Breaking News

ಬೆಳಗಾವಿ

ಮಹಾಸಚಿವರ ತಡೆಯಲು ಕರವೇ ಸಾವಿರಾರು ಕಾರ್ಯಕರ್ತರು ಬೆಳಗಾವಿಗೆ!

ಬೆಂಗಳೂರು : ಕನ್ನಡಿಗರ ವಿರುದ್ಧ ಮರಾಠಿಗರನ್ನು ಎತ್ತಿಕಟ್ಟಲು ಬೆಳಗಾವಿಗೆ ಆಗಮಿಸುತ್ತಿರುವ ಮಹಾರಾಷ್ಟ್ರ ಸಚಿವರಿಗೆ ರಾಜ್ಯಕ್ಕೆ ಪ್ರವೇಶಕ್ಕೆ ಅವಕಾಶ ನೀಡಬಾರದು, ಗಡಿಯಲ್ಲಿಯೇ ಅವರನ್ನು ಬಂಧಿಸಬೇಕು ಎಂದು ಕರ್ನಾಟಕ ರಕ್ಷಣ ವೇದಿಕೆ (ಕರವೇ) ಆಗ್ರಹಿಸಿದೆ. ಇನ್ನೊಂದೆಡೆ ಕರವೇ ರಾಜ್ಯಾದ್ಯಂತ ತನ್ನ ಕಾರ್ಯಕರ್ತರಿಗೆ ಬೆಳಗಾವಿಗೆ ಆಗಮಿಸುವಂತೆ ಕರೆಕೊಟ್ಟಿದ್ದು, ಬೆಂಗಳೂರಿನಿಂದಲೇ 100ಕ್ಕೂ ಹೆಚ್ಚು ವಾಹನಗಳಲ್ಲಿ ಬೆಳಗಾವಿಗೆ ತೆರಳುತ್ತಿದ್ದಾರೆ. ಈ ಮೂಲಕ ಮಹಾರಾಷ್ಟ್ರ ಸಚಿವರು ಆಗಮಿಸುವ ದಿನದಂತೆ ಬೆಳಗಾವಿ ನಗರ ಮತ್ತು ಗಡಿ ಭಾಗಗಳಲ್ಲಿ ಬೃಹತ್‌ ಪ್ರತಿಭಟನೆಗೆ …

Read More »

ಮಹಾರಾಷ್ಟ್ರದ ಇಬ್ಬರು ಸಚಿವರು, ಓರ್ವ ಸಂಸದ ಗಡಿ ಪ್ರವೇಶಕ್ಕೆ ನಿಷೇಧ : ಬೆಳಗಾವಿ ಡಿಸಿ ಆದೇಶ

ಬೆಂಗಳೂರು- ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ಗಡಿವಿವಾದದ ಸಂಘರ್ಷ ತಾರಕ್ಕೇರಿರುವ ಬೆನ್ನಲ್ಲೇ, ಇಂದು ಬೆಳಗಾವಿ ಜಿಲ್ಲೆಯ ಗಡಿ ಪ್ರವೇಶಿಸುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರ ಜೊತೆಗೆ ಜಿಲ್ಲೆಯಲ್ಲಿ 14,   ಸೆಕ್ಷನ್ ಜಾರಿ ಮಾಡಲಾಗಿದೆ. ರಾಜ್ಯದಲ್ಲಿ ಕರ್ನಾಟಕ-ಮಹಾರಾಷ್ಟ್ರ ಉಲ್ಬಣಿಸಿದೆ. ಈ ಹಿಂದೆ ಕರ್ನಾಟಕಕ್ಕೆ ಬರಲಿರುವ ಮಹಾರಾಷ್ಟ್ರ ಸಚಿವರಿಗೆ ಇಲ್ಲಿಗೆ ಆಗಮಿಸಲು ಬಿಡಬಾರದು ಎಂದು ಬೆಳಗಾವಿ ಪೊಲೀಸ್ ಆಯುಕ್ತರಿಗೆ ಮನವಿ ಮಾಡಲಾಗಿತ್ತು. ಈ ಹಿನ್ನಲೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ …

Read More »

ಮಹಾರಾಷ್ಟ್ರ ಸಚಿವರ ಗಡಿ ಪ್ರವೇಶಕ್ಕೆ ನಿಷೇಧ ಮಾಡಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಆದೇಶ

ಬೆಳಗಾವಿಗೆ ಮಹಾರಾಷ್ಟ್ರ ಸಚಿವದ್ವಯರ ಸಂಸದ ಭೇಟಿ ವಿಚಾರ ಗಡಿ ಪ್ರವೇಶಕ್ಕೆ ನಿಷೇಧ ಮಾಡಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಆದೇಶ ಹೊರಡಿಸಿದ್ದಾರೆ. ಮಹಾರಾಷ್ಟ್ರದ ಇಬ್ಬರು ಸಚಿವರು, ಓರ್ವ ಸಂಸದನ ಗಡಿ ಪ್ರವೇಶಕ್ಕೆ ನಿಷೇಧ ವಿಧಿಸಲಾಗಿದ್ದು CRPC 1973 ಕಲಂ 144(3)ರ ಅನ್ವಯ ಪ್ರದತ್ತ ಅಧಿಕಾರ ಬಳಸಿ ಡಿಸಿ ಆದೇಶಸಿದ್ದಾರೆ. ಬೆಳಗಾವಿ ಜಿಲ್ಲೆಯ ಗಡಿ ಪ್ರವೇಶಿಸದಂತೆ ನಿರ್ಬಂಧಿತ ಆದೇಶ ನೀಡಲಾಗಿದೆ. ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶ ನೀಡಿದ್ದು ಮಹಾರಾಷ್ಟ್ರದ ಗಡಿ ಸಮನ್ವಯ …

Read More »

ಬೆಳಗಾವಿಯ ಪ್ರಭಾವಿ ರಾಜ ಕಾರಣಿಗಳ ಮೌನ ಮತ್ತು ತಟಸ್ಥ ನಿಲುವು ಈಗ ಅನು ಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿ ಬೆಳಗಾವಿಯ ಪ್ರಭಾವಿ ರಾಜ ಕಾರಣಿಗಳ ಮೌನ ಮತ್ತು ತಟಸ್ಥ ನಿಲುವು ಈಗ ಅನು ಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಸದ್ಯದಲ್ಲೇ ಬೆಳಗಾವಿ ಗಡಿ ವಿಚಾರ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದೆ. ಹಾಗೆಯೇ ಮಹಾರಾಷ್ಟ್ರದ ಇಬ್ಬರು ಸಚಿವರು ಬೆಳಗಾವಿಗೆ ಬರಲು ತಯಾರಾಗಿದ್ದಾರೆ. ಈ ಅಂಶಗಳಿಂದ ವಿವಾದಕ್ಕೆ ಹೆಚ್ಚಿನ ಮಹತ್ವ ಬಂದಿದೆ. ಬೆಳಗಾವಿಯ ಜತೆಗೆ ನಿಕಟ ಸಂಪರ್ಕ ಇರಿಸಿಕೊಂಡಿರುವ ಮಹಾರಾಷ್ಟ್ರದ ಗಡಿ ಉಸ್ತುವಾರಿ ಸಚಿವರಾದ ಚಂದ್ರಕಾಂತ ಪಾಟೀಲ ಮತ್ತು …

Read More »

ಶಾಲೆಗೆ ಹೋಗಿದ್ದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಬೆಳಗಾವಿ: ಶಾಲೆಗೆ ಹೋಗಿದ್ದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಗುಜರಾತ್ ಮೂಲದ ಬಿ.ಕೆ. ಕಂಗ್ರಾಳಿಯ ನಿವಾಸಿ ಆಕಾಶ ಭರತಕುಮಾರ ದೋಂಡಿಯಾ (19) ಬಂಧಿತ. ತಾಲ್ಲೂಕಿನ ಗ್ರಾಮವೊಂದರ 14 ವರ್ಷದ ಬಾಲಕಿ ನಗರದ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದಳು. ಬಾಲಕಿಯನ್ನು ಪುಸಲಾಯಿಸಿ ಸಲುಗೆ ಬೆಳೆಸಿದ ಆರೋಪಿ, ಗುಜರಾತಿಗೆ ಕರೆದೊಯ್ದು ಎರಡು ದಿನ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿ ಮರಳಿ ಬೆಳಗಾವಿಗೆ ಬಂದು ತಂದೆಗೆ …

Read More »

ನಂದಗಡದಲ್ಲಿ ಈಗ ಸುಧಾರಣಾ ಪರ್ವ ಆರಂಭ

ನಂದಗಡ (ಖಾನಾಪುರ ತಾಲ್ಲೂಕು): ಕ್ರಾಂತಿಯ ನೆಲ, ರಕ್ತಸಿಕ್ತ ಇತಿಹಾಸಕ್ಕೆ ಸಾಕ್ಷಿಯಾಗಿ ನಿಂತ ತಾಲ್ಲೂಕಿನ ನಂದಗಡದಲ್ಲಿ ಈಗ ಸುಧಾರಣಾ ಪರ್ವ ಆರಂಭವಾಗಿದೆ. ಈ ಸ್ಥಳಕ್ಕೆ ಜಾಗತಿಕ ಗುರುತು ತಂದುಕೊಟ್ಟ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಸಮಾಧಿ ಈಗ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ.   ಹಲವು ವರ್ಷಗಳಿಂದ ನಂದಗಡ ನಿರ್ಲಕ್ಷ್ಯಕ್ಕೆ ಒಳಗಾಗಿತ್ತು. ಚನ್ನಮ್ಮನ ಕಿತ್ತೂರು, ಬೈಲಹೊಂಗಲದಲ್ಲಿ ಆದಂಥ ಅಭಿವೃದ್ಧಿ ಕಾರ್ಯಗಳನ್ನು ಇಲ್ಲಿಯೂ ಮಾಡಬೇಕು ಎಂದು ಜನ ದಶಕದಿಂದ ಹೋರಾಟ ಮಾಡಿದ್ದರು. ಇತ್ತೀಚಿನ ವರ್ಷಗಳಲ್ಲಿ ಶುಕ್ರದೆಸೆ …

Read More »

ಬೆಳಗಾವಿ | ವೈಯಕ್ತಿಕ ಕಾರಣಕ್ಕೆ ಅಣ್ಣನ ಕೊಲೆ ಮಾಡಿದ ತಮ್ಮ

ನಾಗರಮುನ್ನೋಳಿ: ಸಮೀಪದ ಉಮರಾಣಿ ಗ್ರಾಮದ ಹೊರವಲಯದಲ್ಲಿ ನಿಪ್ಪಾಣಿ- ಮುಧೋಳ ರಸ್ತೆಯಲ್ಲಿ ತಮ್ಮನೇ ಅಣ್ಣನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಚಿಕ್ಕೋಡಿ ಪಟ್ಟಣದ ಡಂಬಳ ಕಾಲೊನಿ ನಿವಾಸಿ ಅಕ್ಬರ್‌ ಅಬ್ದುಲ್‌ ಶೇಖ್‌ (40) ಕೊಲೆಯಾದವರು. ಅಮ್ಜಾದ್ ಅಬ್ದುಲ್‌ ಶೇಖ್ (32) ಆರೋಪಿ. ಅಕ್ಬರ್ ಅಬ್ದುಲ್‌ ಶೇಖ್ ಅವರು ಕಬ್ಬೂರು ಗ್ರಾಮದಿಂದ ಚಿಕ್ಕೋಡಿಗೆ ದ್ವಿಚಕ್ರ ವಾಹನದ ಮೇಲೆ ಬರುತ್ತಿರುವ ವೇಳೆ ಕಾರಿನಿಂದ ಹಿಂಬಾಲಿಸಿಕೊಂಡು ಬಂದ ಸಹೋದರ, ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದರು. ವೈಯಕ್ತಿ ಕಾರಣವಳಿಂದ …

Read More »

ಜಲಜೀವನ ಮಿಷನ್‌ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ಎಲ್.ಕೆ.ಅತೀಕ್

ಬೆಳಗಾವಿ: ‘ಜಲಜೀವನ ಮಿಷನ್‌ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಎಲ್ಲ ಕಾಮಗಾರಿಗಳಿಗೆ ವೇಗ ನೀಡಬೇಕು’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಸೂಚಿಸಿದರು.   ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಸ್ವಚ್ಛ ಭಾರತ ಮಿಷನ್ ಹಾಗೂ ಜಲಜೀವನ ಮಿಷನ್ ಯೋಜನೆ ಕುರಿತು ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಪ್ರತಿ ಗ್ರಾಮಗಳಲ್ಲಿ ಘನ ತ್ಯಾಜ್ಯ ವಿಲೇವಾರಿ ಪ್ರಕ್ರಿಯೆ ಸಮರ್ಪಕವಾಗಿ ನಡೆಯಬೇಕು’ ಎಂದು …

Read More »

ಮರಾಠಾ ಸಮುದಾಯದ ಬಹುಕಾಲದ  ಬೇಡಿಕೆಯಾಗಿರುವ 2A ವರ್ಗವನ್ನು ನೀಡುವಂತೆ ಬೃಹತ್ ಪ್ರತಿಭಟನೆ

ಬಿಜೆಪಿ ಕರ್ನಾಟಕ ರಾಜ್ಯ ಕರ್ನಾಟಕ ಮರಾಠ ಸಮಾಜದ ಅಡಿಯಲ್ಲಿ ನಮ್ಮ ಮರಾಠಾ ಸಮುದಾಯದ ಬಹುಕಾಲದ  ಬೇಡಿಕೆಯಾಗಿರುವ 2A ವರ್ಗವನ್ನು ನೀಡುವಂತೆ ಬೃಹತ್ ಪ್ರತಿಭಟನೆ ಆಯೋಜಿಸಲಾಗುವುದು ಎಂದು ಕರ್ನಾಟಕ ರಾಜ್ಯ ಒಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಶ್ರೀ ಕಿರಣ ಜಾಧವ್ ತಿಳಿಸಿದರು ಮರಾಠ ಸಮುದಾಯದವರೆಲ್ಲರೂ ಛತ್ರಪತಿ ಶಿವಾಜಿ ಮಹಾರಾಜ ಉದ್ಯಾನ ವನದಲ್ಲಿ ಪೂಜೆ ಸಲ್ಲಿಸುವ ಮೂಲಕ ಮತ್ತು ಈ ಪ್ರತಿಭಟನೆ ಜಾಗೃತಿ ಮತ್ತು ಮಹತ್ವವನ್ನು ತಿಳಿಸುವುದರ ಮೂಲಕ   ಮತ್ತು ಮುಂಬರುವ ದಿನಗಳಲ್ಲಿ …

Read More »

ಬ್ರೇಕ್ ಫೇಲ್ ಆಗಿ ಕ್ರೇನ್ ವಾಹನ ರಸ್ತೆ ಡಿವೈಡರ್‌ಗೆ ಗುದ್ದಿದೆ.

ಬ್ರೇಕ್ ಫೇಲ್ ಆಗಿ ಕ್ರೇನ್ ವಾಹನ ರಸ್ತೆ ಡಿವೈಡರ್‌ಗೆ ಗುದ್ದಿರುವ ಘಟನೆ ಬೆಳಗಾವಿಯ ನೆಹರು ನಗರದ ಮುಖ್ಯ ರಸ್ತೆಯಲ್ಲಿ ನಡೆದಿದೆ.ಬೆಳಗಾವಿ: ಬೆಳಗಾವಿಯಲ್ಲಿ ಕೂದಲೇಳೆ ಅಂತರದಲ್ಲಿ ಭಾರಿ ಅನಾಹುತವೊಂದು ತಪ್ಪಿದೆ. ಕೆಎಲ್‌ಇ ಆಸ್ಪತ್ರೆಯ ಕಡೆಯಿಂದ ಕೃಷ್ಣದೇವರಾಯ ಸರ್ಕಲ್ ಕಡೆಗೆ ಬರುತ್ತಿದ್ದ ಕ್ರೇನ್ ಇಳಿಜಾರಿನಲ್ಲಿ ವೇಗವಾಗಿ ಹೋಗುತ್ತಿತ್ತು. ಈ ವೇಳೆ ಏಕಾಏಕಿ ಬ್ರೇಕ್ ವಿಫಲವಾಯಿತು. ಇದರಿಂದ ಕ್ರೇನ್ ವಾಹನ ರಸ್ತೆ ಡಿವೈಡರ್‌ಗೆ ಗುದ್ದಿದೆ. ಅಪಘಾತ ಸಮಯದಲ್ಲಿ ಅದೇ ರಸ್ತೆಯಲ್ಲಿ ಶಾಲಾ ವಾಹನ ಕೂದಲೆಳೆ ಅಂತರದಲ್ಲಿ …

Read More »