ಬೆಳಗಾವಿ: ‘ರಾಜ್ಯ ಬಿಜೆಪಿ ಸರ್ಕಾರ ಸುವರ್ಣಸೌಧದ ವಿಧಾನಸಭೆ ಸಭಾಂಗಣದಲ್ಲಿ ವೀರ ಸಾವರ್ಕರ್ ಅವರ ಭಾವಚಿತ್ರ ಅಳವಡಿಸುತ್ತದೆ ಎಂದು ನಿರೀಕ್ಷಿಸಿರಲಿಲ್ಲ. ನನಗೆ ಅನಾವರಣ ಕಾರ್ಯಕ್ರಮಕ್ಕೆ ಆಹ್ವಾನ ಸಿಕ್ಕಿಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಭಾನುವಾರ ರಾಜ್ಯ ಕಾಂಗ್ರೆಸ್ ಚುನಾವಣೆ ಪ್ರಚಾರ ಸಮಿತಿ ಸಭೆಗೂ ಮುನ್ನ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಸಾವರ್ಕರ್ ಸೇರಿದಂತೆ ಇನ್ನಿತರ ವ್ಯಕ್ತಿಗಳ ಭಾವಚಿತ್ರ ಅನಾವರಣಕ್ಕೆ ಎಲ್ಲರನ್ನೂ ಆಹ್ವಾನಿಸಲಾಗಿದೆ ಎಂದು ಸ್ಪೀಕರ್ ಹೇಳುತ್ತಿದ್ದಾರೆ. ನನಗಂತೂ …
Read More »ನಮ್ಮದೆಂಬ ಭಾವ ಮೂಡಿಸುತ್ತಿದೆ ಕ್ಲಿನಿಕ್; 12 ಬಗೆಯ ಆರೋಗ್ಯ ಸೇವೆ
ಬೆಳಗಾವಿ: ನಗರ ಪ್ರದೇಶದ ಬಡ ವರ್ಗದ ಜನರಿಗೆ ವಿಶೇಷವಾಗಿ ಕಾರ್ಮಿಕ ವರ್ಗಕ್ಕೆ ಉಚಿತ ಹಾಗೂ ಗುಣಮಟ್ಟದ ಚಿಕಿತ್ಸೆ ದೊರೆಯಲಿ ಎಂಬ ಉದ್ದೇಶದಿಂದ ಆರಂಭ ಮಾಡಿರುವ ನಮ್ಮ ಕ್ಲಿನಿಕ್ಗೆ ಆರಂಭದಲ್ಲಿ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಜನರಲ್ಲಿ ಸಹ ಇದು ನಮ್ಮ ಕ್ಲಿನಿಕ್ ಎಂಬ ಭಾವನೆ ಬರುತ್ತಿದೆ. ಈ ನಮ್ಮ ಕ್ಲಿನಿಕ್ನಲ್ಲಿ 12 ಬಗೆಯ ಆರೋಗ್ಯ ಸೇವೆಗಳು ದೊರೆಯಲಿವೆ. ಗರ್ಭಿಣಿ-ಶಿಶು ಆರೈಕೆ, ಮಕ್ಕಳ ಚಿಕಿತ್ಸೆ, ಕುಟುಂಬ ಕಲ್ಯಾಣ ಸೇವೆ, ಸಾಂಕ್ರಾಮಿಕ ರೋಗಗಳ ನಿರ್ವಹಣೆ, …
Read More »ಬೆಳಗಾವಿಯಲ್ಲಿ ಡಿ. 19ರಿಂದ ಚಳಿಗಾಲ ಅಧಿವೇಶನ; ಸುವರ್ಣ ಸೌಧ ಸುತ್ತಮುತ್ತ ನಿಷೇಧಾಜ್ಞೆ ಜಾರಿ
ಬೆಳಗಾವಿ: ಸುವರ್ಣ ಸೌಧದಲ್ಲಿ 10 ದಿನಗಳ ಕಾಲ ಚಳಿಗಾಲ ಅಧಿವೇಶ ನಡೆಯಲಿದೆ. ಡಿಸೆಂಬರ್ 19ರಿಂದ ಡಿ.30ರವರೆಗೆ ಚಳಿಗಾಲ ಅಧಿವೇಶನ ನಡೆಯಲಿದೆ. ಈಗಾಗಲೇ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಡಿ.30ರವರೆಗೆ ಸುವರ್ಣಸೌಧದ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಹೇಳಿದ್ದಾರೆ.ನಗರದಲ್ಲಿ ಯಾವುದೇ ಪ್ರತಿಭಟನೆ, ಗುಂಪು ಕಟ್ಟಿಕೊಂಡು ಓಡಾಡಲು ನಿಷೇಧಿಸಲಾಗಿದೆ. 10 ದಿನಗಳ ಕಾಲ ನಡೆಯುವ ಚಳಿಗಾಲದ ಅಧಿವೇಶನಕ್ಕೆ ನಗರದಲ್ಲಿ ಭರದ ಸಿದ್ಧತೆಗಳು …
Read More »ಮಹಾರಾಷ್ಟ್ರ ಸರ್ಕಾರ ಎಂಇಎಸ್ ಬೆಂಬಲಿಸದಿರಲಿ: ಅಶೋಕ ಚಂದರಗಿ
ಬೆಳಗಾವಿ: ‘ಸುಪ್ರೀಂ ಕೋರ್ಟ್ನಲ್ಲಿ ನಿರ್ಧಾರ ಆಗುವವರೆಗೆ ಗಡಿ ವಿಚಾರದಲ್ಲಿ ಕರ್ನಾಟಕ- ಮಹಾರಾಷ್ಟ್ರ ಯಾವುದೇ ಬೇಡಿಕೆ ಇಡಬಾರದು ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಈ ನಿರ್ಣಯದಂತೆ ಎಂಇಎಸ್ ಬೆಳಗಾವಿಯಲ್ಲಿ ನಡೆಸುವ ಯಾವುದೇ ಕರ್ನಾಟಕ ವಿರೋಧಿ ಚಟುವಟಿಕೆಗಳನ್ನು ಮಹಾರಾಷ್ಟ್ರ ಸರ್ಕಾರ ಅಥವಾ ಅಲ್ಲಿಯ ನಾಯಕರು ಬೆಂಬಲಿಸಬಾರದು. ಮಹಾ ಮೇಳಾವ್ದಲ್ಲಿಯೂ ಭಾಗವಹಿಸಬಾರದು’ ಎಂದು ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಹೇಳಿದ್ದಾರೆ. ‘ಎರಡೂ ರಾಜ್ಯಗಳ ತಲಾ ಮೂವರು ಸಚಿವರ …
Read More »ಉತ್ತರ ವಲಯ ವ್ಯಾಪ್ತಿಯಲ್ಲಿ ಫೊನ್ ಇನ್ ಕಾರ್ಯಕ್ರಮನಡೆಸುವಂತೆ S.P.ಗಳಿಗೆ ಸೂಚನೆ: I.G.P. ಸತೀಶಕುಮಾರ
ಉತ್ತರ ವಲಯ ವ್ಯಾಪ್ತಿಯಲ್ಲಿ ಫೊನ್ ಇನ್ ಕಾರ್ಯಕ್ರಮನಡೆಸುವಂತೆ ಎಸ್ಪಿಗಳಿಗೆ ಸೂಚನೆ ನೀಡಲಾಗುವುದು ಎಂದು ಐಜಿಪಿ ಸತೀಶಕುಮಾರ ಹೇಳಿದರು. ಜಿಲ್ಲಾ ಪೊಲೀಸ್ ಮೈದಾನದಲ್ಲಿ ಪ್ರಾಪರ್ಟಿ ಪರೇಡ್ ಕಾರ್ಯಕ್ರಮ ಮುಗಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಬೆಳಗಾವಿ ಎಸ್ಪಿ ರವರು ನಡೆಸುವ ಹಾಗೆ ತಿಂಗಳಲ್ಲಿ ಒಂದು ದಿನ ನಾನು ಅಷ್ಟೇ ಅಲ್ಲ ಎಲ್ಲ ಎಸ್ಪಿಗಳಿಗೂ ಪೊನ್ ಇನ್ ಕಾರ್ಯಕ್ರಮ ನಡೆಸುವಂತೆ ಸೂಚನೆ ನೀಡುವುದಾಗಿ ಹೇಳಿದರು. ಕಳೆದ ಒಂದು ವರ್ಷದಲ್ಲಿ ಬೆಳಗಾವಿ ಜಿಲ್ಲಾ ಪೊಲೀಸರು …
Read More »ಅಕ್ರಮ ನಿವೇಶನ ಹಂಚಿಕೆ ಲೋಕಾಯುಕ್ತರ ಮೊರೆ ಹೋದ ರಾಜಕುಮಾರ ಟೋಪಣ್ಣವರ
ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಕ್ರಮ ನಿವೇಶನ ಹಂಚಿಕೆಯ ವಿರುದ್ಧ ಲೋಕಾಯುಕ್ತರ ಮೊರೆ ಹೋಗಲಾಗಿದೆ ಎಂದು ಆಮ್ ಆದ್ಮಿ ಉತ್ತರ ವಲಯ ಉಸ್ತುವಾರಿ ರಾಜಕುಮಾರ ಟೋಪಣ್ಣವರ ಹೇಳಿದರು. ಶುಕ್ರವಾರ ನಗರದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಕಳೆದ ಮಾ. 16,17 ರಂದು ಬುಡಾದಿಂದ ಆನ್ ಲೈನ್ ಆಕ್ಷನ್ ಮಾಡಿದರು. ಮಾ.18 ರಂದು ಬುಡಾದವರು ಹೋಳಿ ಹಬ್ಬದ ದಿನ ಮ್ಯಾನ್ಯೂವಲ್ ಆಕ್ಷನ್ ಮಾಡಿ ನಿವೇಶನ ಹಂಚಿಕೆ ಮಾಡಿರುವ ಕುರಿತು ಅಂದಿನ ಜಿಲ್ಲಾಧಿಕಾರಿಗೆ ಮನವಿ …
Read More »ಬೆಳಗಾವಿಯಲ್ಲಿ ರಾಷ್ಟ್ರಮಟ್ಟದ ಟ್ರ್ಯಾಕಿಂಗ್ ( ಚಾರಣ) ಶಿಬಿರಕ್ಕೆ ಚಾಲನೆ
ನಮ್ಮ ಯುವ ಜನಾಂಗವು ರಾಷ್ಟ್ರದ ಸಂಪತ್ತಾಗಿದ್ದು ದೇಶದ ಸಂಸ್ಕೃತಿ ಪರಂಪರೆ ಹಾಗೂ ಪರಿಸರವನ್ನು ತಿಳಿದುಕೊಳ್ಳುವುದು ಅವಶ್ಯವಾಗಿದೆ. ಪರಿಸರವನ್ನು ಸಂರಕ್ಷಿಸಿ ಅದನ್ನು ಪೋಷಿಸಿ ಬೆಳೆಸುವುದು ಕೂಡ ನಮ್ಮ ಕರ್ತವ್ಯವಾಗಿದೆ ಎಂದು ಎನ್ ಸಿಸಿಯ ಪ್ರಮುಖ ಧ್ಯೇಯವಾಗಿದೆ ಎಂದು ಬೆಳಗಾವಿಯೇ ಎನ್ ಸಿ ಸಿ ಗ್ರೂಪ್ ಕಮಾಂಡರ್ ಕರ್ನಲ್ ಎಸ್ ಶ್ರೀನಿವಾಸ ಹೇಳಿದರು. ಅವರು ಬೆಳಗಾವಿಯ ಜಾದವ್ ನಗರದಲ್ಲಿ ಬೆಳಗಾವಿ ಎನ್ ಸಿ ಸಿ ಗ್ರೂಪ್ ಅಡಿಯಲ್ಲಿ ಜರುಗುತ್ತಿರುವ ಅಖಿಲ ಭಾರತ ಟ್ರ್ಯಾಕಿಂಗ್ …
Read More »ಅತಿ ಕಡಿಮೆ ದರದಲ್ಲಿ “ಇ ಬೈಕ್, ಇ ಸೈಕಲ್” ರೈಡಿಂಗ್ ಲಭ್ಯ
ಜನರ ಓಡಾಟಕ್ಕಾಗಿ ಅನುಕೂಲವಾಗಲು ಸ್ಮಾರ್ಟ್ ಸಿಟಿ ಸಹಯೋಗದಲ್ಲಿ ಇ ಸೈಕಲ್ ಹಾಗೂ ಇ ಬೈಕ್ ಗಳನ್ನು ಶಾಸಕ ಅಭಯ ಪಾಟೀಲ ಅವರು ಚಾಲನೆ ನೀಡಿದರು. ಬೆಳಗಾವಿಯ ಶಾಹಸಪುರದ ಶಿವ ಚರಿತ್ರೆ ಹತ್ತಿರ ಇ ಸೈಕಲ್ ಹಾಗೂ ಇ ಬೈಕ್ ಗಳಿಗೆ ಚಾಲನೆ ನೀಡದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಅಭಯ ಪಾಟೀಲ ಅವರು, 100 ಇ ಸೈಕಲ್, 100 ಇ ಬೈಕ್ ಹಾಗೂ 100 ಸೈಕಲ್ ಹೀಗೆ 300 …
Read More »ಅಥಣಿ ಡಿಪೋ ಅಧಿಕಾರಿಗಳ ವಿರುದ್ದ ವಿದ್ಯಾರ್ಥಿಗಳು ಮತ್ತು ಪೋಷಕರ ಆಕ್ರೋಶ
ಅಥಣಿ ತಾಲೂಕಿನ ಕೊಟ್ಟಲಗಿ ಗ್ರಾಮದಲ್ಲಿ ಸಮಯಕ್ಕೆ ಸರಿಯಾಗಿ ಬಸ್ಸುಗಳು ಬರುತ್ತಿಲ್ಲ ಇದರಿಂದಾಗಿ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆ ಆಗುತ್ತಿದೆ ಎಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಕೊಟ್ಟಲಗಿ ಗ್ರಾಮವು ಅಥಣಿ ತಾಲೂಕಿನ ಕೊನೆಯ ಹಳ್ಳಿಯಾಗಿದ್ದು ಬಸ್ಸುಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಾಚರಣೆ ಮಾಡುವ ಅಗತ್ಯ ಇದೆ. ಎರಡು ಮೂರು ಬಸ್ಸುಗಳು ಏಕಕಾಲಕ್ಕೆ ಬಂದರೆ ಮಾತ್ರ ಪ್ರಯಾಣಿಕರಿಗೆ ಅನುಕೂಲವಾಗುತ್ತಿದೆ. ಬಸ್ಸುಗಳು ಹೆಚ್ಚಿನ ಪ್ರಯಾಣಿಕರನ್ನು ತುಂಬಿಕೊಳ್ಳುತ್ತಿದ್ದು ವಿದ್ಯಾರ್ಥಿಗಳು ಪುಟ್ ಬೋರ್ಡನಲ್ಲಿ ನಿಂತು ಪ್ರಯಾಣ ಮಾಡುವ ಪರಿಸ್ಥಿತಿ ಇದೆ …
Read More »ಕೌಜಲಗಿ: ಸಾಯಿ ಮಂದಿರ ವಾರ್ಷಿಕೋತ್ಸವ
ಕೌಜಲಗಿ: ಪಟ್ಟಣದ ಕಳ್ಳಿಗುದ್ದಿ ರಸ್ತೆಯಲ್ಲಿರುವ ಸಾಯಿಬಾಬಾ ಮಂದಿರದ ಪ್ರಥಮ ವಾರ್ಷಿಕೋತ್ಸವ ಗುರುವಾರ ಅತ್ಯಂತ ಶ್ರದ್ಧೆ-ಭಕ್ತಿಯಿಂದ ಜರುಗಿತು. ಕೌಜಲಗಿ ಸಾಯಿ ಸೇವಾ ಸಮಿತಿ ಹಾಗೂ ಸಮಸ್ತ ಭಕ್ತರ ಆಶ್ರಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಪ್ರಾತಃಕಾಲದಲ್ಲಿ ಸಾಯಿಬಾಬಾಗೆ ಮಹಾರುದ್ರಾಭಿಷೇಕ ಜರುಗಿತು. ಕೌಜಲಗಿ ಪ್ರದೇಶ ಅಭಿವೃದ್ಧಿ ಹಾಗೂ ಪ್ರಾಣಿಗಳ ಸಾಂಕ್ರಾಮಿಕ ಕಾಯಿಲೆ ನಿವಾರಣೆಗಾಗಿ ಪ್ರಾರ್ಥಿಸಿ ಈರಯ್ಯ ಶಾಸ್ತ್ರಿಗಳ ನೇತೃತ್ವದಲ್ಲಿ ಹೋಮ- ಹವನಗಳು ಜರುಗಿದವು. ಅನಂತರ ಸಾಯಿಬಾಬಾ ಪಲ್ಲಕ್ಕಿ ಉತ್ಸವ ನಡೆಯಿತು. ಪಲ್ಲಕ್ಕಿಯು ಭಕ್ತ ಕನಕದಾಸ …
Read More »
Laxmi News 24×7