ಬೆಳಗಾವಿಯನ್ನು ರಾಷ್ಟ್ರ-ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸುವ ಕ್ರೀಡಾಪಟುಗಳಿಗೆ ಆರ್ಥಿಕ ಸಹಾಯ, ಸಹಕಾರ ನೀಡಲಾಗುವುದು” ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಹೇಳಿದರು. ಕಾಕತಿ ಗ್ರಾಮದ ಹೆಮ್ಮೆಯ ಪುತ್ರ ಸಂಭಾಜಿ ಪರಮೋಜಿ ಮುಕ್ತ ರಾಷ್ಟ್ರೀಯ ನಾಗಾ ಕುಸ್ತಿ ಚಾಂಪಿಯನ್ಶಿಪ್ ಗೆ ಆಯ್ಕೆಯಾಗಿದ್ದು, ನಾಗಾಲ್ಯಾಂಡ್ ಗೆ ಪ್ರಯಾಣ ಬೆಳೆಸಲಿದ್ದಾರೆ. ಇವರಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ೨೫ ಸಾವಿರ ರೂ. ಆರ್ಥಿಕ ಸಹಾಯ ನೀಡಿ, ಸನ್ಮಾನಿಸಿ ಶುಭಹಾರೈಸಿದರು. ವಿದ್ಯಾರ್ಥಿಗಳ ಏಳಿಗೆಗಾಗಿ ಯಮಕನಮರಡಿ …
Read More »ಸರ್ಕಾರ ಆದೇಶಿಸಿದರೂ ಸರ್ಕಾರಿ ಸೌಲಭ್ಯಗಳನ್ನು ನೀಡದಿರುವ ಸರ್ಕಾರಿ ಸೌಲಭ್ಯ
ಕಾರ್ಮಿಕ ಕಾರ್ಡ್ ಮಾಡಿಕೊಂಡ ಕಾರ್ಮಿಕರಿಗೆ ಮತ್ತು ಅವರ ಮಕ್ಕಳಿಗೆ ಸರ್ಕಾರ ಆದೇಶಿಸಿದರೂ ಸರ್ಕಾರಿ ಸೌಲಭ್ಯಗಳನ್ನು ನೀಡದಿರುವ ಸರ್ಕಾರದ ಧೋರಣೆಯನ್ನು ಖಂಡಿಸಿ ಇಂದು ಬೆಳಗಾವಿಯಲ್ಲಿ ಕಟ್ಟಡ ಕಾರ್ಮಿಕರು ಬೆಳಗಾವಿ ಜಿಲ್ಲಾಧಿಕಾರಿ ಕಾರ್ಯಾಲಯದೆದುರು ಪ್ರತಿಭಟನೆ ನಡೆಸಿದರು. ಶುಕ್ರವಾರದಂದು ಬೆಳಗಾವಿ ಜಿಲ್ಲಾಧಿಕಾರಿ ಕಾರ್ಯಾಲಯಕ್ಕೆ ಆಗಮಿಸಿದ ಕಾರ್ಮಿಕ ಕಾರ್ಡ್ ಮಾಡಿಕೊಂಡ ಕಾರ್ಮಿಕರಿಗೆ ಸರ್ಕಾರಿ ಸೌಲಭ್ಯಗಳನ್ನು ನೀಡದಿರುವ ಸರ್ಕಾರದ ಧೋರಣೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದರು. ಈ ವಿಷಯದ ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು. ಕಟ್ಟಡ ನಿರ್ಮಾಣ …
Read More »ಕನ್ನಡ ಸರ್ವಶ್ರೇಷ್ಠ ಭಾಷೆ : ಸರ್ವೋತ್ತಮ ಜಾರಕಿಹೊಳಿ ಅರಭಾವಿ ಬಿಜೆಪಿ ಮಂಡಲದಿ0ದ ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮ
ಗೋಕಾಕ : ದೇಶದಲ್ಲಿಯೇ ಕನ್ನಡ ಭಾಷೆಗೆ ತನ್ನದೇಯಾದ ವಿಶಿಷ್ಟ ಇತಿಹಾಸವಿದ್ದು, ಕನ್ನಡ ಭಾಷೆ ಇಂದು ದೇಶದಲ್ಲಿ ವಿಶೇಷ ಸ್ಥಾನಮಾನ ಪಡೆದಿದೆ ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ತಿಳಿಸಿದರು. ಶುಕ್ರವಾರದಂದು ಇಲ್ಲಿಯ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಅರಭಾವಿ ಬಿಜೆಪಿ ಮಂಡಲದಿAದ ಕನ್ನಡ ರಾಜ್ಯೋತ್ಸವದ ನಿಮಿತ್ಯ ಜರುಗಿದ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕನ್ನಡ ಭಾಷೆ ಶ್ರೇಷ್ಠ ಭಾಷೆ ಎಂದು ತಿಳಿಸಿದರು. ನಮ್ಮ ಕನ್ನಡ ಭಾಷೆಗೆ …
Read More »ಬೆಳಗಾವಿಯ J.N.M.C. ಕ್ಯಾಂಪಸ್ನ ಉದ್ಯಾನದಲ್ಲಿ ಕೋಟಿ ಕಂಠ ಗಾಯನ
ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆ ಕರ್ನಾಟಕ ಸರ್ಕಾರ ಮತ್ತು ಕನ್ನಡ ಹಾಗೂ ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಬೆಳಗಾವಿಯಲ್ಲಿ ಕೋಟಿ ಕಂಠ ಗಾಯನ-೨೦೨೨ರನ್ನು ಹಮ್ಮಿಕೊಳ್ಳಲಾಗಿತ್ತು. ಶುಕ್ರವಾರದಂದು ಬೆಳಗಾವಿಯ ಜೆಎನ್ಎಂಸಿ ಕ್ಯಾಂಪಸ್ನ ಉದ್ಯಾನದಲ್ಲಿ ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆ ಕರ್ನಾಟಕ ಸರ್ಕಾರ ಮತ್ತು ಕನ್ನಡ ಹಾಗೂ ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಬೆಳಗಾವಿಯಲ್ಲಿ ಕೋಟಿ ಕಂಠ ಗಾಯನ-೨೦೨೨ರನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮುಖ್ಯ ಅತಿಥಿಗಳಾಗಿ ಕೆಎಲ್ಇ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ, ಡಾ. ಕೋಠಿವಾಲೆ, ಡಾ. ವಿಡಿ ಪಾಟೀಲ, …
Read More »ಗ್ರಾಮಗಳ ರಸ್ತೆಗಳನ್ನು ಡಾಂಬರಿಕರಣ ಕಾಮಗಾರಿಗೆ ಶಾಸಕ ಶ್ರೀಮಂತ ಪಾಟೀಲ ಚಾಲನೆ
ಕಾಗವಾಡ ವಿಧಾನಸಭಾ ಮತಕ್ಷೇತ್ರದ ಎಲ್ಲ ಗ್ರಾಮಗಳ ರಸ್ತೆಗಳನ್ನು ಡಾಂಬರಿಕರಣ ಮಾಡುವಗೋಸ್ಕರ ೨೦೦ ಕೋಟಿ ರೂ. ಅನುದಾನವನ್ನು ಕ್ಷೇತ್ರಕ್ಕೆ ತಂದಿದ್ದು, ಎಲ್ಲ ಕಾಮಗಾರಿಗಳು ಭರದಿದಂದ ಸಾಗಿವೆಯೆಂದು ಕಾಗವಾಡ ಮತಕ್ಷೇತ್ರದ ಶಾಸಕ ಶ್ರೀಮಂತ ಪಾಟೀಲ ಹೇಳಿದರು. ಗುರುವಾರ ರಂದು ಕಾಗವಾಡ ಮತಕ್ಷೇತ್ರದ ಜಕಾರಟ್ಟಿ ಗ್ರಾಮದಲ್ಲಿ ೪ ಕೋಟಿ ರೂ. ವೆಚ್ಚದ ಮದಭಾವಿ-ಸಂಬರಗಿ ಹಾಗೂ ಜಕಾರಟ್ಟಿಯಿಂದ ಖುಟ್ಟಿ ತೋಟದವರೆಗಿನ ರಸ್ತೆಗೆ ೧.೫೦ ಕೋಟೆ ರೂ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು. ಕಳೆದ …
Read More »36 ಅಂದರ್-ಬಾಹರ್ ಪ್ರಕರಣ ದಾಖಲ,310 ಜನರ ಬಂಧನ,2,75,045ರೂಪಾಯಿ ವಶ
ಬೆಳಗಾವಿ ಜಿಲ್ಲೆಯಾದ್ಯಂತ ದಾಳಿ ನಡೆಸಿದ ಪೊಲೀಸರು ಅಂದರ್ – ಬಾಹರ್ ಆಡುತ್ತಿದ್ದ 36 ಪ್ರಕರಣಗಳನ್ನು ದಾಖಲಿಸಿದ್ದಾರೆ. ಬೆಳಗಾವಿ ಪೊಲೀಸರು ಗುರುವಾರದಂದು ಕಾರ್ಯಾಚರಣೆ ನಡೆಸಿ ಜಿಲ್ಲೆಯಾದ್ಯಂತ ೩೬ ಪ್ರಕರಣಗಳನ್ನು ದಾಖಲಿಸಿದ್ದಾರೆ. ಅಲ್ಲದೇ ಪ್ರಕರಣಕ್ಕೆ ಸಂಬAಧಿಸಿದAತೆ 310 ಜನರನ್ನು ಬಂಧಿಸಿದ್ದು, 2,75,0455ರೂಪಾಯಿ ನಗದನ್ನು ವಶಪಡಿಸಿಕೊಂಡಿದ್ದಾರೆ. ಸAಬAಧಿಸಿದ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ.
Read More »ರಾಮದುರ್ಗ ತಾಲ್ಲೂಕಿನ ಮುದೇನೂರ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಇಬ್ಬರು ಮೃತಪಟ್ಟಿದ್ದಾರೆ.
ರಾಮದುರ್ಗ (ಬೆಳಗಾವಿ): ತಾಲ್ಲೂಕಿನ ಮುದೇನೂರ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಇಬ್ಬರು ಮೃತಪಟ್ಟಿದ್ದಾರೆ. 12 ಬಾಲಕರು, 8 ಬಾಲಕಿಯರು ಸೇರಿ 186 ಮಂದಿ ಅಸ್ವಸ್ಥ ರಾಗಿದ್ದಾರೆ. ಇವರಲ್ಲಿ ಆರೋಗ್ಯ ಸ್ಥಿತಿ ಗಂಭೀರ ವಾಗಿರುವ 94 ಮಂದಿಯನ್ನು ಜಿಲ್ಲೆಯಲ್ಲಿ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಉಳಿದವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಕಳುಹಿಸಲಾಗಿದೆ. ಇದೇ ಊರಿನ ಸರಸ್ವತಿ ನಿಂಗಪ್ಪ ಹಾವಳ್ಳಿ (70) ಅವರು ಅ.23ರಂದು, ಶಿವಪ್ಪ ಯಂಡಿಗೇರಿ (70) ಬುಧವಾರ ಮೃತಪಟ್ಟರು. ಅಸ್ಪತ್ರೆಗೆ ದಾಖಲಾಗಿರುವ ಹಲವರಿಗೆ …
Read More »ಅಂತರರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆದ್ದಿರುವ ಬೆಳಗಾವಿಯ ಕರಾಟೆಪಟು
ಅಂತರರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆದ್ದಿರುವ ಕರಾಟೆ ಪಟು ಕೇತನ ಕಲ್ಲಪ್ಪಾ ಫಾಟಕೆ ಬ್ಲ್ಯಾಕ್ ಬೆಲ್ಟ್ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಬೆಳಗಾವಿಯ ಮಂಡೋಳಿ ರಸ್ತೆಯ ಮನೋಪ್ರಭಾ ಮಂಗಲ ಕಾರ್ಯಾಲಯದಲ್ಲಿ ಇದೇ ಅಕ್ಟೋಬರ್ 23ರಂದು ಕರಾಟೆ ಬ್ಲ್ಯಾಕ್ ಬೆಲ್ಟ್ ಪರೀಕ್ಷೆ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ 70 ಕರಾಟೆ ಪಟುಗಳು ಭಾಗಿಯಾಗಿದ್ದರು. ಈ ವೇಳೆ ಮುಖ್ಯ ತೀರ್ಪುಗಾರರಾಗಿ ಗಜೇಂದ್ರ ಕಾಕತಿಕರ ಆಗಮಿಸಿದ್ದರು. ಕಳೆದ 9 ವರ್ಷಗಳಿಂದ ಇಲ್ಲಿ ತರಬೇತಿ ಪಡೆದು ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ …
Read More »ಆಹ್ವಾನ ಪತ್ರಿಕೆಯಲ್ಲಿ ದಿವಂಗತ ಶಾಸಕ ಆನಂದ ಮಾಮನಿ ಹೆಸರು ಶಿಕ್ಷಣ ಇಲಾಖೆಯ ಯಡವಟ್ಟು..!
ದಿವಗಂತ ಶಾಸಕ ಆನಂದ ಮಾಮನಿ ಹೆಸರು ಆಹ್ವಾನ ಪತ್ರಿಕೆಯಲ್ಲಿ ಹಾಕಿ ಅದ್ವಾನವಾಗಿದೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಮಟ್ಟದ ಪ್ರಾಥಮಿಕ ಪ್ರೌಢ ಶಾಲೆಗಳ ಕ್ರೀಡಾಕೂಟ ಆಯೋಜಿಸಲಾಗಿದೆ. ಇದರ ಆಹ್ವಾನ ಪತ್ರಿಕೆಯಲ್ಲಿ ದಿವಂಗತ ಶಾಸಕ ಆನಂದ ಮಾಮನಿ ಹೆಸರನ್ನು ಹಾಕಿದ್ದು ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದೇ ತಿಂಗಳ ಅಕ್ಟೋಬರ್ 23ರಂದು ಸವದತ್ತಿ ಶಾಸಕರು ಹಾಗೂ ವಿಧಾನಸಭೆಉ ಉಪಸಭಾಧ್ಯಕ್ಷರು ಆಗಿದ್ದ ಆನಂದ ಮಾಮನಿ ನಿಧನ ಹೊಂದಿದ್ದರು. ನಾಳೆ ಶುಕ್ರವಾರ ನಡೆಯಲಿರುವ ಕ್ರೀಡಾಕೂಟ ಕಾರ್ಯಕ್ರಮದ …
Read More »ಮಹಾನಗರ ಪಾಲಿಕೆ ಮುಂಭಾಗದ ಕನ್ನಡ ಬಾವುಟ ಹಾರಾಡುತ್ತಿದೆ. ಆದರೆ ಇದೀಗ ಆ ಬಾವುಟಕ್ಕೆ ಅಪಮಾನ:
ಕನ್ನಡ ಹೋರಾಟಗಾರರ ಹೋರಾಟದ ಪರಿಣಾಮ ಬೆಳಗಾವಿಯ ಮಹಾನಗರ ಪಾಲಿಕೆ ಮುಂಭಾಗದಲ್ಲಿ ಇಂದು ಕನ್ನಡ ಬಾವುಟ ಹಾರಾಡುತ್ತಿದೆ. ಆದರೆ ಇದೀಗ ಆ ಬಾವುಟಕ್ಕೆ ಅಪಮಾನ ಆಗಿರುವ ಘಟನೆ ಬೆಳಕಿಗೆ ಬಂದಿದೆ. ಹರಿದ ಬಾವುಟವೇ ಹಾರಾಡುತ್ತಿರೋದು ಸಧ್ಯ ಕನ್ನಡ ಹೋರಾಟಗಾರರ ಆಕ್ರೋಶಕ್ಕೆ ಕಾರಣವಾಗಿದೆ. ಹೌದು ಬೆಳಗಾವಿ ಮಹಾನಗರ ಪಾಲಿಕೆ ಮುಂದೆ ಹರಿದ ಕನ್ನಡ ಬಾವುಟವೇ ಹಾರಾಡುತ್ತಿದೆ. ಮಳೆ, ಗಾಳಿಗೆ ಹರಿದ ಕನ್ನಡ ಬಾವುಟ ಬದಲಾಯಿಸಲು ಪಾಲಿಕೆ ಮುಂದಾಗುತ್ತಿಲ್ಲ. ಕನ್ನಡ ರಾಜ್ಯೋತ್ಸವ ಹೊಸ್ತಿಲಿನಲ್ಲಿ ಯಡವಟ್ಟಾಗಿದೆ. …
Read More »