Breaking News

ಬೆಳಗಾವಿ

ಐವರು ಸಮಾಜಘಾತುಕರಿಗೆ ಬೆಳಗಾವಿಯಿಂದ ಗಡಿಪಾರು ಮಾಡಿದ ಡಿಸಿಪಿ ಗಡಾದಿ

ಬೆಳಗಾವಿ: ನಗರದಲ್ಲಿ ಮಟ್ಕಾ, ಜೂಜಾಟ, ಅಕ್ರಮ ಸಾರಾಯಿ ಮಾರಾಟ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಐವರನ್ನು ಜಿಲ್ಲೆಯಿಂದ ಗುರುವಾರದಿಂದ ಗಡಿಪಾರು ಮಾಡುವ ಮೂಲಕ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವೀಂದ್ರ ಗಡಾದಿ ಅವರು ಸಮಾಜಘಾತುಕರಿಗೆ ಎಚ್ಚರಿಕೆ ನೀಡಿದ್ದಾರೆ.   ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯ ನಗರದ ಖಂಜರ ಗಲ್ಲಿಯ ಮಹ್ಮದಶಫಿ ಮೋದಿನಸಾಬ ತಹಶೀಲ್ದಾರ(68), ಇಜಾರಹ್ಮದ ಮಹ್ಮದ ಇಸಾಕ ನೇಸರಿಕರ(48), ಮಾಳಮಾರುತಿ ಠಾಣೆ ವ್ಯಾಪ್ತಿಯ ಗ್ಯಾಂಗವಾಡಿಯ ಜಯಪಾಲ ಲೋಂಡೆ(36), ಕಣಬರ್ಗಿ ಪಾಟೀಲ …

Read More »

ಮುತಗಾ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಹೇಮಲತಾ ಕಿವಡಸಣ್ಣವರ ವರ್ಗಾವಣೆ ಕೋರಿ ಪ್ರತಿಭಟನೆ

ಮುತಗಾ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಹೇಮಲತಾ ಕಿವಡಸಣ್ಣವರ ಅವರನ್ನು ವರ್ಗಾವಣೆ ಮಾಡಲು ಕೋರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎದುರು ಪ್ರತಿಭಟನೆ ನಡೆಸಲಾಯಿತು. ಮುತಗಾ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಹೇಮಲತಾ ಕಿವಡಸಣ್ಣವರ ಅವರು ಸಮಯಕ್ಕೆ ಸರಿಯಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬರುವುದಿಲ್ಲ. ಮತ್ತು ಕಾಳಜಿ ಪೂರ್ವಕವಾಗಿ ರೋಗಿಗಳೊಂದಿಗೆ ವ್ಯವಹರಿಸುವದಿಲ್ಲ ಜೊತೆಗೆ ಆಸ್ಪತ್ರೆಯಲ್ಲಿ ಯಾವದೇ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗಿಲ್ಲ ಎಂದು ಸತೀಶ್ ಶಹಾಪುರಕರ …

Read More »

ಗೊಡಚಿ ವೀರಭದ್ರೇಶ್ವರ ಜಾತ್ರೆಯಲ್ಲಿ ಬೆಳಗಾವಿ ಹುಕ್ಕೇರಿ ಹಿರೇಮಠದ ಶ್ರೀ

ಗೊಡಚಿ ವೀರಭದ್ರೇಶ್ವರ ಜಾತ್ರೆಯಲ್ಲಿ ಬೆಳಗಾವಿ ಹುಕ್ಕೇರಿ ಹಿರೇಮಠದ ಶ್ರೀ ಷ ಬ್ರ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳವರ ಸಂದೇಶ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಗೊಡಚಿಯ ಶ್ರೀ ವೀರಭದ್ರೇಶ್ವರ ಜಾತ್ರೆ ಉತ್ತರ ಕರ್ನಾಟಕದಲ್ಲಿ ಅತಿ ದೊಡ್ಡ ಜಾತ್ರೆ ನಾವು ಬಾಲ್ಯದಲ್ಲಿ ಜಾತ್ರೆಯನ್ನು ನೋಡಿ ಆನಂದಪಟ್ಟ ಕ್ಷಣಗಳು ಇವತ್ತಿಗೂ ಕೂಡ ನೆನಪಿನಲ್ಲಿವೆ. ರಾಮದುರ್ಗ ತಾಲೂಕಿನ ಎಂ ಚಂದರಗಿ ಗ್ರಾಮ ನಮ್ಮ ಹುಟ್ಟೂರು ಈ ಗ್ರಾಮದಿಂದ ಜಾತ್ರೆಗೆ ಬರುವಾಗ ಪಡುವ ಆನಂದ ಬಹುಶಃ ಅಷ್ಟಿಸ್ಟಲ್ಲ …

Read More »

ದೆಹಲಿಯಲ್ಲಿಯೂ ಮರಾಠಾ ಅಸ್ತ್ರ ಪ್ರಯೋಗಿಸಿದ ರಮೇಶ್ ಜಾರಕಿಹೊಳಿ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಚುನಾವಣಾ ತಯಾರಿಗೆ ಗೋಕಾಕ ಸಾಹುಕಾರ ರಮೇಶ್ ಜಾರಕಿಹೊಳಿ ಜೋರಾದ ಕಸರತ್ತು ನಡೆಸಿದ್ದು, ಅತಿ ಹೆಚ್ಚು ಮರಾಠಾ ಸಮಾಜದವರನ್ನು ಹೊಂದಿರುವ ಗ್ರಾಮೀಣದಲ್ಲಿ ಬಿಜೆಪಿ ಟಿಕೆಟ್ ಮರಾಠಾ ಸಮುದಾಯದ ಅಭ್ಯರ್ಥಿಗೇ ನೀಡುವಂತೆ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಅವರಲ್ಲಿ ಮನವಿ ಮಾಡಿದ್ದಾರೆ.   ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ ಅವರನ್ನು ಮಣಿಸಲು ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ ಹಲವು ಕಾರ್ಯತಂತ್ರ ರೂಪಿಸುತ್ತಿದ್ದು, ಬೆಳಗಾವಿಯಿಂದ ಬೆಂಗಳೂರಿಗೆ, ಹುಬ್ಬಳ್ಳಿಗೆ ಈಗ ದೆಹಲಿಗೆ ಮರಾಠಾ …

Read More »

ಕನ್ನಡಿಗರನ್ನ ಮಹಾರಾಷ್ಟ್ರದಿಂದ ಓಡಿಸಬೇಕಾಗುತ್ತೆ’: ಮಹಾರಾಷ್ಟ್ರ ನಾಯಕರ ಉದ್ಧಟತನದ ಹೇಳಿಕೆ.

ಚಿಕ್ಕೋಡಿ: ಕರ್ನಾಟಕ ಮತ್ತು ಮಹಾಷ್ಟ್ರದ ಗಡಿ ವಿವಾದ ದಿನೇ ದಿನೇ ಕಾವು ಪಡೆಯುತ್ತಿದೆ. ಮಹಾರಾಷ್ಟ್ರದಲ್ಲಿರುವ ಕನ್ನಡಿಗರೇ ಖಡಕ್​ ಉತ್ತರ ನೀಡಿದರೂ ಇನ್ನೂ ಮಹಾ ಪುಂಡರ ಆಟಾಟೋಪ ನಿಲ್ಲುತ್ತಿಲ್ಲ. ಉದ್ಧವ್​ ಠಾಕ್ರೆ ಬಣದವರು ಗಡಿ ಭಾಗದಲ್ಲಿ ‘ಮಹಾರಾಷ್ಟ್ರಕ್ಕೆ ಕರ್ನಾಟಕ ಬಸ್ ಬರೋದು ಬ್ಯಾನ್ ಮಾಡಬೇಕಾಗುತ್ತೆ’ ಎಂದು ಉದ್ಧಟತನದ ಹೇಳಿಕೆ ನೀಡಿದ್ದಾರೆ.   ನಿನ್ನೆ ಉದ್ಧವ್ ಠಾಕ್ರೆ ಬಣದಿಂದ ಗಡಿಯಲ್ಲಿ ಪ್ರತಿಭಟನೆ ನಡೆದಿತ್ತು. ಇಂದು ರಾಜ್ ಠಾಕ್ರೆ ಬಣದವರಿಂದ ಗಡಿಯಲ್ಲಿ ಪ್ರತಿಭಟನೆ ನಡೆದಿದೆ. ಇವರ …

Read More »

“ಮಹಾಪರಿನಿರ್ವಾಣ” ದಿನ ನಿಮಿತ್ಯ ಕೇ೦ದ್ರ ಕಾರಾಗೃಹದಲ್ಲಿ ಕಾರ್ಯಕ್ರಮ

 ಕೇ೦ದ್ರ ಕಾರಾಗೃಹ ಬೆಳಗಾವಿಯಲ್ಲಿ “ಮಾಹಾಪರಿನಿರ್ವಾಣ” ದಿನ ನಿಮಿತ್ಯ ಕಾರ್ಯಕ್ರಮ ಆಯೋಜಿಸಲಾಗಿತ್ತು ಕಾರಾಗೃಹದ ಮುಖ್ಯ ಅಧಿಕ್ಷಕರಾದ ಶ್ರೀ ಕೃಷ್ಣಾ ಕುಮಾರ ಅವರು ಭಾರತರತ್ನ ಸ೦ವಿಧಾನ ಶಿಲ್ಪಿ ಡಾ|| ಬಾಬಾಸಾಹೇಬ ಅ೦ಬೇಡ್ಕರರ ಭಾವಚಿತ್ರದ ಪೂಜೆ ನೆರವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮ ಉದ್ದೇಶಿಸಿ ಶ್ರೀ ಕೃಷ್ಣ ಕುಮಾರ ಮಾತನಾಡಿ ಡಾ|| ಬಿ. ಆರ್ ಅ೦ಬೇಡ್ಕರ ಅವರ ಪುಣ್ಯ ತಿಥಿಯನ್ನು ಪ್ರತಿವರ್ಷ ಆಚರಿಸಲಾಗುತ್ತಿದೆ ಡಿಸೆ೦ಬರ ೦೬,೧೯೫೬ ರ೦ದು ಬಾಬಾಸಾಹೇಬರು ದೇಹತ್ಯಾಗ ಮಾಡಿದರು ಈ ದಿನವನ್ನು …

Read More »

ಅಥಣಿ ಅಭಿವೃದ್ಧಿಗೆ ಕಾಲ ಕೂಡಿ ಬರಲು ಇಲ್ಲಿನ ಜನಪ್ರತಿನಿಧಿ & ಅಧಿಕಾರಿಗಳ ಇಚ್ಚಾಶಕ್ತಿ ಕೊರತೆ:

ಅಥಣಿ ಪಟ್ಟಣದ ಅಭಿವೃದ್ಧಿಗೆ ಕಾಲ ಕೂಡಿ ಬರಲು ಇಲ್ಲಿನ ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ಇಚ್ಚಾಶಕ್ತಿಯ ಕೊರತೆಯೆ ಕಾರಣವೆಂದು ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಆರೋಪಿಸಿದ್ದಾರೆ. ಅಥಣಿಯ ತಮ್ಮ ಸ್ವಗೃಹದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೆ ಏರಿಸಿಲು ತಾವು ಪುರಸಭೆ ಸದಸ್ಯರಾಗಿದ್ದ ಸಮಯದಿಂದಲೂ ಪ್ರಸ್ತಾವನೆ ಸಲ್ಲಿಸುತ್ತ ಬರುತ್ತಿದ್ದರೂ ಕೂಡ ತಾಂತ್ರಿಕ ಕಾರಣ ಇಟ್ಟುಕೊಂಡು ಪುರಸಭೆಯನ್ನು ನಗರಸಭೆಯನ್ನಾಗಿಸಲು ಅಡ್ಡಿಪಡಿಸಲಾಗುತ್ತಿದೆ. 2011ರ ಜನಗಣತಿಯಲ್ಲಿ ಅಥಣಿ ಪುರಸಭೆ ವ್ಯಾಪ್ತಿಯಲ್ಲಿ ನಲವತ್ತು ಸಾವಿರದಷ್ಟು ಜನಸಂಖ್ಯೆ …

Read More »

ಯಮ್ಮಲ್ಲನ ಕ್ಷೇತ್ರದಲ್ಲಿ ಕೆಲ ಭಕ್ತಾಧಿಗಳ ಮೇಲೆ ಹಲ್ಲೆ, ಸುಳ್ಳು ವದಂತಿ: S.P.ಸಂಜೀವ ಪಾಟೀಲ

ಕೆಲವು ಸಾಮಾಜಿಕ ಜಾಲತಾಣದಲ್ಲಿ ಬೆಳಗಾವಿಗೆ ಬಂದಂಥ ಭಕ್ತಾದಿಗಳ ಮೇಲೆ ಹಲ್ಲೆ ನಡೆದಿದೆ ಎಂದು ವಂದಂತಿ ಹಬ್ಬಿದೆ. ಅಲ್ಲಿ ಯಾವುದೇ ರೀತಿಯ ತೊಂದರೆಯಾಗಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ ಹೇಳಿದರು. ಬುಧವಾರ ಎಸ್ಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸವದತ್ತಿ ಯಮ್ಮಲ್ಲನ ಕ್ಷೇತ್ರದಲ್ಲಿ ಕೆಲ ಭಕ್ತಾಧಿಗಳ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿದಾಡುತ್ತಿದೆ. ಯಾವ ಭಕ್ತಾದಿಗಳು ಭಯ ಪಡುವ ಆತಂಕವಿಲ್ಲ. ಯಲ್ಲಮ್ಮನ ದೇವಸ್ಥಾನದಲ್ಲಿ …

Read More »

ಡಾ, ಬಾಬಾಸಾಹೇಬ ಅಂಬೇಡ್ಕರ್ ರವರ 66 ನೇ ಪರಿನಿರ್ವಾಹಣ ದಿನವನ್ನು ಮೊಂಬತ್ತಿ ಬೆಳಕಿನಲ್ಲಿ ಮೌನ ಮೇರವಣೆಗೆ

ದೇಶದಲ್ಲಿ ಶಾಂತಿ ಸಮಾನತೆ ಮತ್ತು ಸೌಹಾರ್ದ ಲಭಿಸಲು ಇಂದು ಡಾ, ಬಾಬಾಸಾಹೇಬ ಅಂಬೇಡ್ಕರ್ ರವರ 66 ನೇ ಪರಿನಿರ್ವಾಹಣ ದಿನವನ್ನು ಮೊಂಬತ್ತಿ ಬೆಳಕಿನಲ್ಲಿ ಮೌನ ಮೇರವಣೆಗೆ ಮಾಡಲಾಗುತ್ತಿದೆ ಎಂದು ಹುಕ್ಕೇರಿ ದಲಿತ ಮುಖಂಡ ಮಾಜಿ ಪುರಸಭೆ ಅದ್ಯಕ್ಷ ಉದಯ ಹುಕ್ಕೇರಿ ಹೇಳಿದರು.   ಅವರು ಮಂಗಳವಾರ ರಾತ್ರಿ ಹುಕ್ಕೇರಿ ನಗರದ ಅಂಬೇಡ್ಕರ್ ನಗರದಿಂದ ಕೋರ್ಟ್ ಸರ್ಕಲ್ ವರೆಗೆ ಮೌನ ಮೇರವಣೆಗೆ ನಡೆಸಿದರು. ಈ ಸಂದರ್ಭದಲ್ಲಿ ಪುರಸಭೆ ಸದಸ್ಯೆ ಸಂಗೀತಾ ಹುಕ್ಕೇರಿ, …

Read More »

ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದ ಫಲ.

    *ಮೂಡಲಗಿ*-ಮೂಡಲಗಿ ತಾಲ್ಲೂಕಿನ ಸಾರ್ವಜನಿಕರ ಬಹು ನಿರೀಕ್ಷಿತ ಉಪ ನೋಂದಣಿ ಕಛೇರಿಯಲ್ಲಿ ನೋಂದಣಿ ಕಾರ್ಯವನ್ನು ಆರಂಭಿಸಲಿಕ್ಕೆ ಇಲಾಖೆಯು ಅನುಮತಿ ನೀಡಿದ್ದರ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಅವರು ಇದೇ ಡಿ. 20 ರಂದು ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಅರಭಾವಿ ಶಾಸಕ ಮತ್ತು ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸುವರು. ಈಗಾಗಲೇ ಹೊಸದಾಗಿ ಆರಂಭಿಸಲಾಗಿರುವ ಉಪ ನೋಂದಣಿ ಕಛೇರಿಯಲ್ಲಿ ಸಂಬಂಧಪಟ್ಟ ಎಲ್ಲ ಕೆಲಸಗಳು ಪೂರ್ಣಗೊಂಡಿವೆ. ಕಾವೇರಿ ತಂತ್ರಾಂಶ …

Read More »