ಸಾಧನೆಗೆ ಏಕಾಗ್ರತೆ ಮತ್ತು ತಾಳ್ಮೆ ಬೇಕು. ಪ್ರಾಮಾಣಿಕತೆ ಇರುವವ ಸಾಧಕ ಆಗುತ್ತಾನೆ. ಪ್ರಾಮಾಣಿಕತೆ ಇಲ್ಲದ …

Read More »

ಚುನಾವಣಾ ಪ್ರಚಾರ ಸಾಮಗ್ರಿಗಳ ದರ ನಿಗದಿ

ಬೆಳಗಾವಿ: ಚುನಾವಣೆ ಸಂದರ್ಭದಲ್ಲಿ ಅಭ್ಯರ್ಥಿಗಳ ಪ್ರಚಾರಕ್ಕೆ ಬಳಸುವ ಕೆಲವು ಸಾಮಗ್ರಿಗಳ ದರಗಳನ್ನು ತುಸು ಕಡಿಮೆ ಮಾಡಲು, ಗುರುವಾರ ಇಲ್ಲಿ ನಡೆದ ಅಧಿಕಾರಿಗಳು ಹಾಗೂ ವಿವಿಧ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ನಿರ್ಧರಿಸಲಾಯಿತು. ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರಚಾರ ಸಾಮಗ್ರಿಗಳು, ವಾಹನ, ಪೋಸ್ಟರ್‌, ಮೈಕ್‌ ಸೇರಿದಂತೆ ವಿವಿಧ ಸಾಮಗ್ರಿಗಳ ಮಾರುಕಟ್ಟೆ ದರವನ್ನು ಪರಿಶೀಲಿಸಲಾಯಿತು.   ನೀತಿ ಸಂಹಿತೆ ಜಾರಿ ಆದ ಸಂದರ್ಭದಲ್ಲಿ ಇರುವ ಮಾರುಕಟ್ಟೆ ದರ ಹಾಗೂ ಗುಣಮಟ್ಟ ಅಧರಿಸಿ, …

Read More »

ವಿದ್ಯುತ್ ಸಮಸ್ಯೆ ಪರಿಹಾರ ಸಭೆ ರೈತರ ಕುಂದುಕೊರತೆಗಳಿಗೆ ಪರಿಹಾರ

ಬೆಳಗಾವಿ: ಹೆಸ್ಕಾಂ ನಗರ ಉಪವಿಭಾಗ-3 ರ ನೆಹರೂ ನಗರ ಬೆಳಗಾವಿ ಕಚೇರಿಯಲ್ಲಿ ರೈತ ಗ್ರಾಹಕರ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸಲು ಫೆ. ಇಂದು ಬೆಳಿಗ್ಗೆ 10.30ಕ್ಕೆ ಸಭೆ ನಡೆಸಲಾಗುವುದು. ರೈತ ಗ್ರಾಹಕರು ತಮ್ಮ ಸಮಸ್ಯೆ ಹಾಗೂ ಕುಂದು ಕೊರತೆಗಳ ಕುರಿತು ಸಭೆಯಲ್ಲಿ ಚರ್ಚಿಸಿ, ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಬೆಳಗಾವಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More »

ಕೊನೆಯದಾಗಿ ಸ್ವೀಕರಿಸಿದ್ದ ಕರೆ ಆಧರಿಸಿ ಆರೋಪಿತರನ್ನುಬಂಧಿಸಿದ್ ಪೊಲೀಸರು

ಗೋಕಾಕ: ಇಲ್ಲಿನ ಉದ್ಯಮಿ ರಾಜು ಝಂವರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವೈದ್ಯರು ಸೇರಿದಂತೆ ಮೂವರು ಆರೋಪಿತರನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ. ಪ್ರಥಮ ಆರೋಪಿ ಗೋಕಾಕ ಚನ್ನಮ್ಮನಗರ ನಿವಾಸಿ ಸಚಿನ್ ಶಂಕರ್ ಶಿರಗಾವೆ(36), ಎರಡನೇ ಆರೋಪಿ ಸಿಟಿ ಆಸ್ಪತ್ರೆ ವೈದ್ಯ, ಹುಕ್ಕೇರಿ ತಾಲೂಕು ಶಿರಢಾಣ ಸಮೂಲದ  ಡಾ. ಶಿವಾನಂದ ಕಾಡಗೌಡ ಪಾಟೀಲ (28) ಹಾಗೂ ರೆಫ್ರಿಜರೇಟರ್ ರಿಪೇರಿ ಕೆಲಸ ಮಾಡಿಕೊಂಡಿದ್ದ ಶಾಪಥ್ ಇರ್ಷಾದ್ ತ್ರಾಸಗರ(25) ಬಂಧಿತರು. ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿಂತೆ ಉಂಟಾಗಿದ್ದ …

Read More »

ಮಲಪ್ರಭಾ ನದಿ ಕಲುಷಿತ; ಪರಿಶೀಲನೆಗೆ ಸೂಚನೆ:

ಬೆಳಗಾವಿ  : ಮಲಪ್ರಭಾ ಮತ್ತು ಘಟಪ್ರಭಾ ನದಿ ತೀರಗಳಲ್ಲಿನ ಅತಿಕ್ರಮಣವನ್ನು ತೆರವುಗೊಳಿಸಲು ಮೊದಲ ಹಂತವಾಗಿ ಹಳೆಯ ಉಪಯೋಗದಲ್ಲಿ ಇಲ್ಲದಿರುವ ಬ್ರಿಡ್ಜ್, ಬ್ಯಾರೇಜ್ ತೆರವುಗೊಳಿಸಲು ಹಾಗೂ ಅತಿಕ್ರಮಣಗೊಂಡಿರುವ ಜಮೀನುಗಳ ಗಡಿಗಳಿಗೆ ಕಲ್ಲುಗಳನ್ನು ಹಾಕಿಸಲು ಅಂದಾಜು ಪತ್ರಿಕೆಯನ್ನು ಆದ್ಯತೆ ಮೇರೆಗೆ 10 ದಿನದೊಳಗಾಗಿ ಸಲ್ಲಿಸಬೇಕು ಎಂದು ಪ್ರಾದೇಶಿಕ ಆಯುಕ್ತರಾದ ಎಂ.ಜಿ.ಹಿರೇಮಠ ಅವರು ನೀರಾವರಿ ಇಲಾಖೆಯ ಅಭಿಯಂತರರಿಗೆ ಸೂಚನೆ ನೀಡಿದರು. ಮಲಪ್ರಭಾ ಹಾಗೂ ಘಟಪ್ರಭಾ ನದಿ ತೀರಗಳಲ್ಲಿನ ಅತಿಕ್ರಮಣವನ್ನು ತೆರವುಗೊಳಿಸುವ ಗುರುವಾರ(ಫೆ.16) ನಡೆದ ವಿಭಾಗದ …

Read More »

ಜಾಕ್‌ವೆಲ್‌ ಮುತ್ತಿಗೆ ಯತ್ನ: ಲಘು ಲಾಠಿ ಪ್ರಹಾರ

ಸವದತ್ತಿ: ಬಾಕಿ ವೇತನ ಹಾಗೂ ನೇಮಕಾತಿ ಆದೇಶ ನೀಡಲು ಆಗ್ರಹಿಸಿ ಧಾರವಾಡದ ಜಲಮಂಡಳಿಯ ದಿನಗೂಲಿ ಕಾರ್ಮಿಕರು ಪಟ್ಟಣದಲ್ಲಿ ಬುಧವಾರ ನಡೆಸಿದ ಧರಣಿ ವೇಳೆ, ನೂಕಾಟ- ತಳ್ಳಾಟ ನಡೆದಿದ್ದರಿಂದ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದರು. ಈ ಸಂದರ್ಭದಲ್ಲಿ 12 ಮಂದಿಗೆ ಸಣ್ಣಪುಟ್ಟ ಗಾಯಗಳಾದವು.   ಹುಬ್ಬಳಿ- ಧಾರವಾಡ ನಗರಗಳಿಗೆ ನೀರು ಸರಬರಾಜು ಮಾಡುವ ಇಲ್ಲಿನ ಜಾಕ್‌ವೆಲ್ ಬಳಿ ಬೆಳಿಗ್ಗೆಯಿಂದ ಶಾಂತಿಯುತ ಧರಣಿ ನಡೆಸಲಾಯಿತು. ಮಧ್ಯಾಹ್ನದವರೆಗೂ ಅಧಿಕಾರಿಗಳು ಸ್ಥಳಕ್ಕೆ ಬಾರದ ಕಾರಣ, …

Read More »

ಬೀದಿ ದೀಪ ಅಳವಡಿಸಿ ಇಂಥ ರೀತಿಯ ಪರಿಸ್ಥಿತಿ ಕಳೆದ ಐದು ವರ್ಷಗಳಿಂದಲೂ ಇದೆ.

  ಬೆಳಗಾವಿ: ಇಲ್ಲಿನ ಆದರ್ಶ ನಗರದ ಆದರ್ಶ ಶಾಲೆಯಿಂದ ಹಿಡಿದು ವಡಗಾಂವಿ (ಗ್ರಾಮೀಣ ಪೊಲೀಸ್ ಠಾಣೆ ಹಿಂಭಾಗ) ಮಾರ್ಗದಲ್ಲಿ ವಿದ್ಯುತ್‌ ಕಂಬಗಳಿವೆ. ಆದರೆ, ವಿದ್ಯುತ್‌ ದೀಪಗಳೇ ಇಲ್ಲ. ಇದರಿಂದ ಈ ಪ್ರದೇಶ ದಿನವೂ ಕತ್ತಲು ಆವರಿಸಿರುತ್ತದೆ. ಇಂಥ ರೀತಿಯ ಪರಿಸ್ಥಿತಿ ಕಳೆದ ಐದು ವರ್ಷಗಳಿಂದಲೂ ಇದೆ. ಈ ಬಗ್ಗೆ ಹಲವು ಬಾರಿ ಮಹಾನಗರ ಪಾಲಿಕೆಯ ಸಂಬಂಧಿಸಿದ ಅಧಿಕಾರಿಗಳಿಗೆ ದೂರು ನೀಡಿದ್ದೇನೆ. ಆದರೂ ಯಾರೂ ಕಣ್ಣೆತ್ತಿ ನೋಡಿಲ್ಲ. ಸರ್ಕಾರದ ‘ಜನಹಿತ’ ವೆಬ್‌ಸೈಟ್‌ನಲ್ಲೂ …

Read More »

ಬೃಹತ್ ಹಳದಿ ಕುಂಕುಮ ಕಾರ್ಯಕ್ರಮ : ಶಾಸಕ ಅನಿಲ ಬೆನಕೆ ಬಾಗಿ

ಬೆಳಗಾವಿ :ಬೆಳಗಾವಿ ನಗರದ ಬಸವಣಕುಡಚಿಯಲ್ಲಿ ಮಂಗಳವಾರದAದು ಶಾಸಕ ಅನಿಲ ಬೆನಕೆ ಅವರ ನೇತೃತ್ವದಲ್ಲಿ ಬೃಹತ್ ಹಳದಿ ಕುಂಕುಮ ಕಾರ್ಯಕ್ರಮಆಯೋಜನೆ ಮಾಡಲಾಗಿತ್ತು.ಬಸವಣಕುಡಚಿಗ್ರಾಮದ ಬಸವಣ್ಣ ಮಂದಿರಆವರಣದಲ್ಲಿಆಯೋಜನೆ ಮಾಡಲಾದಕಾರ್ಯಕ್ರಮದಲ್ಲಿಎರಡು ಸಾವಿರಕ್ಕೂ ಹೆಚ್ಚು ಮಹಿಳೆಯರು ಹಳದಿ ಕುಂಕುಮ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮವನ್ನುದೀಪ ಪ್ರಜ್ವಲನೆ ಮಾಡುವುದರ ಮೂಲಕ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಶಾಸಕ ಅನಿಲ ಬೆನಕೆರವರು ನಾನು ಶಾಸಕನಾಗುವ ಮುಂಚೆಯಿAದಲೂ ಬಸವಣಕುಡಚಿಜನ ನನ್ನ ಮೇಲೆ ತುಂಬಾ ಪ್ರೀತಿ ವಿಶ್ವಾಸವನ್ನುಇಟ್ಟಿದ್ದು, ೨೦೧೮ ರಚುನಾವಣೆಗೆ ನಾನು ಸ್ಪರ್ದೆ …

Read More »